< दानिय्येल 5 >

1 बेलशस्सर नामक राजा ने अपने हजार प्रधानों के लिये बड़ी दावत की, और उन हजार लोगों के सामने दाखमधु पिया।
ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.
2 दाखमधु पीते-पीते बेलशस्सर ने आज्ञा दी, कि सोने-चाँदी के जो पात्र मेरे पिता नबूकदनेस्सर ने यरूशलेम के मन्दिर में से निकाले थे, उन्हें ले आओ कि राजा अपने प्रधानों, और रानियों और रखैलों समेत उनमें से पीए।
ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.
3 तब जो सोने के पात्र यरूशलेम में परमेश्वर के भवन के मन्दिर में से निकाले गए थे, वे लाए गए; और राजा अपने प्रधानों, और रानियों, और रखैलों समेत उनमें से पीने लगा।
ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
4 वे दाखमधु पी पीकर सोने, चाँदी, पीतल, लोहे, काठ और पत्थर के देवताओं की स्तुति कर ही रहे थे,
ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.
5 कि उसी घड़ी मनुष्य के हाथ की सी कई उँगलियाँ निकलकर दीवट के सामने राजभवन की दीवार के चूने पर कुछ लिखने लगीं; और हाथ का जो भाग लिख रहा था वह राजा को दिखाई पड़ा।
ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
6 उसे देखकर राजा भयभीत हो गया, और वह मन ही मन घबरा गया, और उसकी कमर के जोड़ ढीले हो गए, और काँपते-काँपते उसके घुटने एक दूसरे से लगने लगे।
ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
7 तब राजा ने ऊँचे शब्द से पुकारकर तंत्रियों, कसदियों और अन्य भावी बतानेवालों को हाजिर करवाने की आज्ञा दी। जब बाबेल के पंडित पास आए, तब उनसे कहने लगा, “जो कोई वह लिखा हुआ पढ़कर उसका अर्थ मुझे समझाए उसे बैंगनी रंग का वस्त्र और उसके गले में सोने की कण्ठमाला पहनाई जाएगी; और मेरे राज्य में तीसरा वही प्रभुता करेगा।”
ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.
8 तब राजा के सब पंडित लोग भीतर आए, परन्तु उस लिखे हुए को न पढ़ सके और न राजा को उसका अर्थ समझा सके।
ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.
9 इस पर बेलशस्सर राजा बहुत घबरा गया और भयातुर हो गया; और उसके प्रधान भी बहुत व्याकुल हुए।
ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು.
10 १० राजा और प्रधानों के वचनों को सुनकर, रानी दावत के घर में आई और कहने लगी, “हे राजा, तू युग-युग जीवित रहे, अपने मन में न घबरा और न उदास हो।
ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!
11 ११ तेरे राज्य में दानिय्येल नामक एक पुरुष है जिसका नाम तेरे पिता ने बेलतशस्सर रखा था, उसमें पवित्र ईश्वरों की आत्मा रहती है, और उस राजा के दिनों में उसमें प्रकाश, प्रवीणता और ईश्वरों के तुल्य बुद्धि पाई गई। और हे नबूकदनेस्सर राजा, तेरा पिता जो राजा था, उसने उसको सब ज्योतिषियों, तंत्रियों, कसदियों और अन्य भावी बतानेवालों का प्रधान ठहराया था,
ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.
12 १२ क्योंकि उसमें उत्तम आत्मा, ज्ञान और प्रवीणता, और स्वप्नों का अर्थ बताने और पहेलियाँ खोलने, और सन्देह दूर करने की शक्ति पाई गई। इसलिए अब दानिय्येल बुलाया जाए, और वह इसका अर्थ बताएगा।”
ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.
13 १३ तब दानिय्येल राजा के सामने भीतर बुलाया गया। राजा दानिय्येल से पूछने लगा, “क्या तू वही दानिय्येल है जो मेरे पिता नबूकदनेस्सर राजा के यहूदा देश से लाए हुए यहूदी बंधुओं में से है?
ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
14 १४ मैंने तेरे विषय में सुना है कि देवताओं की आत्मा तुझ में रहती है; और प्रकाश, प्रवीणता और उत्तम बुद्धि तुझ में पाई जाती है।
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
15 १५ देख, अभी पंडित और तांत्रिक लोग मेरे सामने इसलिए लाए गए थे कि यह लिखा हुआ पढ़ें और इसका अर्थ मुझे बताएँ, परन्तु वे उस बात का अर्थ न समझा सके।
ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
16 १६ परन्तु मैंने तेरे विषय में सुना है कि दानिय्येल भेद खोल सकता और सन्देह दूर कर सकता है। इसलिए अब यदि तू उस लिखे हुए को पढ़ सके और उसका अर्थ भी मुझे समझा सके, तो तुझे बैंगनी रंग का वस्त्र, और तेरे गले में सोने की कण्ठमाला पहनाई जाएगी, और राज्य में तीसरा तू ही प्रभुता करेगा।”
ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.
