< 2 शमूएल 2 >
1 १ इसके बाद दाऊद ने यहोवा से पूछा, “क्या मैं यहूदा के किसी नगर में जाऊँ?” यहोवा ने उससे कहा, “हाँ, जा।” दाऊद ने फिर पूछा, “किस नगर में जाऊँ?” उसने कहा, “हेब्रोन में।”
ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.
2 २ तब दाऊद यिज्रेली अहीनोअम, और कर्मेली नाबाल की स्त्री अबीगैल नामक, अपनी दोनों पत्नियों समेत वहाँ गया।
ಹಾಗೆಯೇ ದಾವೀದನೂ, ಹಾಗೂ ಅವನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾಗಿರುವ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳೂ ಅಲ್ಲಿಗೆ ಹೋದರು.
3 ३ दाऊद अपने साथियों को भी एक-एक के घराने समेत वहाँ ले गया; और वे हेब्रोन के गाँवों में रहने लगे।
ಇದಲ್ಲದೆ ದಾವೀದನು ತನ್ನ ಸಂಗಡ ಇದ್ದ ಜನರನ್ನೂ, ಅವರವರ ಮನೆಯವರನ್ನೂ ಕರೆದುಕೊಂಡು ಹೋದನು. ಅವರು ಹೆಬ್ರೋನಿನ ಪಟ್ಟಣಗಳಲ್ಲಿ ವಾಸವಾಗಿದ್ದರು.
4 ४ और यहूदी लोग गए, और वहाँ दाऊद का अभिषेक किया कि वह यहूदा के घराने का राजा हो। जब दाऊद को यह समाचार मिला, कि जिन्होंने शाऊल को मिट्टी दी वे गिलाद के याबेश नगर के लोग हैं।
ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,
5 ५ तब दाऊद ने दूतों से गिलाद के याबेश के लोगों के पास यह कहला भेजा, “यहोवा की आशीष तुम पर हो, क्योंकि तुम ने अपने प्रभु शाऊल पर यह कृपा करके उसको मिट्टी दी।
ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.
6 ६ इसलिए अब यहोवा तुम से कृपा और सच्चाई का बर्ताव करे; और मैं भी तुम्हारी इस भलाई का बदला तुम को दूँगा, क्योंकि तुम ने यह काम किया है।
ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
7 ७ अब हियाव बाँधो, और पुरुषार्थ करो; क्योंकि तुम्हारा प्रभु शाऊल मर गया, और यहूदा के घराने ने अपने ऊपर राजा होने को मेरा अभिषेक किया है।”
ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು.
8 ८ परन्तु नेर का पुत्र अब्नेर जो शाऊल का प्रधान सेनापति था, उसने शाऊल के पुत्र ईशबोशेत को संग ले पार जाकर महनैम में पहुँचाया;
ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.
9 ९ और उसे गिलाद अशूरियों के देश, यिज्रेल, एप्रैम, बिन्यामीन, वरन् समस्त इस्राएल प्रदेश पर राजा नियुक्त किया।
ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.
10 १० शाऊल का पुत्र ईशबोशेत चालीस वर्ष का था जब वह इस्राएल पर राज्य करने लगा, और दो वर्ष तक राज्य करता रहा। परन्तु यहूदा का घराना दाऊद के पक्ष में रहा।
ಸೌಲನ ಮಗ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವುದಕ್ಕೆ ಆರಂಭಿಸಿದಾಗ, ನಾಲ್ವತ್ತು ವರ್ಷ ಪ್ರಾಯದವನಾಗಿದ್ದು ಎರಡು ವರ್ಷ ಆಳಿದನು. ಆದರೆ ಯೆಹೂದ ಗೋತ್ರದವರು ದಾವೀದನನ್ನು ಹಿಂಬಾಲಿಸಿದರು.
11 ११ और दाऊद का हेब्रोन में यहूदा के घराने पर राज्य करने का समय साढ़े सात वर्ष था।
ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು.
12 १२ नेर का पुत्र अब्नेर, और शाऊल के पुत्र ईशबोशेत के जन, महनैम से गिबोन को आए।
ನೇರನ ಮಗನಾಗಿರುವ ಅಬ್ನೇರನೂ, ಸೌಲನ ಮಗ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದನು.
13 १३ तब सरूयाह का पुत्र योआब, और दाऊद के जन, हेब्रोन से निकलकर उनसे गिबोन के जलकुण्ड के पास मिले; और दोनों दल उस जलकुण्ड के एक-एक ओर बैठ गए।
ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.
14 १४ तब अब्नेर ने योआब से कहा, “जवान लोग उठकर हमारे सामने खेलें।” योआब ने कहा, “वे उठें।”
ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು.
