< यहेजकेल 7 >

1 फिर यहोवा का यह वचन मेरे पास पहुँचा
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
2 “हे मनुष्य के सन्तान, प्रभु यहोवा इस्राएल की भूमि के विषय में यह कहता है, कि अन्त हुआ; चारों कोनों समेत देश का अन्त आ गया है।
“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!
3 तेरा अन्त भी आ गया, और मैं अपना क्रोध तुझ पर भड़काकर तेरे चाल चलन के अनुसार तुझे दण्ड दूँगा; और तेरे सारे घिनौने कामों का फल तुझे दूँगा।
ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.
4 मेरी दयादृष्टि तुझ पर न होगी, और न मैं कोमलता करूँगा; और जब तक तेरे घिनौने पाप तुझ में बने रहेंगे तब तक मैं तेरे चाल-चलन का फल तुझे दूँगा। तब तू जान लेगा कि मैं यहोवा हूँ।
ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’
5 “प्रभु यहोवा यह कहता है: विपत्ति है, एक बड़ी विपत्ति है! देखो, वह आती है।
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಕೇಡು! ಎಂದೂ ಕೇಳದ ಕೇಡು, ಇಗೋ ಬಂದಿತು.
6 अन्त आ गया है, सब का अन्त आया है; वह तेरे विरुद्ध जागा है। देखो, वह आता है।
ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.
7 हे देश के निवासी, तेरे लिये चक्र घूम चुका, समय आ गया, दिन निकट है; पहाड़ों पर आनन्द के शब्द का दिन नहीं, हुल्लड़ ही का होगा।
ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.
8 अब थोड़े दिनों में मैं अपनी जलजलाहट तुझ पर भड़काऊँगा, और तुझ पर पूरा कोप उण्डेलूँगा और तेरे चाल चलन के अनुसार तुझे दण्ड दूँगा। और तेरे सारे घिनौने कामों का फल तुझे भुगताऊँगा।
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.
9 मेरी दयादृष्टि तुझ पर न होगी और न मैं तुझ पर कोमलता करूँगा। मैं तेरी चाल चलन का फल तुझे भुगताऊँगा, और तेरे घिनौने पाप तुझ में बने रहेंगे। तब तुम जान लोगे कि मैं यहोवा दण्ड देनेवाला हूँ।
ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.
10 १० “देखो, उस दिन को देखो, वह आता है! चक्र घूम चुका, छड़ी फूल चुकी, अभिमान फूला है।
“‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,
11 ११ उपद्रव बढ़ते-बढ़ते दुष्टता का दण्ड बन गया; उनमें से कोई न बचेगा, और न उनकी भीड़-भाड़, न उनके धन में से कुछ रहेगा; और न उनमें से किसी के लिये विलाप सुन पड़ेगा।
ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.
12 १२ समय आ गया, दिन निकट आ गया है; न तो मोल लेनेवाला आनन्द करे और न बेचनेवाला शोक करे, क्योंकि उनकी सारी भीड़ पर कोप भड़क उठा है।
ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.
13 १३ चाहे वे जीवित रहें, तो भी बेचनेवाला बेची हुई वस्तु के पास कभी लौटने न पाएगा; क्योंकि दर्शन की यह बात देश की सारी भीड़ पर घटेगी; कोई न लौटेगा; कोई भी मनुष्य, जो अधर्म में जीवित रहता है, बल न पकड़ सकेगा।
ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.
14 १४ “उन्होंने नरसिंगा फूँका और सब कुछ तैयार कर दिया; परन्तु युद्ध में कोई नहीं जाता क्योंकि देश की सारी भीड़ पर मेरा कोप भड़का हुआ है।
“‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.
15 १५ “बाहर तलवार और भीतर अकाल और मरी हैं; जो मैदान में हो वह तलवार से मरेगा, और जो नगर में हो वह भूख और मरी से मारा जाएगा।
ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.
16 १६ और उनमें से जो बच निकलेंगे वे बचेंगे तो सही परन्तु अपने-अपने अधर्म में फँसे रहकर तराइयों में रहनेवाले कबूतरों के समान पहाड़ों के ऊपर विलाप करते रहेंगे।
ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.
17 १७ सब के हाथ ढीले और सब के घुटने अति निर्बल हो जाएँगे।
ಕೈಗಳೆಲ್ಲಾ ಜೋತಾಡುವುವು, ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು.
18 १८ वे कमर में टाट कसेंगे, और उनके रोएँ खड़े होंगे; सब के मुँह सूख जाएँगे और सब के सिर मुँण्ड़े जाएँगे।
ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.
19 १९ वे अपनी चाँदी सड़कों में फेंक देंगे, और उनका सोना अशुद्ध वस्तु ठहरेगा; यहोवा की जलन के दिन उनका सोना चाँदी उनको बचा न सकेगी, न उससे उनका जी सन्तुष्ट होगा, न उनके पेट भरेंगे। क्योंकि वह उनके अधर्म के ठोकर का कारण हुआ है।
“‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.
20 २० उनका देश जो शोभायमान और शिरोमणि था, उसके विषय में उन्होंने गर्व ही गर्व करके उसमें अपनी घृणित वस्तुओं की मूरतें, और घृणित वस्तुएँ बना रखीं, इस कारण मैंने उसे उनके लिये अशुद्ध वस्तु ठहराया है।
ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
21 २१ मैं उसे लूटने के लिये परदेशियों के हाथ, और धन छीनने के लिये पृथ्वी के दुष्ट लोगों के वश में कर दूँगा; और वे उसे अपवित्र कर डालेंगे।
ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.
22 २२ मैं उनसे मुँह फेर लूँगा, तब वे मेरे सुरक्षित स्थान को अपवित्र करेंगे; डाकू उसमें घुसकर उसे अपवित्र करेंगे।
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು.
23 २३ “एक साँकल बना दे, क्योंकि देश अन्याय की हत्या से, और नगर उपद्रव से भरा हुआ है।
“‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
24 २४ मैं अन्यजातियों के बुरे से बुरे लोगों को लाऊँगा, जो उनके घरों के स्वामी हो जाएँगे; और मैं सामर्थियों का गर्व तोड़ दूँगा और उनके पवित्रस्थान अपवित्र किए जाएँगे।
ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.
25 २५ सत्यानाश होने पर है तब ढूँढ़ने पर भी उन्हें शान्ति न मिलेगी।
ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.
26 २६ विपत्ति पर विपत्ति आएगी और उड़ती हुई चर्चा पर चर्चा सुनाई पड़ेगी; और लोग भविष्यद्वक्ता से दर्शन की बात पूछेंगे, परन्तु याजक के पास से व्यवस्था, और पुरनिये के पास से सम्मति देने की शक्ति जाती रहेगी।
ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.
27 २७ राजा तो शोक करेगा, और रईस उदासीरूपी वस्त्र पहनेंगे, और देश के लोगों के हाथ ढीले पड़ेंगे। मैं उनके चलन के अनुसार उनसे बर्ताव करूँगा, और उनकी कमाई के समान उनको दण्ड दूँगा; तब वे जान लेंगे कि मैं यहोवा हूँ।”
ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’”

< यहेजकेल 7 >