< दानिय्येल 3 >

1 नबूकदनेस्सर राजा ने सोने की एक मूरत बनवाई, जिसकी ऊँचाई साठ हाथ, और चौड़ाई छः हाथ की थी। और उसने उसको बाबेल के प्रान्त के दूरा नामक मैदान में खड़ा कराया।
ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
2 तब नबूकदनेस्सर राजा ने अधिपतियों, हाकिमों, राज्यपालों, सलाहकारों, खजांचियों, न्यायियों, शास्त्रियों, आदि प्रान्त-प्रान्त के सब अधिकारियों को बुलवा भेजा कि वे उस मूरत की प्रतिष्ठा में आएँ जो उसने खड़ी कराई थी।
ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.
3 तब अधिपति, हाकिम, राज्यपाल, सलाहकार, खजांची, न्यायी, शास्त्री आदि प्रान्त-प्रान्त के सब अधिकारी नबूकदनेस्सर राजा की खड़ी कराई हुई मूरत की प्रतिष्ठा के लिये इकट्ठे हुए, और उस मूरत के सामने खड़े हुए।
ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.
4 तब ढिंढोरिये ने ऊँचे शब्द से पुकारकर कहा, “हे देश-देश और जाति-जाति के लोगों, और भिन्न-भिन्न भाषा बोलनेवालो, तुम को यह आज्ञा सुनाई जाती है कि,
ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
5 जिस समय तुम नरसिंगे, बाँसुरी, वीणा, सारंगी, सितार, शहनाई आदि सब प्रकार के बाजों का शब्द सुनो, तुम उसी समय गिरकर नबूकदनेस्सर राजा की खड़ी कराई हुई सोने की मूरत को दण्डवत् करो।
ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
6 और जो कोई गिरकर दण्डवत् न करेगा वह उसी घड़ी धधकते हुए भट्ठे के बीच में डाल दिया जाएगा।”
ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
7 इस कारण उस समय ज्यों ही सब जाति के लोगों को नरसिंगे, बाँसुरी, वीणा, सारंगी, सितार शहनाई आदि सब प्रकार के बाजों का शब्द सुन पड़ा, त्यों ही देश-देश और जाति-जाति के लोगों और भिन्न-भिन्न भाषा बोलनेवालों ने गिरकर उस सोने की मूरत को जो नबूकदनेस्सर राजा ने खड़ी कराई थी, दण्डवत् किया।
ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
8 उसी समय कई एक कसदी पुरुष राजा के पास गए, और कपट से यहूदियों की चुगली की।
ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
9 वे नबूकदनेस्सर राजा से कहने लगे, “हे राजा, तू चिरंजीवी रहे।
ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!
10 १० हे राजा, तूने तो यह आज्ञा दी है कि जो मनुष्य नरसिंगे, बाँसुरी, वीणा, सारंगी, सितार, शहनाई आदि सब प्रकार के बाजों का शब्द सुने, वह गिरकर उस सोने की मूरत को दण्डवत् करे;
೧೦ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.
11 ११ और जो कोई गिरकर दण्डवत् न करे वह धधकते हुए भट्ठे के बीच में डाल दिया जाए।
೧೧“ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
12 १२ देख, शद्रक, मेशक, और अबेदनगो नामक कुछ यहूदी पुरुष हैं, जिन्हें तूने बाबेल के प्रान्त के कार्य के ऊपर नियुक्त किया है। उन पुरुषों ने, हे राजा, तेरी आज्ञा की कुछ चिन्ता नहीं की; वे तेरे देवता की उपासना नहीं करते, और जो सोने की मूरत तूने खड़ी कराई है, उसको दण्डवत् नहीं करते।”
೧೨ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
13 १३ तब नबूकदनेस्सर ने रोष और जलजलाहट में आकर आज्ञा दी कि शद्रक, मेशक और अबेदनगो को लाओ। तब वे पुरुष राजा के सामने हाजिर किए गए।
೧೩ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
14 १४ नबूकदनेस्सर ने उनसे पूछा, “हे शद्रक, मेशक और अबेदनगो, तुम लोग जो मेरे देवता की उपासना नहीं करते, और मेरी खड़ी कराई हुई सोने की मूरत को दण्डवत् नहीं करते, तो क्या तुम जान बूझकर ऐसा करते हो?
೧೪ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?
15 १५ यदि तुम अभी तैयार हो, कि जब नरसिंगे, बाँसुरी, वीणा, सारंगी, सितार, शहनाई आदि सब प्रकार के बाजों का शब्द सुनो, और उसी क्षण गिरकर मेरी बनवाई हुई मूरत को दण्डवत् करो, तो बचोगे; और यदि तुम दण्डवत् न करो तो इसी घड़ी धधकते हुए भट्ठे के बीच में डाले जाओगे; फिर ऐसा कौन देवता है, जो तुम को मेरे हाथ से छुड़ा सके?”