17 १७ दानिय्येल ने राजा से कहा, “अपने दान अपने ही पास रख; और जो बदला तू देना चाहता है, वह दूसरे को दे; वह लिखी हुई बात मैं राजा को पढ़ सुनाऊँगा, और उसका अर्थ भी तुझे समझाऊँगा।
ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.
18 १८ हे राजा, परमप्रधान परमेश्वर ने तेरे पिता नबूकदनेस्सर को राज्य, बड़ाई, प्रतिष्ठा और प्रताप दिया था;
“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.
19 १९ और उस बड़ाई के कारण जो उसने उसको दी थी, देश-देश और जाति-जाति के सब लोग, और भिन्न-भिन्न भाषा बोलनेवाले उसके सामने काँपते और थरथराते थे, जिसे वह चाहता उसे वह घात करता था, और जिसको वह चाहता उसे वह जीवित रखता था जिसे वह चाहता उसे वह ऊँचा पद देता था, और जिसको वह चाहता उसे वह गिरा देता था।
ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.
20 २० परन्तु जब उसका मन फूल उठा, और उसकी आत्मा कठोर हो गई, यहाँ तक कि वह अभिमान करने लगा, तब वह अपने राजसिंहासन पर से उतारा गया, और उसकी प्रतिष्ठा भंग की गई;
ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.
21 २१ वह मनुष्यों में से निकाला गया, और उसका मन पशुओं का सा, और उसका निवास जंगली गदहों के बीच हो गया; वह बैलों के समान घास चरता, और उसका शरीर आकाश की ओस से भीगा करता था, जब तक कि उसने जान न लिया कि परमप्रधान परमेश्वर मनुष्यों के राज्य में प्रभुता करता है और जिसे चाहता उसी को उस पर अधिकारी ठहराता है।
ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.
22 २२ तो भी, हे बेलशस्सर, तू जो उसका पुत्र है, और यह सब कुछ जानता था, तो भी तेरा मन नम्र न हुआ।
“ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ
23 २३ वरन् तूने स्वर्ग के प्रभु के विरुद्ध सिर उठाकर उसके भवन के पात्र मँगवाकर अपने सामने रखवा लिए, और अपने प्रधानों और रानियों और रखैलों समेत तूने उनमें दाखमधु पिया; और चाँदी-सोने, पीतल, लोहे, काठ और पत्थर के देवता, जो न देखते न सुनते, न कुछ जानते हैं, उनकी तो स्तुति की, परन्तु परमेश्वर, जिसके हाथ में तेरा प्राण है, और जिसके वश में तेरा सब चलना फिरना है, उसका सम्मान तूने नहीं किया।
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.
24 २४ “तब ही यह हाथ का एक भाग उसी की ओर से प्रगट किया गया है और वे शब्द लिखे गए हैं।
ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ.
25 २५ और जो शब्द लिखे गए वे ये हैं, मने, मने, तकेल, ऊपर्सीन।
“ಆ ಬರಹವು ಏನೆಂದರೆ: ಮೆನೇ ಮೆನೇ, ತೆಕೇಲ್, ಉಫರ್ಸಿನ್.
26 २६ इस वाक्य का अर्थ यह है, मने, अर्थात् परमेश्वर ने तेरे राज्य के दिन गिनकर उसका अन्त कर दिया है।
“ಇದರ ಅರ್ಥವು ಹೀಗಿದೆ: “ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.
27 २७ तकेल, तू मानो तराजू में तौला गया और हलका पाया गया है।
“ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.
28 २८ परेस, अर्थात् तेरा राज्य बाँटकर मादियों और फारसियों को दिया गया है।”
“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.
29 २९ तब बेलशस्सर ने आज्ञा दी, और दानिय्येल को बैंगनी रंग का वस्त्र और उसके गले में सोने की कण्ठमाला पहनाई गई; और ढिंढोरिये ने उसके विषय में पुकारा, कि राज्य में तीसरा दानिय्येल ही प्रभुता करेगा।
ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.
30 ३० उसी रात कसदियों का राजा बेलशस्सर मार डाला गया।
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.
31 ३१ और दारा मादी जो कोई बासठ वर्ष का था राजगद्दी पर विराजमान हुआ।
ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.

< दानिय्येल 5 >