< एस्तेर 1 >

1 क्षयर्ष नामक राजा के दिनों में ये बातें हुईं: यह वही क्षयर्ष है, जो एक सौ सत्ताईस प्रान्तों पर, अर्थात् भारत से लेकर कूश देश तक राज्य करता था।
ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
2 उन्हीं दिनों में जब क्षयर्ष राजा अपनी उस राजगद्दी पर विराजमान था जो शूशन नामक राजगढ़ में थी।
ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.
3 वहाँ उसने अपने राज्य के तीसरे वर्ष में अपने सब हाकिमों और कर्मचारियों को भोज दिया। फारस और मादै के सेनापति और प्रान्त- प्रान्त के प्रधान और हाकिम उसके सम्मुख आ गए।
ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.
4 वह उन्हें बहुत दिन वरन् एक सौ अस्सी दिन तक अपने राजवैभव का धन और अपने माहात्म्य के अनमोल पदार्थ दिखाता रहा।
ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.
5 इतने दिनों के बीतने पर राजा ने क्या छोटे क्या बड़े उन सभी की भी जो शूशन नामक राजगढ़ में इकट्ठा हुए थे, राजभवन की बारी के आँगन में सात दिन तक भोज दिया।
ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
6 वहाँ के पर्दे श्वेत और नीले सूत के थे, और सन और बैंगनी रंग की डोरियों से चाँदी के छल्लों में, संगमरमर के खम्भों से लगे हुए थे; और वहाँ की चौकियाँ सोने-चाँदी की थीं; और लाल और श्वेत और पीले और काले संगमरमर के बने हुए फर्श पर धरी हुई थीं।
ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.
7 उस भोज में राजा के योग्य दाखमधु भिन्न-भिन्न रूप के सोने के पात्रों में डालकर राजा की उदारता से बहुतायत के साथ पिलाया जाता था।
ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
8 पीना तो नियम के अनुसार होता था, किसी को विवश करके नहीं पिलाया जाता था; क्योंकि राजा ने तो अपने भवन के सब भण्डारियों को आज्ञा दी थी, कि जो अतिथि जैसा चाहे उसके साथ वैसा ही बर्ताव करना।
“ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
9 रानी वशती ने भी राजा क्षयर्ष के भवन में स्त्रियों को भोज दिया।
ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.
10 १० सातवें दिन, जब राजा का मन दाखमधु में मगन था, तब उसने महूमान, बिजता, हर्बोना, बिगता, अबगता, जेतेर और कर्कस नामक सातों खोजों को जो क्षयर्ष राजा के सम्मुख सेवा टहल किया करते थे, आज्ञा दी,
೧೦ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
11 ११ कि रानी वशती को राजमुकुट धारण किए हुए राजा के सम्मुख ले आओ; जिससे कि देश-देश के लोगों और हाकिमों पर उसकी सुन्दरता प्रगट हो जाए; क्योंकि वह देखने में सुन्दर थी।
೧೧“ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
12 १२ खोजों के द्वारा राजा की यह आज्ञा पाकर रानी वशती ने आने से इन्कार किया। इस पर राजा बड़े क्रोध से जलने लगा।
೧೨ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
13 १३ तब राजा ने समय-समय का भेद जाननेवाले पंडितों से पूछा (राजा तो नीति और न्याय के सब ज्ञानियों से ऐसा ही किया करता था।
೧೩ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
14 १४ उसके पास कर्शना, शेतार, अदमाता, तर्शीश, मेरेस, मर्सना, और ममूकान नामक फारस, और मादै के सात प्रधान थे, जो राजा का दर्शन करते, और राज्य में मुख्य-मुख्य पदों पर नियुक्त किए गए थे।)
೧೪ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
15 १५ राजा ने पूछा, “रानी वशती ने राजा क्षयर्ष की खोजों द्वारा दिलाई हुई आज्ञा का उल्लंघन किया, तो नीति के अनुसार उसके साथ क्या किया जाए?”
೧೫ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.
16 १६ तब ममूकान ने राजा और हाकिमों की उपस्थिति में उत्तर दिया, “रानी वशती ने जो अनुचित काम किया है, वह न केवल राजा से परन्तु सब हाकिमों से और उन सब देशों के लोगों से भी जो राजा क्षयर्ष के सब प्रान्तों में रहते हैं।
೧೬ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಷ್ಟಿ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ.
17 १७ क्योंकि रानी के इस काम की चर्चा सब स्त्रियों में होगी और जब यह कहा जाएगा, ‘राजा क्षयर्ष ने रानी वशती को अपने सामने ले आने की आज्ञा दी परन्तु वह न आई,’ तब वे भी अपने-अपने पति को तुच्छ जानने लगेंगी।
೧೭ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು.
18 १८ आज के दिन फारस और मादी हाकिमों की स्त्रियाँ जिन्होंने रानी की यह बात सुनी है तो वे भी राजा के सब हाकिमों से ऐसा ही कहने लगेंगी; इस प्रकार बहुत ही घृणा और क्रोध उत्पन्न होगा।
೧೮ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು.
19 १९ यदि राजा को स्वीकार हो, तो यह आज्ञा निकाले, और फारसियों और मादियों के कानून में लिखी भी जाए, जिससे कभी बदल न सके, कि रानी वशती राजा क्षयर्ष के सम्मुख फिर कभी आने न पाए, और राजा पटरानी का पद किसी दूसरी को दे दे जो उससे अच्छी हो।
೧೯ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.
20 २० अतः जब राजा की यह आज्ञा उसके सारे राज्य में सुनाई जाएगी, तब सब पत्नियाँ, अपने-अपने पति का चाहे बड़ा हो या छोटा, आदरमान करती रहेंगी।”
೨೦ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
21 २१ यह बात राजा और हाकिमों को पसन्द आई और राजा ने ममूकान की सम्मति मान ली और अपने राज्य में,
೨೧ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.
22 २२ अर्थात् प्रत्येक प्रान्त के अक्षरों में और प्रत्येक जाति की भाषा में चिट्ठियाँ भेजीं, कि सब पुरुष अपने-अपने घर में अधिकार चलाएँ, और अपनी जाति की भाषा बोला करें।
೨೨ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.

< एस्तेर 1 >