< व्यवस्था विवरण 26 >
1 १ “फिर जब तू उस देश में जिसे तेरा परमेश्वर यहोवा तेरा निज भाग करके तुझे देता है पहुँचे, और उसका अधिकारी होकर उसमें बस जाए,
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.
2 २ तब जो देश तेरा परमेश्वर यहोवा तुझे देता है, उसकी भूमि की भाँति-भाँति की जो पहली उपज तू अपने घर लाएगा, उसमें से कुछ टोकरी में लेकर उस स्थान पर जाना, जिसे तेरा परमेश्वर यहोवा अपने नाम का निवास करने को चुन ले।
ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
3 ३ और उन दिनों के याजक के पास जाकर यह कहना, ‘मैं आज हमारे परमेश्वर यहोवा के सामने स्वीकार करता हूँ, कि यहोवा ने हम लोगों को जिस देश के देने की हमारे पूर्वजों से शपथ खाई थी उसमें मैं आ गया हूँ।’
ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ, “ಯೆಹೋವ ದೇವರು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನಾನು ಸೇರಿದ್ದಾಯಿತೆಂದು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಈಗ ನಾನು ಒಪ್ಪಿಕೊಳ್ಳುತ್ತೇನೆ,” ಎಂದು ಹೇಳಬೇಕು.
4 ४ तब याजक तेरे हाथ से वह टोकरी लेकर तेरे परमेश्वर यहोवा की वेदी के सामने रख दे।
ಆಗ ಯಾಜಕನು ಆ ಬುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದು, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮುಂದೆ ಇಡಬೇಕು.
5 ५ तब तू अपने परमेश्वर यहोवा से इस प्रकार कहना, ‘मेरा मूलपुरुष एक अरामी मनुष्य था जो मरने पर था; और वह अपने छोटे से परिवार समेत मिस्र को गया, और वहाँ परदेशी होकर रहा; और वहाँ उससे एक बड़ी, और सामर्थी, और बहुत मनुष्यों से भरी हुई जाति उत्पन्न हुई।
ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.
6 ६ और मिस्रियों ने हम लोगों से बुरा बर्ताव किया, और हमें दुःख दिया, और हम से कठिन सेवा ली।
ಆದರೆ ಈಜಿಪ್ಟಿನವರು ನಮ್ಮನ್ನು ಕ್ರೂರವಾಗಿ ನಡೆಸಿ, ನಮ್ಮ ಮೇಲೆ ದಬ್ಬಾಳಿಕೆ ಮಾಡಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.
7 ७ परन्तु हमने अपने पूर्वजों के परमेश्वर यहोवा की दुहाई दी, और यहोवा ने हमारी सुनकर हमारे दुःख-श्रम और अत्याचार पर दृष्टि की;
ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು.
8 ८ और यहोवा ने बलवन्त हाथ और बढ़ाई हुई भुजा से अति भयानक चिन्ह और चमत्कार दिखलाकर हमको मिस्र से निकाल लाया;
ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ,
9 ९ और हमें इस स्थान पर पहुँचाकर यह देश जिसमें दूध और मधु की धाराएँ बहती हैं हमें दे दिया है।
ನಮ್ಮನ್ನು ಈ ಸ್ಥಳಕ್ಕೆ ಕರೆತಂದು, ಹಾಲೂ ಜೇನೂ ಹರಿಯುವ ದೇಶವಾಗಿರುವ ಈ ದೇಶವನ್ನು ನಮಗೆ ಕೊಟ್ಟಿದ್ದಾರೆ.
10 १० अब हे यहोवा, देख, जो भूमि तूने मुझे दी है उसकी पहली उपज मैं तेरे पास ले आया हूँ।’ तब तू उसे अपने परमेश्वर यहोवा के सामने रखना; और यहोवा को दण्डवत् करना;
ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು.
11 ११ और जितने अच्छे पदार्थ तेरा परमेश्वर यहोवा तुझे और तेरे घराने को दे, उनके कारण तू लेवियों और अपने मध्य में रहनेवाले परदेशियों सहित आनन्द करना।
ನಿಮ್ಮ ದೇವರಾದ ಯೆಹೋವ ದೇವರು ನಿಮಗೂ ನಿಮ್ಮ ಮನೆಗೂ ಲೇವಿಯರಿಗೂ ನಿಮ್ಮ ಸಂಗಡ ಇರುವ ಪರವಾಸಿಗಳಿಗೂ ನೀಡಿರುವ ಸೌಲಭ್ಯಕ್ಕಾಗಿ ಸಂತೋಷ ಪಡಬೇಕು.
12 १२ “तीसरे वर्ष जो दशमांश देने का वर्ष ठहरा है, जब तू अपनी सब भाँति की बढ़ती के दशमांश को निकाल चुके, तब उसे लेवीय, परदेशी, अनाथ, और विधवा को देना, कि वे तेरे फाटकों के भीतर खाकर तृप्त हों;
ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.
13 १३ और तू अपने परमेश्वर यहोवा से कहना, ‘मैंने तेरी सब आज्ञाओं के अनुसार पवित्र ठहराई हुई वस्तुओं को अपने घर से निकाला, और लेवीय, परदेशी, अनाथ, और विधवा को दे दिया है; तेरी किसी आज्ञा को मैंने न तो टाला है, और न भूला है।
ಆಗ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, “ನಾವು ಮೀಸಲಿಟ್ಟ ಪರಿಶುದ್ಧ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದು, ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರಿಗೆ, ಪರದೇಶಿಗೆ, ತಂದೆತಾಯಿ ಇಲ್ಲದವರಿಗೆ, ವಿಧವೆಯರಿಗೆ ಕೊಟ್ಟಿದ್ದೇವೆ. ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.
14 १४ उन वस्तुओं में से मैंने शोक के समय नहीं खाया, और न उनमें से कोई वस्तु अशुद्धता की दशा में घर से निकाली, और न कुछ शोक करनेवालों को दिया; मैंने अपने परमेश्वर यहोवा की सुन ली, मैंने तेरी सब आज्ञाओं के अनुसार किया है।
ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.
15 १५ तू स्वर्ग में से जो तेरा पवित्र धाम है दृष्टि करके अपनी प्रजा इस्राएल को आशीष दे, और इस दूध और मधु की धाराओं के देश की भूमि पर आशीष दे, जिसे तूने हमारे पूर्वजों से खाई हुई शपथ के अनुसार हमें दिया है।’
ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.
16 १६ “आज के दिन तेरा परमेश्वर यहोवा तुझको इन्हीं विधियों और नियमों के मानने की आज्ञा देता है; इसलिए अपने सारे मन और सारे प्राण से इनके मानने में चौकसी करना।
ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
17 १७ तूने तो आज यहोवा को अपना परमेश्वर मानकर यह वचन दिया है, कि मैं तेरे बताए हुए मार्गों पर चलूँगा, और तेरी विधियों, आज्ञाओं, और नियमों को माना करूँगा, और तेरी सुना करूँगा।
ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ.
18 १८ और यहोवा ने भी आज तुझको अपने वचन के अनुसार अपना प्रजारूपी निज धन-सम्पत्ति माना है, कि तू उसकी सब आज्ञाओं को माना करे,
ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ.
19 १९ और कि वह अपनी बनाई हुई सब जातियों से अधिक प्रशंसा, नाम, और शोभा के विषय में तुझको प्रतिष्ठित करे, और तू उसके वचन के अनुसार अपने परमेश्वर यहोवा की पवित्र प्रजा बना रहे।”
ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.