< 2 राजा 14 >

1 इस्राएल के राजा यहोआहाज के पुत्र योआश के राज्य के दूसरे वर्ष में यहूदा के राजा योआश का पुत्र अमस्याह राजा हुआ।
ಇಸ್ರಾಯೇಲಿನ ಅರಸನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೋವಾಷನ ಮಗ ಅಮಚ್ಯನು ಅರಸನಾದನು.
2 जब वह राज्य करने लगा तब वह पच्चीस वर्ष का था, और यरूशलेम में उनतीस वर्ष राज्य करता रहा। उसकी माता का नाम यहोअद्दान था, जो यरूशलेम की थी।
ಅವನು ಆಳಲು ಆರಂಭಿಸಿದಾಗ, ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.
3 उसने वह किया जो यहोवा की दृष्टि में ठीक था तो भी अपने मूलपुरुष दाऊद के समान न किया; उसने ठीक अपने पिता योआश के से काम किए।
ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ. ತನ್ನ ತಂದೆ ಯೋವಾಷನು ಮಾಡಿದ ಹಾಗೆ ಸಮಸ್ತವನ್ನು ಮಾಡಿದನು.
4 उसके दिनों में ऊँचे स्थान गिराए न गए; लोग तब भी उन पर बलि चढ़ाते, और धूप जलाते रहे।
ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.
5 जब राज्य उसके हाथ में स्थिर हो गया, तब उसने अपने उन कर्मचारियों को मृत्यु-दण्ड दिया, जिन्होंने उसके पिता राजा को मार डाला था।
ಇವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು.
6 परन्तु उन खूनियों के बच्चों को उसने न मार डाला, क्योंकि यहोवा की यह आज्ञा मूसा की व्यवस्था की पुस्तक में लिखी है: “पुत्र के कारण पिता न मार डाला जाए, और पिता के कारण पुत्र न मार डाला जाए; जिसने पाप किया हो, वही उस पाप के कारण मार डाला जाए।”
ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.
7 उसी अमस्याह ने नमक की तराई में दस हजार एदोमी पुरुष मार डाले, और सेला नगर से युद्ध करके उसे ले लिया, और उसका नाम योक्तेल रखा, और वह नाम आज तक चलता है।
ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
8 तब अमस्याह ने इस्राएल के राजा यहोआश के पास जो येहू का पोता और यहोआहाज का पुत्र था दूतों से कहला भेजा, “आ हम एक दूसरे का सामना करें।”
ಆಗ ಅಮಚ್ಯನು, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.
9 इस्राएल के राजा यहोआश ने यहूदा के राजा अमस्याह के पास यह सन्देश भेजा, “लबानोन पर की एक झड़बेरी ने लबानोन के एक देवदार के पास कहला भेजा, ‘अपनी बेटी का मेरे बेटे से विवाह कर दे’ इतने में लबानोन में का एक वन पशु पास से चला गया और उस झड़बेरी को रौंद डाला।
ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.
10 १० तूने एदोमियों को जीता तो है इसलिए तू फूल उठा है। उसी पर बड़ाई मारता हुआ घर रह जा; तू अपनी हानि के लिये यहाँ क्यों हाथ उठाता है, जिससे तू क्या वरन् यहूदा भी नीचा देखेगा?”
ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು.
11 ११ परन्तु अमस्याह ने न माना। तब इस्राएल के राजा यहोआश ने चढ़ाई की, और उसने और यहूदा के राजा अमस्याह ने यहूदा देश के बेतशेमेश में एक दूसरे का सामना किया।
ಆದರೆ ಅಮಚ್ಯನು ಕೇಳದೆ ಹೋದನು. ಆದ್ದರಿಂದ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.
12 १२ और यहूदा इस्राएल से हार गया, और एक-एक अपने-अपने डेरे को भागा।
ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.
13 १३ तब इस्राएल के राजा यहोआश ने यहूदा के राजा अमस्याह को जो अहज्याह का पोता, और योआश का पुत्र था, बेतशेमेश में पकड़ लिया, और यरूशलेम को गया, और एप्रैमी फाटक से कोनेवाले फाटक तक, चार सौ हाथ यरूशलेम की शहरपनाह गिरा दी।
ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.
14 १४ और जितना सोना, चाँदी और जितने पात्र यहोवा के भवन में और राजभवन के भण्डारों में मिले, उन सब को और बन्धक लोगों को भी लेकर वह सामरिया को लौट गया।
ಯೆಹೋವ ದೇವರ ಆಲಯದಲ್ಲಿ, ಅರಮನೆಯ ಬೊಕ್ಕಸಗಳಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ ಎಲ್ಲಾ ಸಲಕರಣೆಗಳನ್ನೂ ಯುದ್ಧದಲ್ಲಿ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.
15 १५ यहोआश के और काम जो उसने किए, और उसकी वीरता और उसने किस रीति यहूदा के राजा अमस्याह से युद्ध किया, यह सब क्या इस्राएल के राजाओं के इतिहास की पुस्तक में नहीं लिखा है?
ಯೋವಾಷನು ಮಾಡಿದ ಇತರ ಕ್ರಿಯೆಗಳೂ, ಅವನ ಪರಾಕ್ರಮವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ್ದೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
16 १६ अन्त में यहोआश मरकर अपने पुरखाओं के संग जा मिला और उसे इस्राएल के राजाओं के बीच सामरिया में मिट्टी दी गई; और उसका पुत्र यारोबाम उसके स्थान पर राज्य करने लगा।
ಯೋವಾಷನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸುಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಯಾರೊಬ್ಬಾಮನು ಅವನ ಬದಲಿಗೆ ಅರಸನಾದನು.
