< 2 राजा 10 >

1 अहाब के सत्तर बेटे, पोते, सामरिया में रहते थे। अतः येहू ने सामरिया में उन पुरनियों के पास, और जो यिज्रेल के हाकिम थे, और जो अहाब के लड़कों के पालनेवाले थे, उनके पास पत्रों को लिखकर भेजा,
ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.
2 “तुम्हारे स्वामी के बेटे, पोते तो तुम्हारे पास रहते हैं, और तुम्हारे रथ, और घोड़े भी हैं, और तुम्हारे एक गढ़वाला नगर, और हथियार भी हैं; तो इस पत्र के हाथ लगते ही,
ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ.
3 अपने स्वामी के बेटों में से जो सबसे अच्छा और योग्य हो, उसको छांटकर, उसके पिता की गद्दी पर बैठाओ, और अपने स्वामी के घराने के लिये लड़ो।”
ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು.
4 परन्तु वे बहुत डर गए, और कहने लगे, “उसके सामने दो राजा भी ठहर न सके, फिर हम कहाँ ठहर सकेंगे?”
ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು.
5 तब जो राजघराने के काम पर था, और जो नगर के ऊपर था, उन्होंने और पुरनियों और लड़कों के पालनेवालों ने येहू के पास यह कहला भेजा, “हम तेरे दास हैं, जो कुछ तू हम से कहे, उसे हम करेंगे; हम किसी को राजा न बनाएँगे, जो तुझे भाए वही कर।”
ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು.
6 तब उसने दूसरा पत्र लिखकर उनके पास भेजा, “यदि तुम मेरी ओर के हो और मेरी मानो, तो अपने स्वामी के बेटों-पोतों के सिर कटवाकर कल इसी समय तक मेरे पास यिज्रेल में हाजिर होना।” राजपुत्र तो जो सत्तर मनुष्य थे, वे उस नगर के रईसों के पास पलते थे।
ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.
7 यह पत्र उनके हाथ लगते ही, उन्होंने उन सत्तरों राजपुत्रों को पकड़कर मार डाला, और उनके सिर टोकरियों में रखकर यिज्रेल को उसके पास भेज दिए।
ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
8 जब एक दूत ने उसके पास जाकर बता दिया, “राजकुमारों के सिर आ गए हैं।” तब उसने कहा, “उन्हें फाटक में दो ढेर करके सवेरे तक रखो।”
ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಆಜ್ಞಾಪಿಸಿದನು.
9 सवेरे उसने बाहर जा खड़े होकर सब लोगों से कहा, “तुम तो निर्दोष हो, मैंने अपने स्वामी से राजद्रोह की युक्ति करके उसे घात किया, परन्तु इन सभी को किसने मार डाला?
ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?
10 १० अब जान लो कि जो वचन यहोवा ने अपने दास एलिय्याह के द्वारा कहा था, उसे उसने पूरा किया है; जो वचन यहोवा ने अहाब के घराने के विषय कहा, उसमें से एक भी बात बिना पूरी हुए न रहेगी।”
೧೦ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.
11 ११ तब अहाब के घराने के जितने लोग यिज्रेल में रह गए, उन सभी को और उसके जितने प्रधान पुरुष और मित्र और याजक थे, उन सभी को येहू ने मार डाला, यहाँ तक कि उसने किसी को जीवित न छोड़ा।
೧೧ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.
12 १२ तब वह वहाँ से चलकर सामरिया को गया। और मार्ग में चरवाहों के ऊन कतरने के स्थान पर पहुँचा ही था,
೧೨ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,
13 १३ कि यहूदा के राजा अहज्याह के भाई येहू से मिले और जब उसने पूछा, “तुम कौन हो?” तब उन्होंने उत्तर दिया, “हम अहज्याह के भाई हैं, और राजपुत्रों और राजमाता के बेटों का कुशल क्षेम पूछने को जाते हैं।”
೧೩ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.
14 १४ तब उसने कहा, “इन्हें जीवित पकड़ो।” अतः उन्होंने उनको जो बयालीस पुरुष थे, जीवित पकड़ा, और ऊन कतरने के स्थान की बावली पर मार डाला, उसने उनमें से किसी को न छोड़ा।
೧೪ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.
15 १५ जब वह वहाँ से चला, तब रेकाब का पुत्र यहोनादाब सामने से आता हुआ उसको मिला। उसका कुशल उसने पूछकर कहा, “मेरा मन तो तेरे प्रति निष्कपट है, क्या तेरा मन भी वैसा ही है?” यहोनादाब ने कहा, “हाँ, ऐसा ही है।” फिर उसने कहा, “ऐसा हो, तो अपना हाथ मुझे दे।” उसने अपना हाथ उसे दिया, और वह यह कहकर उसे अपने पास रथ पर चढ़ाने लगा,
೧೫ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
16 १६ “मेरे संग चल और देख, कि मुझे यहोवा के निमित्त कैसी जलन रहती है।” तब वह उसके रथ पर चढ़ा दिया गया।
೧೬ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
17 १७ सामरिया को पहुँचकर उसने यहोवा के उस वचन के अनुसार जो उसने एलिय्याह से कहा था, अहाब के जितने सामरिया में बचे रहे, उन सभी को मार के विनाश किया।
೧೭ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
18 १८ तब येहू ने सब लोगों को इकट्ठा करके कहा, “अहाब ने तो बाल की थोड़ी ही उपासना की थी, अब येहू उसकी उपासना बढ़के करेगा।
೧೮ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.
