< एस्तेर 9 >

1 अदार नामक बारहवें महीने के तेरहवें दिन को, जिस दिन राजा की आज्ञा और नियम पूरे होने को थे, और यहूदियों के शत्रु उन पर प्रबल होने की आशा रखते थे, परन्तु इसके विपरीत यहूदी अपने बैरियों पर प्रबल हुए; उस दिन,
ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.
2 यहूदी लोग राजा क्षयर्ष के सब प्रान्तों में अपने-अपने नगर में इकट्ठे हुए, कि जो उनकी हानि करने का यत्न करे, उन पर हाथ चलाएँ। कोई उनका सामना न कर सका, क्योंकि उनका भय देश-देश के सब लोगों के मन में समा गया था।
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
3 वरन् प्रान्तों के सब हाकिमों और अधिपतियों और प्रधानों और राजा के कर्मचारियों ने यहूदियों की सहायता की, क्योंकि उनके मन में मोर्दकै का भय समा गया था।
ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.
4 मोर्दकै तो राजा के यहाँ बहुत प्रतिष्ठित था, और उसकी कीर्ति सब प्रान्तों में फैल गई; वरन् उस पुरुष मोर्दकै की महिमा बढ़ती चली गई।
ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.
5 अतः यहूदियों ने अपने सब शत्रुओं को तलवार से मारकर और घात करके नाश कर डाला, और अपने बैरियों से अपनी इच्छा के अनुसार बर्ताव किया।
ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
6 शूशन राजगढ़ में यहूदियों ने पाँच सौ मनुष्यों को घात करके नाश किया।
ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು.
7 उन्होंने पर्शन्दाता, दल्पोन, अस्पाता,
ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,
8 पोराता, अदल्या, अरीदाता,
ಪೊರಾತನು, ಅದಲ್ಯನು, ಅರಿದಾತನು,
9 पर्मशता, अरीसै, अरीदै और वैजाता,
ಪರ್ಮಷ್ಟನು, ಅರಿಸಾಯನು, ಅರಿದಾಯನು, ವೈಜಾತನು ಎಂಬವರನ್ನು ಕೊಂದರು.
10 १० अर्थात् हम्मदाता के पुत्र यहूदियों के विरोधी हामान के दसों पुत्रों को भी घात किया; परन्तु उनके धन को न लूटा।
ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
11 ११ उसी दिन शूशन राजगढ़ में घात किए हुओं की गिनती राजा को सुनाई गई।
ಅದೇ ದಿವಸ ಶೂಷನಿನ ಅರಮನೆಯಲ್ಲಿ ಮರಣದಂಡನೆಯಾದವರ ಲೆಕ್ಕವು ಅರಸನ ಮುಂದೆ ಒಪ್ಪಿಸಲಾಯಿತು.
12 १२ तब राजा ने एस्तेर रानी से कहा, “यहूदियों ने शूशन राजगढ़ ही में पाँच सौ मनुष्यों और हामान के दसों पुत्रों को भी घात करके नाश किया है; फिर राज्य के अन्य प्रान्तों में उन्होंने न जाने क्या-क्या किया होगा! अब इससे अधिक तेरा निवेदन क्या है? वह भी पूरा किया जाएगा। और तू क्या माँगती है? वह भी तुझे दिया जाएगा।”
ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು.
13 १३ एस्तेर ने कहा, “यदि राजा को स्वीकार हो तो शूशन के यहूदियों को आज के समान कल भी करने की आज्ञा दी जाए, और हामान के दसों पुत्र फांसी के खम्भों पर लटकाए जाएँ।”
ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.
14 १४ राजा ने आज्ञा दी, “ऐसा किया जाए;” यह आज्ञा शूशन में दी गई, और हामान के दसों पुत्र लटकाए गए।
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.
15 १५ शूशन के यहूदियों ने अदार महीने के चौदहवें दिन को भी इकट्ठे होकर शूशन में तीन सौ पुरुषों को घात किया, परन्तु धन को न लूटा।
ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
16 १६ राज्य के अन्य प्रान्तों के यहूदी इकट्ठा होकर अपना-अपना प्राण बचाने के लिये खड़े हुए, और अपने बैरियों में से पचहत्तर हजार मनुष्यों को घात करके अपने शत्रुओं से विश्राम पाया; परन्तु धन को न लूटा।
ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.
