< यहेजकेल 7 >

1 फिर यहोवा का यह वचन मेरे पास पहुँचा
ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
2 “हे मनुष्य के सन्तान, प्रभु यहोवा इस्राएल की भूमि के विषय में यह कहता है, कि अन्त हुआ; चारों कोनों समेत देश का अन्त आ गया है।
“ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
3 तेरा अन्त भी आ गया, और मैं अपना क्रोध तुझ पर भड़काकर तेरे चाल चलन के अनुसार तुझे दण्ड दूँगा; और तेरे सारे घिनौने कामों का फल तुझे दूँगा।
ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
4 मेरी दयादृष्टि तुझ पर न होगी, और न मैं कोमलता करूँगा; और जब तक तेरे घिनौने पाप तुझ में बने रहेंगे तब तक मैं तेरे चाल-चलन का फल तुझे दूँगा। तब तू जान लेगा कि मैं यहोवा हूँ।
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
5 “प्रभु यहोवा यह कहता है: विपत्ति है, एक बड़ी विपत्ति है! देखो, वह आती है।
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
6 अन्त आ गया है, सब का अन्त आया है; वह तेरे विरुद्ध जागा है। देखो, वह आता है।
ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
7 हे देश के निवासी, तेरे लिये चक्र घूम चुका, समय आ गया, दिन निकट है; पहाड़ों पर आनन्द के शब्द का दिन नहीं, हुल्लड़ ही का होगा।
ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
8 अब थोड़े दिनों में मैं अपनी जलजलाहट तुझ पर भड़काऊँगा, और तुझ पर पूरा कोप उण्डेलूँगा और तेरे चाल चलन के अनुसार तुझे दण्ड दूँगा। और तेरे सारे घिनौने कामों का फल तुझे भुगताऊँगा।
ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
9 मेरी दयादृष्टि तुझ पर न होगी और न मैं तुझ पर कोमलता करूँगा। मैं तेरी चाल चलन का फल तुझे भुगताऊँगा, और तेरे घिनौने पाप तुझ में बने रहेंगे। तब तुम जान लोगे कि मैं यहोवा दण्ड देनेवाला हूँ।
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
10 १० “देखो, उस दिन को देखो, वह आता है! चक्र घूम चुका, छड़ी फूल चुकी, अभिमान फूला है।
೧೦“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
11 ११ उपद्रव बढ़ते-बढ़ते दुष्टता का दण्ड बन गया; उनमें से कोई न बचेगा, और न उनकी भीड़-भाड़, न उनके धन में से कुछ रहेगा; और न उनमें से किसी के लिये विलाप सुन पड़ेगा।
೧೧ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
12 १२ समय आ गया, दिन निकट आ गया है; न तो मोल लेनेवाला आनन्द करे और न बेचनेवाला शोक करे, क्योंकि उनकी सारी भीड़ पर कोप भड़क उठा है।
೧೨ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
13 १३ चाहे वे जीवित रहें, तो भी बेचनेवाला बेची हुई वस्तु के पास कभी लौटने न पाएगा; क्योंकि दर्शन की यह बात देश की सारी भीड़ पर घटेगी; कोई न लौटेगा; कोई भी मनुष्य, जो अधर्म में जीवित रहता है, बल न पकड़ सकेगा।
೧೩ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
14 १४ “उन्होंने नरसिंगा फूँका और सब कुछ तैयार कर दिया; परन्तु युद्ध में कोई नहीं जाता क्योंकि देश की सारी भीड़ पर मेरा कोप भड़का हुआ है।
೧೪ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
15 १५ “बाहर तलवार और भीतर अकाल और मरी हैं; जो मैदान में हो वह तलवार से मरेगा, और जो नगर में हो वह भूख और मरी से मारा जाएगा।
೧೫ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
16 १६ और उनमें से जो बच निकलेंगे वे बचेंगे तो सही परन्तु अपने-अपने अधर्म में फँसे रहकर तराइयों में रहनेवाले कबूतरों के समान पहाड़ों के ऊपर विलाप करते रहेंगे।
೧೬ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
17 १७ सब के हाथ ढीले और सब के घुटने अति निर्बल हो जाएँगे।
೧೭ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
18 १८ वे कमर में टाट कसेंगे, और उनके रोएँ खड़े होंगे; सब के मुँह सूख जाएँगे और सब के सिर मुँण्ड़े जाएँगे।
೧೮ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
19 १९ वे अपनी चाँदी सड़कों में फेंक देंगे, और उनका सोना अशुद्ध वस्तु ठहरेगा; यहोवा की जलन के दिन उनका सोना चाँदी उनको बचा न सकेगी, न उससे उनका जी सन्तुष्ट होगा, न उनके पेट भरेंगे। क्योंकि वह उनके अधर्म के ठोकर का कारण हुआ है।
೧೯ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
20 २० उनका देश जो शोभायमान और शिरोमणि था, उसके विषय में उन्होंने गर्व ही गर्व करके उसमें अपनी घृणित वस्तुओं की मूरतें, और घृणित वस्तुएँ बना रखीं, इस कारण मैंने उसे उनके लिये अशुद्ध वस्तु ठहराया है।
೨೦ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
21 २१ मैं उसे लूटने के लिये परदेशियों के हाथ, और धन छीनने के लिये पृथ्वी के दुष्ट लोगों के वश में कर दूँगा; और वे उसे अपवित्र कर डालेंगे।
೨೧ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
22 २२ मैं उनसे मुँह फेर लूँगा, तब वे मेरे सुरक्षित स्थान को अपवित्र करेंगे; डाकू उसमें घुसकर उसे अपवित्र करेंगे।
೨೨ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
23 २३ “एक साँकल बना दे, क्योंकि देश अन्याय की हत्या से, और नगर उपद्रव से भरा हुआ है।
೨೩ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
24 २४ मैं अन्यजातियों के बुरे से बुरे लोगों को लाऊँगा, जो उनके घरों के स्वामी हो जाएँगे; और मैं सामर्थियों का गर्व तोड़ दूँगा और उनके पवित्रस्थान अपवित्र किए जाएँगे।
೨೪ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
25 २५ सत्यानाश होने पर है तब ढूँढ़ने पर भी उन्हें शान्ति न मिलेगी।
೨೫ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
26 २६ विपत्ति पर विपत्ति आएगी और उड़ती हुई चर्चा पर चर्चा सुनाई पड़ेगी; और लोग भविष्यद्वक्ता से दर्शन की बात पूछेंगे, परन्तु याजक के पास से व्यवस्था, और पुरनिये के पास से सम्मति देने की शक्ति जाती रहेगी।
೨೬ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
27 २७ राजा तो शोक करेगा, और रईस उदासीरूपी वस्त्र पहनेंगे, और देश के लोगों के हाथ ढीले पड़ेंगे। मैं उनके चलन के अनुसार उनसे बर्ताव करूँगा, और उनकी कमाई के समान उनको दण्ड दूँगा; तब वे जान लेंगे कि मैं यहोवा हूँ।”
೨೭ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

< यहेजकेल 7 >