< 2 राजा 10 >

1 अहाब के सत्तर बेटे, पोते, सामरिया में रहते थे। अतः येहू ने सामरिया में उन पुरनियों के पास, और जो यिज्रेल के हाकिम थे, और जो अहाब के लड़कों के पालनेवाले थे, उनके पास पत्रों को लिखकर भेजा,
ಆಗ ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದರು, ಯೇಹುವು ಸಮಾರ್ಯದಲ್ಲಿರುವ ಇಜ್ರೆಯೇಲ್ ಊರಿನ ಪ್ರಧಾನರಿಗೂ ಹಿರಿಯರಿಗೂ ಅಹಾಬನ ಮಕ್ಕಳನ್ನು ಪೋಷಿಸುವವರಿಗೂ ಪತ್ರಗಳನ್ನು ಬರೆದು, ಸಮಾರ್ಯಕ್ಕೆ ಕಳುಹಿಸಿದನು. ಅವನು,
2 “तुम्हारे स्वामी के बेटे, पोते तो तुम्हारे पास रहते हैं, और तुम्हारे रथ, और घोड़े भी हैं, और तुम्हारे एक गढ़वाला नगर, और हथियार भी हैं; तो इस पत्र के हाथ लगते ही,
“ನಿಮ್ಮ ಯಜಮಾನನ ಪುತ್ರರು ನಿಮ್ಮ ಬಳಿಯಲ್ಲಿ ಇದ್ದಾರೆ. ಇದಲ್ಲದೆ ರಥಗಳು, ಕುದುರೆಗಳು, ಕೋಟೆಗಳುಳ್ಳ ಪಟ್ಟಣ, ಆಯುಧಗಳು ನಿಮ್ಮ ಬಳಿಯಲ್ಲಿವೆ. ಆದ್ದರಿಂದ ಈ ಪತ್ರವು ನಿಮಗೆ ತಲುಪಿದ ತಕ್ಷಣ,
3 अपने स्वामी के बेटों में से जो सबसे अच्छा और योग्य हो, उसको छांटकर, उसके पिता की गद्दी पर बैठाओ, और अपने स्वामी के घराने के लिये लड़ो।”
ನೀವು ನಿಮ್ಮ ಯಜಮಾನನ ಪುತ್ರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂರಿಸಿ, ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ,” ಎಂದು ತಿಳಿಸಿದನು.
4 परन्तु वे बहुत डर गए, और कहने लगे, “उसके सामने दो राजा भी ठहर न सके, फिर हम कहाँ ठहर सकेंगे?”
ಆದರೆ ಅವರು ತುಂಬಾ ಭಯಪಟ್ಟು, “ಇಬ್ಬರೂ ಅರಸರು ಅವನ ಮುಂದೆ ನಿಲ್ಲಲು ಸಾಧ್ಯವಾಗದಿದ್ದಾಗ, ನಾವು ನಿಲ್ಲುವುದು ಹೇಗೆ?” ಎಂದರು.
5 तब जो राजघराने के काम पर था, और जो नगर के ऊपर था, उन्होंने और पुरनियों और लड़कों के पालनेवालों ने येहू के पास यह कहला भेजा, “हम तेरे दास हैं, जो कुछ तू हम से कहे, उसे हम करेंगे; हम किसी को राजा न बनाएँगे, जो तुझे भाए वही कर।”
ಆಗ ಅರಮನೆಯ ಆಡಳಿತಾಧಿಕಾರಿ, ಪಟ್ಟಣದ ರಾಜ್ಯಪಾಲರು, ಹಿರಿಯರು ಮತ್ತು ಪಾಲಕರು ಈ ಸಂದೇಶವನ್ನು ಯೇಹುವಿನ ಬಳಿಗೆ ಕಳುಹಿಸಿ, “ನಾವು ನಿಮ್ಮ ಸೇವಕರು ನೀವು ನಮಗೆ ಹೇಳುವುದನ್ನೆಲ್ಲಾ ಮಾಡುತ್ತೇವೆ. ನಾವು ಯಾರನ್ನೂ ಅರಸನನ್ನಾಗಿ ನೇಮಿಸುವುದಿಲ್ಲ. ನಿಮ್ಮ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನೀವು ಮಾಡಿರಿ,” ಎಂದರು.