19 १९ इसलिए अब बाल के सब नबियों, सब उपासकों और सब याजकों को मेरे पास बुला लाओ, उनमें से कोई भी न रह जाए; क्योंकि बाल के लिये मेरा एक बड़ा यज्ञ होनेवाला है; जो कोई न आए वह जीवित न बचेगा।” येहू ने यह काम कपट करके बाल के सब उपासकों को नाश करने के लिये किया।
೧೯ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
20 २० तब येहू ने कहा, “बाल की एक पवित्र महासभा का प्रचार करो।” और लोगों ने प्रचार किया।
೨೦ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.
21 २१ येहू ने सारे इस्राएल में दूत भेजे; तब बाल के सब उपासक आए, यहाँ तक कि ऐसा कोई न रह गया जो न आया हो। वे बाल के भवन में इतने आए, कि वह एक सिरे से दूसरे सिरे तक भर गया।
೨೧ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.
22 २२ तब उसने उस मनुष्य से जो वस्त्र के घर का अधिकारी था, कहा, “बाल के सब उपासकों के लिये वस्त्र निकाल ले आ।” अतः वह उनके लिये वस्त्र निकाल ले आया।
೨೨ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.
23 २३ तब येहू रेकाब के पुत्र यहोनादाब को संग लेकर बाल के भवन में गया, और बाल के उपासकों से कहा, “ढूँढ़कर देखो, कि यहाँ तुम्हारे संग यहोवा का कोई उपासक तो नहीं है, केवल बाल ही के उपासक हैं।”
೨೩ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.
24 २४ तब वे मेलबलि और होमबलि चढ़ाने को भीतर गए। येहू ने तो अस्सी पुरुष बाहर ठहराकर उनसे कहा था, “यदि उन मनुष्यों में से जिन्हें मैं तुम्हारे हाथ कर दूँ, कोई भी बचने पाए, तो जो उसे जाने देगा उसका प्राण, उसके प्राण के बदले जाएगा।”
೨೪ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು.
25 २५ फिर जब होमबलि चढ़ चुका, तब येहू ने पहरुओं और सरदारों से कहा, “भीतर जाकर उन्हें मार डालो; कोई निकलने न पाए।” तब उन्होंने उन्हें तलवार से मारा और पहरुए और सरदार उनको बाहर फेंककर बाल के भवन के नगर को गए।
೨೫ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.
26 २६ और उन्होंने बाल के भवन में की लाठें निकालकर फूँक दीं।
೨೬ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
27 २७ और बाल के स्तम्भ को उन्होंने तोड़ डाला; और बाल के भवन को ढाकर शौचालय बना दिया; और वह आज तक ऐसा ही है।
೨೭ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.
28 २८ अतः येहू ने बाल को इस्राएल में से नाश करके दूर किया।
೨೮ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.
29 २९ तो भी नबात के पुत्र यारोबाम, जिसने इस्राएल से पाप कराया था, उसके पापों के अनुसार करने, अर्थात् बेतेल और दान में के सोने के बछड़ों की पूजा, उससे येहू अलग न हुआ।
೨೯ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
30 ३० यहोवा ने येहू से कहा, “इसलिए कि तूने वह किया, जो मेरी दृष्टि में ठीक है, और अहाब के घराने से मेरी इच्छा के अनुसार बर्ताव किया है, तेरे परपोते के पुत्र तक तेरी सन्तान इस्राएल की गद्दी पर विराजती रहेगी।”
೩೦ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.
31 ३१ परन्तु येहू ने इस्राएल के परमेश्वर यहोवा की व्यवस्था पर पूर्ण मन से चलने की चौकसी न की, वरन् यारोबाम जिसने इस्राएल से पाप कराया था, उसके पापों के अनुसार करने से वह अलग न हुआ।
೩೧ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
32 ३२ उन दिनों यहोवा इस्राएल की सीमा को घटाने लगा, इसलिए हजाएल ने इस्राएल के उन सारे देशों में उनको मारा:
೩೨ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
33 ३३ यरदन से पूरब की ओर गिलाद का सारा देश, और गादी और रूबेनी और मनश्शेई का देश अर्थात् अरोएर से लेकर जो अर्नोन की तराई के पास है, गिलाद और बाशान तक।
೩೩ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.
34 ३४ येहू के और सब काम और जो कुछ उसने किया, और उसकी पूर्ण वीरता, यह सब क्या इस्राएल के राजाओं के इतिहास की पुस्तक में नहीं लिखा है?
೩೪ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
35 ३५ अन्त में येहू मरकर अपने पुरखाओं के संग जा मिला, और सामरिया में उसको मिट्टी दी गई, और उसका पुत्र यहोआहाज उसके स्थान पर राजा बन गया।
೩೫ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.
36 ३६ येहू के सामरिया में इस्राएल पर राज्य करने का समय तो अट्ठाईस वर्ष का था।
೩೬ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.

< 2 राजा 10 >