< 2 इतिहास 24 >

1 जब योआश राजा हुआ, तब वह सात वर्ष का था, और यरूशलेम में चालीस वर्ष तक राज्य करता रहा। उसकी माता का नाम सिब्या था, जो बेर्शेबा की थी।
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
2 जब तक यहोयादा याजक जीवित रहा, तब तक योआश वह काम करता रहा जो यहोवा की दृष्टि में ठीक है।
ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
3 यहोयादा ने उसके दो विवाह कराए और उससे बेटे-बेटियाँ उत्पन्न हुईं।
ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.
4 इसके बाद योआश के मन में यहोवा के भवन की मरम्मत करने की इच्छा उपजी।
ಕ್ರಮೇಣ ಯೋವಾಷನು ಯೆಹೋವ ದೇವರ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾದನು.
5 तब उसने याजकों और लेवियों को इकट्ठा करके कहा, “प्रतिवर्ष यहूदा के नगरों में जा जाकर सब इस्राएलियों से रुपये लिया करो जिससे तुम्हारे परमेश्वर के भवन की मरम्मत हो; देखो इस काम में फुर्ती करो।” तो भी लेवियों ने कुछ फुर्ती न की।
ಆದ್ದರಿಂದ ಅವನು ಯಾಜಕರನ್ನೂ, ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆ, “ನೀವು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ ವರ್ಷ ವರ್ಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವುದಕ್ಕೆ ಸಮಸ್ತ ಇಸ್ರಾಯೇಲರಿಂದ ಹಣವನ್ನು ಕೂಡಿಸಿರಿ ಮತ್ತು ಕೆಲಸವನ್ನು ಶೀಘ್ರವಾಗಿ ನಡೆಸಿರಿ,” ಎಂದನು. ಆದರೂ ಲೇವಿಯರು ಅವಸರ ಮಾಡದೆ ಇದ್ದರು.
6 तब राजा ने यहोयादा महायाजक को बुलवाकर पूछा, “क्या कारण है कि तूने लेवियों को दृढ़ आज्ञा नहीं दी कि वे यहूदा और यरूशलेम से उस चन्दे के रुपये ले आएँ जिसका नियम यहोवा के दास मूसा और इस्राएल की मण्डली ने साक्षीपत्र के तम्बू के निमित्त चलाया था।”
ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.
7 उस दुष्ट स्त्री अतल्याह के बेटों ने तो परमेश्वर के भवन को तोड़ दिया था, और यहोवा के भवन की सब पवित्र की हुई वस्तुएँ बाल देवताओं के लिये प्रयोग की थीं।
ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.
8 राजा ने एक सन्दूक बनाने की आज्ञा दी और वह यहोवा के भवन के फाटक के पास बाहर रखा गया।
ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು.
9 तब यहूदा और यरूशलेम में यह प्रचार किया गया कि जिस चन्दे का नियम परमेश्वर के दास मूसा ने जंगल में इस्राएल में चलाया था, उसके रुपये यहोवा के निमित्त ले आओ।
ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.
10 १० तो सब हाकिम और प्रजा के सब लोग आनन्दित हो रुपये लाकर जब तक चन्दा पूरा न हुआ तब तक सन्दूक में डालते गए।
ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.
11 ११ जब जब वह सन्दूक लेवियों के हाथ से राजा के प्रधानों के पास पहुँचाया जाता और यह जान पड़ता था कि उसमें रुपये बहुत हैं, तब-तब राजा के प्रधान और महायाजक के अधिकारी आकर सन्दूक को खाली करते और तब उसे फिर उसके स्थान पर रख देते थे। उन्होंने प्रतिदिन ऐसा किया और बहुत रुपये इकट्ठा किए।
ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಕಛೇರಿಗೆ ತಂದಾಗಲೆಲ್ಲಾ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ, ಅರಸನ ಕಾರ್ಯದರ್ಶಿಯೂ, ಮುಖ್ಯಯಾಜಕನ ಪರಿಚಾರಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ, ತೆಗೆದುಕೊಂಡು ತಿರುಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
12 १२ तब राजा और यहोयादा ने वह रुपये यहोवा के भवन में काम करनेवालों को दे दिए, और उन्होंने राजमिस्त्रियों और बढ़इयों को यहोवा के भवन के सुधारने के लिये, और लोहारों और ठठेरों को यहोवा के भवन की मरम्मत करने के लिये मजदूरी पर रखा।
ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು.