6 तब उसने दूसरा पत्र लिखकर उनके पास भेजा, “यदि तुम मेरी ओर के हो और मेरी मानो, तो अपने स्वामी के बेटों-पोतों के सिर कटवाकर कल इसी समय तक मेरे पास यिज्रेल में हाजिर होना।” राजपुत्र तो जो सत्तर मनुष्य थे, वे उस नगर के रईसों के पास पलते थे।
ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.
7 यह पत्र उनके हाथ लगते ही, उन्होंने उन सत्तरों राजपुत्रों को पकड़कर मार डाला, और उनके सिर टोकरियों में रखकर यिज्रेल को उसके पास भेज दिए।
ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
8 जब एक दूत ने उसके पास जाकर बता दिया, “राजकुमारों के सिर आ गए हैं।” तब उसने कहा, “उन्हें फाटक में दो ढेर करके सवेरे तक रखो।”
ಆಗ ಆ ಸೇವಕನು ಬಂದು ಯೇಹುವಿಗೆ, “ರಾಜಪುತ್ರರ ತಲೆಗಳನ್ನು ತೆಗೆದುಕೊಂಡು ಬಂದಿದ್ದಾರೆ,” ಎಂದು ತಿಳಿಸಿದನು. ಅದಕ್ಕೆ ಯೇಹು, “ಉದಯಕಾಲದವರೆಗೂ ಅವುಗಳನ್ನು ಹೆಬ್ಬಾಗಿಲಿನಲ್ಲಿ ಎರಡು ರಾಶಿಗಳಾಗಿ ಹಾಕಿರಿ,” ಎಂದು ಆಜ್ಞಾಪಿಸಿದನು.
9 सवेरे उसने बाहर जा खड़े होकर सब लोगों से कहा, “तुम तो निर्दोष हो, मैंने अपने स्वामी से राजद्रोह की युक्ति करके उसे घात किया, परन्तु इन सभी को किसने मार डाला?
ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು?
10 १० अब जान लो कि जो वचन यहोवा ने अपने दास एलिय्याह के द्वारा कहा था, उसे उसने पूरा किया है; जो वचन यहोवा ने अहाब के घराने के विषय कहा, उसमें से एक भी बात बिना पूरी हुए न रहेगी।”
ಯೆಹೋವ ದೇವರು ಅಹಾಬನ ಮನೆಯನ್ನು ಕುರಿತು ಹೇಳಿದ ಯೆಹೋವ ದೇವರ ಮಾತುಗಳಲ್ಲಿ ಒಂದೂ ವ್ಯರ್ಥವಾಗುವುದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಯೆಹೋವ ದೇವರು ತಮ್ಮ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರೆ,” ಎಂದನು.
11 ११ तब अहाब के घराने के जितने लोग यिज्रेल में रह गए, उन सभी को और उसके जितने प्रधान पुरुष और मित्र और याजक थे, उन सभी को येहू ने मार डाला, यहाँ तक कि उसने किसी को जीवित न छोड़ा।
ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.
12 १२ तब वह वहाँ से चलकर सामरिया को गया। और मार्ग में चरवाहों के ऊन कतरने के स्थान पर पहुँचा ही था,
ಆಗ ಯೇಹುವು ಹೊರಟು ಸಮಾರ್ಯಕ್ಕೆ ಬಂದನು. ಅವನು ಕುರುಬರ ಬೇತ್ ಎಕೆದ್ ಬಳಿ ಬಂದಾಗ,
13 १३ कि यहूदा के राजा अहज्याह के भाई येहू से मिले और जब उसने पूछा, “तुम कौन हो?” तब उन्होंने उत्तर दिया, “हम अहज्याह के भाई हैं, और राजपुत्रों और राजमाता के बेटों का कुशल क्षेम पूछने को जाते हैं।”
ಯೆಹೂದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದನು. ಅದಕ್ಕವರು, “ನಾವು ಅಹಜ್ಯನ ಸಹೋದರರು. ಅರಸನ ಮಕ್ಕಳನ್ನೂ, ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತಿದ್ದೇವೆ,” ಎಂದರು.
