< भजन संहिता 62 >
1 संगीत निर्देशक के लिये. यदूथून धुन पर आधारित. दावीद का एक स्तोत्र. मात्र परमेश्वर में मेरे प्राणों की विश्रान्ति है; वही मेरे उद्धार के कारण हैं.
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.
2 वही मेरे लिए एक स्थिर चट्टान और मेरा उद्धार हैं; वह मेरे सुरक्षा-दुर्ग हैं, अब मेरा विचलित होना संभव नहीं.
ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.
3 तुम कब तक उस पुरुष पर प्रहार करते रहोगे, मैं जो झुकी हुई दीवार अथवा गिरते बाड़े समान हूं? क्या तुम मेरी हत्या करोगे?
ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?
4 उन्होंने मुझे मेरी उन्नत जगह से उखाड़ डालने का निश्चय कर लिया है. झूठाचार में ही उनका संतोष मगन होता है. अपने मुख से वे आशीर्वचन उच्चारते तो हैं, किंतु मन ही मन वे उसे शाप देते रहते हैं.
ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.
5 मेरे प्राण, शांत होकर परमेश्वर के उठने की प्रतीक्षा कर; उन्हीं में तुम्हारी एकमात्र आशा मगन है.
ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ. ನನ್ನ ನಿರೀಕ್ಷೆಯು ದೇವರಿಂದಲೇ.
6 वही मेरे लिए एक स्थिर चट्टान और मेरा उद्धार हैं; वह मेरे सुरक्षा-रच हैं, अब मेरा विचलित होना संभव नहीं.
ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.
7 मेरा उद्धार और मेरा सम्मान परमेश्वर पर अवलंबित हैं; मेरे लिए वह सुदृढ़ चट्टान तथा आश्रय-स्थल है.
ದೇವರು ನನ್ನ ರಕ್ಷಣೆಗೂ ನನ್ನ ಗೌರವಕ್ಕೂ ಆಧಾರವಾಗಿದ್ದಾರೆ. ದೇವರು ನನ್ನ ಬಲವಾದ ಬಂಡೆಯೂ ನನ್ನ ಆಶ್ರಯವೂ ಆಗಿದ್ದಾರೆ.
8 मेरे लोगो, हर एक परिस्थिति में उन्हीं पर भरोसा रखो; उन्हीं के सम्मुख अपना हृदय उंडेल दो, क्योंकि परमेश्वर ही हमारा आश्रय-स्थल हैं.
ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.
9 साधारण पुरुष श्वास मात्र हैं, विशिष्ट पुरुष मात्र भ्रान्ति. इन्हें तुला पर रखकर तौला जाए तो वे नगण्य उतरेंगे; एक श्वास मात्र.
ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.
10 न तो हिंसा-अत्याचार से कुछ उपलब्ध होगा, न लूटमार से प्राप्त संपत्ति कोई गर्व का विषय है; जब तुम्हारी समृद्धि में बढ़ती होने लगे, तो संपत्ति से मन न जोड़ लेना.
ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.
11 परमेश्वर ने एक बात प्रकाशित की, मैंने दो बातें ग्रहण की: “परमेश्वर, आप सर्वसामर्थ्यी हैं.
ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.
12 तथा प्रभु, आपका प्रेम अमोघ”; इसमें संदेह नहीं, “आप हर एक पुरुष को उसके कर्मों के अनुरूप प्रतिफल प्रदान करेंगे.”
ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”