< एस्तेर 8 >
1 १ उसी दिन राजा क्षयर्ष ने यहूदियों के विरोधी हामान का घरबार एस्तेर रानी को दे दिया। मोर्दकै राजा के सामने आया, क्योंकि एस्तेर ने राजा को बताया था, कि उससे उसका क्या नाता था
೧ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.
2 २ तब राजा ने अपनी वह मुहर वाली अंगूठी जो उसने हामान से ले ली थी, उतार कर, मोर्दकै को दे दी। एस्तेर ने मोर्दकै को हामान के घरबार पर अधिकारी नियुक्त कर दिया।
೨ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.
3 ३ फिर एस्तेर दूसरी बार राजा से बोली; और उसके पाँव पर गिर, आँसू बहा बहाकर उससे गिड़गिड़ाकर विनती की, कि अगागी हामान की बुराई और यहूदियों की हानि की उसकी युक्ति निष्फल की जाए।
೩ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು.
4 ४ तब राजा ने एस्तेर की ओर सोने का राजदण्ड बढ़ाया।
೪ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು.
5 ५ तब एस्तेर उठकर राजा के सामने खड़ी हुई; और कहने लगी, “यदि राजा को स्वीकार हो और वह मुझसे प्रसन्न है और यह बात उसको ठीक जान पड़े, और मैं भी उसको अच्छी लगती हूँ, तो जो चिट्ठियाँ हम्मदाता अगागी के पुत्र हामान ने राजा के सब प्रान्तों के यहूदियों को नाश करने की युक्ति करके लिखाई थीं, उनको पलटने के लिये लिखा जाए।
೫ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.
6 ६ क्योंकि मैं अपने जाति के लोगों पर पड़नेवाली उस विपत्ति को किस रीति से देख सकूँगी? और मैं अपने भाइयों के विनाश को कैसे देख सकूँगी?”
೬ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.
7 ७ तब राजा क्षयर्ष ने एस्तेर रानी से और मोर्दकै यहूदी से कहा, “मैं हामान का घरबार तो एस्तेर को दे चुका हूँ, और वह फांसी के खम्भे पर लटका दिया गया है, इसलिए कि उसने यहूदियों पर हाथ उठाया था।
೭ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.
8 ८ अतः तुम अपनी समझ के अनुसार राजा के नाम से यहूदियों के नाम पर लिखो, और राजा की मुहर वाली अंगूठी की छाप भी लगाओ; क्योंकि जो चिट्ठी राजा के नाम से लिखी जाए, और उस पर उसकी अंगूठी की छाप लगाई जाए, उसको कोई भी पलट नहीं सकता।”
೮ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.
9 ९ उसी समय अर्थात् सीवान नामक तीसरे महीने के तेईसवें दिन को राजा के लेखक बुलवाए गए और जिस-जिस बात की आज्ञा मोर्दकै ने उन्हें दी थी, उसे यहूदियों और अधिपतियों और भारत से लेकर कूश तक, जो एक सौ सत्ताईस प्रान्त हैं, उन सभी के अधिपतियों और हाकिमों को एक-एक प्रान्त के अक्षरों में और एक-एक देश के लोगों की भाषा में, और यहूदियों को उनके अक्षरों और भाषा में लिखी गईं।
೯ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
10 १० मोर्दकै ने राजा क्षयर्ष के नाम से चिट्ठियाँ लिखाकर, और उन पर राजा की मुहर वाली अंगूठी की छाप लगाकर, वेग चलनेवाले सरकारी घोड़ों, खच्चरों और साँड़नियों पर सवार हरकारों के हाथ भेज दीं।
೧೦ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.
11 ११ इन चिट्ठियों में सब नगरों के यहूदियों को राजा की ओर से अनुमति दी गई, कि वे इकट्ठे हों और अपना-अपना प्राण बचाने के लिये तैयार होकर, जिस जाति या प्रान्त के लोग अन्याय करके उनको या उनकी स्त्रियों और बाल-बच्चों को दुःख देना चाहें, उनको घात और नाश करें, और उनकी धन-सम्पत्ति लूट लें।
೧೧ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.
12 १२ और यह राजा क्षयर्ष के सब प्रान्तों में एक ही दिन में किया जाए, अर्थात् अदार नामक बारहवें महीने के तेरहवें दिन को।
೧೨ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು.
13 १३ इस आज्ञा के लेख की नकलें, समस्त प्रान्तों में सब देशों के लोगों के पास खुली हुई भेजी गईं; ताकि यहूदी उस दिन अपने शत्रुओं से पलटा लेने को तैयार रहें।
೧೩ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು” ಎಂದು ಅಪ್ಪಣೆಮಾಡಿದ್ದನು.
14 १४ अतः हरकारे वेग चलनेवाले सरकारी घोड़ों पर सवार होकर, राजा की आज्ञा से फुर्ती करके जल्दी चले गए, और यह आज्ञा शूशन राजगढ़ में दी गई थी।
೧೪ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.
15 १५ तब मोर्दकै नीले और श्वेत रंग के राजकीय वस्त्र पहने और सिर पर सोने का बड़ा मुकुट धरे हुए और सूक्ष्म सन और बैंगनी रंग का बागा पहने हुए, राजा के सम्मुख से निकला, और शूशन नगर के लोग आनन्द के मारे ललकार उठे।
೧೫ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.
16 १६ और यहूदियों को आनन्द और हर्ष हुआ और उनकी बड़ी प्रतिष्ठा हुई।
೧೬ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು.
17 १७ और जिस-जिस प्रान्त, और जिस-जिस नगर में, जहाँ कहीं राजा की आज्ञा और नियम पहुँचे, वहाँ-वहाँ यहूदियों को आनन्द और हर्ष हुआ, और उन्होंने भोज करके उस दिन को खुशी का दिन माना। और उस देश के लोगों में से बहुत लोग यहूदी बन गए, क्योंकि उनके मन में यहूदियों का डर समा गया था।
೧೭ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.