< 2 इतिहास 12 >

1 परन्तु जब रहबाम का राज्य दृढ़ हो गया, और वह आप स्थिर हो गया, तब उसने और उसके साथ सारे इस्राएल ने यहोवा की व्यवस्था को त्याग दिया।
ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು.
2 उन्होंने जो यहोवा से विश्वासघात किया, इस कारण राजा रहबाम के पाँचवें वर्ष में मिस्र के राजा शीशक ने,
ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.
3 बारह सौ रथ और साठ हजार सवार लिये हुए यरूशलेम पर चढ़ाई की, और जो लोग उसके संग मिस्र से आए, अर्थात् लूबी, सुक्किय्यी, कूशी, ये अनगिनत थे।
ಅವನ ಸಂಗಡ ಸಾವಿರದ ಇನ್ನೂರು ರಥಗಳೂ, ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಈಜಿಪ್ಟಿನಿಂದ ಬಂದ ಲಿಬಿಯದವರೂ, ಸುಕ್ಕೀಯರೂ, ಕೂಷ್ಯರೂ ಲೆಕ್ಕವಿಲ್ಲದಷ್ಟು ಬಂದರು.
4 उसने यहूदा के गढ़वाले नगरों को ले लिया, और यरूशलेम तक आया।
ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
5 तब शमायाह नबी रहबाम और यहूदा के हाकिमों के पास जो शीशक के डर के मारे यरूशलेम में इकट्ठे हुए थे, आकर कहने लगा, “यहोवा यह कहता है, कि तुम ने मुझ को छोड़ दिया है, इसलिए मैंने तुम को छोड़कर शीशक के हाथ में कर दिया है।”
ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.
6 तब इस्राएल के हाकिम और राजा दीन हो गए, और कहा, “यहोवा धर्मी है।”
ಆದ್ದರಿಂದ ಇಸ್ರಾಯೇಲಿನ ಪ್ರಧಾನರೂ, ಅರಸನೂ ತಮ್ಮನ್ನು ತಗ್ಗಿಸಿಕೊಂಡು, “ಯೆಹೋವ ದೇವರು ನೀತಿವಂತರು,” ಎಂದರು.
7 जब यहोवा ने देखा कि वे दीन हुए हैं, तब यहोवा का यह वचन शमायाह के पास पहुँचा “वे दीन हो गए हैं, मैं उनको नष्ट न करूँगा; मैं उनका कुछ बचाव करूँगा, और मेरी जलजलाहट शीशक के द्वारा यरूशलेम पर न भड़केगी।
ಅವರು ತಮ್ಮನ್ನು ತಗ್ಗಿಸಿಕೊಂಡದ್ದನ್ನು ಯೆಹೋವ ದೇವರು ನೋಡಿದಾಗ, ಯೆಹೋವ ದೇವರ ವಾಕ್ಯವು ಶೆಮಾಯನಿಗೆ ಉಂಟಾಗಿ, “ಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಮಾಡದೆ, ಅವರು ತಪ್ಪಿಸಿಕೊಳ್ಳುವಂತೆ ಮಾಡುವೆನು. ಶೀಶಕನ ಮುಖಾಂತರ ನನ್ನ ಕೋಪವನ್ನು ಯೆರೂಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.
8 तो भी वे उसके अधीन रहेंगे, ताकि वे मेरी और देश-देश के राज्यों की भी सेवा में अन्तर को जान लें।”
ಆದರೂ ಅವರು ನನ್ನ ಸೇವೆಗೂ, ದೇಶಗಳ ಅರಸರ ಸೇವೆಗೂ ಇರುವ ವ್ಯತ್ಯಾಸವನ್ನು ಇವರು ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು,” ಎಂದು ಹೇಳಿದನು.
9 तब मिस्र का राजा शीशक यरूशलेम पर चढ़ाई करके यहोवा के भवन की अनमोल वस्तुएँ और राजभवन की अनमोल वस्तुएँ उठा ले गया। वह सब कुछ उठा ले गया, और सोने की जो ढालें सुलैमान ने बनाई थीं, उनको भी वह ले गया।
ಈಜಿಪ್ಟಿನ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿ ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.
10 १० तब राजा रहबाम ने उनके बदले पीतल की ढालें बनवाईं और उन्हें पहरुओं के प्रधानों के हाथ सौंप दिया, जो राजभवन के द्वार की रखवाली करते थे।
ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.
11 ११ जब जब राजा यहोवा के भवन में जाता, तब-तब पहरुए आकर उन्हें उठा ले चलते, और फिर पहरुओं की कोठरी में लौटाकर रख देते थे।
ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು.
12 १२ जब रहबाम दीन हुआ, तब यहोवा का क्रोध उस पर से उतर गया, और उसने उसका पूरा विनाश न किया; और यहूदा की दशा कुछ अच्छी भी थी।
ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡಾಗ, ಯೆಹೋವ ದೇವರ ಕೋಪವು ಅವನನ್ನು ಬಿಟ್ಟು ತಿರುಗಿತು. ಆತನು ಪೂರ್ಣವಾಗಿ ನಾಶಮಾಡಲಿಲ್ಲ. ಯೆಹೂದದಲ್ಲಿ ಸಹ ಕೆಲವು ಕಾರ್ಯಗಳು ಸುಲಕ್ಷಣಗಳು ಕಂಡುಬಂದವು.
13 १३ अतः राजा रहबाम यरूशलेम में दृढ़ होकर राज्य करता रहा। जब रहबाम राज्य करने लगा, तब इकतालीस वर्ष की आयु का था, और यरूशलेम में अर्थात् उस नगर में, जिसे यहोवा ने अपना नाम बनाए रखने के लिये इस्राएल के सारे गोत्र में से चुन लिया था, सत्रह वर्ष तक राज्य करता रहा। उसकी माता का नाम नामाह था, जो अम्मोनी स्त्री थी।
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.
14 १४ उसने वह कर्म किया जो बुरा है, अर्थात् उसने अपने मन को यहोवा की खोज में न लगाया।
ಅವನು ಯೆಹೋವ ದೇವರನ್ನು ಹುಡುಕಲು ತನ್ನ ಹೃದಯವನ್ನು ಸ್ಥಿರಪಡಿಸದೆ ಇದ್ದುದರಿಂದ, ಕೆಟ್ಟದ್ದನ್ನು ಮಾಡಿದನು.
15 १५ आदि से अन्त तक रहबाम के काम क्या शमायाह नबी और इद्दो दर्शी की पुस्तकों में वंशावलियों की रीति पर नहीं लिखे हैं? रहबाम और यारोबाम के बीच तो लड़ाई सदा होती रही।
ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.
16 १६ और रहबाम मरकर अपने पुरखाओं के संग जा मिला और दाऊदपुर में उसको मिट्टी दी गई। और उसका पुत्र अबिय्याह उसके स्थान पर राज्य करने लगा।
ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.

< 2 इतिहास 12 >