< सभोपदेशक 10 >

1 मरी हुई मक्खियों के कारण गंधी का तेल सड़ने और दुर्गन्ध आने लगता है; और थोड़ी सी मूर्खता बुद्धि और प्रतिष्ठा को घटा देती है।
ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.
2 बुद्धिमान का मन उचित बात की ओर रहता है परन्तु मूर्ख का मन उसके विपरीत रहता है।
ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ, ಮೂರ್ಖನ ಹೃದಯವು ಎಡಗಡೆ ಸಾಗುವುದು.
3 वरन् जब मूर्ख मार्ग पर चलता है, तब उसकी समझ काम नहीं देती, और वह सबसे कहता है, ‘मैं मूर्ख हूँ।’
ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.
4 यदि हाकिम का क्रोध तुझ पर भड़के, तो अपना स्थान न छोड़ना, क्योंकि धीरज धरने से बड़े-बड़े पाप रुकते हैं।
ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.
5 एक बुराई है जो मैंने सूर्य के नीचे देखी, वह हाकिम की भूल से होती है:
ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.
6 अर्थात् मूर्ख बड़ी प्रतिष्ठा के स्थानों में ठहराए जाते हैं, और धनवान लोग नीचे बैठते हैं।
ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು.
7 मैंने दासों को घोड़ों पर चढ़े, और रईसों को दासों के समान भूमि पर चलते हुए देखा है।
ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ.
8 जो गड्ढा खोदे वह उसमें गिरेगा और जो बाड़ा तोड़े उसको सर्प डसेगा।
ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.
9 जो पत्थर फोड़े, वह उनसे घायल होगा, और जो लकड़ी काटे, उसे उसी से डर होगा।
ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು. ಮರಕಡಿಯುವವನು ಅದರಿಂದಲೇ ಅಪಾಯಕ್ಕೊಳಗಾಗುವನು.
10 १० यदि कुल्हाड़ा थोथा हो और मनुष्य उसकी धार को पैनी न करे, तो अधिक बल लगाना पड़ेगा; परन्तु सफल होने के लिये बुद्धि से लाभ होता है।
ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.
11 ११ यदि मंत्र से पहले सर्प डसे, तो मंत्र पढ़नेवाले को कुछ भी लाभ नहीं।
ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ?
12 १२ बुद्धिमान के वचनों के कारण अनुग्रह होता है, परन्तु मूर्ख अपने वचनों के द्वारा नाश होते हैं।
ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.
13 १३ उसकी बात का आरम्भ मूर्खता का, और उनका अन्त दुःखदाई बावलापन होता है।
ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.
14 १४ मूर्ख बहुत बातें बढ़ाकर बोलता है, तो भी कोई मनुष्य नहीं जानता कि क्या होगा, और कौन बता सकता है कि उसके बाद क्या होनेवाला है?
ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.
15 १५ मूर्ख को परिश्रम से थकावट ही होती है, यहाँ तक कि वह नहीं जानता कि नगर को कैसे जाए।
ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು.
16 १६ हे देश, तुझ पर हाय जब तेरा राजा लड़का है और तेरे हाकिम प्रातःकाल भोज करते हैं!
ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!
17 १७ हे देश, तू धन्य है जब तेरा राजा कुलीन है; और तेरे हाकिम समय पर भोज करते हैं, और वह भी मतवाले होने को नहीं, वरन् बल बढ़ाने के लिये!
ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ.
18 १८ आलस्य के कारण छत की कड़ियाँ दब जाती हैं, और हाथों की सुस्ती से घर चूता है।
ಸೋಮಾರಿತನದಿಂದ ಮನೆ ಕುಸಿಯುತ್ತದೆ. ಜೋಲುಗೈಯಿಂದ ಮನೆ ಸೋರುತ್ತದೆ.
19 १९ भोज हँसी खुशी के लिये किया जाता है, और दाखमधु से जीवन को आनन्द मिलता है; और रुपयों से सब कुछ प्राप्त होता है।
ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.
20 २० राजा को मन में भी श्राप न देना, न धनवान को अपने शयन की कोठरी में श्राप देना; क्योंकि कोई आकाश का पक्षी तेरी वाणी को ले जाएगा, और कोई उड़नेवाला जन्तु उस बात को प्रगट कर देगा।
ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.

< सभोपदेशक 10 >