< यशायाह 32 >

1 देखो, एक राजा धार्मिकता से राज्य करेगा, और राजकुमार न्याय से हुकूमत करेंगे।
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
2 हर एक मानो आँधी से छिपने का स्थान, और बौछार से आड़ होगा; या निर्जल देश में जल के झरने, व तप्त भूमि में बड़ी चट्टान की छाया।
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
3 उस समय देखनेवालों की आँखें धुँधली न होंगी, और सुननेवालों के कान लगे रहेंगे।
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
4 उतावलों के मन ज्ञान की बातें समझेंगे, और तुतलानेवालों की जीभ फुर्ती से और साफ बोलेगी।
ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.
5 मूर्ख फिर उदार न कहलाएगा और न कंजूस दानी कहा जाएगा।
ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು. ಮೋಸಗಾರನು ಮಹನೀಯನೆನಿಸಿಕೊಳ್ಳನು.
6 क्योंकि मूर्ख तो मूर्खता ही की बातें बोलता और मन में अनर्थ ही गढ़ता रहता है कि वह अधर्म के काम करे और यहोवा के विरुद्ध झूठ कहे, भूखे को भूखा ही रहने दे और प्यासे का जल रोक रखे।
ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
7 छली की चालें बुरी होती हैं, वह दुष्ट युक्तियाँ निकालता है कि दरिद्र को भी झूठी बातों में लूटे जबकि वे ठीक और नम्रता से भी बोलते हों।
ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
8 परन्तु उदार मनुष्य उदारता ही की युक्तियाँ निकालता है, वह उदारता में स्थिर भी रहेगा।
ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
9 हे सुखी स्त्रियों, उठकर मेरी सुनो; हे निश्चिन्त पुत्रियों, मेरे वचन की ओर कान लगाओ।
ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
10 १० हे निश्चिन्त स्त्रियों, वर्ष भर से कुछ ही अधिक समय में तुम विकल हो जाओगी; क्योंकि तोड़ने को दाखें न होंगी और न किसी भाँति के फल हाथ लगेंगे।
ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
11 ११ हे सुखी स्त्रियों, थरथराओ, हे निश्चिन्त स्त्रियों, विकल हो; अपने-अपने वस्त्र उतारकर अपनी-अपनी कमर में टाट कसो।
ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
12 १२ वे मनभाऊ खेतों और फलवन्त दाखलताओं के लिये छाती पीटेंगी।
ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ ನಿಮ್ಮ ಎದೆ ಬಡಿದುಕೊಳ್ಳಿರಿ.
13 १३ मेरे लोगों के वरन् प्रसन्न नगर के सब हर्ष भरे घरों में भी भाँति-भाँति के कटीले पेड़ उपजेंगे।
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.
14 १४ क्योंकि राजभवन त्यागा जाएगा, कोलाहल से भरा नगर सुनसान हो जाएगा और पहाड़ी और उन पर के पहरुओं के घर सदा के लिये माँदे और जंगली गदहों का विहार-स्थान और घरेलू पशुओं की चराई उस समय तक बने रहेंगे
ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.
15 १५ जब तक आत्मा ऊपर से हम पर उण्डेला न जाए, और जंगल फलदायक बारी न बने, और फलदायक बारी फिर वन न गिनी जाए।
ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.
16 १६ तब उस जंगल में न्याय बसेगा, और उस फलदायक बारी में धार्मिकता रहेगा।
ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.
17 १७ और धार्मिकता का फल शान्ति और उसका परिणाम सदा का चैन और निश्चिन्त रहना होगा।
ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.
18 १८ मेरे लोग शान्ति के स्थानों में निश्चिन्त रहेंगे, और विश्राम के स्थानों में सुख से रहेंगे।
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
19 १९ वन के विनाश के समय ओले गिरेंगे, और नगर पूरी रीति से चौपट हो जाएगा।
ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.
20 २० क्या ही धन्य हो तुम जो सब जलाशयों के पास बीज बोते, और बैलों और गदहों को स्वतंत्रता से चराते हो।
ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.

< यशायाह 32 >