14 १४ तब उसने कहा, “इन्हें जीवित पकड़ो।” अतः उन्होंने उनको जो बयालीस पुरुष थे, जीवित पकड़ा, और ऊन कतरने के स्थान की बावली पर मार डाला, उसने उनमें से किसी को न छोड़ा।
ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ.
15 १५ जब वह वहाँ से चला, तब रेकाब का पुत्र यहोनादाब सामने से आता हुआ उसको मिला। उसका कुशल उसने पूछकर कहा, “मेरा मन तो तेरे प्रति निष्कपट है, क्या तेरा मन भी वैसा ही है?” यहोनादाब ने कहा, “हाँ, ऐसा ही है।” फिर उसने कहा, “ऐसा हो, तो अपना हाथ मुझे दे।” उसने अपना हाथ उसे दिया, और वह यह कहकर उसे अपने पास रथ पर चढ़ाने लगा,
ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,
16 १६ “मेरे संग चल और देख, कि मुझे यहोवा के निमित्त कैसी जलन रहती है।” तब वह उसके रथ पर चढ़ा दिया गया।
“ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
17 १७ सामरिया को पहुँचकर उसने यहोवा के उस वचन के अनुसार जो उसने एलिय्याह से कहा था, अहाब के जितने सामरिया में बचे रहे, उन सभी को मार के विनाश किया।
ಯೇಹುವು ಸಮಾರ್ಯಕ್ಕೆ ಬಂದ ತರುವಾಯ ಸಮಾರ್ಯದಲ್ಲಿ ಅಹಾಬನಿಗೆ ಉಳಿದವರೆಲ್ಲರನ್ನು ಎಲೀಯನಿಗೆ ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರ ಅವರನ್ನು ಸಂಹರಿಸಿದನು.
18 १८ तब येहू ने सब लोगों को इकट्ठा करके कहा, “अहाब ने तो बाल की थोड़ी ही उपासना की थी, अब येहू उसकी उपासना बढ़के करेगा।
ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ, “ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು. ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
19 १९ इसलिए अब बाल के सब नबियों, सब उपासकों और सब याजकों को मेरे पास बुला लाओ, उनमें से कोई भी न रह जाए; क्योंकि बाल के लिये मेरा एक बड़ा यज्ञ होनेवाला है; जो कोई न आए वह जीवित न बचेगा।” येहू ने यह काम कपट करके बाल के सब उपासकों को नाश करने के लिये किया।
ಆದ್ದರಿಂದ ಬಾಳನ ಸಮಸ್ತ ಪ್ರವಾದಿಗಳನ್ನೂ, ಅವನ ಸಮಸ್ತ ಸೇವಕರನ್ನೂ, ಅವನ ಸಮಸ್ತ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ. ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು,” ಎಂದನು. ಏಕೆಂದರೆ ಯೇಹುವು ಬಾಳನನ್ನು ಸೇವಿಸುವವರನ್ನು ನಾಶಮಾಡುವಂತೆ ಇದನ್ನು ತಂತ್ರದಿಂದ ಮಾಡಿದನು.
20 २० तब येहू ने कहा, “बाल की एक पवित्र महासभा का प्रचार करो।” और लोगों ने प्रचार किया।
ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.
21 २१ येहू ने सारे इस्राएल में दूत भेजे; तब बाल के सब उपासक आए, यहाँ तक कि ऐसा कोई न रह गया जो न आया हो। वे बाल के भवन में इतने आए, कि वह एक सिरे से दूसरे सिरे तक भर गया।
ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ, ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಾಳನ ದೇವಸ್ಥಾನ ಪೂರ್ಣವಾಗಿ ತುಂಬಿತ್ತು.
22 २२ तब उसने उस मनुष्य से जो वस्त्र के घर का अधिकारी था, कहा, “बाल के सब उपासकों के लिये वस्त्र निकाल ले आ।” अतः वह उनके लिये वस्त्र निकाल ले आया।
ಆಗ ಅವನು ವಸ್ತ್ರಗಳ ಮನೆಯ ಮೇಲಧಿಕಾರಿಗೆ, “ಬಾಳನನ್ನು ಸೇವಿಸುವ ಸಮಸ್ತರಿಗೋಸ್ಕರ ವಸ್ತ್ರಗಳನ್ನು ತೆಗೆದುಕೊಂಡು ಬಾ,” ಎಂದು ಹೇಳಿದ್ದರಿಂದ, ಅವನು ಅವರಿಗೋಸ್ಕರ ವಸ್ತ್ರಗಳನ್ನು ತೆಗೆದುಕೊಂಡು ಬಂದನು.
