< दानिय्येल 11 >
1 १ “दारा नामक मादी राजा के राज्य के पहले वर्ष में उसको हियाव दिलाने और बल देने के लिये मैं खड़ा हो गया।
೧ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.
2 २ “और अब मैं तुझको सच्ची बात बताता हूँ। देख, फारस के राज्य में अब तीन और राजा उठेंगे; और चौथा राजा उन सभी से अधिक धनी होगा; और जब वह धन के कारण सामर्थी होगा, तब सब लोगों को यूनान के राज्य के विरुद्ध उभारेगा।
೨ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.
3 ३ उसके बाद एक पराक्रमी राजा उठकर अपना राज्य बहुत बढ़ाएगा, और अपनी इच्छा के अनुसार ही काम किया करेगा।
೩ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.
4 ४ और जब वह बड़ा होगा, तब उसका राज्य टूटेगा और चारों दिशाओं में बटकर अलग-अलग हो जाएगा; और न तो उसके राज्य की शक्ति ज्यों की त्यों रहेगी और न उसके वंश को कुछ मिलेगा; क्योंकि उसका राज्य उखड़कर, उनकी अपेक्षा और लोगों को प्राप्त होगा।
೪ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.
5 ५ “तब दक्षिण देश का राजा बल पकड़ेगा; परन्तु उसका एक हाकिम उससे अधिक बल पकड़कर प्रभुता करेगा; यहाँ तक कि उसकी प्रभुता बड़ी हो जाएगी।
೫ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.
6 ६ कई वर्षों के बीतने पर, वे दोनों आपस में मिलेंगे, और दक्षिण देश के राजा की बेटी उत्तर देश के राजा के पास शान्ति की वाचा बाँधने को आएगी; परन्तु उसका बाहुबल बना न रहेगा, और न वह राजा और न उसका नाम रहेगा; परन्तु वह स्त्री अपने पहुँचानेवालों और अपने पिता और अपने सम्भालनेवालों समेत अलग कर दी जाएगी।
೬ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.
7 ७ “फिर उसकी जड़ों में से एक डाल उत्पन्न होकर उसके स्थान में बढ़ेगी; वह सेना समेत उत्तर के राजा के गढ़ में प्रवेश करेगा, और उनसे युद्ध करके प्रबल होगा।
೭ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.
8 ८ तब वह उसके देवताओं की ढली हुई मूरतों, और सोने-चाँदी के बहुमूल्य पात्रों को छीनकर मिस्र में ले जाएगा; इसके बाद वह कुछ वर्ष तक उत्तर देश के राजा के विरुद्ध हाथ रोके रहेगा।
೮ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.
9 ९ तब वह राजा दक्षिण देश के राजा के देश में आएगा, परन्तु फिर अपने देश में लौट जाएगा।
೯ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು.
10 १० “उसके पुत्र झगड़ा मचाकर बहुत से बड़े-बड़े दल इकट्ठे करेंगे, और उमड़नेवाली नदी के समान आकर देश के बीच होकर जाएँगे, फिर लौटते हुए उसके गढ़ तक झगड़ा मचाते जाएँगे।
೧೦ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.
11 ११ तब दक्षिण देश का राजा चिढ़ेगा, और निकलकर उत्तर देश के उस राजा से युद्ध करेगा, और वह राजा लड़ने के लिए बड़ी भीड़ इकट्ठी करेगा, परन्तु वह भीड़ उसके हाथ में कर दी जाएगी।
೧೧ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.
12 १२ उस भीड़ को जीतकर उसका मन फूल उठेगा, और वह लाखों लोगों को गिराएगा, परन्तु वह प्रबल न होगा।
೧೨ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.
13 १३ क्योंकि उत्तर देश का राजा लौटकर पहली से भी बड़ी भीड़ इकट्ठी करेगा; और कई दिनों वरन् वर्षों के बीतने पर वह निश्चय बड़ी सेना और सम्पत्ति लिए हुए आएगा।
೧೩ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು.
14 १४ “उन दिनों में बहुत से लोग दक्षिण देश के राजा के विरुद्ध उठेंगे; वरन् तेरे लोगों में से भी उपद्रवी लोग उठ खड़े होंगे, जिससे इस दर्शन की बात पूरी हो जाएगी; परन्तु वे ठोकर खाकर गिरेंगे।
೧೪ಆ ಕಾಲದಲ್ಲಿ ಅನೇಕರು ದಕ್ಷಿಣ ದಿಕ್ಕಿನ ರಾಜನಿಗೆ ಎದುರು ನಿಲ್ಲುವರು. ಇದಲ್ಲದೆ ನಿನ್ನ ಜನರಲ್ಲಿ ಹಿಂಸಕರು ಕನಸನ್ನು ನಿಜ ಮಾಡಬೇಕೆಂದು ದಂಗೆ ಏಳುವರು. ಆದರೆ ಬಿದ್ದುಹೋಗುವರು.
