< 2 इतिहास 34 >
1 १ जब योशिय्याह राज्य करने लगा, तब वह आठ वर्ष का था, और यरूशलेम में इकतीस वर्ष तक राज्य करता रहा।
ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.
2 २ उसने वह किया जो यहोवा की दृष्टि में ठीक है, और जिन मार्गों पर उसका मूलपुरुष दाऊद चलता रहा, उन्हीं पर वह भी चला करता था और उससे न तो दाहिनी ओर मुड़ा, और न बाईं ओर।
ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.
3 ३ वह लड़का ही था, अर्थात् उसको गद्दी पर बैठे आठ वर्ष पूरे भी न हुए थे कि अपने मूलपुरुष दाऊद के परमेश्वर की खोज करने लगा, और बारहवें वर्ष में वह ऊँचे स्थानों और अशेरा नामक मूरतों को और खुदी और ढली हुई मूरतों को दूर करके, यहूदा और यरूशलेम को शुद्ध करने लगा।
ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
4 ४ बाल देवताओं की वेदियाँ उसके सामने तोड़ डाली गई, और सूर्य की प्रतिमाएँ जो उनके ऊपर ऊँचे पर थीं, उसने काट डाली, और अशेरा नामक, और खुदी और ढली हुई मूरतों को उसने तोड़कर पीस डाला, और उनकी बुकनी उन लोगों की कब्रों पर छितरा दी, जो उनको बलि चढ़ाते थे।
ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,
5 ५ उनके पुजारियों की हड्डियाँ उसने उन्हीं की वेदियों पर जलाईं। अतः उसने यहूदा और यरूशलेम को शुद्ध किया।
ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು.
6 ६ फिर मनश्शे, एप्रैम और शिमोन के वरन् नप्ताली तक के नगरों के खण्डहरों में, उसने वेदियों को तोड़ डाला,
ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು.
7 ७ और अशेरा नामक और खुदी हुई मूरतों को पीसकर बुकनी कर डाला, और इस्राएल के सारे देश की सूर्य की सब प्रतिमाओं को काटकर यरूशलेम को लौट गया।
ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.
8 ८ फिर अपने राज्य के अठारहवें वर्ष में जब वह देश और भवन दोनों को शुद्ध कर चुका, तब उसने असल्याह के पुत्र शापान और नगर के हाकिम मासेयाह और योआहाज के पुत्र इतिहास के लेखक योआह को अपने परमेश्वर यहोवा के भवन की मरम्मत कराने के लिये भेज दिया।
ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
9 ९ अतः उन्होंने हिल्किय्याह महायाजक के पास जाकर जो रुपया परमेश्वर के भवन में लाया गया था, अर्थात् जो लेवीय दरबानों ने मनश्शेइयों, एप्रैमियों और सब बचे हुए इस्राएलियों से और सब यहूदियों और बिन्यामीनियों से और सब यरूशलेम के निवासियों के हाथ से लेकर इकट्ठा किया था, उसको सौंप दिया।
ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.
10 १० अर्थात् उन्होंने उसे उन काम करनेवालों के हाथ सौंप दिया जो यहोवा के भवन के काम पर मुखिए थे, और यहोवा के भवन के उन काम करनेवालों ने उसे भवन में जो कुछ टूटा फूटा था, उसकी मरम्मत करने में लगाया।
ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.
11 ११ अर्थात् उन्होंने उसे बढ़इयों और राजमिस्त्रियों को दिया कि वे गढ़े हुए पत्थर और जोड़ों के लिये लकड़ी मोल लें, और उन घरों को छाएँ जो यहूदा के राजाओं ने नाश कर दिए थे।
ಕೆತ್ತಿದ ಕಲ್ಲುಗಳನ್ನೂ, ತೊಲೆಗಳಿಗೋಸ್ಕರ ಮರಗಳನ್ನೂ, ಯೆಹೂದದ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಹಲಿಗೆಗಳನ್ನು ಕೊಂಡುಕೊಳ್ಳಲೂ, ಬಡಗಿಯರಿಗೂ, ಕಲ್ಲುಕೆಲಸದವರಿಗೂ ಆ ಹಣವನ್ನು ಕೊಟ್ಟರು.
