< 2 इतिहास 14 >

1 अन्त में अबिय्याह मरकर अपने पुरखाओं के संग जा मिला, और उसको दाऊदपुर में मिट्टी दी गई; और उसका पुत्र आसा उसके स्थान पर राज्य करने लगा। इसके दिनों में दस वर्ष तक देश में चैन रहा।
ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.
2 आसा ने वही किया जो उसके परमेश्वर यहोवा की दृष्टि में अच्छा और ठीक था।
ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.
3 उसने पराई वेदियों को और ऊँचे स्थानों को दूर किया, और लाठों को तुड़वा डाला, और अशेरा नामक मूरतों को तोड़ डाला।
ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.
4 और यहूदियों को आज्ञा दी कि अपने पूर्वजों के परमेश्वर यहोवा की खोज करें, और व्यवस्था और आज्ञा को मानें।
ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.
5 उसने ऊँचे स्थानों और सूर्य की प्रतिमाओं को यहूदा के सब नगरों में से दूर किया, और उसके सामने राज्य में चैन रहा।
ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.
6 उसने यहूदा में गढ़वाले नगर बसाए, क्योंकि देश में चैन रहा। उन वर्षों में उसे किसी से लड़ाई न करनी पड़ी क्योंकि यहोवा ने उसे विश्राम दिया था।
ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
7 उसने यहूदियों से कहा, “आओ हम इन नगरों को बसाएँ और उनके चारों ओर शहरपनाह, गढ़ और फाटकों के पल्ले और बेड़े बनाएँ; देश अब तक हमारे सामने पड़ा है, क्योंकि हमने, अपने परमेश्वर यहोवा की खोज की है; हमने उसकी खोज की और उसने हमको चारों ओर से विश्राम दिया है।” तब उन्होंने उन नगरों को बसाया और समृद्ध हुए।
ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.
8 फिर आसा के पास ढाल और बरछी रखनेवालों की एक सेना थी, अर्थात् यहूदा में से तो तीन लाख पुरुष और बिन्यामीन में से ढाल रखनेवाले और धनुर्धारी दो लाख अस्सी हजार, ये सब शूरवीर थे।
ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.
9 उनके विरुद्ध दस लाख पुरुषों की सेना और तीन सौ रथ लिये हुए जेरह नामक एक कूशी निकला और मारेशा तक आ गया।
ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.
10 १० तब आसा उसका सामना करने को चला और मारेशा के निकट सापता नामक तराई में युद्ध की पाँति बाँधी गई।
ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
11 ११ तब आसा ने अपने परमेश्वर यहोवा की दुहाई दी, “हे यहोवा! जैसे तू सामर्थी की सहायता कर सकता है, वैसे ही शक्तिहीन की भी; हे हमारे परमेश्वर यहोवा! हमारी सहायता कर, क्योंकि हमारा भरोसा तुझी पर है और तेरे नाम का भरोसा करके हम इस भीड़ के विरुद्ध आए हैं। हे यहोवा, तू हमारा परमेश्वर है; मनुष्य तुझ पर प्रबल न होने पाएगा।”
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
12 १२ तब यहोवा ने कूशियों को आसा और यहूदियों के सामने मारा और कूशी भाग गए।
ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.
13 १३ आसा और उसके संग के लोगों ने उनका पीछा गरार तक किया, और इतने कूशी मारे गए, कि वे फिर सिर न उठा सके क्योंकि वे यहोवा और उसकी सेना से हार गए, और यहूदी बहुत सी लूट ले गए।
ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.
14 १४ उन्होंने गरार के आस-पास के सब नगरों को मार लिया, क्योंकि यहोवा का भय उनके रहनेवालों के मन में समा गया और उन्होंने उन नगरों को लूट लिया, क्योंकि उनमें बहुत सा धन था।
ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.
15 १५ फिर पशु-शालाओं को जीतकर बहुत सी भेड़-बकरियाँ और ऊँट लूटकर यरूशलेम को लौटे।
ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.

< 2 इतिहास 14 >