15 १५ तब वे उठे, और बिन्यामीन, अर्थात् शाऊल के पुत्र ईशबोशेत के पक्ष के लिये बारह जन गिनकर निकले, और दाऊद के जनों में से भी बारह निकले।
ಆದ್ದರಿಂದ ಸೌಲನ ಮಗ ಈಷ್ಬೋಶೆತನ ಕಡೆಯವನಾದ ಬೆನ್ಯಾಮೀನ್ಯರಲ್ಲಿ ಹನ್ನೆರಡು ಮಂದಿಯೂ, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟುಬಂದು,
16 १६ और उन्होंने एक दूसरे का सिर पकड़कर अपनी-अपनी तलवार एक दूसरे के पाँजर में भोंक दी; और वे एक ही संग मरे। इससे उस स्थान का नाम हेल्कथस्सूरीम पड़ा, वह गिबोन में है।
ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.
17 १७ उस दिन बड़ा घोर युद्ध हुआ; और अब्नेर और इस्राएल के पुरुष दाऊद के जनों से हार गए।
ಇದಲ್ಲದೆ, ಆ ದಿನದಲ್ಲಿ ಘೋರವಾದ ಯುದ್ಧವಾಯಿತು. ಅಬ್ನೇರನೂ, ಇಸ್ರಾಯೇಲರೂ ದಾವೀದನ ಸೇವಕರಿಂದ ಸೋತುಹೋದರು.
18 १८ वहाँ योआब, अबीशै, और असाहेल नामक सरूयाह के तीनों पुत्र थे। असाहेल जंगली हिरन के समान वेग से दौड़नेवाला था।
ಚೆರೂಯಳ ಮೂವರು ಮಕ್ಕಳಾದ ಯೋವಾಬನೂ, ಅಬೀಷೈಯನೂ, ಅಸಾಯೇಲನೂ ಅಲ್ಲಿ ಇದ್ದರು. ಅಸಾಯೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
19 १९ तब असाहेल अब्नेर का पीछा करने लगा, और उसका पीछा करते हुए न तो दाहिनी ओर मुड़ा न बाईं ओर।
ಅಸಾಯೇಲನು ಅಬ್ನೇರನನ್ನು ಬಲಗಡೆಗಾದರೂ, ಎಡಗಡೆಗಾದರೂ ತಿರುಗದೆ ಬೆನ್ನಟ್ಟಿದನು.
20 २० अब्नेर ने पीछे फिरके पूछा, “क्या तू असाहेल है?” उसने कहा, “हाँ मैं वही हूँ।”
ಆಗ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿ, “ನೀನು ಅಸಾಯೇಲನು ಅಲ್ಲವೇ?” ಎಂದನು. ಅದಕ್ಕವನು, “ನಾನೇ,” ಎಂದನು.
21 २१ अब्नेर ने उससे कहा, “चाहे दाहिनी, चाहे बाईं ओर मुड़, किसी जवान को पकड़कर उसका कवच ले ले।” परन्तु असाहेल ने उसका पीछा न छोड़ा।
ಆಗ ಅಬ್ನೇರನು ಅವನಿಗೆ, “ನೀನು ಬಲಗಡೆಗಾದರೂ, ಎಡಗಡೆಗಾದರೂ ತಿರುಗು. ಯುವಕರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತೆಗೆದುಕೋ,” ಎಂದನು. ಆದರೆ ಅಸಾಯೇಲನು ಅವನನ್ನು ಹಿಂಬಾಲಿಸುವುದನ್ನು ಬಿಡಲೇ ಇಲ್ಲ.
22 २२ अब्नेर ने असाहेल से फिर कहा, “मेरा पीछा छोड़ दे; मुझ को क्यों तुझे मारकर मिट्टी में मिला देना पड़े? ऐसा करके मैं तेरे भाई योआब को अपना मुख कैसे दिखाऊँगा?”
ಅಬ್ನೇರನು ಅಸಾಯೇಲನಿಗೆ, “ನನ್ನನ್ನು ಬೆನ್ನಟ್ಟುವುದನ್ನು ಬಿಟ್ಟುಬಿಡು, ನಾನು ಏಕೆ ನಿನ್ನನ್ನು ನೆಲಕ್ಕೆ ಹೊಡೆದು ಕೆಡವಿಬಿಡಬೇಕು? ನಾನು ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ?” ಎಂದನು.