23 २३ तब येहू रेकाब के पुत्र यहोनादाब को संग लेकर बाल के भवन में गया, और बाल के उपासकों से कहा, “ढूँढ़कर देखो, कि यहाँ तुम्हारे संग यहोवा का कोई उपासक तो नहीं है, केवल बाल ही के उपासक हैं।”
ಆಗ ಯೇಹುವೂ, ರೇಕಾಬನ ಮಗ ಯೆಹೋನಾದಾಬನೂ ಬಾಳನ ದೇವಸ್ಥಾನದಲ್ಲಿ ಪ್ರವೇಶಿಸಿದರು. ಯೇಹುವು, “ಬಾಳನನ್ನು ಸೇವಿಸುವವರ ಹೊರತು ಅವರ ಸಂಗಡ ಯೆಹೋವ ದೇವರ ಸೇವಕರಲ್ಲಿ ಒಬ್ಬನೂ ಇರದ ಹಾಗೆ ಪರಿಶೋಧಿಸಿ ನೋಡಿರಿ,” ಎಂದು ಬಾಳನನ್ನು ಸೇವಿಸುವವರಿಗೆ ಹೇಳಿದನು.
24 २४ तब वे मेलबलि और होमबलि चढ़ाने को भीतर गए। येहू ने तो अस्सी पुरुष बाहर ठहराकर उनसे कहा था, “यदि उन मनुष्यों में से जिन्हें मैं तुम्हारे हाथ कर दूँ, कोई भी बचने पाए, तो जो उसे जाने देगा उसका प्राण, उसके प्राण के बदले जाएगा।”
ಅವರು ಬಲಿಗಳನ್ನೂ, ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇಶಿಸಿದ ತರುವಾಯ, ಯೇಹುವು ಹೊರಗೆ ಎಂಬತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ, “ನಾನು ನಿಮ್ಮ ಕೈಗೆ ಒಪ್ಪಿಸಿದ ಮನುಷ್ಯರಲ್ಲಿ ಯಾವನಾದರೂ ತಪ್ಪಿಸಿಕೊಂಡುಹೋದರೆ, ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿರುವುದು,” ಎಂದನು.
25 २५ फिर जब होमबलि चढ़ चुका, तब येहू ने पहरुओं और सरदारों से कहा, “भीतर जाकर उन्हें मार डालो; कोई निकलने न पाए।” तब उन्होंने उन्हें तलवार से मारा और पहरुए और सरदार उनको बाहर फेंककर बाल के भवन के नगर को गए।
ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ, ಯೇಹುವು ಕಾವಲುಗಾರರಿಗೂ, ಅಧಿಪತಿಗಳಿಗೂ, “ನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ,” ಎಂದನು. ಹಾಗೆಯೇ ಅವರು ಒಳಗೆ ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿ ಅವರ ಶವಗಳನ್ನು ಹೊರಗೆ ಹಾಕಿದ ತರುವಾಯ, ಬಾಳನ ಗರ್ಭಗುಡಿಯನ್ನು ಪ್ರವೇಶಿಸಿ,
26 २६ और उन्होंने बाल के भवन में की लाठें निकालकर फूँक दीं।
ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
27 २७ और बाल के स्तम्भ को उन्होंने तोड़ डाला; और बाल के भवन को ढाकर शौचालय बना दिया; और वह आज तक ऐसा ही है।
ಇದಲ್ಲದೆ ಅವರು ಬಾಳನ ವಿಗ್ರಹವನ್ನು ಒಡೆದುಹಾಕಿ, ಬಾಳನ ದೇವಸ್ಥಾನವನ್ನು ಕೆಡವಿಬಿಟ್ಟು, ಆ ಸ್ಥಳವನ್ನು ಇಂದಿನವರೆಗೂ ಶೌಚಕ್ಕಾಗಿ ಉಪಯೋಗಿಸುತ್ತಾರೆ.
