< यिर्मयाह 41 >
1 सातवें माह में एलीशामा का पौत्र नेथनियाह का पुत्र, राजपरिवार का वंशज इशमाएल, राजा के प्रमुख सेनापतियों में से एक तथा दस व्यक्ति अहीकाम के पुत्र गेदालियाह से भेंट करने मिज़पाह पहुंचे. जब वे वहां साथ बैठे हुए भोजन कर रहे थे,
ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,
2 नेथनियाह का पुत्र इशमाएल तथा उसके दस साथी उठे और तलवार के प्रहार से शापान के पौत्र, अहीकाम के पुत्र गेदालिया का वध कर दिया, गेदालियाह, जिसे बाबेल के राजा ने देश पर अधिपति नियुक्त किया था.
ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.
3 इशमाएल ने राजा के सारे यहूदियों का भी संहार कर दिया, अर्थात् वे, जो मिज़पाह में गेदालियाह के साथ थे, उसने उन कसदी सैनिकों का भी संहार कर दिया, जो उस स्थान पर पाए गए.
ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು.
4 दूसरे दिन, जब गेदालियाह की हत्या की जा चुकी थी, जिसके विषय में किसी को कोई संज्ञान न था,
ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ
5 शेकेम से, शीलो से तथा शमरिया से अस्सी व्यक्ति वहां पहुंचे, उनकी दाढ़ी मूंड़ी हुई थी, वस्त्र फटे हुए तथा देह पर घाव लगे हुए थे, वे अपने साथ अन्नबलि एवं धूप लेकर आए थे, कि इन्हें याहवेह के भवन में ले जाएं.
ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.
6 तब नेथनियाह का पुत्र इशमाएल मिज़पाह से उनसे भेंट करने निकला, इस समय वह रोता जा रहा था. जब उसकी भेंट इन अस्सी व्यक्तियों के समूह से हुई, उसने उनसे कहा, “चलिए, हम अहीकाम के पुत्र गेदालियाह से भेंट करने चलें.”
ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು. ಅವರನ್ನು ಎದುರುಗೊಂಡ ಮೇಲೆ ಅವರಿಗೆ, “ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ,” ಎಂದನು.
7 उनके नगर में पहुंचते ही, नेथनियाह के पुत्र इशमाएल तथा उसके साथियों ने उनकी हत्या कर दी और उनके शव कुएं में फेंक दिए.
ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು.
8 किंतु इन अस्सी में से दस जीवित रह गए थे, उन्होंने इशमाएल से आग्रह किया, “हमें जीवनदान दीजिए! हमारे पास गेहूं, जौ, मधु तथा तेल का भंडार है, जिसे हमने खेत में छिपा रखा है.” तब इशमाएल ने अन्य सत्तर के साथ उनकी हत्या नहीं की.
ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.
9 वह कुंआ जिसमें इशमाएल ने उन लोगों के शव फेंक दिए थे, जिनकी उसने गेदालियाह के साथ हत्या की थी, राजा आसा द्वारा इस्राएल के राजा बाशा से अपनी सुरक्षा के उद्देश्य से निर्मित किया गया था. नेथनियाह के पुत्र इशमाएल ने इस कुएं को मरे हुओं के शवों से भर दिया.
ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.
10 तत्पश्चात इशमाएल ने मिज़पाह में निवास कर रहे सारे लोगों को बंदी बना लिया, राजा की बेटियों तथा मिज़पाह में शेष रह गए सभी यहूदी, जिन्हें अंगरक्षकों के प्रधान, नेबुज़रादान ने अहीकाम के पुत्र गेदालियाह के संरक्षण में छोड़ रखा था. इस प्रकार नेथनियाह के पुत्र इशमाएल ने इन सभी को बंदी बना लिया और वह अम्मोन वंशजों के देश की ओर इन्हें लेकर प्रस्थित हो गया.
ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.
11 नेथनियाह के पुत्र इशमाएल द्वारा किए गए इस संकट का समाचार कोरियाह के पुत्र योहानन तथा उसके साथ की संयुक्त सेना के सेनापतियों को प्राप्त हुआ,
ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ,
12 इसलिये उन्होंने सभी पुरुषों को एकजुट किया और नेथनियाह के पुत्र इशमाएल से युद्ध करने के लिए तैयार हुए. नेथनियाह के पुत्र इशमाएल को उन्होंने गिबयोन के महा कुंड के निकट जा पकड़ा.
ಆ ಮನುಷ್ಯರನ್ನೆಲ್ಲಾ ಕರೆದುಕೊಂಡು ನೆತನ್ಯನ ಮಗ ಇಷ್ಮಾಯೇಲನ ಸಂಗಡ ಯುದ್ಧಮಾಡುವುದಕ್ಕೆ ಹೋಗಿ, ಗಿಬ್ಯೋನಿನಲ್ಲಿರುವ ದೊಡ್ಡ ಕೆರೆಯ ಬಳಿಯಲ್ಲಿ ಅವನನ್ನು ಕಂಡರು.
13 जैसे ही इशमाएल के सारे साथियों की दृष्टि कोरियाह के पुत्र योहानन तथा उसके साथी सेनापतियों पर पड़ी, वे पुलकित हो गए.
ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು.
14 इससे मिज़पाह में इशमाएल द्वारा बंदी बनाए गए सभी लोग मुड़कर कोरियाह के पुत्र योहानन के निकट आ गए.
ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು.
15 किंतु नेथनियाह का पुत्र इशमाएल योहानन से बचकर भाग निकला, उसके साथ आठ व्यक्ति भी बच निकले और अम्मोन वंशजों के देश पहुंच गए.
ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.
16 तब कोरियाह के पुत्र योहानन तथा उसके साथ की सेना के सारे सेनापतियों ने मिज़पाह से लोगों के संपूर्ण लोगों को निकाल लिया, जिन्हें उसने नेथनियाह के पुत्र इशमाएल से विमुक्त किया था, जिन्हें इशमाएल ने अहीकाम के पुत्र गेदालियाह की हत्या के बाद बंदी बना लिया था, अर्थात्, सैनिक, स्त्रियां, बालक; तथा राज-दरबार के अधिकारी जिन्हें उसने गिबयोन से लौटा ले आया था.
ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು,
17 उपयुक्त समय आने पर मिस्र चले जाने के उद्देश्य से वे जाकर बेथलेहेम के निकटवर्ती नगर गेरुथ किमहाम में ठहरे रहे.
ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
18 क्योंकि उन्हें कसदियों का भय था. क्योंकि नेथनियाह के पुत्र इशमाएल ने अहीकाम के पुत्र गेदालियाह की हत्या कर दी थी, जिसको बाबेल के राजा ने देश पर अधिपति नियुक्त किया था.
ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.