23 २३ तो भी उसने हट जाने को मना किया; तब अब्नेर ने अपने भाले की पिछाड़ी उसके पेट में ऐसे मारी, कि भाला आर-पार होकर पीछे निकला; और वह वहीं गिरकर मर गया। जितने लोग उस स्थान पर आए जहाँ असाहेल गिरकर मर गया, वहाँ वे सब खड़े रहे।
ಆದರೆ ಅಸಾಯೇಲನು ಒಪ್ಪದೆ ಹೋದದ್ದರಿಂದ, ಅಬ್ನೇರನು ತನ್ನ ಭರ್ಜಿಯ ಹಿಂಭಾಗದ ಮೊನೆಯಿಂದ ಅವನ ಹೊಟ್ಟೆಯೊಳಗೆ ತಿವಿಯಲು, ಅದು ಅವನ ಬೆನ್ನ ಹೊರಗೆ ತೂರಿ ಬಂತು. ಅವನು ಅಲ್ಲಿ ಬಿದ್ದು, ಅದೇ ಸ್ಥಳದಲ್ಲಿ ಸತ್ತನು. ಅಸಾಯೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
24 २४ परन्तु योआब और अबीशै अब्नेर का पीछा करते रहे; और सूर्य डूबते-डूबते वे अम्माह नामक उस पहाड़ी तक पहुँचे, जो गिबोन के जंगल के मार्ग में गीह के सामने है।
ಆದರೆ ಯೋವಾಬನೂ, ಅಬೀಷೈಯನೂ ಅಬ್ನೇರನನ್ನು ಹಿಂದಟ್ಟಿ, ಸೂರ್ಯ ಆಸ್ತಮಿಸುವವರೆಗೆ ಗಿಬ್ಯೋನಿನ ಮರುಭೂಮಿಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದವರೆಗೆ ಬಂದರು.
25 २५ और बिन्यामीनी अब्नेर के पीछे होकर एक दल हो गए, और एक पहाड़ी की चोटी पर खड़े हुए।
ಆಗ ಅಬ್ನೇರನ ಹಿಂದೆ ಬೆನ್ಯಾಮೀನನ ಜನರು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು, ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.
26 २६ तब अब्नेर योआब को पुकारके कहने लगा, “क्या तलवार सदा मारती रहे? क्या तू नहीं जानता कि इसका फल दुःखदाई होगा? तू कब तक अपने लोगों को आज्ञा न देगा, कि अपने भाइयों का पीछा छोड़कर लौटो?”
ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು.
27 २७ योआब ने कहा, “परमेश्वर के जीवन की शपथ, कि यदि तू न बोला होता, तो निःसन्देह लोग सवेरे ही चले जाते, और अपने-अपने भाई का पीछा न करते।”
ಅದಕ್ಕೆ ಯೋವಾಬನು, “ದೇವರ ಜೀವದಾಣೆ, ನೀನು ಮಾತನಾಡದೆ ಹೋದರೆ, ನಿಶ್ಚಯವಾಗಿ ಪ್ರತಿ ಮನುಷ್ಯನು ಉದಯದವರೆಗೆ ತನ್ನ ಸಹೋದರನನ್ನು ಹಿಂದಟ್ಟಿ ಹೋಗುತ್ತಿದ್ದನು,” ಎಂದನು.
28 २८ तब योआब ने नरसिंगा फूँका; और सब लोग ठहर गए, और फिर इस्राएलियों का पीछा न किया, और लड़ाई फिर न की।
ಹೀಗೆ ಯೋವಾಬನು ತುತೂರಿಯನ್ನು ಊದಿದನು. ಆಗ ಸೈನಿಕರೆಲ್ಲರೂ ನಿಂತರು. ಇಸ್ರಾಯೇಲರನ್ನು ಪುನಃ ಹಿಂದಟ್ಟಲಿಲ್ಲ, ಯುದ್ಧವು ನಿಂತಿತು.
29 २९ अब्नेर अपने जनों समेत उसी दिन रातों-रात अराबा से होकर गया; और यरदन के पार हो समस्त बित्रोन देश में होकर महनैम में पहुँचा।
ಅಬ್ನೇರನೂ, ಅವನ ಜನರೂ ಆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ನಡೆದು, ಯೊರ್ದನನ್ನು ದಾಟಿ, ಬಿಥ್ರೋನ್ ಕಣಿವೆಯನ್ನು ಹಾದು ಮಹನಯಿಮಿಗೆ ಬಂದರು.
30 ३० योआब अब्नेर का पीछा छोड़कर लौटा; और जब उसने सब लोगों को इकट्ठा किया, तब क्या देखा, कि दाऊद के जनों में से उन्नीस पुरुष और असाहेल भी नहीं हैं।
ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ, ದಾವೀದನ ಸೇವಕರಲ್ಲಿ ಹತ್ತೊಂಬತ್ತು ಜನರೂ, ಅಸಾಯೇಲನೂ ಕಡಿಮೆಯಾಗಿದ್ದರು.
31 ३१ परन्तु दाऊद के जनों ने बिन्यामीनियों और अब्नेर के जनों को ऐसा मारा कि उनमें से तीन सौ साठ जन मर गए।
ದಾವೀದನ ಸೇವಕರು ಬೆನ್ಯಾಮೀನ್ಯರಲ್ಲಿಯೂ, ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.
32 ३२ और उन्होंने असाहेल को उठाकर उसके पिता के कब्रिस्तान में, जो बैतलहम में था, मिट्टी दी। तब योआब अपने जनों समेत रात भर चलकर पौ फटते-फटते हेब्रोन में पहुँचा।
ಅವರು ಅಸಾಯೇಲನನ್ನು ಎತ್ತಿಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.