28 २८ अतः येहू ने बाल को इस्राएल में से नाश करके दूर किया।
ಹೀಗೆಯೇ ಯೇಹುವು ಬಾಳನ ಪೂಜೆಯನ್ನು ಇಸ್ರಾಯೇಲಿನಲ್ಲಿಂದ ನಾಶಮಾಡಿಬಿಟ್ಟನು.
29 २९ तो भी नबात के पुत्र यारोबाम, जिसने इस्राएल से पाप कराया था, उसके पापों के अनुसार करने, अर्थात् बेतेल और दान में के सोने के बछड़ों की पूजा, उससे येहू अलग न हुआ।
ಆದರೆ ಬೇತೇಲಿನಲ್ಲಿಯೂ, ದಾನಿನಲ್ಲಿಯೂ ಇರುವ ಬಂಗಾರದ ಕರುಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
30 ३० यहोवा ने येहू से कहा, “इसलिए कि तूने वह किया, जो मेरी दृष्टि में ठीक है, और अहाब के घराने से मेरी इच्छा के अनुसार बर्ताव किया है, तेरे परपोते के पुत्र तक तेरी सन्तान इस्राएल की गद्दी पर विराजती रहेगी।”
ಯೆಹೋವ ದೇವರು ಯೇಹುವಿಗೆ, “ನೀನು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಗೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಹೃದಯದಲ್ಲಿದ್ದ ಎಲ್ಲದರ ಪ್ರಕಾರ ಮಾಡಿದ್ದರಿಂದ, ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದರು.
31 ३१ परन्तु येहू ने इस्राएल के परमेश्वर यहोवा की व्यवस्था पर पूर्ण मन से चलने की चौकसी न की, वरन् यारोबाम जिसने इस्राएल से पाप कराया था, उसके पापों के अनुसार करने से वह अलग न हुआ।
ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
32 ३२ उन दिनों यहोवा इस्राएल की सीमा को घटाने लगा, इसलिए हजाएल ने इस्राएल के उन सारे देशों में उनको मारा:
ಆ ದಿವಸಗಳಲ್ಲಿ ಯೆಹೋವ ದೇವರು ಇಸ್ರಾಯೇಲನ್ನು ತಗ್ಗಿಸಲು ಆರಂಭಿಸಿದರು. ಹಜಾಯೇಲನು ಬಂದು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
33 ३३ यरदन से पूरब की ओर गिलाद का सारा देश, और गादी और रूबेनी और मनश्शेई का देश अर्थात् अरोएर से लेकर जो अर्नोन की तराई के पास है, गिलाद और बाशान तक।
ಪೂರ್ವದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ, ರೂಬೇನ್ಯರೂ ನಿವಾಸವಾಗಿದ್ದ ಗಿಲ್ಯಾದಿನ ಸಮಸ್ತ ದೇಶವನ್ನೂ, ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಷಾನಿನಲ್ಲಿರುವವರನ್ನೂ ಹಜಾಯೇಲನು ಸಂಹರಿಸಿದನು.
34 ३४ येहू के और सब काम और जो कुछ उसने किया, और उसकी पूर्ण वीरता, यह सब क्या इस्राएल के राजाओं के इतिहास की पुस्तक में नहीं लिखा है?
ಯೇಹುವಿನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
35 ३५ अन्त में येहू मरकर अपने पुरखाओं के संग जा मिला, और सामरिया में उसको मिट्टी दी गई, और उसका पुत्र यहोआहाज उसके स्थान पर राजा बन गया।
ಯೇಹು ತನ್ನ ಪಿತೃಗಳ ಜೊತೆಯಲ್ಲಿ ವಿಶ್ರಾಂತಿ ಹೊಂದಿದ್ದರಿಂದ ಅವನನ್ನು ಸಮಾರ್ಯದಲ್ಲಿ ಹೂಳಿಟ್ಟರು. ಅವನ ಮಗ ಯೆಹೋವಾಹಾಜನು ಅವನಿಗೆ ಬದಲಾಗಿ ಅರಸನಾದನು.
36 ३६ येहू के सामरिया में इस्राएल पर राज्य करने का समय तो अट्ठाईस वर्ष का था।
ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ ಸಮಯ ಇಪ್ಪತ್ತೆಂಟು ವರ್ಷಗಳು.

< 2 राजा 10 >