< 2 शमूएल 18 >

1 तब दाऊद ने अपने संग के लोगों की गिनती ली, और उन पर सहस्त्रपति और शतपति ठहराए।
ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.
2 फिर दाऊद ने लोगों की एक तिहाई योआब के, और एक तिहाई सरूयाह के पुत्र योआब के भाई अबीशै के, और एक तिहाई गती इत्तै के, अधिकार में करके युद्ध में भेज दिया। फिर राजा ने लोगों से कहा, “मैं भी अवश्य तुम्हारे साथ चलूँगा।”
ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.
3 लोगों ने कहा, “तू जाने न पाएगा। क्योंकि चाहे हम भाग जाएँ, तो भी वे हमारी चिन्ता न करेंगे; वरन् चाहे हम में से आधे मारे भी जाएँ, तो भी वे हमारी चिन्ता न करेंगे। परन्तु तू हमारे जैसे दस हजार पुरुषों के बराबर हैं; इसलिए अच्छा यह है कि तू नगर में से हमारी सहायता करने को तैयार रहे।”
ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.
4 राजा ने उनसे कहा, “जो कुछ तुम्हें भाए वही मैं करूँगा।” इसलिए राजा फाटक की एक ओर खड़ा रहा, और सब लोग सौ-सौ, और हजार, हजार करके निकलने लगे।
ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.
5 राजा ने योआब, अबीशै, और इत्तै को आज्ञा दी, “मेरे निमित्त उस जवान, अर्थात् अबशालोम से कोमलता करना।” यह आज्ञा राजा ने अबशालोम के विषय सब प्रधानों को सब लोगों के सुनाते हुए दी।
ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.
6 अतः लोग इस्राएल का सामना करने को मैदान में निकले; और एप्रैम नामक वन में युद्ध हुआ।
ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.
7 वहाँ इस्राएली लोग दाऊद के जनों से हार गए, और उस दिन ऐसा बड़ा संहार हुआ कि बीस हजार मारे गए
ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.
8 युद्ध उस समस्त देश में फैल गया; और उस दिन जितने लोग तलवार से मारे गए, उनसे भी अधिक वन के कारण मर गए।
ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
9 संयोग से अबशालोम और दाऊद के जनों की भेंट हो गई। अबशालोम एक खच्चर पर चढ़ा हुआ जा रहा था, कि खच्चर एक बड़े बांज वृक्ष की घनी डालियों के नीचे से गया, और उसका सिर उस बांज वृक्ष में अटक गया, और वह अधर में लटका रह गया, और उसका खच्चर निकल गया।
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.
10 १० इसको देखकर किसी मनुष्य ने योआब को बताया, “मैंने अबशालोम को बांज वृक्ष में टँगा हुआ देखा।”
ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.
11 ११ योआब ने बतानेवाले से कहा, “तूने यह देखा! फिर क्यों उसे वहीं मारकर भूमि पर न गिरा दिया? तो मैं तुझे दस टुकड़े चाँदी और एक कमरबन्ध देता।”
ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.
12 १२ उस मनुष्य ने योआब से कहा, “चाहे मेरे हाथ में हजार टुकड़े चाँदी तौलकर दिए जाएँ, तो भी राजकुमार के विरुद्ध हाथ न बढ़ाऊँगा; क्योंकि हम लोगों के सुनते राजा ने तुझे और अबीशै और इत्तै को यह आज्ञा दी, ‘तुम में से कोई क्यों न हो उस जवान अर्थात् अबशालोम को न छूए।’
ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.
13 १३ यदि मैं धोखा देकर उसका प्राण लेता, तो तू आप मेरा विरोधी हो जाता, क्योंकि राजा से कोई बात छिपी नहीं रहती।”
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.
14 १४ योआब ने कहा, “मैं तेरे संग ऐसे ही ठहरा नहीं रह सकता!” इसलिए उसने तीन लकड़ी हाथ में लेकर अबशालोम के हृदय में, जो बांज वृक्ष में जीवित ही लटका था, छेद डाला।
ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.
15 १५ तब योआब के दस हथियार ढोनेवाले जवानों ने अबशालोम को घेर के ऐसा मारा कि वह मर गया।
ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.
16 १६ फिर योआब ने नरसिंगा फूँका, और लोग इस्राएल का पीछा करने से लौटे; क्योंकि योआब प्रजा को बचाना चाहता था।
ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.
17 १७ तब लोगों ने अबशालोम को उतार के उस वन के एक बड़े गड्ढे में डाल दिया, और उस पर पत्थरों का एक बहुत बड़ा ढेर लगा दिया; और सब इस्राएली अपने-अपने डेरे को भाग गए।
ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.
