< न्यायियों 3 >

1 उन जनताओं को याहवेह ने नहीं हटाया कि याहवेह इनके द्वारा इस्राएल की नयी पीढ़ी को, जो कनान के किसी भी युद्ध में शामिल नहीं हुए थे, परख सके,
ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,
2 और उन्हें युद्ध की कला में शिक्षित किया जा सके, जिन्हें इसके पहले युद्ध का कोई अनुभव न हो सका था.
ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:
3 वे जनता ये थे: फिलिस्तीनी, (जिनका शासन पांच नगरों में बंट कर हो रहा था), बाल-हरमोन पर्वत से लेकर लबो-हामाथ तक लबानोन पर्वत पर रह रहे सभी कनानी, सीदोनी तथा हिव्वी.
ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.
4 ये सभी इस्राएल को परखने के लिए रखे गए थे, कि यह स्पष्ट हो जाए, कि वे याहवेह के आदेशों, जो उनके पुरखों को याहवेह ने मोशेह के द्वारा दिए थे, उनका पालन करते हैं या नहीं.
ತಾವು ಮೋಶೆಯ ಮುಖಾಂತರವಾಗಿ ಇಸ್ರಾಯೇಲರ ಪಿತೃಗಳಿಗೆ ಆಜ್ಞಾಪಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೇಳುವರೋ ಇಲ್ಲವೋ ಎಂದು ಪರೀಕ್ಷಿಸುವುದಕ್ಕೆ ಯೆಹೋವ ದೇವರು ಅವರನ್ನು ಉಳಿಸಿಬಿಟ್ಟರು.
5 इस्राएल के वंशज कनानी, हित्ती, अमोरी, परिज्ज़ी, हिव्वी तथा यबूसियों के बीच रहते रहे.
ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,
6 वे उनकी बेटियों को अपनी पत्नी बनाने के लिए ले लेते थे, तथा अपनी बेटियों को उनके बेटों को दे दिया करते थे, तथा उनके देवताओं की सेवा-उपासना भी करते थे.
ಅವರ ಪುತ್ರಿಯರನ್ನು ತಾವು ಹೆಂಡತಿಯರನ್ನಾಗಿ ತೆಗೆದುಕೊಂಡು, ತಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆ ಮಾಡಿಕೊಟ್ಟು, ಅವರ ದೇವರುಗಳನ್ನು ಸೇವಿಸಿದರು.
7 इस्राएल वंशजों ने वह किया, जो याहवेह की नज़र में बुरा था. उन्होंने याहवेह, अपने परमेश्वर को भुलाकर, बाल तथा अशेरा की सेवा-उपासना करना शुरू कर दिया.
ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.
8 याहवेह का क्रोध इस्राएल के विरुद्ध भड़क उठा. इस कारण याहवेह ने उन्हें मेसोपोतामिया के राजा कूशन-रिशाथईम के हाथों में बेच दिया. इस्राएल वंशज आठ साल कूशन-रिशाथईम के दासत्व में रहे.
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.
9 मगर जब इस्राएल वंशजों ने याहवेह की दोहाई दी, याहवेह ने इस्राएल वंशजों के लिए एक छुड़ानेवाले का उदय किया, कि वह इस्राएल वंशजों को छुड़ाए: कालेब के छोटे भाई केनज़ के पुत्र ओथनीएल को.
ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು.
10 याहवेह का आत्मा उस पर उतरा, और उसने इस्राएल पर शासन किया. जब वह युद्ध के लिए आगे बढ़ा, याहवेह ने मेसोपोतामिया के राजा कुशान-रिशाथईम को उसके अधीन कर दिया. फलस्वरूप, कूशन-रिशाथईम ओथनीएल के अधीन हो गया.
ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.
11 इसके बाद देश में चालीस सालों तक शांति बनी रही, फिर केनज़ के पुत्र ओथनीएल की मृत्यु हो गई.
ದೇಶವು ನಾಲ್ವತ್ತು ವರ್ಷದವರೆಗೆ ವಿಶ್ರಾಂತಿಯಿಂದಿತ್ತು. ತರುವಾಯ ಕೆನಾಜನ ಮಗ ಒತ್ನಿಯೇಲನು ಮರಣಹೊಂದಿದನು.
12 एक बार फिर इस्राएल के वंशजों ने वह किया, जो याहवेह की नज़र में गलत था. इस कारण याहवेह ने इस्राएल के विरुद्ध मोआब के राजा एगलोन की शक्ति बढ़ा दी, क्योंकि उन्होंने वह किया था, जो याहवेह की नज़र में गलत था.
ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು.