12 १२ वे मनुष्य सच्चाई से काम करते थे, और उनके अधिकारी मरारीय, यहत और ओबद्याह, लेवीय और कहाती, जकर्याह और मशुल्लाम, काम चलानेवाले और गाने-बजाने का भेद सब जाननेवाले लेवीय भी थे।
ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.
13 १३ फिर वे बोझियों के अधिकारी थे और भाँति-भाँति की सेवा और काम चलानेवाले थे, और कुछ लेवीय मुंशी सरदार और दरबान थे।
ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.
14 १४ जब वे उस रुपये को जो यहोवा के भवन में पहुँचाया गया था, निकाल रहे थे, तब हिल्किय्याह याजक को मूसा के द्वारा दी हुई यहोवा की व्यवस्था की पुस्तक मिली।
ಯೆಹೋವ ದೇವರ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತೆಗೆದುಕೊಂಡು ಬರುವಾಗ, ಯಾಜಕನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಯೆಹೋವ ದೇವರ ನಿಯಮದ ಗ್ರಂಥವನ್ನು ಕಂಡುಕೊಂಡನು.
15 १५ तब हिल्किय्याह ने शापान मंत्री से कहा, “मुझे यहोवा के भवन में व्यवस्था की पुस्तक मिली है;” तब हिल्किय्याह ने शापान को वह पुस्तक दी।
ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.
16 १६ तब शापान उस पुस्तक को राजा के पास ले गया, और यह सन्देश दिया, “जो-जो काम तेरे कर्मचारियों को सौंपा गया था उसे वे कर रहे हैं।
ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ.
17 १७ जो रुपया यहोवा के भवन में मिला, उसको उन्होंने उण्डेलकर मुखियों और कारीगरों के हाथों में सौंप दिया है।”
ಇದಲ್ಲದೆ ಅವರು ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ತೆಗೆದು ಮೇಲ್ವಿಚಾರಕರ ಕೈಯಲ್ಲಿ ಮತ್ತು ಕೆಲಸದವರ ಕೈಯಲ್ಲಿ ಒಪ್ಪಿಸಿದ್ದಾರೆ.
18 १८ फिर शापान मंत्री ने राजा को यह भी बता दिया कि हिल्किय्याह याजक ने मुझे एक पुस्तक दी है; तब शापान ने उसमें से राजा को पढ़कर सुनाया।
ಕಾರ್ಯದರ್ಶಿಯಾದ ಶಾಫಾನನು ಅರಸನಿಗೆ ಯಾಜಕನಾದ ಹಿಲ್ಕೀಯನು ನನಗೆ ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ತಿಳಿಸಿದನು. ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
19 १९ व्यवस्था की वे बातें सुनकर राजा ने अपने वस्त्र फाड़े।
ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.
20 २० फिर राजा ने हिल्किय्याह, शापान के पुत्र अहीकाम, मीका के पुत्र अब्दोन, शापान मंत्री और असायाह नामक अपने कर्मचारी को आज्ञा दी,
ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,
21 २१ “तुम जाकर मेरी ओर से और इस्राएल और यहूदा में रहनेवालों की ओर से इस पाई हुई पुस्तक के वचनों के विषय यहोवा से पूछो; क्योंकि यहोवा की बड़ी ही जलजलाहट हम पर इसलिए भड़की है कि हमारे पुरखाओं ने यहोवा का वचन नहीं माना, और इस पुस्तक में लिखी हुई सब आज्ञाओं का पालन नहीं किया।”
“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.
22 २२ तब हिल्किय्याह ने राजा के अन्य दूतों समेत हुल्दा नबिया के पास जाकर उससे उसी बात के अनुसार बातें की, वह तो उस शल्लूम की स्त्री थी जो तोखत का पुत्र और हस्रा का पोता और वस्त्रालय का रखवाला था: और वह स्त्री यरूशलेम के नये टोले में रहती थी।
ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.
