< 2 राजा 23 >
1 १ राजा ने यहूदा और यरूशलेम के सब पुरनियों को अपने पास बुलाकर इकट्ठा किया।
೧ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.
2 २ तब राजा, यहूदा के सब लोगों और यरूशलेम के सब निवासियों और याजकों और नबियों वरन् छोटे बड़े सारी प्रजा के लोगों को संग लेकर यहोवा के भवन में गया। उसने जो वाचा की पुस्तक यहोवा के भवन में मिली थी, उसकी सब बातें उनको पढ़कर सुनाईं।
೨ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
3 ३ तब राजा ने खम्भे के पास खड़ा होकर यहोवा से इस आशा की वाचा बाँधी, कि मैं यहोवा के पीछे-पीछे चलूँगा, और अपने सारे मन और सारे प्राण से उसकी आज्ञाएँ, चितौनियाँ और विधियों का नित पालन किया करूँगा, और इस वाचा की बातों को जो इस पुस्तक में लिखी हैं पूरी करूँगा; और सब प्रजा वाचा में सम्भागी हुई।
೩ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
4 ४ तब राजा ने हिल्किय्याह महायाजक और उसके नीचे के याजकों और द्वारपालों को आज्ञा दी कि जितने पात्र बाल और अशेरा और आकाश के सब गणों के लिये बने हैं, उन सभी को यहोवा के मन्दिर में से निकाल ले आओ। तब उसने उनको यरूशलेम के बाहर किद्रोन के मैदानों में फूँककर उनकी राख बेतेल को पहुँचा दी।
೪ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
5 ५ जिन पुजारियों को यहूदा के राजाओं ने यहूदा के नगरों के ऊँचे स्थानों में और यरूशलेम के आस-पास के स्थानों में धूप जलाने के लिये ठहराया था, उनको और जो बाल और सूर्य-चन्द्रमा, राशिचक्र और आकाश के सारे गणों को धूप जलाते थे, उनको भी राजा ने हटा दिया।
೫ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
6 ६ वह अशेरा को यहोवा के भवन में से निकालकर यरूशलेम के बाहर किद्रोन नाले में ले गया और वहीं उसको फूँक दिया, और पीसकर बुकनी कर दिया। तब वह बुकनी साधारण लोगों की कब्रों पर फेंक दी।
೬ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
7 ७ फिर पुरुषगामियों के घर जो यहोवा के भवन में थे, जहाँ स्त्रियाँ अशेरा के लिये पर्दे बुना करती थीं, उनको उसने ढा दिया।
೭ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.
8 ८ उसने यहूदा के सब नगरों से याजकों को बुलवाकर गेबा से बेर्शेबा तक के उन ऊँचे स्थानों को, जहाँ उन याजकों ने धूप जलाया था, अशुद्ध कर दिया; और फाटकों के ऊँचे स्थान अर्थात् जो स्थान नगर के यहोशू नामक हाकिम के फाटक पर थे, और नगर के फाटक के भीतर जानेवाले के बाईं ओर थे, उनको उसने ढा दिया।
೮ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.
9 ९ तो भी ऊँचे स्थानों के याजक यरूशलेम में यहोवा की वेदी के पास न आए, वे अख़मीरी रोटी अपने भाइयों के साथ खाते थे।
೯ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.
10 १० फिर उसने तोपेत जो हिन्नोमवंशियों की तराई में था, अशुद्ध कर दिया, ताकि कोई अपने बेटे या बेटी को मोलेक के लिये आग में होम करके न चढ़ाए।
೧೦ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ “ತೋಫೆತ್” ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.
11 ११ जो घोड़े यहूदा के राजाओं ने सूर्य को अर्पण करके, यहोवा के भवन के द्वार पर नतन्मेलेक नामक खोजे की बाहर की कोठरी में रखे थे, उनको उसने दूर किया, और सूर्य के रथों को आग में फूँक दिया।
೧೧ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.