15 १५ तब उत्तर देश का राजा आकर किला बाँधेगा और दृढ़ नगर ले लेगा। और दक्षिण देश के न तो प्रधान खड़े रहेंगे और न बड़े वीर; क्योंकि किसी के खड़े रहने का बल न रहेगा।
೧೫ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.
16 १६ तब जो भी उनके विरुद्ध आएगा, वह अपनी इच्छा पूरी करेगा, और वह हाथ में सत्यानाश लिए हुए शिरोमणि देश में भी खड़ा होगा और उसका सामना करनेवाला कोई न रहेगा।
೧೬ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.
17 १७ तब उत्तर देश का राजा अपने राज्य के पूर्ण बल समेत, कई सीधे लोगों को संग लिए हुए आने लगेगा, और अपनी इच्छा के अनुसार काम किया करेगा। और वह दक्षिण देश के राजा को एक स्त्री इसलिए देगा कि उसका राज्य बिगाड़ा जाए; परन्तु वह स्थिर न रहेगी, न उस राजा की होगी।
೧೭ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.
18 १८ तब वह द्वीपों की ओर मुँह करके बहुतों को ले लेगा; परन्तु एक सेनापति उसके अहंकार को मिटाएगा; वरन् उसके अहंकार के अनुकूल उसे बदला देगा।
೧೮ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು.
19 १९ तब वह अपने देश के गढ़ों की ओर मुँह फेरेगा, और वह ठोकर खाकर गिरेगा, और कहीं उसका पता न रहेगा।
೧೯ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.
20 २० “तब उसके स्थान में कोई ऐसा उठेगा, जो शिरोमणि राज्य में अंधेर करनेवाले को घुमाएगा; परन्तु थोड़े दिन बीतने पर वह क्रोध या युद्ध किए बिना ही नाश हो जाएगा।
೨೦ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.
21 २१ “उसके स्थान में एक तुच्छ मनुष्य उठेगा, जिसकी राज प्रतिष्ठा पहले तो न होगी, तो भी वह चैन के समय आकर चिकनी-चुपड़ी बातों के द्वारा राज्य को प्राप्त करेगा।
೨೧“ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.
22 २२ तब उसकी भुजारूपी बाढ़ से लोग, वरन् वाचा का प्रधान भी उसके सामने से बहकर नाश होंगे।
೨೨ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.
23 २३ क्योंकि वह उसके संग वाचा बाँधने पर भी छल करेगा, और थोड़े ही लोगों को संग लिए हुए चढ़कर प्रबल होगा।
೨೩ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸ ಮಾಡುವನು; ಸ್ವಲ್ಪ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
24 २४ चैन के समय वह प्रान्त के उत्तम से उत्तम स्थानों पर चढ़ाई करेगा; और जो काम न उसके पूर्वज और न उसके पूर्वजों के पूर्वज करते थे, उसे वह करेगा; और लूटी हुई धन-सम्पत्ति उनमें बहुत बाँटा करेगा। वह कुछ काल तक दृढ़ नगरों के लेने की कल्पना करता रहेगा।
೨೪ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.
25 २५ तब वह दक्षिण देश के राजा के विरुद्ध बड़ी सेना लिए हुए अपने बल और हियाव को बढ़ाएगा, और दक्षिण देश का राजा अत्यन्त बड़ी सामर्थी सेना लिए हुए युद्ध तो करेगा, परन्तु ठहर न सकेगा, क्योंकि लोग उसके विरुद्ध कल्पना करेंगे।
೨೫ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.
26 २६ उसके भोजन के खानेवाले भी उसको हरवाएँगे; और यद्यपि उसकी सेना बाढ़ के समान चढ़ेंगी, तो भी उसके बहुत से लोग मर मिटेंगे।
೨೬ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.
27 २७ तब उन दोनों राजाओं के मन बुराई करने में लगेंगे, यहाँ तक कि वे एक ही मेज पर बैठे हुए आपस में झूठ बोलेंगे, परन्तु इससे कुछ बन न पड़ेगा; क्योंकि इन सब बातों का अन्त नियत ही समय में होनेवाला है।
೨೭ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.
28 २८ तब उत्तर देश का राजा बड़ी लूट लिए हुए अपने देश को लौटेगा, और उसका मन पवित्र वाचा के विरुद्ध उभरेगा, और वह अपनी इच्छा पूरी करके अपने देश को लौट जाएगा।
೨೮ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.
29 २९ “नियत समय पर वह फिर दक्षिण देश की ओर जाएगा, परन्तु उस पिछली बार के समान इस बार उसका वश न चलेगा।
೨೯ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.
30 ३० क्योंकि कित्तियों के जहाज उसके विरुद्ध आएँगे, और वह उदास होकर लौटेगा, और पवित्र वाचा पर चिढ़कर अपनी इच्छा पूरी करेगा। वह लौटकर पवित्र वाचा के तोड़नेवालों की सुधि लेगा।
೩೦ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.
