< दानिय्येल 5 >
1 १ बेलशस्सर नामक राजा ने अपने हजार प्रधानों के लिये बड़ी दावत की, और उन हजार लोगों के सामने दाखमधु पिया।
೧ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
2 २ दाखमधु पीते-पीते बेलशस्सर ने आज्ञा दी, कि सोने-चाँदी के जो पात्र मेरे पिता नबूकदनेस्सर ने यरूशलेम के मन्दिर में से निकाले थे, उन्हें ले आओ कि राजा अपने प्रधानों, और रानियों और रखैलों समेत उनमें से पीए।
೨ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.
3 ३ तब जो सोने के पात्र यरूशलेम में परमेश्वर के भवन के मन्दिर में से निकाले गए थे, वे लाए गए; और राजा अपने प्रधानों, और रानियों, और रखैलों समेत उनमें से पीने लगा।
೩ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
4 ४ वे दाखमधु पी पीकर सोने, चाँदी, पीतल, लोहे, काठ और पत्थर के देवताओं की स्तुति कर ही रहे थे,
೪ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.
5 ५ कि उसी घड़ी मनुष्य के हाथ की सी कई उँगलियाँ निकलकर दीवट के सामने राजभवन की दीवार के चूने पर कुछ लिखने लगीं; और हाथ का जो भाग लिख रहा था वह राजा को दिखाई पड़ा।
೫ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.
6 ६ उसे देखकर राजा भयभीत हो गया, और वह मन ही मन घबरा गया, और उसकी कमर के जोड़ ढीले हो गए, और काँपते-काँपते उसके घुटने एक दूसरे से लगने लगे।
೬ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
7 ७ तब राजा ने ऊँचे शब्द से पुकारकर तंत्रियों, कसदियों और अन्य भावी बतानेवालों को हाजिर करवाने की आज्ञा दी। जब बाबेल के पंडित पास आए, तब उनसे कहने लगा, “जो कोई वह लिखा हुआ पढ़कर उसका अर्थ मुझे समझाए उसे बैंगनी रंग का वस्त्र और उसके गले में सोने की कण्ठमाला पहनाई जाएगी; और मेरे राज्य में तीसरा वही प्रभुता करेगा।”
೭ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
8 ८ तब राजा के सब पंडित लोग भीतर आए, परन्तु उस लिखे हुए को न पढ़ सके और न राजा को उसका अर्थ समझा सके।
೮ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.
9 ९ इस पर बेलशस्सर राजा बहुत घबरा गया और भयातुर हो गया; और उसके प्रधान भी बहुत व्याकुल हुए।
೯ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು.
10 १० राजा और प्रधानों के वचनों को सुनकर, रानी दावत के घर में आई और कहने लगी, “हे राजा, तू युग-युग जीवित रहे, अपने मन में न घबरा और न उदास हो।
೧೦ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!
11 ११ तेरे राज्य में दानिय्येल नामक एक पुरुष है जिसका नाम तेरे पिता ने बेलतशस्सर रखा था, उसमें पवित्र ईश्वरों की आत्मा रहती है, और उस राजा के दिनों में उसमें प्रकाश, प्रवीणता और ईश्वरों के तुल्य बुद्धि पाई गई। और हे नबूकदनेस्सर राजा, तेरा पिता जो राजा था, उसने उसको सब ज्योतिषियों, तंत्रियों, कसदियों और अन्य भावी बतानेवालों का प्रधान ठहराया था,
೧೧“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.
12 १२ क्योंकि उसमें उत्तम आत्मा, ज्ञान और प्रवीणता, और स्वप्नों का अर्थ बताने और पहेलियाँ खोलने, और सन्देह दूर करने की शक्ति पाई गई। इसलिए अब दानिय्येल बुलाया जाए, और वह इसका अर्थ बताएगा।”
೧೨ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
13 १३ तब दानिय्येल राजा के सामने भीतर बुलाया गया। राजा दानिय्येल से पूछने लगा, “क्या तू वही दानिय्येल है जो मेरे पिता नबूकदनेस्सर राजा के यहूदा देश से लाए हुए यहूदी बंधुओं में से है?
೧೩ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?
14 १४ मैंने तेरे विषय में सुना है कि देवताओं की आत्मा तुझ में रहती है; और प्रकाश, प्रवीणता और उत्तम बुद्धि तुझ में पाई जाती है।
೧೪ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.
15 १५ देख, अभी पंडित और तांत्रिक लोग मेरे सामने इसलिए लाए गए थे कि यह लिखा हुआ पढ़ें और इसका अर्थ मुझे बताएँ, परन्तु वे उस बात का अर्थ न समझा सके।
೧೫“ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.