18 १८ अपने जीते जी अबशालोम ने यह सोचकर कि मेरे नाम का स्मरण करानेवाला कोई पुत्र मेरा नहीं है, अपने लिये वह स्तम्भ खड़ा कराया था जो राजा की तराई में है; और स्तम्भ का अपना ही नाम रखा, जो आज के दिन तक अबशालोम का स्तम्भ कहलाता है।
ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.
19 १९ तब सादोक के पुत्र अहीमास ने कहा, “मुझे दौड़कर राजा को यह समाचार देने दे, कि यहोवा ने न्याय करके तुझे तेरे शत्रुओं के हाथ से बचाया है।”
ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.
20 २० योआब ने उससे कहा, “तू आज के दिन समाचार न दे; दूसरे दिन समाचार देने पाएगा, परन्तु आज समाचार न दे, इसलिए कि राजकुमार मर गया है।”
ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.
21 २१ तब योआब ने एक कूशी से कहा, “जो कुछ तूने देखा है वह जाकर राजा को बता दे।” तो वह कूशी योआब को दण्डवत् करके दौड़ गया।
ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.
22 २२ फिर सादोक के पुत्र अहीमास ने दूसरी बार योआब से कहा, “जो हो सो हो, परन्तु मुझे भी कूशी के पीछे दौड़ जाने दे।” योआब ने कहा, “हे मेरे बेटे, तेरे समाचार का कुछ बदला न मिलेगा, फिर तू क्यों दौड़ जाना चाहता है?”
ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.
23 २३ उसने यह कहा, “जो हो सो हो, परन्तु मुझे दौड़ जाने दे।” उसने उससे कहा, “दौड़।” तब अहीमास दौड़ा, और तराई से होकर कूशी के आगे बढ़ गया।
ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
24 २४ दाऊद तो दो फाटकों के बीच बैठा था, कि पहरुआ जो फाटक की छत से होकर शहरपनाह पर चढ़ गया था, उसने आँखें उठाकर क्या देखा, कि एक मनुष्य अकेला दौड़ा आता है।
ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.
25 २५ जब पहरुए ने पुकारके राजा को यह बता दिया, तब राजा ने कहा, “यदि अकेला आता हो, तो सन्देशा लाता होगा।” वह दौड़ते-दौड़ते निकल आया।
ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು.
26 २६ फिर पहरुए ने एक और मनुष्य को दौड़ते हुए देख फाटक के रखवाले को पुकारके कहा, “सुन, एक और मनुष्य अकेला दौड़ा आता है।” राजा ने कहा, “वह भी सन्देशा लाता होगा।”
ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.
27 २७ पहरुए ने कहा, “मुझे तो ऐसा देख पड़ता है कि पहले का दौड़ना सादोक के पुत्र अहीमास का सा है।” राजा ने कहा, “वह तो भला मनुष्य है, तो भला सन्देश लाता होगा।”
ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.
28 २८ तब अहीमास ने पुकारके राजा से कहा, “सब कुशल है।” फिर उसने भूमि पर मुँह के बल गिर राजा को दण्डवत् करके कहा, “तेरा परमेश्वर यहोवा धन्य है, जिसने मेरे प्रभु राजा के विरुद्ध हाथ उठानेवाले मनुष्यों को तेरे वश में कर दिया है!”
ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.
29 २९ राजा ने पूछा, “क्या वह जवान अबशालोम सकुशल है?” अहीमास ने कहा, “जब योआब ने राजा के कर्मचारी को और तेरे दास को भेज दिया, तब मुझे बड़ी भीड़ देख पड़ी, परन्तु मालूम न हुआ कि क्या हुआ था।”
ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.
30 ३० राजा ने कहा; “हटकर यहीं खड़ा रह।” और वह हटकर खड़ा रहा।
ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.
31 ३१ तब कूशी भी आ गया; और कूशी कहने लगा, “मेरे प्रभु राजा के लिये समाचार है। यहोवा ने आज न्याय करके तुझे उन सभी के हाथ से बचाया है जो तेरे विरुद्ध उठे थे।”
ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.
32 ३२ राजा ने कूशी से पूछा, “क्या वह जवान अर्थात् अबशालोम कुशल से है?” कूशी ने कहा, “मेरे प्रभु राजा के शत्रु, और जितने तेरी हानि के लिये उठे हैं, उनकी दशा उस जवान की सी हो।”
ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.
33 ३३ तब राजा बहुत घबराया, और फाटक के ऊपर की अटारी पर रोता हुआ चढ़ने लगा; और चलते-चलते यह कहता गया, “हाय मेरे बेटे अबशालोम! मेरे बेटे, हाय! मेरे बेटे अबशालोम! भला होता कि मैं आप तेरे बदले मरता, हाय! अबशालोम! मेरे बेटे, मेरे बेटे!”
ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.

< 2 शमूएल 18 >