< यिर्मयाह 49 >
1 १ अम्मोनियों के विषय यहोवा यह कहता है: “क्या इस्राएल के पुत्र नहीं हैं? क्या उसका कोई वारिस नहीं रहा? फिर मल्काम क्यों गाद के देश का अधिकारी हुआ? और उसकी प्रजा क्यों उसके नगरों में बसने पाई है?
೧ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
2 २ यहोवा की यह वाणी है, ऐसे दिन आनेवाले हैं, कि मैं अम्मोनियों के रब्बाह नामक नगर के विरुद्ध युद्ध की ललकार सुनवाऊँगा, और वह उजड़कर खण्डहर हो जाएगा, और उसकी बस्तियाँ फूँक दी जाएँगी; तब जिन लोगों ने इस्राएलियों के देश को अपना लिया है, उनके देश को इस्राएली अपना लेंगे, यहोवा का यही वचन है।
೨ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
3 ३ “हे हेशबोन हाय-हाय कर; क्योंकि आई नगर नाश हो गया। हे रब्बाह की बेटियों चिल्लाओ! और कमर में टाट बाँधो, छाती पीटती हुई बाड़ों में इधर-उधर दौड़ो! क्योंकि मल्काम अपने याजकों और हाकिमों समेत बँधुआई में जाएगा।
೩“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
4 ४ हे भटकनेवाली बेटी! तू अपने देश की तराइयों पर, विशेषकर अपने बहुत ही उपजाऊ तराई पर क्यों फूलती है? तू क्यों यह कहकर अपने रखे हुए धन पर भरोसा रखती है, ‘मेरे विरुद्ध कौन चढ़ाई कर सकेगा?’
೪‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
5 ५ प्रभु सेनाओं के यहोवा की यह वाणी है: देख, मैं तेरे चारों ओर के सब रहनेवालों की ओर से तेरे मन में भय उपजाने पर हूँ, और तेरे लोग अपने-अपने सामने की ओर ढकेल दिए जाएँगे; और जब वे मारे-मारे फिरेंगे, तब कोई उन्हें इकट्ठा न करेगा।
೫ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
6 ६ परन्तु उसके बाद मैं अम्मोनियों को बँधुआई से लौटा लाऊँगा; यहोवा की यही वाणी है।”
೬ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
7 ७ एदोम के विषय, सेनाओं का यहोवा यह कहता है: “क्या तेमान में अब कुछ बुद्धि नहीं रही? क्या वहाँ के ज्ञानियों की युक्ति निष्फल हो गई? क्या उनकी बुद्धि जाती रही है?
೭ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
8 ८ हे ददान के रहनेवालों भागो, लौट जाओ, वहाँ छिपकर बसो! क्योंकि जब मैं एसाव को दण्ड देने लगूँगा, तब उस पर भारी विपत्ति पड़ेगी।
೮ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
9 ९ यदि दाख के तोड़नेवाले तेरे पास आते, तो क्या वे कहीं-कहीं दाख न छोड़ जाते? और यदि चोर रात को आते तो क्या वे जितना चाहते उतना धन लूटकर न ले जाते?
