< 2 शमूएल 19 >

1 तब योआब को यह समाचार मिला, “राजा अबशालोम के लिये रो रहा है और विलाप कर रहा है।”
“ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.
2 इसलिए उस दिन की विजय सब लोगों की समझ में विलाप ही का कारण बन गई; क्योंकि लोगों ने उस दिन सुना, कि राजा अपने बेटे के लिये खेदित है।
“ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು.
3 इसलिए उस दिन लोग ऐसा मुँह चुराकर नगर में घुसे, जैसा लोग युद्ध से भाग आने से लज्जित होकर मुँह चुराते हैं।
ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು.
4 और राजा मुँह ढाँपे हुए चिल्ला चिल्लाकर पुकारता रहा, “हाय मेरे बेटे अबशालोम! हाय अबशालोम, मेरे बेटे, मेरे बेटे!”
ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.
5 तब योआब घर में राजा के पास जाकर कहने लगा, “तेरे कर्मचारियों ने आज के दिन तेरा, और तेरे बेटे-बेटियों का और तेरी पत्नियों और रखैलों का प्राण तो बचाया है, परन्तु तूने आज के दिन उन सभी का मुँह काला किया है;
ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.
6 इसलिए कि तू अपने बैरियों से प्रेम और अपने प्रेमियों से बैर रखता है। तूने आज यह प्रगट किया कि तुझे हाकिमों और कर्मचारियों की कुछ चिन्ता नहीं; वरन् मैंने आज जान लिया, कि यदि हम सब आज मारे जाते और अबशालोम जीवित रहता, तो तू बहुत प्रसन्न होता।
ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.
7 इसलिए अब उठकर बाहर जा, और अपने कर्मचारियों को शान्ति दे; नहीं तो मैं यहोवा की शपथ खाकर कहता हूँ, कि यदि तू बाहर न जाएगा, तो आज रात को एक मनुष्य भी तेरे संग न रहेगा; और तेरे बचपन से लेकर अब तक जितनी विपत्तियाँ तुझ पर पड़ी हैं उन सबसे यह विपत्ति बड़ी होगी।”
ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು.
8 तब राजा उठकर फाटक में जा बैठा। जब सब लोगों को यह बताया गया, कि राजा फाटक में बैठा है; तब सब लोग राजा के सामने आए। इस बीच इस्राएली अपने-अपने डेरे को भाग गए थे।
ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು.
9 इस्राएल के सब गोत्रों के सब लोग आपस में यह कहकर झगड़ते थे, “राजा ने हमें हमारे शत्रुओं के हाथ से बचाया था, और पलिश्तियों के हाथ से उसी ने हमें छुड़ाया; परन्तु अब वह अबशालोम के डर के मारे देश छोड़कर भाग गया।
ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.
10 १० अबशालोम जिसको हमने अपना राजा होने को अभिषेक किया था, वह युद्ध में मर गया है। तो अब तुम क्यों चुप रहते? और राजा को लौटा ले आने की चर्चा क्यों नहीं करते?”
ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.
11 ११ तब राजा दाऊद ने सादोक और एब्यातार याजकों के पास कहला भेजा, “यहूदी पुरनियों से कहो, ‘तुम लोग राजा को भवन पहुँचाने के लिये सबसे पीछे क्यों होते हो जबकि समस्त इस्राएल की बातचीत राजा के सुनने में आई है, कि उसको भवन में पहुँचाए
ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?
12 १२ तुम लोग तो मेरे भाई, वरन् मेरी ही हड्डी और माँस हो; तो तुम राजा को लौटाने में सब के पीछे क्यों होते हो?’
ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ.
13 १३ फिर अमासा से यह कहो, ‘क्या तू मेरी हड्डी और माँस नहीं है? और यदि तू योआब के स्थान पर सदा के लिये सेनापति न ठहरे, तो परमेश्वर मुझसे वैसा ही वरन् उससे भी अधिक करे।’”
ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.
14 १४ इस प्रकार उसने सब यहूदी पुरुषों के मन ऐसे अपनी ओर खींच लिया कि मानो एक ही पुरुष था; और उन्होंने राजा के पास कहला भेजा, “तू अपने सब कर्मचारियों को संग लेकर लौट आ।”
ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.