16 १६ परन्तु मैंने तेरे विषय में सुना है कि दानिय्येल भेद खोल सकता और सन्देह दूर कर सकता है। इसलिए अब यदि तू उस लिखे हुए को पढ़ सके और उसका अर्थ भी मुझे समझा सके, तो तुझे बैंगनी रंग का वस्त्र, और तेरे गले में सोने की कण्ठमाला पहनाई जाएगी, और राज्य में तीसरा तू ही प्रभुता करेगा।”
೧೬ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
17 १७ दानिय्येल ने राजा से कहा, “अपने दान अपने ही पास रख; और जो बदला तू देना चाहता है, वह दूसरे को दे; वह लिखी हुई बात मैं राजा को पढ़ सुनाऊँगा, और उसका अर्थ भी तुझे समझाऊँगा।
೧೭ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.
18 १८ हे राजा, परमप्रधान परमेश्वर ने तेरे पिता नबूकदनेस्सर को राज्य, बड़ाई, प्रतिष्ठा और प्रताप दिया था;
೧೮ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
19 १९ और उस बड़ाई के कारण जो उसने उसको दी थी, देश-देश और जाति-जाति के सब लोग, और भिन्न-भिन्न भाषा बोलनेवाले उसके सामने काँपते और थरथराते थे, जिसे वह चाहता उसे वह घात करता था, और जिसको वह चाहता उसे वह जीवित रखता था जिसे वह चाहता उसे वह ऊँचा पद देता था, और जिसको वह चाहता उसे वह गिरा देता था।
೧೯ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.
20 २० परन्तु जब उसका मन फूल उठा, और उसकी आत्मा कठोर हो गई, यहाँ तक कि वह अभिमान करने लगा, तब वह अपने राजसिंहासन पर से उतारा गया, और उसकी प्रतिष्ठा भंग की गई;
೨೦“ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.
21 २१ वह मनुष्यों में से निकाला गया, और उसका मन पशुओं का सा, और उसका निवास जंगली गदहों के बीच हो गया; वह बैलों के समान घास चरता, और उसका शरीर आकाश की ओस से भीगा करता था, जब तक कि उसने जान न लिया कि परमप्रधान परमेश्वर मनुष्यों के राज्य में प्रभुता करता है और जिसे चाहता उसी को उस पर अधिकारी ठहराता है।
೨೧ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
22 २२ तो भी, हे बेलशस्सर, तू जो उसका पुत्र है, और यह सब कुछ जानता था, तो भी तेरा मन नम्र न हुआ।
೨೨“ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.
23 २३ वरन् तूने स्वर्ग के प्रभु के विरुद्ध सिर उठाकर उसके भवन के पात्र मँगवाकर अपने सामने रखवा लिए, और अपने प्रधानों और रानियों और रखैलों समेत तूने उनमें दाखमधु पिया; और चाँदी-सोने, पीतल, लोहे, काठ और पत्थर के देवता, जो न देखते न सुनते, न कुछ जानते हैं, उनकी तो स्तुति की, परन्तु परमेश्वर, जिसके हाथ में तेरा प्राण है, और जिसके वश में तेरा सब चलना फिरना है, उसका सम्मान तूने नहीं किया।
೨೩ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.
24 २४ “तब ही यह हाथ का एक भाग उसी की ओर से प्रगट किया गया है और वे शब्द लिखे गए हैं।
೨೪ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು.
25 २५ और जो शब्द लिखे गए वे ये हैं, मने, मने, तकेल, ऊपर्सीन।
೨೫“ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’
26 २६ इस वाक्य का अर्थ यह है, मने, अर्थात् परमेश्वर ने तेरे राज्य के दिन गिनकर उसका अन्त कर दिया है।
೨೬ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.
27 २७ तकेल, तू मानो तराजू में तौला गया और हलका पाया गया है।
೨೭ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ.
28 २८ परेस, अर्थात् तेरा राज्य बाँटकर मादियों और फारसियों को दिया गया है।”
೨೮ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.
29 २९ तब बेलशस्सर ने आज्ञा दी, और दानिय्येल को बैंगनी रंग का वस्त्र और उसके गले में सोने की कण्ठमाला पहनाई गई; और ढिंढोरिये ने उसके विषय में पुकारा, कि राज्य में तीसरा दानिय्येल ही प्रभुता करेगा।
೨೯ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
30 ३० उसी रात कसदियों का राजा बेलशस्सर मार डाला गया।
೩೦ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.
31 ३१ और दारा मादी जो कोई बासठ वर्ष का था राजगद्दी पर विराजमान हुआ।
೩೧ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.