13 एगलोन ने अम्मोन के वंशजों तथा अमालेक के वंशजों से मित्रता कर ली. उसने हमला कर इस्राएल को हरा दिया तथा खजूर वृक्षों के नगर को अपने वश में कर लिया.
ಅವನು ಅಮ್ಮೋನನ ಮತ್ತು ಅಮಾಲೇಕ್ಯರನ್ನು ಕೂಡಿಸಿಕೊಂಡು ಬಂದು, ಇಸ್ರಾಯೇಲರನ್ನು ಹೊಡೆದು, ಖರ್ಜೂರ ಗಿಡಗಳಿರುವ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
14 इस्राएल के वंशज अठारह वर्ष मोआब के राजा एगलोन के दासत्व में रहे.
ಇಸ್ರಾಯೇಲರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರ್ಷ ಸೇವಿಸಿದರು.
15 तब इस्राएल के वंशजों ने याहवेह की दोहाई दी, और याहवेह ने उनके लिए एक छुड़ानेवाले का उदय किया, बिन्यामिन के वंशज गेरा का पुत्र एहूद का. वह बांए हाथ से काम करता था. इस्राएलियों ने उसी के द्वारा मोआब के राजा एगलोन को कर की राशि भेजी थी.
ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.
16 एहूद ने अपने लिए दोधारी तलवार बना रखी थी, जिसकी लंबाई लगभग आधा मीटर थी. इसे उसने अपने बाहरी वस्त्र के भीतर दाईं जांघ पर बांध रखा था.
ಏಹೂದನು ಇಬ್ಬಾಯಿಯುಳ್ಳ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿಕೊಂಡು, ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು,
17 उसने मोआब के राजा एगलोन को कर राशि भेंट की. एगलोन बहुत ही मोटा व्यक्ति था.
ಕಾಣಿಕೆಯನ್ನು ಮೋವಾಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ದಪ್ಪ ಮನುಷ್ಯನಾಗಿದ್ದನು.
18 जब एहूद उसे कर राशि भेंट कर चुका, उसने उन सभी व्यक्तियों को भेज दिया, जो उसके साथ आए थे.
ಏಹೂದನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ, ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿಬಿಟ್ಟು,
19 एहूद स्वयं गिलगाल की मूर्तियों के पास पहुंचने के बाद वहां से लौट आया और राजा को कहा, “महाराज, मुझे आपको एक गुप्‍त संदेश देना है.” राजा ने आदेश दिया, “शांति!” तब सभी सेवक कमरे से बाहर चले गए.
ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಕ್ಕೆ ತಿರುಗಿ, ಅವನ ಬಳಿಗೆ ಬಂದು, “ಅರಸನೇ, ನಿನ್ನ ಸಂಗಡ ಹೇಳಬೇಕಾದ ರಹಸ್ಯವಾದ ಒಂದು ಮಾತು ಇದೆ,” ಎಂದನು. ಅವನು, “ನಿಶ್ಶಬ್ದ,” ಎಂದು ಹೇಳಿದಾಗ, ಅವನ ಬಳಿಯಲ್ಲಿ ನಿಂತಿದ್ದವರೆಲ್ಲರು ಅವನನ್ನು ಬಿಟ್ಟು ಹೊರಗೆ ಹೋದರು.
20 एहूद राजा के निकट गया. राजा इस समय छत पर बने अपने ठण्ड़े कमरे में अकेला बैठा हुआ था. एहूद ने राजा से कहा, “मुझे परमेश्वर की ओर से आपके लिए भेजा हुआ एक संदेश देना है.” सो राजा अपने आसन से उठ खड़ा हुआ.
ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ, ಏಹೂದನು ಅವನ ಬಳಿಗೆ ಪ್ರವೇಶಿಸಿ, “ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗಿದೆ,” ಎಂದನು. ಅವನು ತನ್ನ ಸಿಂಹಾಸನದಿಂದ ಎದ್ದನು.
21 एहूद ने अपने बाएं हाथ से दाईं जांघ पर बंधी हुई तलवार निकाली और राजा के पेट में भोंक दी.
ಏಹೂದನು ತನ್ನ ಎಡಗೈಯನ್ನು ಚಾಚಿ, ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿಯನ್ನು ತೆಗೆದುಕೊಂಡು, ಅವನ ಹೊಟ್ಟೆಯಲ್ಲಿ ತಿವಿದನು.
22 फ़लक के साथ मुठिया भी भीतर चली गई और चर्बी ने फ़लक को ढक लिया. एहूद ने एगलोन के पेट से तलवार बाहर नहीं निकाली. पेट में से मल बाहर निकल आया.