15 १५ तब राजा लौटकर यरदन तक आ गया; और यहूदी लोग गिलगाल तक गए कि उससे मिलकर उसे यरदन पार ले आएँ।
ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.
16 १६ यहूदियों के संग गेरा का पुत्र बिन्यामीनी शिमी भी जो बहूरीम का निवासी था फुर्ती करके राजा दाऊद से भेंट करने को गया;
ಬಹುರೀಮಿನವನೂ ಬೆನ್ಯಾಮೀನ್ಯನೂ ಗೇರನ ಮಗ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸ ದಾವೀದನನ್ನು ಎದುರುಗೊಳ್ಳುವುದಕ್ಕೆ ಬಂದನು.
17 १७ उसके संग हजार बिन्यामीनी पुरुष थे और शाऊल के घराने का कर्मचारी सीबा अपने पन्द्रह पुत्रों और बीस दासों समेत था, और वे राजा के सामने यरदन के पार पैदल उतर गए।
ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು.
18 १८ और एक बेड़ा राजा के परिवार को पार ले आने, और जिस काम में वह उसे लगाना चाहे उसी में लगने के लिये पार गया। जब राजा यरदन पार जाने पर था, तब गेरा का पुत्र शिमी उसके पाँवों पर गिरकर,
ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,
19 १९ राजा से कहने लगा, “मेरा प्रभु मेरे दोष का लेखा न ले, और जिस दिन मेरा प्रभु राजा यरूशलेम को छोड़ आया, उस दिन तेरे दास ने जो कुटिल काम किया, उसे स्मरण न करे और न राजा उसे अपने ध्यान में रखे।
“ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
20 २० क्योंकि तेरा दास जानता है कि मैंने पाप किया; देख, आज अपने प्रभु राजा से भेंट करने के लिये यूसुफ के समस्त घराने में से मैं ही पहले आया हूँ।”
ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.
21 २१ तब सरूयाह के पुत्र अबीशै ने कहा, “शिमी ने जो यहोवा के अभिषिक्त को श्राप दिया था, इस कारण क्या उसका वध करना न चाहिये?”
ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.
22 २२ दाऊद ने कहा, “हे सरूयाह के बेटों, मुझे तुम से क्या काम, कि तुम आज मेरे विरोधी ठहरे हो? आज क्या इस्राएल में किसी को प्राणदण्ड मिलेगा? क्या मैं नहीं जानता कि आज मैं इस्राएल का राजा हुआ हूँ?”
ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.
23 २३ फिर राजा ने शिमी से कहा, “तुझे प्राणदण्ड न मिलेगा।” और राजा ने उससे शपथ भी खाई।
ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.
24 २४ तब शाऊल का पोता मपीबोशेत राजा से भेंट करने को आया; उसने राजा के चले जाने के दिन से उसके कुशल क्षेम से फिर आने के दिन तक न अपने पाँवों के नाखून काटे, और न अपनी दाढ़ी बनवाई, और न अपने कपड़े धुलवाए थे।
ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
25 २५ जब यरूशलेमी राजा से मिलने को गए, तब राजा ने उससे पूछा, “हे मपीबोशेत, तू मेरे संग क्यों नहीं गया था?”
ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು.
26 २६ उसने कहा, “हे मेरे प्रभु, हे राजा, मेरे कर्मचारी ने मुझे धोखा दिया था; तेरा दास जो विकलांग है; इसलिए तेरे दास ने सोचा, ‘मैं गदहे पर काठी कसवाकर उस पर चढ़ राजा के साथ चला जाऊँगा।’
ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
27 २७ और मेरे कर्मचारी ने मेरे प्रभु राजा के सामने मेरी चुगली की है। परन्तु मेरा प्रभु राजा परमेश्वर के दूत के समान है; और जो कुछ तुझे भाए वही कर।
ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.
28 २८ मेरे पिता का समस्त घराना तेरी ओर से प्राणदण्ड के योग्य था; परन्तु तूने अपने दास को अपनी मेज पर खानेवालों में गिना है। मुझे क्या हक़ है कि मैं राजा की दुहाई दूँ?”
ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.