23 २३ उसने उनसे कहा, “इस्राएल का परमेश्वर यहोवा यह कहता है, कि जिस पुरुष ने तुम को मेरे पास भेजा, उससे यह कहो,
ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:
24 २४ ‘यहोवा यह कहता है, कि सुन, मैं इस स्थान और इसके निवासियों पर विपत्ति डालकर यहूदा के राजा के सामने जो पुस्तक पढ़ी गई, उसमें जितने श्राप लिखे हैं उन सभी को पूरा करूँगा।
‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.
25 २५ उन लोगों ने मुझे त्याग कर पराए देवताओं के लिये धूप जलाया है और अपनी बनाई हुई सब वस्तुओं के द्वारा मुझे क्रोध दिलाया है, इस कारण मेरी जलजलाहट इस स्थान पर भड़क उठी है, और शान्त न होगी।
ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’
26 २६ परन्तु यहूदा का राजा जिसने तुम्हें यहोवा से पूछने को भेज दिया है उससे तुम यह कहो, कि इस्राएल का परमेश्वर यहोवा यह कहता है,
ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,
27 २७ कि इसलिए कि तू वे बातें सुनकर दीन हुआ, और परमेश्वर के सामने अपना सिर झुकाया, और उसकी बातें सुनकर जो उसने इस स्थान और इसके निवासियों के विरुद्ध कहीं, तूने मेरे सामने अपना सिर झुकाया, और वस्त्र फाड़कर मेरे सामने रोया है, इस कारण मैंने तेरी सुनी है; यहोवा की यही वाणी है।
ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,
28 २८ सुन, मैं तुझे तेरे पुरखाओं के संग ऐसा मिलाऊँगा कि तू शान्ति से अपनी कब्र को पहुँचाया जाएगा; और जो विपत्ति मैं इस स्थान पर, और इसके निवासियों पर डालना चाहता हूँ, उसमें से तुझे अपनी आँखों से कुछ भी देखना न पड़ेगा।’” तब उन लोगों ने लौटकर राजा को यही सन्देश दिया।
ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.
29 २९ तब राजा ने यहूदा और यरूशलेम के सब पुरनियों को इकट्ठे होने को बुलवा भेजा।
ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.
30 ३० राजा यहूदा के सब लोगों और यरूशलेम के सब निवासियों और याजकों और लेवियों वरन् छोटे बड़े सारी प्रजा के लोगों को संग लेकर यहोवा के भवन को गया; तब उसने जो वाचा की पुस्तक यहोवा के भवन में मिली थी उसमें की सारी बातें उनको पढ़कर सुनाई।
ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.
31 ३१ तब राजा ने अपने स्थान पर खड़े होकर, यहोवा से इस आशय की वाचा बाँधी कि मैं यहोवा के पीछे-पीछे चलूँगा, और अपने सम्पूर्ण मन और सम्पूर्ण जीव से उसकी आज्ञाओं, चेतावनियों और विधियों का पालन करूँगा, और इन वाचा की बातों को जो इस पुस्तक में लिखी हैं, पूरी करूँगा।
ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.
32 ३२ फिर उसने उन सभी से जो यरूशलेम में और बिन्यामीन में थे वैसी ही वाचा बँधाई: और यरूशलेम के निवासी, परमेश्वर जो उनके पितरों का परमेश्वर था, उसकी वाचा के अनुसार करने लगे।
ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.
33 ३३ योशिय्याह ने इस्राएलियों के सब देशों में से सब अशुद्ध वस्तुओं को दूर करके जितने इस्राएल में मिले, उन सभी से उपासना कराई; अर्थात् उनके परमेश्वर यहोवा की उपासना कराई; उसके जीवन भर उन्होंने अपने पूर्वजों के परमेश्वर यहोवा के पीछे चलना न छोड़ा।
ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.