< 2 इतिहास 36 >
1 १ तब देश के लोगों ने योशिय्याह के पुत्र यहोआहाज को लेकर उसके पिता के स्थान पर यरूशलेम में राजा बनाया।
೧ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
2 २ जब यहोआहाज राज्य करने लगा, तब वह तेईस वर्ष का था, और तीन महीने तक यरूशलेम में राज्य करता रहा।
೨ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
3 ३ तब मिस्र के राजा ने उसको यरूशलेम में राजगद्दी से उतार दिया, और देश पर सौ किक्कार चाँदी और किक्कार भर सोना जुर्माने में दण्ड लगाया।
೩ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
4 ४ तब मिस्र के राजा ने उसके भाई एलयाकीम को यहूदा और यरूशलेम का राजा बनाया और उसका नाम बदलकर यहोयाकीम रखा; परन्तु नको उसके भाई यहोआहाज को मिस्र में ले गया।
೪ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.
5 ५ जब यहोयाकीम राज्य करने लगा, तब वह पच्चीस वर्ष का था, और ग्यारह वर्ष तक यरूशलेम में राज्य करता रहा। उसने वह काम किया, जो उसके परमेश्वर यहोवा की दृष्टि में बुरा है।
೫ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
6 ६ उस पर बाबेल के राजा नबूकदनेस्सर ने चढ़ाई की, और बाबेल ले जाने के लिये उसको पीतल की बेड़ियाँ पहना दीं।
೬ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
7 ७ फिर नबूकदनेस्सर ने यहोवा के भवन के कुछ पात्र बाबेल ले जाकर, अपने मन्दिर में जो बाबेल में था, रख दिए।
೭ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
8 ८ यहोयाकीम के और काम और उसने जो-जो घिनौने काम किए, और उसमें जो-जो बुराइयाँ पाई गईं, वह इस्राएल और यहूदा के राजाओं के इतिहास की पुस्तक में लिखी हैं; और उसका पुत्र यहोयाकीन उसके स्थान पर राज्य करने लगा।
೮ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
9 ९ जब यहोयाकीन राज्य करने लगा, तब वह आठ वर्ष का था, और तीन महीने और दस दिन तक यरूशलेम में राज्य करता रहा। उसने वह किया, जो परमेश्वर यहोवा की दृष्टि में बुरा है।
೯ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
10 १० नये वर्ष के लगते ही नबूकदनेस्सर ने लोगों को भेजकर, उसे और यहोवा के भवन के मनभावने पात्रों को बाबेल में मँगवा लिया, और उसके भाई सिदकिय्याह को यहूदा और यरूशलेम पर राजा नियुक्त किया।
೧೦ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
11 ११ जब सिदकिय्याह राज्य करने लगा, तब वह इक्कीस वर्ष का था, और यरूशलेम में ग्यारह वर्ष तक राज्य करता रहा।
೧೧ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
12 १२ उसने वही किया, जो उसके परमेश्वर यहोवा की दृष्टि में बुरा है। यद्यपि यिर्मयाह नबी यहोवा की ओर से बातें कहता था, तो भी वह उसके सामने दीन न हुआ।
೧೨ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
13 १३ फिर नबूकदनेस्सर जिसने उसे परमेश्वर की शपथ खिलाई थी, उससे उसने बलवा किया, और उसने हठ किया और अपना मन कठोर किया, कि वह इस्राएल के परमेश्वर यहोवा की ओर न फिरे।
೧೩ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
14 १४ सब प्रधान याजकों ने और लोगों ने भी अन्यजातियों के से घिनौने काम करके बहुत बड़ा विश्वासघात किया, और यहोवा के भवन को जो उसने यरूशलेम में पवित्र किया था, अशुद्ध कर डाला।
೧೪ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
15 १५ उनके पूर्वजों के परमेश्वर यहोवा ने बड़ा यत्न करके अपने दूतों से उनके पास कहला भेजा, क्योंकि वह अपनी प्रजा और अपने धाम पर तरस खाता था;
೧೫ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
16 १६ परन्तु वे परमेश्वर के दूतों को उपहास में उड़ाते, उसके वचनों को तुच्छ जानते, और उसके नबियों की हँसी करते थे। अतः यहोवा अपनी प्रजा पर ऐसा झुँझला उठा, कि बचने का कोई उपाय न रहा।
೧೬ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
17 १७ तब उसने उन पर कसदियों के राजा से चढ़ाई करवाई, और इसने उनके जवानों को उनके पवित्र भवन ही में तलवार से मार डाला; और क्या जवान, क्या कुँवारी, क्या बूढ़े, क्या पक्के बाल वाले, किसी पर भी कोमलता न की; यहोवा ने सभी को उसके हाथ में कर दिया।
೧೭ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
18 १८ क्या छोटे, क्या बड़े, परमेश्वर के भवन के सब पात्र और यहोवा के भवन, और राजा, और उसके हाकिमों के खजाने, इन सभी को वह बाबेल में ले गया।
೧೮ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
19 १९ कसदियों ने परमेश्वर का भवन फूँक दिया, और यरूशलेम की शहरपनाह को तोड़ डाला, और आग लगाकर उसके सब भवनों को जलाया, और उसमें का सारा बहुमूल्य सामान नष्ट कर दिया।
೧೯ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
20 २० जो तलवार से बच गए, उन्हें वह बाबेल को ले गया, और फारस के राज्य के प्रबल होने तक वे उसके और उसके बेटों-पोतों के अधीन रहे।
೨೦ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
21 २१ यह सब इसलिए हुआ कि यहोवा का जो वचन यिर्मयाह के मुँह से निकला था, वह पूरा हो, कि देश अपने विश्रामकालों में सुख भोगता रहे। इसलिए जब तक वह सूना पड़ा रहा तब तक अर्थात् सत्तर वर्ष के पूरे होने तक उसको विश्राम मिला।
೨೧ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
22 २२ फारस के राजा कुस्रू के पहले वर्ष में यहोवा ने उसके मन को उभारा कि जो वचन यिर्मयाह के मुँह से निकला था, वह पूरा हो। इसलिए उसने अपने समस्त राज्य में यह प्रचार करवाया, और इस आशय की चिट्ठियाँ लिखवाईं:
೨೨ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
23 २३ “फारस का राजा कुस्रू कहता है, ‘स्वर्ग के परमेश्वर यहोवा ने पृथ्वी भर का राज्य मुझे दिया है, और उसी ने मुझे आज्ञा दी है कि यरूशलेम जो यहूदा में है उसमें मेरा एक भवन बनवा; इसलिए हे उसकी प्रजा के सब लोगों, तुम में से जो कोई चाहे, उसका परमेश्वर यहोवा उसके साथ रहे, वह वहाँ रवाना हो जाए।’”
೨೩ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.