< यशायाह 22 >

1 दर्शन की तराई के विषय में भारी वचन। तुम्हें क्या हुआ कि तुम सब के सब छतों पर चढ़ गए हो,
ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?
2 हे कोलाहल और ऊधम से भरी प्रसन्न नगरी? तुझ में जो मारे गए हैं वे न तो तलवार से और न लड़ाई में मारे गए हैं।
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.
3 तेरे सब शासक एक संग भाग गए और बिना धनुष के बन्दी बनाए गए हैं। तेरे जितने शेष पाए गए वे एक संग बाँधे गए, यद्यपि वे दूर भागे थे।
ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ; ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.
4 इस कारण मैंने कहा, “मेरी ओर से मुँह फेर लो कि मैं बिलख-बिलख कर रोऊँ; मेरे नगर के सत्यानाश होने के शोक में मुझे शान्ति देने का यत्न मत करो।”
ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.
5 क्योंकि सेनाओं के प्रभु यहोवा का ठहराया हुआ दिन होगा, जब दर्शन की तराई में कोलाहल और रौंदा जाना और बेचैनी होगी; शहरपनाह में सुरंग लगाई जाएगी और दुहाई का शब्द पहाड़ों तक पहुँचेगा।
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.
6 एलाम पैदलों के दल और सवारों समेत तरकश बाँधे हुए है, और कीर ढाल खोले हुए है।
ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.
7 तेरी उत्तम-उत्तम तराइयाँ रथों से भरी हुई होंगी और सवार फाटक के सामने पाँति बाँधेंगे।
ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು, ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”
8 उसने यहूदा का घूँघट खोल दिया है। उस दिन तूने वन नामक भवन के अस्त्र-शस्त्र का स्मरण किया,
ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ. ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.
9 और तूने दाऊदपुर की शहरपनाह की दरारों को देखा कि वे बहुत हैं, और तूने निचले जलकुण्ड के जल को इकट्ठा किया।
ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
10 १० और यरूशलेम के घरों को गिनकर शहरपनाह के दृढ़ करने के लिये घरों को ढा दिया।
೧೦ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.
11 ११ तूने दोनों दीवारों के बीच पुराने जलकुण्ड के जल के लिये एक कुण्ड खोदा। परन्तु तूने उसके कर्ता को स्मरण नहीं किया, जिसने प्राचीनकाल से उसको ठहरा रखा था, और न उसकी ओर तूने दृष्टि की।
೧೧ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.
12 १२ उस समय सेनाओं के प्रभु यहोवा ने रोने-पीटने, सिर मुँड़ाने और टाट पहनने के लिये कहा था;
೧೨ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
13 १३ परन्तु क्या देखा कि हर्ष और आनन्द मनाया जा रहा है, गाय-बैल का घात और भेड़-बकरी का वध किया जा रहा है, माँस खाया और दाखमधु पीया जा रहा है। और कहते हैं, “आओ खाएँ-पीएँ, क्योंकि कल तो हमें मरना है।”
೧೩ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
14 १४ सेनाओं के यहोवा ने मेरे कान में कहा और अपने मन की बात प्रगट की, “निश्चय तुम लोगों के इस अधर्म का कुछ भी प्रायश्चित तुम्हारी मृत्यु तक न हो सकेगा,” सेनाओं के प्रभु यहोवा का यही कहना है।
೧೪ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.
15 १५ सेनाओं का प्रभु यहोवा यह कहता है, “शेबना नामक उस भण्डारी के पास जो राजघराने के काम पर नियुक्त है जाकर कह,
೧೫ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,
16 १६ ‘यहाँ तू क्या करता है? और यहाँ तेरा कौन है कि तूने अपनी कब्र यहाँ खुदवाई है? तू अपनी कब्र ऊँचे स्थान में खुदवाता और अपने रहने का स्थान चट्टान में खुदवाता है?
೧೬‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”
17 १७ देख, यहोवा तुझको बड़ी शक्ति से पकड़कर बहुत दूर फेंक देगा।
೧೭ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
18 १८ वह तुझे मरोड़कर गेन्द के समान लम्बे चौड़े देश में फेंक देगा; हे अपने स्वामी के घराने को लज्जित करनेवाले वहाँ तू मरेगा और तेरे वैभव के रथ वहीं रह जाएँगे।
೧೮ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.
19 १९ मैं तुझको तेरे स्थान पर से ढकेल दूँगा, और तू अपने पद से उतार दिया जाएगा।
೧೯ಯೆಹೋವನಾದ ನಾನು, “ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು.
20 २० उस समय मैं हिल्किय्याह के पुत्र अपने दास एलयाकीम को बुलाकर, उसे तेरा अंगरखा पहनाऊँगा,
೨೦ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು.
21 २१ और उसकी कमर में तेरी पेटी कसकर बाँधूँगा, और तेरी प्रभुता उसके हाथ में दूँगा। और वह यरूशलेम के रहनेवालों और यहूदा के घराने का पिता ठहरेगा।
೨೧ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.
22 २२ मैं दाऊद के घराने की कुँजी उसके कंधे पर रखूँगा, और वह खोलेगा और कोई बन्द न कर सकेगा; वह बन्द करेगा और कोई खोल न सकेगा।
೨೨ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.
23 २३ और मैं उसको दृढ़ स्थान में खूँटी के समान गाड़ूँगा, और वह अपने पिता के घराने के लिये वैभव का कारण होगा।
೨೩ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.
24 २४ और उसके पिता से घराने का सारा वैभव, वंश और सन्तान, सब छोटे-छोटे पात्र, क्या कटोरे क्या सुराहियाँ, सब उस पर टाँगी जाएँगी।
೨೪ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು” ಎಂಬುದೇ.
25 २५ सेनाओं के यहोवा की यह वाणी है कि उस समय वह खूँटी जो दृढ़ स्थान में गाड़ी गई थी, वह ढीली हो जाएगी, और काटकर गिराई जाएगी; और उस पर का बोझ गिर जाएगा, क्योंकि यहोवा ने यह कहा है।’”
೨೫ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.

< यशायाह 22 >