< 2 राजा 25 >

1 सिदकिय्याह ने बाबेल के राजा से बलवा किया। उसके राज्य के नौवें वर्ष के दसवें महीने के दसवें दिन को बाबेल के राजा नबूकदनेस्सर ने अपनी पूरी सेना लेकर यरूशलेम पर चढ़ाई की, और उसको घेर लिया और उसके चारों ओर पटकोटा बनाए।
ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.
2 इस प्रकार नगर सिदकिय्याह राजा के राज्य के ग्यारहवें वर्ष तक घिरा हुआ रहा।
ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.
3 चौथे महीने के नौवें दिन से नगर में अकाल यहाँ तक बढ़ गई, कि देश के लोगों के लिये कुछ खाने को न रहा।
ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
4 तब नगर की शहरपनाह में दरार की गई, और दोनों दीवारों के बीच जो फाटक राजा की बारी के निकट था उस मार्ग से सब योद्धा रात ही रात निकल भागे यद्यपि कसदी नगर को घेरे हुए थे, राजा ने अराबा का मार्ग लिया।
ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
5 तब कसदियों की सेना ने राजा का पीछा किया, और उसको यरीहो के पास के मैदान में जा पकड़ा, और उसकी पूरी सेना उसके पास से तितर-बितर हो गई।
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
6 तब वे राजा को पकड़कर रिबला में बाबेल के राजा के पास ले गए, और उसे दण्ड की आज्ञा दी गई।
ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
7 उन्होंने सिदकिय्याह के पुत्रों को उसके सामने घात किया और सिदकिय्याह की आँखें फोड़ डाली और उसे पीतल की बेड़ियों से जकड़कर बाबेल को ले गए।
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
8 बाबेल के राजा नबूकदनेस्सर के उन्नीसवें वर्ष के पाँचवें महीने के सातवें दिन को अंगरक्षकों का प्रधान नबूजरदान जो बाबेल के राजा का एक कर्मचारी था, यरूशलेम में आया।
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,
9 उसने यहोवा के भवन और राजभवन और यरूशलेम के सब घरों को अर्थात् हर एक बड़े घर को आग लगाकर फूँक दिया।
ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.
10 १० यरूशलेम के चारों ओर की शहरपनाह को कसदियों की पूरी सेना ने जो अंगरक्षकों के प्रधान के संग थी ढा दिया।
ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.
11 ११ जो लोग नगर में रह गए थे, और जो लोग बाबेल के राजा के पास भाग गए थे, और साधारण लोग जो रह गए थे, इन सभी को अंगरक्षकों का प्रधान नबूजरदान बन्दी बनाकर ले गया।
ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.
12 १२ परन्तु अंगरक्षकों के प्रधान ने देश के कंगालों में से कितनों को दाख की बारियों की सेवा और काश्तकारी करने को छोड़ दिया।
ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
13 १३ यहोवा के भवन में जो पीतल के खम्भे थे और कुर्सियाँ और पीतल का हौद जो यहोवा के भवन में था, इनको कसदी तोड़कर उनका पीतल बाबेल को ले गए।
ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
14 १४ हाँड़ियों, फावड़ियों, चिमटों, धूपदानों और पीतल के सब पात्रों को भी जिनसे सेवा टहल होती थी, वे ले गए।
ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.
15 १५ करछे और कटोरियाँ जो सोने की थीं, और जो कुछ चाँदी का था, वह सब सोना, चाँदी, अंगरक्षकों का प्रधान ले गया।
ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.
16 १६ दोनों खम्भे, एक हौद और कुर्सियाँ जिसको सुलैमान ने यहोवा के भवन के लिये बनाया था, इन सब वस्तुओं का पीतल तौल से बाहर था।
ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.
