< 1 शमूएल 22 >

1 दाऊद वहाँ से चला, और बचकरअदुल्लाम की गुफा में पहुँच गया; यह सुनकर उसके भाई, वरन् उसके पिता का समस्त घराना वहाँ उसके पास गया।
ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.
2 और जितने संकट में पड़े थे, और जितने ऋणी थे, और जितने उदास थे, वे सब उसके पास इकट्ठे हुए; और वह उनका प्रधान हुआ। और कोई चार सौ पुरुष उसके साथ हो गए।
ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
3 वहाँ से दाऊद ने मोआब के मिस्पे को जाकर मोआब के राजा से कहा, “मेरे पिता को अपने पास तब तक आकर रहने दो, जब तक कि मैं न जानूं कि परमेश्वर मेरे लिये क्या करेगा।”
ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.
4 और वह उनको मोआब के राजा के सम्मुख ले गया, और जब तक दाऊद उस गढ़ में रहा, तब तक वे उसके पास रहे।
ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಈ ಅರಸನ ಬಳಿಯಲ್ಲಿ ವಾಸವಾಗಿದ್ದರು.
5 फिर गाद नामक एक नबी ने दाऊद से कहा, “इस गढ़ में मत रह; चल, यहूदा के देश में जा।” और दाऊद चलकर हेरेत के जंगल में गया।
ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.
6 तब शाऊल ने सुना कि दाऊद और उसके संगियों का पता लग गया हैं उस समय शाऊल गिबा के ऊँचे स्थान पर, एक झाऊ के पेड़ के नीचे, हाथ में अपना भाला लिए हुए बैठा था, और उसके सब कर्मचारी उसके आस-पास खड़े थे।
ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.
7 तब शाऊल अपने कर्मचारियों से जो उसके आस-पास खड़े थे कहने लगा, “हे बिन्यामीनियों, सुनो; क्या यिशै का पुत्र तुम सभी को खेत और दाख की बारियाँ देगा? क्या वह तुम सभी को सहस्त्रपति और शतपति करेगा?
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?
8 तुम सभी ने मेरे विरुद्ध क्यों राजद्रोह की गोष्ठी की है? और जब मेरे पुत्र ने यिशै के पुत्र से वाचा बाँधी, तब किसी ने मुझ पर प्रगट नहीं किया; और तुम में से किसी ने मेरे लिये शोकित होकर मुझ पर प्रगट नहीं किया, कि मेरे पुत्र ने मेरे कर्मचारी को मेरे विरुद्ध ऐसा घात लगाने को उभारा है, जैसा आज के दिन है।”
ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ” ಅಂದನು
9 तब एदोमी दोएग ने, जो शाऊल के सेवकों के ऊपर ठहराया गया था, उत्तर देकर कहा, “मैंने तो यिशै के पुत्र को नोब में अहीतूब के पुत्र अहीमेलेक के पास आते देखा,
ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.
10 १० और उसने उसके लिये यहोवा से पूछा, और उसे भोजनवस्तु दी, और पलिश्ती गोलियत की तलवार भी दी।”
೧೦ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.
11 ११ और राजा ने अहीतूब के पुत्र अहीमेलेक याजक को और उसके पिता के समस्त घराने को, अर्थात् नोब में रहनेवाले याजकों को बुलवा भेजा; और जब वे सब के सब शाऊल राजा के पास आए,
೧೧ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು,
12 १२ तब शाऊल ने कहा, “हे अहीतूब के पुत्र, सुन,” वह बोला, “हे प्रभु, क्या आज्ञा?”
೧೨ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.
13 १३ शाऊल ने उससे पूछा, “क्या कारण है कि तू और यिशै के पुत्र दोनों ने मेरे विरुद्ध राजद्रोह की गोष्ठी की है? तूने उसे रोटी और तलवार दी, और उसके लिये परमेश्वर से पूछा भी, जिससे वह मेरे विरुद्ध उठे, और ऐसा घात लगाए जैसा आज के दिन है?”
೧೩ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು
14 १४ अहीमेलेक ने राजा को उत्तर देकर कहा, तेरे समस्त कर्मचारियों में दाऊद के तुल्य विश्वासयोग्य कौन है? वह तो राजा का दामाद है, और तेरी राजसभा में उपस्थित हुआ करता, और तेरे परिवार में प्रतिष्ठित है।
೧೪ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?
15 १५ क्या मैंने आज ही उसके लिये परमेश्वर से पूछना आरम्भ किया है? वह मुझसे दूर रहे! राजा न तो अपने दास पर ऐसा कोई दोष लगाए, न मेरे पिता के समस्त घराने पर, क्योंकि तेरा दास इन सब बातों के विषय कुछ भी नहीं जानता।”
೧೫ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.
16 १६ राजा ने कहा, “हे अहीमेलेक, तू और तेरे पिता का समस्त घराना निश्चय मार डाला जाएगा।”
೧೬ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ
17 १७ फिर राजा ने उन पहरुओं से जो उसके आस-पास खड़े थे आज्ञा दी, “मुड़ो और यहोवा के याजकों को मार डालो; क्योंकि उन्होंने भी दाऊद की सहायता की है, और उसका भागना जानने पर भी मुझ पर प्रगट नहीं किया।” परन्तु राजा के सेवक यहोवा के याजकों को मारने के लिये हाथ बढ़ाना न चाहते थे।
೧೭ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.
18 १८ तब राजा ने दोएग से कहा, “तू मुड़कर याजकों को मार डाल।” तब एदोमी दोएग ने मुड़कर याजकों को मारा, और उस दिन सनीवाला एपोद पहने हुए पचासी पुरुषों को घात किया।
೧೮ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.
19 १९ और याजकों के नगर नोब को उसने स्त्रियों-पुरुषों, और बाल-बच्चों, और दूधपीतों, और बैलों, गदहों, और भेड़-बकरियों समेत तलवार से मारा।
೧೯ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.
20 २० परन्तु अहीतूब के पुत्र अहीमेलेक का एब्यातार नामक एक पुत्र बच निकला, और दाऊद के पास भाग गया।
೨೦ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,
21 २१ तब एब्यातार ने दाऊद को बताया, कि शाऊल ने यहोवा के याजकों का वध किया है।
೨೧ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.
22 २२ और दाऊद ने एब्यातार से कहा, “जिस दिन एदोमी दोएग वहाँ था, उसी दिन मैंने जान लिया था, कि वह निश्चय शाऊल को बताएगा। तेरे पिता के समस्त घराने के मारे जाने का कारण मैं ही हुआ।
೨೨ದಾವೀದನು ಎದೋಮ್ಯನಾದ ದೋಯೇಗನನ್ನು, “ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ.
23 २३ इसलिए तू मेरे साथ निडर रह; जो मेरे प्राण का ग्राहक है वही तेरे प्राण का भी ग्राहक है; परन्तु मेरे साथ रहने से तेरी रक्षा होगी।”
೨೩ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.

< 1 शमूएल 22 >