31 ३१ तब उसके सहायक खड़े होकर, दृढ़ पवित्रस्थान को अपवित्र करेंगे, और नित्य होमबलि को बन्द करेंगे। और वे उस घृणित वस्तु को खड़ा करेंगे जो उजाड़ करा देती है।
೩೧ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.
32 ३२ और जो लोग दुष्ट होकर उस वाचा को तोड़ेंगे, उनको वह चिकनी-चुपड़ी बातें कह कहकर भक्तिहीन कर देगा; परन्तु जो लोग अपने परमेश्वर का ज्ञान रखेंगे, वे हियाव बाँधकर बड़े काम करेंगे।
೩೨ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.
33 ३३ और लोगों को सिखानेवाले बुद्धिमान जन बहुतों को समझाएँगे, तो भी वे बहुत दिन तक तलवार से छिदकर और आग में जलकर, और बँधुए होकर और लुटकर, बड़े दुःख में पड़े रहेंगे।
೩೩ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.
34 ३४ जब वे दुःख में पड़ेंगे तब थोड़ा बहुत सम्भलेंगे, परन्तु बहुत से लोग चिकनी-चुपड़ी बातें कह कहकर उनसे मिल जाएँगे;
೩೪ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.
35 ३५ और बुद्धिमानों में से कितने गिरेंगे, और इसलिए गिरने पाएँगे कि जाँचे जाएँ, और निर्मल और उजले किए जाएँ। यह दशा अन्त के समय तक बनी रहेगी, क्योंकि इन सब बातों का अन्त नियत समय में होनेवाला है।
೩೫ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.
36 ३६ “तब वह राजा अपनी इच्छा के अनुसार काम करेगा, और अपने आपको सारे देवताओं से ऊँचा और बड़ा ठहराएगा; वरन् सब देवताओं के परमेश्वर के विरुद्ध भी अनोखी बातें कहेगा। और जब तक परमेश्वर का क्रोध न हो जाए तब तक उस राजा का कार्य सफल होता रहेगा; क्योंकि जो कुछ निश्चय करके ठना हुआ है वह अवश्य ही पूरा होनेवाला है।
೩೬“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.
37 ३७ वह अपने पूर्वजों के देवताओं की चिन्ता न करेगा, न स्त्रियों की प्रीति की कुछ चिन्ता करेगा और न किसी देवता की; क्योंकि वह अपने आप ही को सभी के ऊपर बड़ा ठहराएगा।
೩೭ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.
38 ३८ वह अपने राजपद पर स्थिर रहकर दृढ़ गढ़ों ही के देवता का सम्मान करेगा, एक ऐसे देवता का जिसे उसके पूर्वज भी न जानते थे, वह सोना, चाँदी, मणि और मनभावनी वस्तुएँ चढ़ाकर उसका सम्मान करेगा।
೩೮ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.
39 ३९ उस पराए देवता के सहारे से वह अति दृढ़ गढ़ों से लड़ेगा, और जो कोई उसको माने उसे वह बड़ी प्रतिष्ठा देगा। ऐसे लोगों को वह बहुतों के ऊपर प्रभुता देगा, और अपने लाभ के लिए अपने देश की भूमि को बाँट देगा।
೩೯ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು.
40 ४० “अन्त के समय दक्षिण देश का राजा उसको सींग मारने लगेगा; परन्तु उत्तर देश का राजा उस पर बवण्डर के समान बहुत से रथ-सवार और जहाज लेकर चढ़ाई करेगा; इस रीति से वह बहुत से देशों में फैल जाएगा, और उनमें से निकल जाएगा।
೪೦“ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.
41 ४१ वह शिरोमणि देश में भी आएगा, और बहुत से देश उजड़ जाएँगे, परन्तु एदोमी, मोआबी और मुख्य-मुख्य अम्मोनी आदि जातियों के देश उसके हाथ से बच जाएँगे।
೪೧ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.
42 ४२ वह कई देशों पर हाथ बढ़ाएगा और मिस्र देश भी न बचेगा।
೪೨ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು.
43 ४३ वह मिस्र के सोने चाँदी के खजानों और सब मनभावनी वस्तुओं का स्वामी हो जाएगा; और लूबी और कूशी लोग भी उसके पीछे हो लेंगे।
೪೩ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.
44 ४४ उसी समय वह पूरब और उत्तर दिशाओं से समाचार सुनकर घबराएगा, और बड़े क्रोध में आकर बहुतों का सत्यानाश करने के लिये निकलेगा।
೪೪ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ಧ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು.
45 ४५ और वह दोनों समुद्रों के बीच पवित्र शिरोमणि पर्वत के पास अपना राजकीय तम्बू खड़ा कराएगा; इतना करने पर भी उसका अन्त आ जाएगा, और कोई उसका सहायक न रहेगा।
೪೫ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”