ಅದು ಅಲಗಿನ ಸಂಗಡ ಹಿಡಿ ಸಮೇತ ಅವನ ಹೊಟ್ಟೆಯಲ್ಲಿ ಹೊಕ್ಕು, ಕಿತ್ತು ತೆಗೆಯಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು. ಅದರಿಂದ ಮಲವು ಹೊರಟಿತು.
23 एहूद बाहर बरामदा में चला गया, उसने अपने पीछे छत के कमरे के दरवाजे बंद कर दिए और ताला लगा दिया.
ಆಗ ಏಹೂದನು ಕೊಠಡಿಯ ಬಾಗಿಲನ್ನು ತನ್ನ ಹಿಂಭಾಗದಲ್ಲಿ ಮುಚ್ಚಿ, ಬೀಗವನ್ನು ಹಾಕಿ, ದ್ವಾರಾಂಗಳದಿಂದ ಹೊರಟುಹೋದನು.
24 जब वह जा चुका, राजा के सेवक आए और उन्होंने देखा कि दरवाजे पर ताला लगा हुआ है, उन्होंने सोचा, “महाराज ठण्ड़े कमरे में आराम कर रहे होंगे.”
ಅವನು ಹೋದ ತರುವಾಯ, ಕೊಠಡಿಯ ಸೇವಕರು ಬಾಗಿಲು ಮುಚ್ಚಿರುವುದನ್ನು ಕಂಡು, “ಅರಸನು ನಿಶ್ಚಯವಾಗಿ ತನ್ನ ತಂಪಾದ ಕೋಣೆಯಲ್ಲಿ ವಿಸರ್ಜನೆಗಾಗಿ ಹೋಗಿರಬೇಕು,” ಎಂದುಕೊಂಡರು.
25 वे लोग इतनी देर तक इंतजार करते-करते व्याकुल हो गए. फिर भी जब छत के कमरे का दरवाजा न खुला, उन्होंने चाबी लेकर दरवाजा खोला तो देखा कि उनका स्वामी भूमि पर मरा पड़ा हुआ था.
ಅವರು ತಮಗೆ ಬೇಸರವಾಗುವ ಮಟ್ಟಿಗೂ ಕಾದಿದ್ದರು. ಆದರೆ, ಅವನು ಕೊಠಡಿ ಬಾಗಿಲನ್ನು ತೆರೆಯದೆ ಇದ್ದುದರಿಂದ, ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆದರು. ಅವರ ಪ್ರಭುವು ನೆಲದ ಮೇಲೆ ಮರಣಹೊಂದಿದ್ದನು.
26 यहां, जब वे इंतजार कर रहे थे, एहूद निकल भागा. वह मूर्तियों के पास से निकलकर सईरा जा पहुंचा.
ಅವರು ಆಲಸ್ಯ ಮಾಡುತ್ತಿರುವಾಗ, ಏಹೂದನು ತಪ್ಪಿಸಿಕೊಂಡು ವಿಗ್ರಹಗಳನ್ನು ದಾಟಿ, ಸೇಯೀರಾತನ್ನು ಸೇರಿ ತಪ್ಪಿಸಿಕೊಂಡನು.
27 वहां उसने एफ्राईम के पहाड़ी प्रदेश में तुरही फूंका. इस्राएल के वंशज पहाड़ी इलाके से उसका पीछा करते हुए नीचे आए और वह उनका अगुआ बन गया.
ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.
28 उसने घोषणा की, “मेरे पीछे चले आओ, क्योंकि याहवेह ने तुम्हारे शत्रु मोआबियों को तुम्हारे अधीन कर दिया है.” सो वे उसके साथ गए और जाकर यरदन के घाटों को, जो मोआब के परे थे, अपने अधीन कर लिया और किसी को भी पार जाने न दिया.
ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,
29 उस समय उन्होंने लगभग दस हज़ार मोआबियों को मार डाला. ये सभी हष्ट-पुष्ट पुरुष थे. इनमें से एक भी बचकर निकल न सका.
ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಪುಷ್ಟರೂ, ಪರಾಕ್ರಮಿಗಳೂ ಆಗಿದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.
30 इस प्रकार उस दिन इस्राएल ने मोआब को अपने अधीन कर लिया. इसके बाद देश में अस्सी साल तक शांति बनी रही.
ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು.
31 एहूद के बाद अनात के पुत्र शमगर ने बैलों को हांकने की छड़ी का प्रयोग कर छः सौ फिलिस्तीनियों को मार डाला और इस प्रकार उसने भी इस्राएल को छुटकारा दिलाया.
ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.

< न्यायियों 3 >