17 १७ यह अदार महीने के तेरहवें दिन को किया गया, और चौदहवें दिन को उन्होंने विश्राम करके भोज किया और आनन्द का दिन ठहराया।
ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
18 १८ परन्तु शूशन के यहूदी अदार महीने के तेरहवें दिन को, और उसी महीने के चौदहवें दिन को इकट्ठा हुए, और उसी महीने के पन्द्रहवें दिन को उन्होंने विश्राम करके भोज का और आनन्द का दिन ठहराया।
ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.
19 १९ इस कारण देहाती यहूदी जो बिना शहरपनाह की बस्तियों में रहते हैं, वे अदार महीने के चौदहवें दिन को आनन्द और भोज और खुशी और आपस में भोजन सामग्री भेजने का दिन नियुक्त करके मानते हैं।
ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.
20 २० इन बातों का वृत्तान्त लिखकर, मोर्दकै ने राजा क्षयर्ष के सब प्रान्तों में, क्या निकट क्या दूर रहनेवाले सारे यहूदियों के पास चिट्ठियाँ भेजीं,
ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.
21 २१ और यह आज्ञा दी, कि अदार महीने के चौदहवें और उसी महीने के पन्द्रहवें दिन को प्रतिवर्ष माना करें।
ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.
22 २२ जिनमें यहूदियों ने अपने शत्रुओं से विश्राम पाया, और यह महीना जिसमें शोक आनन्द से, और विलाप खुशी से बदला गया; (माना करें) और उनको भोज और आनन्द और एक दूसरे के पास भोजन सामग्री भेजने और कंगालों को दान देने के दिन मानें।
ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.
23 २३ अतः यहूदियों ने जैसा आरम्भ किया था, और जैसा मोर्दकै ने उन्हें लिखा, वैसा ही करने का निश्चय कर लिया।
ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು.
24 २४ क्योंकि हम्मदाता अगागी का पुत्र हामान जो सब यहूदियों का विरोधी था, उसने यहूदियों का नाश करने की युक्ति की, और उन्हें मिटा डालने और नाश करने के लिये पूर अर्थात् चिट्ठी डाली थी।
ಏಕೆಂದರೆ ಸಮಸ್ತ ಯೆಹೂದ್ಯರಿಗೂ ಕಡು ವೈರಿಯಾದ, ಅಗಾಗನ ವಂಶದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರ್ ಅಂದರೆ, ಚೀಟನ್ನು ಹಾಕಿದ್ದನು.
25 २५ परन्तु जब राजा ने यह जान लिया, तब उसने आज्ञा दी और लिखवाई कि जो दुष्ट युक्ति हामान ने यहूदियों के विरुद्ध की थी वह उसी के सिर पर पलट आए, तब वह और उसके पुत्र फांसी के खम्भों पर लटकाए गए।
ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;
26 २६ इस कारण उन दिनों का नाम पूर शब्द से पूरीम रखा गया। इस चिट्ठी की सब बातों के कारण, और जो कुछ उन्होंने इस विषय में देखा और जो कुछ उन पर बीता था, उसके कारण भी
ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ
27 २७ यहूदियों ने अपने-अपने लिये और अपनी सन्तान के लिये, और उन सभी के लिये भी जो उनमें मिल गए थे यह अटल प्रण किया, कि उस लेख के अनुसार प्रतिवर्ष उसके ठहराए हुए समय में वे ये दो दिन मानें।
ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.
28 २८ और पीढ़ी-पीढ़ी, कुल-कुल, प्रान्त-प्रान्त, नगर-नगर में ये दिन स्मरण किए और माने जाएँगे। और पूरीम नाम के दिन यहूदियों में कभी न मिटेंगे और उनका स्मरण उनके वंश से जाता न रहेगा।
ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.
29 २९ फिर अबीहैल की बेटी एस्तेर रानी, और मोर्दकै यहूदी ने, पूरीम के विषय यह दूसरी चिट्ठी बड़े अधिकार के साथ लिखी।
ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು.
30 ३० इसकी नकलें मोर्दकै ने क्षयर्ष के राज्य के, एक सौ सत्ताईस प्रान्तों के सब यहूदियों के पास शान्ति देनेवाली और सच्ची बातों के साथ इस आशय से भेजीं,
ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.
31 ३१ कि पूरीम के उन दिनों के विशेष ठहराए हुए समयों में मोर्दकै यहूदी और एस्तेर रानी की आज्ञा के अनुसार, और जो यहूदियों ने अपने और अपनी सन्तान के लिये ठान लिया था, उसके अनुसार भी उपवास और विलाप किए जाएँ।
ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.
32 ३२ पूरीम के विषय का यह नियम एस्तेर की आज्ञा से भी स्थिर किया गया, और उनकी चर्चा पुस्तक में लिखी गई।
ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು.

< एस्तेर 9 >