< यिर्मयाह 36 >

1 योशियाह के पुत्र यहूदिया के राजा यहोइयाकिम के राज्य-काल के चौथे वर्ष में येरेमियाह को याहवेह का यह संदेश भेजा गया:
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
2 “जिस दिन से मैंने तुमसे बात करना प्रारंभ किया है, उसके पहले दिन से ही योशियाह के दिनों से लेकर आज तक मैंने तुमसे इस्राएल, यहूदिया तथा सारे राष्ट्रों के संबंध में जो कुछ कहा है, उसे एक चर्मपत्र कुण्डली लेकर उस पर मेरे सारे संदेश लिख डालो.
“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.
3 यह संभव है कि यहूदाह के वंशज सारे विपत्ति के विषय में सुनेंगे, जो मैं उन पर प्रभावी करने की योजना बना रहा हूं; कि हर एक व्यक्ति इसे सुन अपनी संकट नीति से विमुख हो जाए और मैं उनकी अधर्मिता तथा उनके पाप को क्षमा कर दूं.”
ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.
4 फिर येरेमियाह ने नेरियाह के पुत्र बारूख को बुलवाया. याहवेह द्वारा प्रगट हर एक संदेश को जैसे जैसे येरेमियाह बोलते गए, वैसे वैसे बारूख एक चर्मपत्र कुण्डली पर लिखता गया.
ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.
5 येरेमियाह ने बारूख को यह आदेश दिया, “मुझ पर प्रतिबन्ध लगाया गया है; इसलिये याहवेह के भवन में मेरा प्रवेश निषिद्ध है.
ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;
6 इसलिये तुम्हें ही याहवेह के भवन में जाना होगा और उपवास के लिए निर्धारित दिवस पर तुम मेरे बोले हुए लेख द्वारा चर्मपत्र कुण्डली पर लिखे गए सारे वचन लोगों के समक्ष पढ़ देना. तुम्हें यही वचन उन लोगों के समक्ष भी पढ़ना होगा, जो यहूदिया के नगरों से वहां आएंगे.
ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
7 संभव है उनकी बिनती याहवेह के समक्ष प्रस्तुत की जाए, हर एक व्यक्ति अपने अधर्म से विमुख हो जाए, क्योंकि प्रचंड है याहवेह का क्रोध एवं प्रकोप, जिसकी वाणी इन लोगों के विरुद्ध की जा चुकी है.”
ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.
8 नेरियाह के पुत्र बारूख ने येरेमियाह भविष्यद्वक्ता के आदेश का पूरी तरह पालन किया, उसने याहवेह के भवन में जाकर इस अभिलेख में से याहवेह के संदेश का वाचन किया.
ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.
9 योशियाह के पुत्र यहूदिया के राजा यहोइयाकिम के राज्य-काल के पांचवें वर्ष के नवें माह में येरूशलेम के सभी निवासियों ने तथा यहूदिया के नगरों से वहां आए सभी निवासियों ने याहवेह के समक्ष उपवास रखे जाने की घोषणा की.
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
10 तत्पश्चात बारूख ने याहवेह के भवन में लिपिक शापान के पुत्र गेमारियाह के कक्ष में, जो ऊपरी आंगन में था, याहवेह के भवन के नये प्रवेश द्वार के प्रवेश में खड़े होकर उपस्थित सारे जनसमूह के समक्ष येरेमियाह के अभिलेख के संदेश को पढ़ा.
೧೦ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.
11 जब शापान के पौत्र गेमारियाह के पुत्र मीकायाह ने इस अभिलेख से याहवेह का संदेश सुना,
೧೧ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.
12 वह महलों में लिपिकों के कक्ष में चला गया. वहां उसने देखा कि वहां सारे अधिकारी बैठे हुए थे. लिपिक एलीशामा, शेमायाह का पुत्र देलाइयाह, अखबोर को पुत्र एल-नाथान, शापान का पुत्र गेमारियाह, हननियाह का पुत्र सीदकियाहू तथा अन्य सभी अधिकारी भी.
೧೨ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
13 मीकायाह ने उनके समक्ष उस अभिलेख से बारूख द्वारा लोगों के समक्ष पढ़ी गई संपूर्ण विषय-वस्तु दोहरा दी, जो वह स्वयं सुनकर आया था,
೧೩ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,
14 इस पर सारे अधिकारियों ने कूशी के परपोते, शेलेमियाह के पोते, नेथनियाह के पुत्र, येहूदी को बारूख के लिए इस संदेश के साथ भेजा, “तुमने जिस चर्मपत्र कुण्डली से लोगों के समक्ष पढ़ा है, उसे लेकर यहां आ जाओ.” इसलिये नेरियाह का पुत्र बारूख उस चर्मपत्र कुण्डली को लेकर उनकी उपस्थिति में पहुंच गया.
೧೪ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
15 उन्होंने उससे आग्रह किया, “कृपया बैठ जाओ और इसे हमें पढ़कर सुनाओ.” तब बारूख ने उसे उनके समक्ष पढ़ दिया.
೧೫ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.
16 जब उन्होंने संपूर्ण विषय-वस्तु सुन ली, तब वे भयभीत होकर एक दूसरे की ओर देखने लगे और उन्होंने बारूख से कहा, “निश्चयतः हम यह सब राजा को सूचित कर देंगे.”
೧೬ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.