13 १३ कारीगर काम करते गए और काम पूरा होता गया, और उन्होंने परमेश्वर का भवन जैसा का तैसा बनाकर दृढ़ कर दिया।
ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.
14 १४ जब उन्होंने वह काम पूरा कर लिया, तब वे शेष रुपये राजा और यहोयादा के पास ले गए, और उनसे यहोवा के भवन के लिये पात्र बनाए गए, अर्थात् सेवा टहल करने और होमबलि चढ़ाने के पात्र और धूपदान आदि सोने चाँदी के पात्र। जब तक यहोयादा जीवित रहा, तब तक यहोवा के भवन में होमबलि नित्य चढ़ाए जाते थे।
ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.
15 १५ परन्तु यहोयादा बूढ़ा हो गया और दीर्घायु होकर मर गया। जब वह मर गया तब एक सौ तीस वर्ष का था।
ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು.
16 १६ और दाऊदपुर में राजाओं के बीच उसको मिट्टी दी गई, क्योंकि उसने इस्राएल में और परमेश्वर के और उसके भवन के विषय में भला किया था।
ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.
17 १७ यहोयादा के मरने के बाद यहूदा के हाकिमों ने राजा के पास जाकर उसे दण्डवत् की, और राजा ने उनकी मानी।
ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
18 १८ तब वे अपने पितरों के परमेश्वर यहोवा का भवन छोड़कर अशेरों और मूरतों की उपासना करने लगे। अतः उनके ऐसे दोषी होने के कारण परमेश्वर का क्रोध यहूदा और यरूशलेम पर भड़का।
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.
19 १९ तो भी उसने उनके पास नबी भेजे कि उनको यहोवा के पास फेर लाएँ; और इन्होंने उन्हें चिता दिया, परन्तु उन्होंने कान न लगाया।
ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.
20 २० तब परमेश्वर का आत्मा यहोयादा याजक के पुत्र जकर्याह में समा गया, और वह ऊँचे स्थान पर खड़ा होकर लोगों से कहने लगा, “परमेश्वर यह कहता है, कि तुम यहोवा की आज्ञाओं को क्यों टालते हो? ऐसा करके तुम्हारा भला नहीं हो सकता। देखो, तुम ने तो यहोवा को त्याग दिया है, इस कारण उसने भी तुम को त्याग दिया।”
ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
21 २१ तब लोगों ने उसके विरुद्ध द्रोह की बात करके, राजा की आज्ञा से यहोवा के भवन के आँगन में उस पर पथराव किया।
ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
22 २२ इस प्रकार राजा योआश ने वह प्रीति भूलकर जो यहोयादा ने उससे की थी, उसके पुत्र को घात किया। मरते समय उसने कहा, “यहोवा इस पर दृष्टि करके इसका लेखा ले।”
ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.
23 २३ नये वर्ष के लगते अरामियों की सेना ने उस पर चढ़ाई की, और यहूदा और यरूशलेम आकर प्रजा में से सब हाकिमों को नाश किया और उनका सब धन लूटकर दमिश्क के राजा के पास भेजा।
ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
24 २४ अरामियों की सेना थोड़े ही सैनिकों के साथ तो आई, परन्तु यहोवा ने एक बहुत बड़ी सेना उनके हाथ कर दी, क्योंकि उन्होंने अपने पितरों के परमेश्वर को त्याग दिया था। इस प्रकार योआश को भी उन्होंने दण्ड दिया।
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.
25 २५ जब वे उसे बहुत ही घायल अवस्था में छोड़ गए, तब उसके कर्मचारियों ने यहोयादा याजक के पुत्रों के खून के कारण उससे द्रोह की बात करके, उसे उसके बिछौने पर ही ऐसा मारा, कि वह मर गया; और उन्होंने उसको दाऊदपुर में मिट्टी दी, परन्तु राजाओं के कब्रिस्तान में नहीं।
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
26 २६ जिन्होंने उससे राजद्रोह की गोष्ठी की, वे ये थे, अर्थात् अम्मोनिन शिमात का पुत्र जाबाद, और शिम्रित मोआबिन का पुत्र यहोजाबाद।
ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು.
27 २७ उसके बेटों के विषय और उसके विरुद्ध, जो बड़े दण्ड की नबूवत हुई, उसके और परमेश्वर के भवन के बनने के विषय ये सब बातें राजाओं के वृत्तान्त की पुस्तक में लिखी हैं। तब उसका पुत्र अमस्याह उसके स्थान पर राजा हुआ।
ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

< 2 इतिहास 24 >