17 १७ यहोआहाज के पुत्र इस्राएल के राजा यहोआश के मरने के बाद योआश का पुत्र यहूदा का राजा अमस्याह पन्द्रह वर्ष जीवित रहा।
ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು.
18 १८ अमस्याह के और काम क्या यहूदा के राजाओं के इतिहास की पुस्तक में नहीं लिखे हैं?
ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
19 १९ जब यरूशलेम में उसके विरुद्ध राजद्रोह की गोष्ठी की गई, तब वह लाकीश को भाग गया। अतः उन्होंने लाकीश तक उसका पीछा करके उसको वहाँ मार डाला।
ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.
20 २० तब वह घोड़ों पर रखकर यरूशलेम में पहुँचाया गया, और वहाँ उसके पुरखाओं के बीच उसको दाऊदपुर में मिट्टी दी गई।
ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ದಾವೀದನ ಪಟ್ಟಣವಾದ ಯೆರೂಸಲೇಮಿನಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.
21 २१ तब सारी यहूदी प्रजा ने अजर्याह को लेकर, जो सोलह वर्ष का था, उसके पिता अमस्याह के स्थान पर राजा नियुक्त कर दिया।
ಆಗ ಯೆಹೂದದ ಎಲ್ಲಾ ಜನರು ಹದಿನಾರು ವರ್ಷದವನಾದ ಅಜರ್ಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗಿ ಮಾಡಿದರು.
22 २२ राजा अमस्याह मरकर अपने पुरखाओं के संग जा मिला, तब उसके बाद अजर्याह ने एलत को दृढ़ करके यहूदा के वश में फिरकर लिया।
ಅಮಚ್ಯನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದ ತರುವಾಯ, ಅಜರ್ಯನು ಏಲತನ್ನು ಪುನಃ ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿಕೊಂಡನು.
23 २३ यहूदा के राजा योआश के पुत्र अमस्याह के राज्य के पन्द्रहवें वर्ष में इस्राएल के राजा यहोआश का पुत्र यारोबाम सामरिया में राज्य करने लगा, और इकतालीस वर्ष राज्य करता रहा।
ಯೆಹೂದದ ಅರಸನಾದ ಯೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲು ಆರಂಭಿಸಿ, ನಾಲ್ವತ್ತೊಂದು ವರ್ಷ ಆಳಿದನು.
24 २४ उसने वह किया, जो यहोवा की दृष्टि में बुरा था; अर्थात् नबात के पुत्र यारोबाम जिसने इस्राएल से पाप कराया था, उसके पापों के अनुसार वह करता रहा, और उनसे वह अलग न हुआ।
ಆದರೆ ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದುಬಿಡಲಿಲ್ಲ.
25 २५ उसने इस्राएल की सीमा हमात की घाटी से ले अराबा के ताल तक ज्यों का त्यों कर दी, जैसा कि इस्राएल के परमेश्वर यहोवा ने अमित्तै के पुत्र अपने दास गथेपेरवासी योना भविष्यद्वक्ता के द्वारा कहा था।
ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.
26 २६ क्योंकि यहोवा ने इस्राएल का दुःख देखा कि बहुत ही कठिन है, वरन् क्या बन्दी क्या स्वाधीन कोई भी बचा न रहा, और न इस्राएल के लिये कोई सहायक था।
ಇಸ್ರಾಯೇಲಿನಲ್ಲಿ ಪ್ರತಿಯೊಬ್ಬರೂ ಸ್ವತಂತ್ರನಾಗಿರಲಿ, ಗುಲಾಮನಾಗಿರಲಿ, ಎಲ್ಲರು ಎಷ್ಟು ಕಷ್ಟದಲ್ಲಿದ್ದಾರೆಂಬುದನ್ನು ಯೆಹೋವ ದೇವರು ನೋಡಿದರು. ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.
27 २७ यहोवा ने नहीं कहा था, कि मैं इस्राएल का नाम धरती पर से मिटा डालूँगा। अतः उसने यहोआश के पुत्र यारोबाम के द्वारा उनको छुटकारा दिया।
ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನೆಂದು ಯೆಹೋವ ದೇವರು ಹೇಳದೇ ಇದ್ದುದರಿಂದ, ಯೋವಾಷನ ಮಗ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದರು.
28 २८ यारोबाम के और सब काम जो उसने किए, और कैसे पराक्रम के साथ उसने युद्ध किया, और दमिश्क और हमात को जो पहले यहूदा के राज्य में थे इस्राएल के वश में फिर मिला लिया, यह सब क्या इस्राएल के राजाओं के इतिहास की पुस्तक में नहीं लिखा है?
ಯಾರೊಬ್ಬಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನ ಪರಾಕ್ರಮವೂ, ಅವನ ಯುದ್ಧಗಳೂ, ಯೆಹೂದಕ್ಕೆ ಸೇರಿದ ದಮಸ್ಕವನ್ನೂ, ಹಮಾತನ್ನೂ ಇಸ್ರಾಯೇಲಿಗೋಸ್ಕರ ಹಿಂದಿರುಗಿ ತೆಗೆದುಕೊಂಡದ್ದೂ, ಇಸ್ರಾಯೇಲಿನ ಅರಸುಗಳ ದಿನಚರ್ಯೆಗಳ ಪುಸ್ತಕದಲ್ಲಿ ಬರೆದಿರುತ್ತವೆ.
29 २९ अन्त में यारोबाम मरकर अपने पुरखाओं के संग जो इस्राएल के राजा थे जा मिला, और उसका पुत्र जकर्याह उसके स्थान पर राज्य करने लगा।
ಯಾರೊಬ್ಬಾಮನು ಮೃತನಾಗಿ ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಜೆಕರ್ಯನು ಅವನಿಗೆ ಬದಲಾಗಿ ಅರಸನಾದನು.

< 2 राजा 14 >