೧೫“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
16 १६ शद्रक, मेशक और अबेदनगो ने राजा से कहा, “हे नबूकदनेस्सर, इस विषय में तुझे उत्तर देने का हमें कुछ प्रयोजन नहीं जान पड़ता।
೧೬ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
17 १७ हमारा परमेश्वर, जिसकी हम उपासना करते हैं वह हमको उस धधकते हुए भट्ठे की आग से बचाने की शक्ति रखता है; वरन् हे राजा, वह हमें तेरे हाथ से भी छुड़ा सकता है।
೧೭‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
18 १८ परन्तु, यदि नहीं, तो हे राजा तुझे मालूम हो, कि हम लोग तेरे देवता की उपासना नहीं करेंगे, और न तेरी खड़ी कराई हुई सोने की मूरत को दण्डवत् करेंगे।”
೧೮ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.
19 १९ तब नबूकदनेस्सर झुँझला उठा, और उसके चेहरे का रंग शद्रक, मेशक और अबेदनगो की ओर बदल गया। और उसने आज्ञा दी कि भट्ठे को सात गुणा अधिक धधका दो।
೧೯ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
20 २० फिर अपनी सेना में के कई एक बलवान पुरुषों को उसने आज्ञा दी, कि शद्रक, मेशक और अबेदनगो को बाँधकर उन्हें धधकते हुए भट्ठे में डाल दो।
೨೦ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
21 २१ तब वे पुरुष अपने मोजों, अंगरखों, बागों और वस्त्रों सहित बाँधकर, उस धधकते हुए भट्ठे में डाल दिए गए।
೨೧ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
22 २२ वह भट्ठा तो राजा की दृढ़ आज्ञा होने के कारण अत्यन्त धधकाया गया था, इस कारण जिन पुरुषों ने शद्रक, मेशक और अबेदनगो को उठाया वे ही आग की आँच से जल मरे।
೨೨ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
23 २३ और उसी धधकते हुए भट्ठे के बीच ये तीनों पुरुष, शद्रक, मेशक और अबेदनगो, बंधे हुए फेंक दिए गए।
೨೩ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
24 २४ तब नबूकदनेस्सर राजा अचम्भित हुआ और घबराकर उठ खड़ा हुआ। और अपने मंत्रियों से पूछने लगा, “क्या हमने उस आग के बीच तीन ही पुरुष बंधे हुए नहीं डलवाए?” उन्होंने राजा को उत्तर दिया, “हाँ राजा, सच बात तो है।”
೨೪ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.
25 २५ फिर उसने कहा, “अब मैं देखता हूँ कि चार पुरुष आग के बीच खुले हुए टहल रहे हैं, और उनको कुछ भी हानि नहीं पहुँची; और चौथे पुरुष का स्वरूप परमेश्वर के पुत्र के सदृश्य है।”
೨೫ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
26 २६ फिर नबूकदनेस्सर उस धधकते हुए भट्ठे के द्वार के पास जाकर कहने लगा, “हे शद्रक, मेशक और अबेदनगो, हे परमप्रधान परमेश्वर के दासों, निकलकर यहाँ आओ!” यह सुनकर शद्रक, मेशक और अबेदनगो आग के बीच से निकल आए।
೨೬ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
27 २७ जब अधिपति, हाकिम, राज्यपाल और राजा के मंत्रियों ने, जो इकट्ठे हुए थे, उन पुरुषों की ओर देखा, तब उनकी देह में आग का कुछ भी प्रभाव नहीं पाया; और उनके सिर का एक बाल भी न झुलसा, न उनके मोजे कुछ बिगड़े, न उनमें जलने की कुछ गन्ध पाई गई।
೨೭ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
28 २८ नबूकदनेस्सर कहने लगा, “धन्य है शद्रक, मेशक और अबेदनगो का परमेश्वर, जिसने अपना दूत भेजकर अपने इन दासों को इसलिए बचाया, क्योंकि इन्होंने राजा की आज्ञा न मानकर, उसी पर भरोसा रखा, और यह सोचकर अपना शरीर भी अर्पण किया, कि हम अपने परमेश्वर को छोड़, किसी देवता की उपासना या दण्डवत् न करेंगे।
೨೮ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
29 २९ इसलिए अब मैं यह आज्ञा देता हूँ कि देश-देश और जाति-जाति के लोगों, और भिन्न-भिन्न भाषा बोलनेवालों में से जो कोई शद्रक, मेशक और अबेदनगो के परमेश्वर की कुछ निन्दा करेगा, वह टुकड़े-टुकड़े किया जाएगा, और उसका घर घूरा बनाया जाएगा; क्योंकि ऐसा कोई और देवता नहीं जो इस रीति से बचा सके।”
೨೯ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
30 ३० तब राजा ने बाबेल के प्रान्त में शद्रक, मेशक, अबेदनगो का पद और ऊँचा किया।
೩೦ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.

< दानिय्येल 3 >