೯ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
10 १० क्योंकि मैंने एसाव को उघाड़ा है, मैंने उसके छिपने के स्थानों को प्रगट किया है; यहाँ तक कि वह छिप न सका। उसके वंश और भाई और पड़ोसी सब नाश हो गए हैं और उसका अन्त हो गया।
೧೦ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
11 ११ अपने अनाथ बालकों को छोड़ जाओ, मैं उनको जिलाऊँगा; और तुम्हारी विधवाएँ मुझ पर भरोसा रखें।
೧೧ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
12 १२ क्योंकि यहोवा यह कहता है, देखो, जो इसके योग्य न थे कि कटोरे में से पीएँ, उनको तो निश्चय पीना पड़ेगा, फिर क्या तू किसी प्रकार से निर्दोष ठहरकर बच जाएगा? तू निर्दोष ठहरकर न बचेगा, तुझे अवश्य ही पीना पड़ेगा।
೧೨ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
13 १३ क्योंकि यहोवा की यह वाणी है, मैंने अपनी सौगन्ध खाई है, कि बोस्रा ऐसा उजड़ जाएगा कि लोग चकित होंगे, और उसकी उपमा देकर निन्दा किया करेंगे और श्राप दिया करेंगे; और उसके सारे गाँव सदा के लिये उजाड़ हो जाएँगे।”
೧೩ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
14 १४ मैंने यहोवा की ओर से समाचार सुना है, वरन् जाति-जाति में यह कहने को एक दूत भी भेजा गया है, इकट्ठे होकर एदोम पर चढ़ाई करो; और उससे लड़ने के लिये उठो।
೧೪ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
15 १५ क्योंकि मैंने तुझे जातियों में छोटा, और मनुष्यों में तुच्छ कर दिया है।
೧೫ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
16 १६ हे चट्टान की दरारों में बसे हुए, हे पहाड़ी की चोटी पर किला बनानेवाले! तेरे भयानक रूप और मन के अभिमान ने तुझे धोखा दिया है। चाहे तू उकाब के समान अपना बसेरा ऊँचे स्थान पर बनाए, तो भी मैं वहाँ से तुझे उतार लाऊँगा, यहोवा की यही वाणी है।
೧೬ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
17 १७ “एदोम यहाँ तक उजड़ जाएगा कि जो कोई उसके पास से चले वह चकित होगा, और उसके सारे दुःखों पर ताली बजाएगा।
೧೭ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
18 १८ यहोवा का यह वचन है, कि जैसी सदोम और गमोरा और उनके आस-पास के नगरों के उलट जाने से उनकी दशा हुई थी, वैसी ही उसकी दशा होगी, वहाँ न कोई मनुष्य रहेगा, और न कोई आदमी उसमें टिकेगा।
೧೮ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
19 १९ देखो, वह सिंह के समान यरदन के आस-पास के घने जंगलों से सदा की चराई पर चढ़ेगा, और मैं उनको उसके सामने से झट भगा दूँगा; तब जिसको मैं चुन लूँ, उसको उन पर अधिकारी ठहराऊँगा। मेरे तुल्य कौन है? और कौन मुझ पर मुकद्दमा चलाएगा? वह चरवाहा कहाँ है जो मेरा सामना कर सकेगा?
೧೯ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
20 २० देखो, यहोवा ने एदोम के विरुद्ध क्या युक्ति की है; और तेमान के रहनेवालों के विरुद्ध कैसी कल्पना की है? निश्चय वह भेड़-बकरियों के बच्चों को घसीट ले जाएगा; वह चराई को भेड़-बकरियों से निश्चय खाली कर देगा।
೨೦ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21 २१ उनके गिरने के शब्द से पृथ्वी काँप उठेगी; और ऐसी चिल्लाहट मचेगी जो लाल समुद्र तक सुनाई पड़ेगी।
೨೧ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
22 २२ देखो, वह उकाब के समान निकलकर उड़ आएगा, और बोस्रा पर अपने पंख फैलाएगा, और उस दिन एदोमी शूरवीरों का मन जच्चा स्त्री का सा हो जाएगा।”
೨೨ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
23 २३ दमिश्क के विषय, “हमात और अर्पाद की आशा टूटी है, क्योंकि उन्होंने बुरा समाचार सुना है, वे गल गए हैं; समुद्र पर चिन्ता है, वह शान्त नहीं हो सकता।
೨೩ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
24 २४ दमिश्क बलहीन होकर भागने को फिरती है, परन्तु कँपकँपी ने उसे पकड़ा है, जच्चा की सी पीड़ा उसे उठी हैं।
೨೪ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
25 २५ हाय, वह नगर, वह प्रशंसा योग्य नगर, जो मेरे हर्ष का कारण है, वह छोड़ा गया है!