17 १७ एक-एक खम्भे की ऊँचाई अठारह-अठारह हाथ की थी और एक-एक खम्भे के ऊपर तीन-तीन हाथ ऊँची पीतल की एक-एक कँगनी थी, और एक-एक कँगनी पर चारों ओर जो जाली और अनार बने थे, वे सब पीतल के थे।
ಪ್ರತಿಯೊಂದು ಕಂಬ ಎಂಟು ಮೀಟರ್ ಎತ್ತರವಿತ್ತು. ಪ್ರತಿಯೊಂದರ ಮೇಲೆ ಸುಮಾರು ಒಂದೂವರೆ ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು.
18 १८ अंगरक्षकों के प्रधान ने सरायाह महायाजक और उसके नीचे के याजक सपन्याह और तीनों द्वारपालों को पकड़ लिया।
ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.
19 १९ नगर में से उसने एक हाकिम को पकड़ा जो योद्धाओं के ऊपर था, और जो पुरुष राजा के सम्मुख रहा करते थे, उनमें से पाँच जन जो नगर में मिले, और सेनापति का मुंशी जो लोगों को सेना में भरती किया करता था; और लोगों में से साठ पुरुष जो नगर में मिले।
ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಐದು ಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.
20 २० इनको अंगरक्षकों का प्रधान नबूजरदान पकड़कर रिबला के राजा के पास ले गया।
ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
21 २१ तब बाबेल के राजा ने उन्हें हमात देश के रिबला में ऐसा मारा कि वे मर गए। अतः यहूदी बन्दी बनके अपने देश से निकाल दिए गए।
ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
22 २२ जो लोग यहूदा देश में रह गए, जिनको बाबेल के राजा नबूकदनेस्सर ने छोड़ दिया, उन पर उसने अहीकाम के पुत्र गदल्याह को जो शापान का पोता था अधिकारी ठहराया।
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.
23 २३ जब दलों के सब प्रधानों ने अर्थात् नतन्याह के पुत्र इश्माएल कारेह के पुत्र योहानान, नतोपाई, तन्हूमेत के पुत्र सरायाह और किसी माकाई के पुत्र याजन्याह ने और उनके जनों ने यह सुना, कि बाबेल के राजा ने गदल्याह को अधिकारी ठहराया है, तब वे अपने-अपने जनों समेत मिस्पा में गदल्याह के पास आए।
ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
24 २४ गदल्याह ने उनसे और उनके जनों ने शपथ खाकर कहा, “कसदियों के सिपाहियों से न डरो, देश में रहते हुए बाबेल के राजा के अधीन रहो, तब तुम्हारा भला होगा।”
ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.
25 २५ परन्तु सातवें महीने में नतन्याह का पुत्र इश्माएल, जो एलीशामा का पोता और राजवंश का था, उसने दस जन संग ले गदल्याह के पास जाकर उसे ऐसा मारा कि वह मर गया, और जो यहूदी और कसदी उसके संग मिस्पा में रहते थे, उनको भी मार डाला।
ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.
26 २६ तब क्या छोटे क्या बड़े सारी प्रजा के लोग और दलों के प्रधान कसदियों के डर के मारे उठकर मिस्र में जाकर रहने लगे।
ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು.
27 २७ फिर यहूदा के राजा यहोयाकीन की बँधुआई के तैंतीसवें वर्ष में अर्थात् जिस वर्ष बाबेल का राजा एवील्मरोदक राजगद्दी पर विराजमान हुआ, उसी के बारहवें महीने के सताईसवें दिन को उसने यहूदा के राजा यहोयाकीन को बन्दीगृह से निकालकर बड़ा पद दिया।
ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.
28 २८ उससे मधुर-मधुर वचन कहकर जो राजा उसके संग बाबेल में बन्धुए थे उनके सिंहासनों से उसके सिंहासन को अधिक ऊँचा किया,
ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
29 २९ यहोयाकीन ने बन्दीगृह के वस्त्र बदल दिए और उसने जीवन भर नित्य राजा के सम्मुख भोजन किया।
ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.
30 ३० और प्रतिदिन के खर्च के लिये राजा के यहाँ से नित्य का खर्च ठहराया गया जो उसके जीवन भर लगातार उसे मिलता रहा।
ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.

< 2 राजा 25 >