12 १२ आहाज की अटारी की छत पर जो वेदियाँ यहूदा के राजाओं की बनाई हुई थीं, और जो वेदियाँ मनश्शे ने यहोवा के भवन के दोनों आँगनों में बनाई थीं, उनको राजा ने ढाकर पीस डाला और उनकी बुकनी किद्रोन नाले में फेंक दी।
೧೨ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
13 १३ जो ऊँचे स्थान इस्राएल के राजा सुलैमान ने यरूशलेम के पूर्व की ओर और विकारी नामक पहाड़ी के दक्षिण ओर, अश्तोरेत नामक सीदोनियों की घिनौनी देवी, और कमोश नामक मोआबियों के घिनौने देवता, और मिल्कोम नामक अम्मोनियों के घिनौने देवता के लिये बनवाए थे, उनको राजा ने अशुद्ध कर दिया।
೧೩ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.
14 १४ उसने लाठों को तोड़ दिया और अशेरों को काट डाला, और उनके स्थान मनुष्यों की हड्डियों से भर दिए।
೧೪ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
15 १५ फिर बेतेल में जो वेदी थी, और जो ऊँचा स्थान नबात के पुत्र यारोबाम ने बनाया था, जिसने इस्राएल से पाप कराया था, उस वेदी और उस ऊँचे स्थान को उसने ढा दिया, और ऊँचे स्थान को फूँककर बुकनी कर दिया और अशेरा को फूँक दिया।
೧೫ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.
16 १६ तब योशिय्याह ने मुड़कर वहाँ के पहाड़ की कब्रों को देखा, और लोगों को भेजकर उन कब्रों से हड्डियाँ निकलवा दीं और वेदी पर जलवाकर उसको अशुद्ध किया। यह यहोवा के उस वचन के अनुसार हुआ, जो परमेश्वर के उस भक्त ने पुकारकर कहा था जिसने इन्हीं बातों की चर्चा की थी।
೧೬ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.
17 १७ तब उसने पूछा, “जो खम्भा मुझे दिखाई पड़ता है, वह क्या है?” तब नगर के लोगों ने उससे कहा, “वह परमेश्वर के उस भक्त जन की कब्र है, जिसने यहूदा से आकर इसी काम की चर्चा पुकारकर की थी, जो तूने बेतेल की वेदी से किया है।”
೧೭ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು.
18 १८ तब उसने कहा, “उसको छोड़ दो; उसकी हड्डियों को कोई न हटाए।” तब उन्होंने उसकी हड्डियाँ उस नबी की हड्डियों के संग जो सामरिया से आया था, रहने दीं।
೧೮ಆಗ ಯೋಷೀಯನು, “ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
19 १९ फिर ऊँचे स्थान के जितने भवन सामरिया के नगरों में थे, जिनको इस्राएल के राजाओं ने बनाकर यहोवा को क्रोध दिलाया था, उन सभी को योशिय्याह ने गिरा दिया; और जैसा-जैसा उसने बेतेल में किया था, वैसा-वैसा उनसे भी किया।
೧೯ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.
20 २० उन ऊँचे स्थानों के जितने याजक वहाँ थे उन सभी को उसने उन्हीं वेदियों पर बलि किया और उन पर मनुष्यों की हड्डियाँ जलाकर यरूशलेम को लौट गया।
೨೦ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.
21 २१ राजा ने सारी प्रजा के लोगों को आज्ञा दी, “इस वाचा की पुस्तक में जो कुछ लिखा है, उसके अनुसार अपने परमेश्वर यहोवा के लिये फसह का पर्व मानो।”
೨೧ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.
22 २२ निश्चय ऐसा फसह न तो न्यायियों के दिनों में माना गया था जो इस्राएल का न्याय करते थे, और न इस्राएल या यहूदा के राजाओं के दिनों में माना गया था।
೨೨ಇಂಥ ಪಸ್ಕಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.
23 २३ राजा योशिय्याह के राज्य के अठारहवें वर्ष में यहोवा के लिये यरूशलेम में यह फसह माना गया।
೨೩ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.
