< प्रेरितों के काम 25 >

1 फेस्तुस उस प्रान्त में पहुँचकर तीन दिन के बाद कैसरिया से यरूशलेम को गया।
ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
2 तब प्रधान याजकों ने, और यहूदियों के प्रमुख लोगों ने, उसके सामने पौलुस पर दोषारोपण की;
ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,
3 और उससे विनती करके उसके विरोध में यह चाहा कि वह उसे यरूशलेम में बुलवाए, क्योंकि वे उसे रास्ते ही में मार डालने की घात लगाए हुए थे।
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.
4 फेस्तुस ने उत्तर दिया, “पौलुस कैसरिया में कैदी है, और मैं स्वयं जल्द वहाँ जाऊँगा।”
ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.
5 फिर कहा, “तुम से जो अधिकार रखते हैं, वे साथ चलें, और यदि इस मनुष्य ने कुछ अनुचित काम किया है, तो उस पर दोष लगाएँ।”
ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.
6 उनके बीच कोई आठ दस दिन रहकर वह कैसरिया गया: और दूसरे दिन न्याय आसन पर बैठकर पौलुस को लाने की आज्ञा दी।
ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.
7 जब वह आया, तो जो यहूदी यरूशलेम से आए थे, उन्होंने आस-पास खड़े होकर उस पर बहुत से गम्भीर दोष लगाए, जिनका प्रमाण वे नहीं दे सकते थे।
ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,
8 परन्तु पौलुस ने उत्तर दिया, “मैंने न तो यहूदियों की व्यवस्था के और न मन्दिर के, और न कैसर के विरुद्ध कोई अपराध किया है।”
ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.
9 तब फेस्तुस ने यहूदियों को खुश करने की इच्छा से पौलुस को उत्तर दिया, “क्या तू चाहता है कि यरूशलेम को जाए; और वहाँ मेरे सामने तेरा यह मुकद्दमा तय किया जाए?”
ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;
10 १० पौलुस ने कहा, “मैं कैसर के न्याय आसन के सामने खड़ा हूँ; मेरे मुकद्दमे का यहीं फैसला होना चाहिए। जैसा तू अच्छी तरह जानता है, यहूदियों का मैंने कुछ अपराध नहीं किया।
೧೦“ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
11 ११ यदि अपराधी हूँ और मार डाले जाने योग्य कोई काम किया है, तो मरने से नहीं मुकरता; परन्तु जिन बातों का ये मुझ पर दोष लगाते हैं, यदि उनमें से कोई बात सच न ठहरे, तो कोई मुझे उनके हाथ नहीं सौंप सकता। मैं कैसर की दुहाई देता हूँ।”
೧೧ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.
12 १२ तब फेस्तुस ने मंत्रियों की सभा के साथ विचार करके उत्तर दिया, “तूने कैसर की दुहाई दी है, तो तू कैसर के पास ही जाएगा।”
೧೨ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.
13 १३ कुछ दिन बीतने के बाद अग्रिप्पा राजा और बिरनीके ने कैसरिया में आकर फेस्तुस से भेंट की।
೧೩ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.
14 १४ उनके बहुत दिन वहाँ रहने के बाद फेस्तुस ने पौलुस के विषय में राजा को बताया, “एक मनुष्य है, जिसे फेलिक्स बन्दी छोड़ गया है।
೧೪ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
15 १५ जब मैं यरूशलेम में था, तो प्रधान याजकों और यहूदियों के प्राचीनों ने उस पर दोषारोपण किया और चाहा, कि उस पर दण्ड की आज्ञा दी जाए।
೧೫ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.
16 १६ परन्तु मैंने उनको उत्तर दिया, कि रोमियों की यह रीति नहीं, कि किसी मनुष्य को दण्ड के लिये सौंप दें, जब तक आरोपी को अपने दोष लगाने वालों के सामने खड़े होकर दोष के उत्तर देने का अवसर न मिले।
೧೬“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.
17 १७ अतः जब वे यहाँ उपस्थित हुए, तो मैंने कुछ देर न की, परन्तु दूसरे ही दिन न्याय आसन पर बैठकर, उस मनुष्य को लाने की आज्ञा दी।
೧೭ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
18 १८ जब उसके मुद्दई खड़े हुए, तो उन्होंने ऐसी बुरी बातों का दोष नहीं लगाया, जैसा मैं समझता था।
೧೮ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,
19 १९ परन्तु अपने मत के, और यीशु नामक किसी मनुष्य के विषय में जो मर गया था, और पौलुस उसको जीवित बताता था, विवाद करते थे।
೧೯ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
20 २० और मैं उलझन में था, कि इन बातों का पता कैसे लगाऊँ? इसलिए मैंने उससे पूछा, ‘क्या तू यरूशलेम जाएगा, कि वहाँ इन बातों का फैसला हो?’
೨೦ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
21 २१ परन्तु जब पौलुस ने दुहाई दी, कि मेरे मुकद्दमे का फैसला महाराजाधिराज के यहाँ हो; तो मैंने आज्ञा दी, कि जब तक उसे कैसर के पास न भेजूँ, उसकी रखवाली की जाए।”
೨೧ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
22 २२ तब अग्रिप्पा ने फेस्तुस से कहा, “मैं भी उस मनुष्य की सुनना चाहता हूँ।” उसने कहा, “तू कल सुन लेगा।”
೨೨ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.
23 २३ अतः दूसरे दिन, जब अग्रिप्पा और बिरनीके बड़ी धूमधाम से आकर सैन्य-दल के सरदारों और नगर के प्रमुख लोगों के साथ दरबार में पहुँचे। तब फेस्तुस ने आज्ञा दी, कि वे पौलुस को ले आएँ।
೨೩ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
24 २४ फेस्तुस ने कहा, “हे महाराजा अग्रिप्पा, और हे सब मनुष्यों जो यहाँ हमारे साथ हो, तुम इस मनुष्य को देखते हो, जिसके विषय में सारे यहूदियों ने यरूशलेम में और यहाँ भी चिल्ला चिल्लाकर मुझसे विनती की, कि इसका जीवित रहना उचित नहीं।
೨೪ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.
25 २५ परन्तु मैंने जान लिया कि उसने ऐसा कुछ नहीं किया कि मार डाला जाए; और जबकि उसने आप ही महाराजाधिराज की दुहाई दी, तो मैंने उसे भेजने का निर्णय किया।
೨೫ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
26 २६ परन्तु मैंने उसके विषय में कोई ठीक बात नहीं पाई कि महाराजाधिराज को लिखूँ, इसलिए मैं उसे तुम्हारे सामने और विशेष करके हे राजा अग्रिप्पा तेरे सामने लाया हूँ, कि जाँचने के बाद मुझे कुछ लिखने को मिले।
೨೬ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
27 २७ क्योंकि बन्दी को भेजना और जो दोष उस पर लगाए गए, उन्हें न बताना, मुझे व्यर्थ समझ पड़ता है।”
೨೭ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.

< प्रेरितों के काम 25 >