೨೫ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
26 २६ सेनाओं के यहोवा की यह वाणी है, कि उसके जवान चौकों में गिराए जाएँगे, और सब योद्धाओं का बोलना बन्द हो जाएगा।
೨೬ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
27 २७ मैं दमिश्क की शहरपनाह में आग लगाऊँगा जिससे बेन्हदद के राजभवन भस्म हो जाएँगे।”
೨೭ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
28 २८ “केदार और हासोर के राज्यों के विषय जिन्हें बाबेल के राजा नबूकदनेस्सर ने मार लिया। यहोवा यह कहता है: उठकर केदार पर चढ़ाई करो! पूरब के लोगों का नाश करो!
೨೮ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
29 २९ वे उनके डेरे और भेड़-बकरियाँ ले जाएँगे, उनके तम्बू और सब बर्तन उठाकर ऊँटों को भी हाँक ले जाएँगे, और उन लोगों से पुकारकर कहेंगे, ‘चारों ओर भय ही भय है।’
೨೯“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
30 ३० यहोवा की यह वाणी है, हे हासोर के रहनेवालों भागो! दूर-दूर मारे-मारे फिरो, कहीं जाकर छिपके बसो। क्योंकि बाबेल के राजा नबूकदनेस्सर ने तुम्हारे विरुद्ध युक्ति और कल्पना की है।
೩೦ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
31 ३१ “यहोवा की यह वाणी है, उठकर उस चैन से रहनेवाली जाति के लोगों पर चढ़ाई करो, जो निडर रहते हैं, और बिना किवाड़ और बेंड़े के ऐसे ही बसे हुए हैं।
೩೧ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
32 ३२ उनके ऊँट और अनगिनत गाय-बैल और भेड़-बकरियाँ लूट में जाएँगी, क्योंकि मैं उनके गाल के बाल मुँड़ानेवालों को उड़ाकर सब दिशाओं में तितर-बितर करूँगा; और चारों ओर से उन पर विपत्ति लाकर डालूँगा, यहोवा की यह वाणी है।
೩೨ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
33 ३३ हासोर गीदड़ों का वासस्थान होगा और सदा के लिये उजाड़ हो जाएगा, वहाँ न कोई मनुष्य रहेगा, और न कोई आदमी उसमें टिकेगा।”
೩೩ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
34 ३४ यहूदा के राजा सिदकिय्याह के राज्य के आरम्भ में यहोवा का यह वचन यिर्मयाह भविष्यद्वक्ता के पास एलाम के विषय पहुँचा।
೩೪ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
35 ३५ सेनाओं का यहोवा यह कहता है: “मैं एलाम के धनुष को जो उनके पराक्रम का मुख्य कारण है, तोड़ूँगा;
೩೫“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
36 ३६ और मैं आकाश के चारों ओर से वायु बहाकर उन्हें चारों दिशाओं की ओर यहाँ तक तितर-बितर करूँगा, कि ऐसी कोई जाति न रहेगी जिसमें एलाम भागते हुए न आएँ।
೩೬ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
37 ३७ मैं एलाम को उनके शत्रुओं और उनके प्राण के खोजियों के सामने विस्मित करूँगा, और उन पर अपना कोप भड़काकर विपत्ति डालूँगा। और यहोवा की यह वाणी है, कि तलवार को उन पर चलवाते-चलवाते मैं उनका अन्त कर डालूँगा;
೩೭ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
38 ३८ और मैं एलाम में अपना सिंहासन रखकर उनके राजा और हाकिमों को नाश करूँगा, यहोवा की यही वाणी है।
೩೮ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
39 ३९ “परन्तु यहोवा की यह भी वाणी है, कि अन्त के दिनों में मैं एलाम को बँधुआई से लौटा ले आऊँगा।”
೩೯ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”