24 २४ फिर ओझे, भूत-सिद्धिवाले, गृहदेवता, मूरतें और जितनी घिनौनी वस्तुएँ यहूदा देश और यरूशलेम में जहाँ कहीं दिखाई पड़ीं, उन सभी को योशिय्याह ने इस मनसा से नाश किया, कि व्यवस्था की जो बातें उस पुस्तक में लिखी थीं जो हिल्किय्याह याजक को यहोवा के भवन में मिली थी, उनको वह पूरी करे।
೨೪ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
25 २५ उसके तुल्य न तो उससे पहले कोई ऐसा राजा हुआ और न उसके बाद ऐसा कोई राजा उठा, जो मूसा की पूरी व्यवस्था के अनुसार अपने पूर्ण मन और पूर्ण प्राण और पूर्ण शक्ति से यहोवा की ओर फिरा हो।
೨೫ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.
26 २६ तो भी यहोवा का भड़का हुआ बड़ा कोप शान्त न हुआ, जो इस कारण से यहूदा पर भड़का था, कि मनश्शे ने यहोवा को क्रोध पर क्रोध दिलाया था।
೨೬ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
27 २७ यहोवा ने कहा था, “जैसे मैंने इस्राएल को अपने सामने से दूर किया, वैसे ही यहूदा को भी दूर करूँगा; और इस यरूशलेम नगर, जिसे मैंने चुना और इस भवन जिसके विषय मैंने कहा, कि यह मेरे नाम का निवास होगा, के विरुद्ध मैं हाथ उठाऊँगा।”
೨೭ಯೆಹೋವನು, “ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
28 २८ योशिय्याह के और सब काम जो उसने किए, वह क्या यहूदा के राजाओं के इतिहास की पुस्तक में नहीं लिखे हैं?
೨೮ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.
29 २९ उसके दिनों में फ़िरौन-नको नामक मिस्र का राजा अश्शूर के राजा की सहायता करने फरात महानद तक गया तो योशिय्याह राजा भी उसका सामना करने को गया, और फ़िरौन-नको ने उसको देखते ही मगिद्दो में मार डाला।
೨೯ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.
30 ३० तब उसके कर्मचारियों ने उसका शव एक रथ पर रख मगिद्दो से ले जाकर यरूशलेम को पहुँचाया और उसकी निज कब्र में रख दिया। तब साधारण लोगों ने योशिय्याह के पुत्र यहोआहाज को लेकर उसका अभिषेक करके, उसके पिता के स्थान पर राजा नियुक्त किया।
೩೦ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
31 ३१ जब यहोआहाज राज्य करने लगा, तब वह तेईस वर्ष का था, और तीन महीने तक यरूशलेम में राज्य करता रहा; उसकी माता का नाम हमूतल था, जो लिब्नावासी यिर्मयाह की बेटी थी।
೩೧ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
32 ३२ उसने ठीक अपने पुरखाओं के समान वही किया, जो यहोवा की दृष्टि में बुरा है।
೩೨ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
33 ३३ उसको फ़िरौन-नको ने हमात देश के रिबला नगर में बन्दी बना लिया, ताकि वह यरूशलेम में राज्य न करने पाए, फिर उसने देश पर सौ किक्कार चाँदी और किक्कार भर सोना जुर्माना किया।
೩೩ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.
34 ३४ तब फ़िरौन-नको ने योशिय्याह के पुत्र एलयाकीम को उसके पिता योशिय्याह के स्थान पर राजा नियुक्त किया, और उसका नाम बदलकर यहोयाकीम रखा; परन्तु यहोआहाज को वह ले गया। और यहोआहाज मिस्र में जाकर वहीं मर गया।
೩೪ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.
35 ३५ यहोयाकीम ने फ़िरौन को वह चाँदी और सोना तो दिया परन्तु देश पर इसलिए कर लगाया कि फ़िरौन की आज्ञा के अनुसार उसे दे सके, अर्थात् देश के सब लोगों से जितना जिस पर लगान लगा, उतनी चाँदी और सोना उससे फ़िरौन-नको को देने के लिये ले लिया।
೩೫ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.
36 ३६ जब यहोयाकीम राज्य करने लगा, तब वह पच्चीस वर्ष का था, और ग्यारह वर्ष तक यरूशलेम में राज्य करता रहा; उसकी माता का नाम जबीदा था जो रूमावासी पदायाह की बेटी थी।
೩೬ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.
37 ३७ उसने ठीक अपने पुरखाओं के समान वह किया जो यहोवा की दृष्टि में बुरा है।
೩೭ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.