< यिर्मयाह 36 >

1 योशियाह के पुत्र यहूदिया के राजा यहोइयाकिम के राज्य-काल के चौथे वर्ष में येरेमियाह को याहवेह का यह संदेश भेजा गया:
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು:
2 “जिस दिन से मैंने तुमसे बात करना प्रारंभ किया है, उसके पहले दिन से ही योशियाह के दिनों से लेकर आज तक मैंने तुमसे इस्राएल, यहूदिया तथा सारे राष्ट्रों के संबंध में जो कुछ कहा है, उसे एक चर्मपत्र कुण्डली लेकर उस पर मेरे सारे संदेश लिख डालो.
“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
3 यह संभव है कि यहूदाह के वंशज सारे विपत्ति के विषय में सुनेंगे, जो मैं उन पर प्रभावी करने की योजना बना रहा हूं; कि हर एक व्यक्ति इसे सुन अपनी संकट नीति से विमुख हो जाए और मैं उनकी अधर्मिता तथा उनके पाप को क्षमा कर दूं.”
ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.
4 फिर येरेमियाह ने नेरियाह के पुत्र बारूख को बुलवाया. याहवेह द्वारा प्रगट हर एक संदेश को जैसे जैसे येरेमियाह बोलते गए, वैसे वैसे बारूख एक चर्मपत्र कुण्डली पर लिखता गया.
ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.
5 येरेमियाह ने बारूख को यह आदेश दिया, “मुझ पर प्रतिबन्ध लगाया गया है; इसलिये याहवेह के भवन में मेरा प्रवेश निषिद्ध है.
ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು.
6 इसलिये तुम्हें ही याहवेह के भवन में जाना होगा और उपवास के लिए निर्धारित दिवस पर तुम मेरे बोले हुए लेख द्वारा चर्मपत्र कुण्डली पर लिखे गए सारे वचन लोगों के समक्ष पढ़ देना. तुम्हें यही वचन उन लोगों के समक्ष भी पढ़ना होगा, जो यहूदिया के नगरों से वहां आएंगे.
ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
7 संभव है उनकी बिनती याहवेह के समक्ष प्रस्तुत की जाए, हर एक व्यक्ति अपने अधर्म से विमुख हो जाए, क्योंकि प्रचंड है याहवेह का क्रोध एवं प्रकोप, जिसकी वाणी इन लोगों के विरुद्ध की जा चुकी है.”
ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”
8 नेरियाह के पुत्र बारूख ने येरेमियाह भविष्यद्वक्ता के आदेश का पूरी तरह पालन किया, उसने याहवेह के भवन में जाकर इस अभिलेख में से याहवेह के संदेश का वाचन किया.
ಆಗ ನೇರೀಯನ ಮಗ ಬಾರೂಕನು ಪ್ರವಾದಿಯಾದ ಯೆರೆಮೀಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿ, ಸುರುಳಿಯಲ್ಲಿನ ಯೆಹೋವ ದೇವರ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಓದಿದನು.
9 योशियाह के पुत्र यहूदिया के राजा यहोइयाकिम के राज्य-काल के पांचवें वर्ष के नवें माह में येरूशलेम के सभी निवासियों ने तथा यहूदिया के नगरों से वहां आए सभी निवासियों ने याहवेह के समक्ष उपवास रखे जाने की घोषणा की.
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.
10 तत्पश्चात बारूख ने याहवेह के भवन में लिपिक शापान के पुत्र गेमारियाह के कक्ष में, जो ऊपरी आंगन में था, याहवेह के भवन के नये प्रवेश द्वार के प्रवेश में खड़े होकर उपस्थित सारे जनसमूह के समक्ष येरेमियाह के अभिलेख के संदेश को पढ़ा.
ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು.
11 जब शापान के पौत्र गेमारियाह के पुत्र मीकायाह ने इस अभिलेख से याहवेह का संदेश सुना,
ಶಾಫಾನನ ಮೊಮ್ಮಗನೂ, ಗೆಮರೀಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದು ಹೋದನು.
12 वह महलों में लिपिकों के कक्ष में चला गया. वहां उसने देखा कि वहां सारे अधिकारी बैठे हुए थे. लिपिक एलीशामा, शेमायाह का पुत्र देलाइयाह, अखबोर को पुत्र एल-नाथान, शापान का पुत्र गेमारियाह, हननियाह का पुत्र सीदकियाहू तथा अन्य सभी अधिकारी भी.
ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.
13 मीकायाह ने उनके समक्ष उस अभिलेख से बारूख द्वारा लोगों के समक्ष पढ़ी गई संपूर्ण विषय-वस्तु दोहरा दी, जो वह स्वयं सुनकर आया था,
ಆಗ ಮೀಕಾಯನು ಅವರಿಗೆ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ, ತಾನು ಕೇಳಿದ ವಾಕ್ಯಗಳನ್ನೆಲ್ಲಾ ತಿಳಿಸಿದನು.
14 इस पर सारे अधिकारियों ने कूशी के परपोते, शेलेमियाह के पोते, नेथनियाह के पुत्र, येहूदी को बारूख के लिए इस संदेश के साथ भेजा, “तुमने जिस चर्मपत्र कुण्डली से लोगों के समक्ष पढ़ा है, उसे लेकर यहां आ जाओ.” इसलिये नेरियाह का पुत्र बारूख उस चर्मपत्र कुण्डली को लेकर उनकी उपस्थिति में पहुंच गया.
ಅಧಿಕಾರಿಗಳೆಲ್ಲರು ಸೇರಿ ನೆತನ್ಯನ ಮಗನೂ, ಶೆಲೆಮ್ಯನ ಮೊಮ್ಮಗನೂ, ಕೂಷಿಯ ಮರಿಮಗನೂ ಆದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿದನು. “ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ,” ಎಂದು ಹೇಳಿ ಕಳುಹಿಸಿದರು. ಅಂತೆಯೇ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.
15 उन्होंने उससे आग्रह किया, “कृपया बैठ जाओ और इसे हमें पढ़कर सुनाओ.” तब बारूख ने उसे उनके समक्ष पढ़ दिया.
ಆಗ ಅವರು ಅವನಿಗೆ, “ಈಗ ಕುಳಿತುಕೊಂಡು ನಮಗೆ ಓದಿ ಹೇಳು,” ಎಂದರು. ಆಗ ಬಾರೂಕನು ಅವರಿಗೆ ಓದಿ ಹೇಳಿದನು.
16 जब उन्होंने संपूर्ण विषय-वस्तु सुन ली, तब वे भयभीत होकर एक दूसरे की ओर देखने लगे और उन्होंने बारूख से कहा, “निश्चयतः हम यह सब राजा को सूचित कर देंगे.”
ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು.
17 उन्होंने बारूख से यह भी पूछा, “हमें कृपा कर यह भी बताओ, यह सब तुमने लिखा कैसे? क्या यह येरेमियाह द्वारा बोली हुई बातों का लेख है?”
ಅವರು ಬಾರೂಕನಿಗೆ, “ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದೆ, ನಮಗೆ ತಿಳಿಸು,” ಎಂದರು.
18 तब बारूख ने उन्हें उत्तर दिया, “उन्होंने ही मुझे यह सारे वचन कहे हैं, जिन्हें मैंने स्याही से सूची में लिख दिया है.”
ಆಗ ಬಾರೂಕನು ಅವರಿಗೆ, “ಅವನು ಈ ವಾಕ್ಯಗಳನ್ನೆಲ್ಲಾ ನನಗೆ ಹೇಳಿಕೊಟ್ಟನು. ನಾನು ಅವುಗಳನ್ನು ಮಸಿಯಿಂದ ಸುರುಳಿಯಲ್ಲಿ ಬರೆದೆನು,” ಎಂದನು.
19 तब अधिकारियों ने बारूख को आदेश दिया, “तुम और येरेमियाह जाकर कहीं छिप जाओ और किसी को भी यह ज्ञात न होने पाए कि तुम कहां हो.”
ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.
20 अधिकारियों ने जाकर चर्मपत्र कुण्डली को लिपिक एलीशामा के कक्ष में सुरक्षित रख दिया और फिर राज्यसभा में जाकर राजा को चर्मपत्र कुण्डली में लिखित संपूर्ण विषय-वस्तु की सूचना दे दी.
ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರುಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು ಮತ್ತು ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
21 राजा ने येहूदी को यह चर्मपत्र कुण्डली लाने का आदेश दिया, उसने जाकर इसे लिपिक एलीशामा के कक्ष से बाहर निकाल लिया. तब येहूदी ने राजा एवं राजा की उपस्थिति में खड़े सारे अधिकारियों के समक्ष चर्मपत्र कुण्डली अभिलेख पढ़ दिया.
ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು.
22 यह नवें माह का अवसर था और राजा अपने शीतकालीन आवास में विराजमान था; उसके समक्ष अंगीठी में अग्नि प्रज्वलित थी.
ಆಗ ಒಂಬತ್ತನೆಯ ತಿಂಗಳಿನ ಅರಸನು ಚಳಿಗಾಲದ ಮನೆಯಲ್ಲಿ ಕುಳಿತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
23 जब येहूदी तीन अथवा चार अंश पढ़ लेता था, राजा उतने चर्मपत्र को लिपिक के चाकू से काटकर अंगीठी की अग्नि में डाल देता था, इस प्रकार होते-होते संपूर्ण चर्मपत्र कुण्डली अंगीठी की अग्नि में भस्म हो गई.
ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.
24 इतना सब होने पर भी राजा तथा उसके सारे सेवकों पर कोई प्रभाव न पड़ा, न वे भयभीत हुए और न उनमें से किसी ने शोक में अपने वस्त्र ही फाड़े.
ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.
25 यहां तक कि एल-नाथान, देलाइयाह तथा गेमारियाह, राजा से चर्मपत्र कुण्डली को दहन न करने का आग्रह करते रहे, राजा ने उनकी एक न सुनी.
ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
26 राजा ने राजपुत्र येराहमील को, आज़रियल के पुत्र सेराइयाह तथा अबदील के पुत्र शेलेमियाह को आदेश दिया, कि वे लिपिक बारूख को तथा भविष्यद्वक्ता येरेमियाह को पकड़ लें, किंतु इस समय वे याहवेह द्वारा छिपा दिए गए थे.
ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.
27 येरेमियाह के बोले हुए लेख जो बारूख द्वारा लिखित चर्मपत्र कुण्डली में था, जिसका दहन जब राजा यहोइयाकिम ने कर चुका, तब येरेमियाह को याहवेह का यह संदेश प्राप्‍त हुआ:
ಅರಸನು ಆ ಸುರುಳಿಯನ್ನು ಬಾರೂಕನು ಯೆರೆಮೀಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ, ಸುಟ್ಟ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:
28 “अब एक नयी चर्मपत्र कुण्डली लो और उस पर वे ही संदेश लिपिबद्ध कर दो, जो उस चर्मपत्र कुण्डली पर लिखे गए थे, जिसको यहूदिया के राजा यहोइयाकिम द्वारा दहन कर दिया गया है.
“ನೀನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
29 यहूदिया के राजा यहोइयाकिम के विषय में तुम्हें यह कहना होगा, ‘यह याहवेह का संदेश है: तुमने तो यह कहते हुए चर्मपत्र कुण्डली का दहन कर दिया है, “तुमने इसमें ऐसा क्यों लिख दिया, कि बाबेल का राजा निश्चयतः आएगा तथा इस देश को ध्वस्त कर देगा तथा उस देश से मनुष्यों एवं पशुओं का अस्तित्व ही समाप्‍त हो जाएगा?”
ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.
30 इसलिये यहूदिया के राजा यहोइयाकिम के विषय में याहवेह की पूर्ववाणी यह है: दावीद के सिंहासन पर विराजमान होने के लिए उसका कोई भी वंशज नहीं रह जाएगा तथा उसका शव दिन की उष्णता तथा रात्रि के पाले में पड़ा रह जाएगा.
ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.
31 मैं उसे, उसके वंशजों तथा उसके सेवकों को उनके अधर्म के लिए दंड भी दूंगा; मैं उन पर, येरूशलेम वासियों पर तथा यहूदिया की प्रजा पर वे सभी विपत्तियां प्रभावी कर दूंगा, जिनकी वाणी मैं कर चुका हूं, क्योंकि उन्होंने मेरी चेतावनियों की अवहेलना की है.’”
ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’”
32 तब येरेमियाह ने नेरियाह के पुत्र लिपिक बारूख को एक अन्य चर्मपत्र कुण्डली दी, जिस पर उसने येरेमियाह के बोले हुए वचन लिखे, इसमें उसने वे सभी संदेश पुनः लिख दिए, जो उस चर्मपत्र कुण्डली में लिखे थे, जिसे यहूदिया के राजा यहोइयाकिम ने अग्नि में दहन कर दिया था. इसके सिवा इसमें इसी प्रकार के अन्य संदेश भी सम्मिलित कर दिए गए.
ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು.

< यिर्मयाह 36 >