29 २९ राजा ने उससे कहा, “तू अपनी बात की चर्चा क्यों करता रहता है? मेरी आज्ञा यह है, कि उस भूमि को तुम और सीबा दोनों आपस में बाँट लो।”
ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.
30 ३० मपीबोशेत ने राजा से कहा, “मेरे प्रभु राजा जो कुशल क्षेम से अपने घर आया है, इसलिए सीबा ही सब कुछ ले ले।”
ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.
31 ३१ तब गिलादी बर्जिल्लै रोगलीम से आया, और राजा के साथ यरदन पार गया, कि उसको यरदन के पार पहुँचाए।
ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು.
32 ३२ बर्जिल्लै तो वृद्ध पुरुष था, अर्थात् अस्सी वर्ष की आयु का था जब तक राजा महनैम में रहता था तब तक वह उसका पालन-पोषण करता रहा; क्योंकि वह बहुत धनी था।
ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.
33 ३३ तब राजा ने बर्जिल्लै से कहा, “मेरे संग पार चल, और मैं तुझे यरूशलेम में अपने पास रखकर तेरा पालन-पोषण करूँगा।”
ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು.
34 ३४ बर्जिल्लै ने राजा से कहा, “मुझे कितने दिन जीवित रहना है, कि मैं राजा के संग यरूशलेम को जाऊँ?
ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
35 ३५ आज मैं अस्सी वर्ष का हूँ; क्या मैं भले बुरे का विवेक कर सकता हूँ? क्या तेरा दास जो कुछ खाता पीता है उसका स्वाद पहचान सकता है? क्या मुझे गायकों या गायिकाओं का शब्द अब सुन पड़ता है? तेरा दास अब अपने स्वामी राजा के लिये क्यों बोझ का कारण हो?
ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು?
36 ३६ तेरा दास राजा के संग यरदन पार ही तक जाएगा। राजा इसका ऐसा बड़ा बदला मुझे क्यों दे?
ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು?
37 ३७ अपने दास को लौटने दे, कि मैं अपने ही नगर में अपने माता पिता के कब्रिस्तान के पास मरूँ। परन्तु तेरा दास किम्हाम उपस्थित है; मेरे प्रभु राजा के संग वह पार जाए; और जैसा तुझे भाए वैसा ही उससे व्यवहार करना।”
ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು.
38 ३८ राजा ने कहा, “हाँ, किम्हाम मेरे संग पार चलेगा, और जैसा तुझे भाए वैसा ही मैं उससे व्यवहार करूँगा वरन् जो कुछ तू मुझसे चाहेगा वह मैं तेरे लिये करूँगा।”
ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು.
39 ३९ तब सब लोग यरदन पार गए, और राजा भी पार हुआ; तब राजा ने बर्जिल्लै को चूमकर आशीर्वाद दिया, और वह अपने स्थान को लौट गया।
ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.
40 ४० तब राजा गिलगाल की ओर पार गया, और उसके संग किम्हाम पार हुआ; और सब यहूदी लोगों ने और आधे इस्राएली लोगों ने राजा को पार पहुँचाया।
ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.
41 ४१ तब सब इस्राएली पुरुष राजा के पास आए, और राजा से कहने लगे, “क्या कारण है कि हमारे यहूदी भाई तुझे चोरी से ले आए, और परिवार समेत राजा को और उसके सब जनों को भी यरदन पार ले आए हैं।”
ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.
42 ४२ सब यहूदी पुरुषों ने इस्राएली पुरुषों को उत्तर दिया, “कारण यह है कि राजा हमारे गोत्र का है। तो तुम लोग इस बात से क्यों रूठ गए हो? क्या हमने राजा का दिया हुआ कुछ खाया है? या उसने हमें कुछ दान दिया है?”
ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.
43 ४३ इस्राएली पुरुषों ने यहूदी पुरुषों को उत्तर दिया, “राजा में दस अंश हमारे हैं; और दाऊद में हमारा भाग तुम्हारे भाग से बड़ा है। तो फिर तुम ने हमें क्यों तुच्छ जाना? क्या अपने राजा के लौटा ले आने की चर्चा पहले हम ही ने न की थी?” और यहूदी पुरुषों ने इस्राएली पुरुषों से अधिक कड़ी बातें कहीं।
ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

< 2 शमूएल 19 >