17 उन्होंने बारूख से यह भी पूछा, “हमें कृपा कर यह भी बताओ, यह सब तुमने लिखा कैसे? क्या यह येरेमियाह द्वारा बोली हुई बातों का लेख है?”
೧೭ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು.
18 तब बारूख ने उन्हें उत्तर दिया, “उन्होंने ही मुझे यह सारे वचन कहे हैं, जिन्हें मैंने स्याही से सूची में लिख दिया है.”
೧೮ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.
19 तब अधिकारियों ने बारूख को आदेश दिया, “तुम और येरेमियाह जाकर कहीं छिप जाओ और किसी को भी यह ज्ञात न होने पाए कि तुम कहां हो.”
೧೯ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.
20 अधिकारियों ने जाकर चर्मपत्र कुण्डली को लिपिक एलीशामा के कक्ष में सुरक्षित रख दिया और फिर राज्यसभा में जाकर राजा को चर्मपत्र कुण्डली में लिखित संपूर्ण विषय-वस्तु की सूचना दे दी.
೨೦ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.
21 राजा ने येहूदी को यह चर्मपत्र कुण्डली लाने का आदेश दिया, उसने जाकर इसे लिपिक एलीशामा के कक्ष से बाहर निकाल लिया. तब येहूदी ने राजा एवं राजा की उपस्थिति में खड़े सारे अधिकारियों के समक्ष चर्मपत्र कुण्डली अभिलेख पढ़ दिया.
೨೧ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
22 यह नवें माह का अवसर था और राजा अपने शीतकालीन आवास में विराजमान था; उसके समक्ष अंगीठी में अग्नि प्रज्वलित थी.
೨೨ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.
23 जब येहूदी तीन अथवा चार अंश पढ़ लेता था, राजा उतने चर्मपत्र को लिपिक के चाकू से काटकर अंगीठी की अग्नि में डाल देता था, इस प्रकार होते-होते संपूर्ण चर्मपत्र कुण्डली अंगीठी की अग्नि में भस्म हो गई.
೨೩ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
24 इतना सब होने पर भी राजा तथा उसके सारे सेवकों पर कोई प्रभाव न पड़ा, न वे भयभीत हुए और न उनमें से किसी ने शोक में अपने वस्त्र ही फाड़े.
೨೪ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
25 यहां तक कि एल-नाथान, देलाइयाह तथा गेमारियाह, राजा से चर्मपत्र कुण्डली को दहन न करने का आग्रह करते रहे, राजा ने उनकी एक न सुनी.
೨೫ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
26 राजा ने राजपुत्र येराहमील को, आज़रियल के पुत्र सेराइयाह तथा अबदील के पुत्र शेलेमियाह को आदेश दिया, कि वे लिपिक बारूख को तथा भविष्यद्वक्ता येरेमियाह को पकड़ लें, किंतु इस समय वे याहवेह द्वारा छिपा दिए गए थे.
೨೬ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
27 येरेमियाह के बोले हुए लेख जो बारूख द्वारा लिखित चर्मपत्र कुण्डली में था, जिसका दहन जब राजा यहोइयाकिम ने कर चुका, तब येरेमियाह को याहवेह का यह संदेश प्राप्‍त हुआ:
೨೭ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,
28 “अब एक नयी चर्मपत्र कुण्डली लो और उस पर वे ही संदेश लिपिबद्ध कर दो, जो उस चर्मपत्र कुण्डली पर लिखे गए थे, जिसको यहूदिया के राजा यहोइयाकिम द्वारा दहन कर दिया गया है.
೨೮“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.
29 यहूदिया के राजा यहोइयाकिम के विषय में तुम्हें यह कहना होगा, ‘यह याहवेह का संदेश है: तुमने तो यह कहते हुए चर्मपत्र कुण्डली का दहन कर दिया है, “तुमने इसमें ऐसा क्यों लिख दिया, कि बाबेल का राजा निश्चयतः आएगा तथा इस देश को ध्वस्त कर देगा तथा उस देश से मनुष्यों एवं पशुओं का अस्तित्व ही समाप्‍त हो जाएगा?”
೨೯ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.
30 इसलिये यहूदिया के राजा यहोइयाकिम के विषय में याहवेह की पूर्ववाणी यह है: दावीद के सिंहासन पर विराजमान होने के लिए उसका कोई भी वंशज नहीं रह जाएगा तथा उसका शव दिन की उष्णता तथा रात्रि के पाले में पड़ा रह जाएगा.
೩೦ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
31 मैं उसे, उसके वंशजों तथा उसके सेवकों को उनके अधर्म के लिए दंड भी दूंगा; मैं उन पर, येरूशलेम वासियों पर तथा यहूदिया की प्रजा पर वे सभी विपत्तियां प्रभावी कर दूंगा, जिनकी वाणी मैं कर चुका हूं, क्योंकि उन्होंने मेरी चेतावनियों की अवहेलना की है.’”
೩೧ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.
32 तब येरेमियाह ने नेरियाह के पुत्र लिपिक बारूख को एक अन्य चर्मपत्र कुण्डली दी, जिस पर उसने येरेमियाह के बोले हुए वचन लिखे, इसमें उसने वे सभी संदेश पुनः लिख दिए, जो उस चर्मपत्र कुण्डली में लिखे थे, जिसे यहूदिया के राजा यहोइयाकिम ने अग्नि में दहन कर दिया था. इसके सिवा इसमें इसी प्रकार के अन्य संदेश भी सम्मिलित कर दिए गए.
೩೨ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.

< यिर्मयाह 36 >