< यिर्मयाह 40 >
1 राज्यपाल गेदालिया के आवास में से अंगरक्षकों के प्रधान नेबुज़रादान ने जब येरेमियाह को येरूशलेम तथा यहूदिया के सारे बंदियों के बीच जंजीरों से बंधा हुआ देखा जिन्हें बाबेल ले जाया जा रहा था, तब उसने उसे रामाह में विमुक्त कर दिया. उस समय याहवेह का संदेश येरेमियाह को प्रगट किया गया.
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.
2 अंगरक्षकों के प्रधान ने येरेमियाह को अलग ले जाकर कहा, “याहवेह, आपके ही परमेश्वर ने इस स्थान के विरुद्ध यह घोर विपत्ति योजित की थी.
ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.
3 अब याहवेह ने जैसी पूर्ववाणी की थी; उसे ही बनाकर दिखाया है. क्योंकि आप लोगों ने ही तो याहवेह के विरुद्ध पाप किया है, आप लोगों ने उनके आदेशों का पालन नहीं किया, इसलिये आप पर यह विपत्ति टूट पड़ी है.
ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.
4 किंतु अब देखिए, आज मैं आपको आपके हाथों में पड़ी हुई इन बेड़ियों से विमुक्त कर रहा हूं, यदि आपको उपयुक्त लगे, आप मेरे साथ बाबेल चल सकते हैं, आपकी देखभाल का दायित्व मेरा होगा; किंतु यदि आप मेरे साथ बाबेल चलना उपयुक्त न समझें तो, आपकी इच्छा, आपके समक्ष संपूर्ण देश खुला पड़ा है; आपको जो स्थान अनुकूल लगे वहीं चले जाइए.”
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.
5 इसलिये कि येरेमियाह वहां अनिश्चय की स्थिति में ही ठहरे हुए थे, नेबुज़रादान ने उनसे कहा, “अच्छा, तो आप शापान के पौत्र अहीकाम के पुत्र गेदालियाह के पास लौट जाइए, जिसे बाबेल के राजा ने यहूदिया के नगरों पर राज्यपाल नियुक्त किया है, आप गेदालियाह के यहां अपने ही लोगों के मध्य निवास कीजिए. यदि नहीं, तो आपको जहां कहीं उपयुक्त लगे वहीं चले जाइए.” इसके बाद अंगरक्षकों के प्रधान ने येरेमियाह को कुछ अन्न पदार्थ तथा एक उपहार देकर उन्हें विदा किया.
ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
6 येरेमियाह वहां से मिज़पाह में अहीकाम के पुत्र गेदालियाह के यहां जाकर उस देश में शेष रह गए लोगों के मध्य निवास करने लगे.
ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
7 जब युद्ध क्षेत्र में सारे सेनापतियों तथा सैनिकों को यह सूचना प्राप्त हुई कि बाबेल के राजा ने अहीकाम के पुत्र गेदालियाह को संपूर्ण देश तथा उन पुरुषों, स्त्रियों तथा बालकों पर, जो देश में गरीब थे तथा जो बाबेल में बंदी नहीं किए गए थे, अधिपति नियुक्त कर दिया है,
ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,
8 वे मिज़पाह में गेदालियाह से भेंट करने आ गए. उनके साथ थे नेथनियाह का पुत्र इशमाएल, कोरियाह के पुत्र योहानन तथा योनातन, तनहूमेथ का पुत्र सेराइयाह, नेतोफ़ातवासी एफाई के पुत्र, माकाहथिवासी का पुत्र येत्सानियाह, दोनों ही तथा उनकी सैनिक टुकड़ी.
ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
9 यह सब देखते हुए शापान के पौत्र, अहीकाम के पुत्र, गेदालियाह ने उनके तथा सैनिकों के समक्ष यह कहते हुए शपथ ली: “कसदियों की सेवा करने का विचार तुम्हें भयभीत न करे, इसी देश में निवास करते हुए बाबेल के राजा की सेवा करते रहो, कि तुम्हारा हित हो.
ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.
10 मैं तो मिज़पाह में ही रहूंगा, कि मैं तुम्हारी सहायता में खड़ा रह सकूं, कि मैं उन कसदियों के लिए तुम्हारा प्रवक्ता हो सकूं जो अपना प्रतिवाद लेकर मेरे पास आए थे, किंतु तुम द्राक्षारस, ग्रीष्मकालीन फल एवं तेल का संग्रहण करते रहना, उन्हें भंडारण बर्तनों में रख देना, अपने-अपने नगरों में निवास करना, जिन्हें अब तुमने अपना लिया है.”
ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.
11 इसी प्रकार वे सभी यहूदियों ने जो इस समय मोआब, अम्मोन, एदोम तथा अन्य देशों में निवास करने लगे थे, यह सुना कि बाबेल के राजा ने यहूदिया में कुछ लोगों को छोड़ दिया है, तथा यह, कि उसने उन पर शापान के पौत्र, अहीकाम के पुत्र गेदालियाह को अधिपति नियुक्त कर दिया है,
ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ
12 तब सभी स्थानों से सारे यहूदी लौटकर आने लगे, जहां उन्हें खदेड़ दिया गया था, वे यहूदिया देश में आए तथा मिज़पाह में गेदालियाह से भेंट करने गए. उन्होंने बड़ी मात्रा में द्राक्षारस एवं ग्रीष्मकालीन फलों का भंडारण कर डाला.
ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.
13 तब कोरियाह का पुत्र योहानन तथा रणभूमि में सैनिकों के सारे सेनापति मिज़पाह में गेदालियाह से भेंट करने आए.
ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,
14 उन्होंने उससे कहा, “क्या आपको यह संज्ञान है कि अम्मोन के वंशजों के राजा बालिस ने नेथनियाह के पुत्र इशमाएल को आपकी हत्या के उद्देश्य से भेजा है?” किंतु अहीकाम के पुत्र गेदालियाह ने उनका विश्वास ही नहीं किया.
“ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
15 तब कोरियाह के पुत्र योहानन ने मिज़पाह में अकेले में जाकर गेदालियाह के समक्ष यह प्रस्ताव रखा, “मुझे अनुमति दीजिए, कि मैं जाकर नेथनियाह के पुत्र इशमाएल का वध कर दूं. किसी को भी इसके विषय में ज्ञात न हो सकेगा, हम क्यों उसे आपकी हत्या का अवसर दें? अन्यथा आपकी शरण में आए ये सारे यहूदी पुनः बिखर जाएंगे तथा यहूदिया का बचा हुआ शेष नष्ट हो जाएगा?”
ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.
16 किंतु अहीकाम के पुत्र गेदालियाह ने उससे कहा, “इशमाएल के विषय में तुम्हारा यह वचन असत्य है! मत करो उसकी हत्या.”
ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.