< यिर्मयाह 49 >
1 १ अम्मोनियों के विषय यहोवा यह कहता है: “क्या इस्राएल के पुत्र नहीं हैं? क्या उसका कोई वारिस नहीं रहा? फिर मल्काम क्यों गाद के देश का अधिकारी हुआ? और उसकी प्रजा क्यों उसके नगरों में बसने पाई है?
ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?
2 २ यहोवा की यह वाणी है, ऐसे दिन आनेवाले हैं, कि मैं अम्मोनियों के रब्बाह नामक नगर के विरुद्ध युद्ध की ललकार सुनवाऊँगा, और वह उजड़कर खण्डहर हो जाएगा, और उसकी बस्तियाँ फूँक दी जाएँगी; तब जिन लोगों ने इस्राएलियों के देश को अपना लिया है, उनके देश को इस्राएली अपना लेंगे, यहोवा का यही वचन है।
ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
3 ३ “हे हेशबोन हाय-हाय कर; क्योंकि आई नगर नाश हो गया। हे रब्बाह की बेटियों चिल्लाओ! और कमर में टाट बाँधो, छाती पीटती हुई बाड़ों में इधर-उधर दौड़ो! क्योंकि मल्काम अपने याजकों और हाकिमों समेत बँधुआई में जाएगा।
“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.
4 ४ हे भटकनेवाली बेटी! तू अपने देश की तराइयों पर, विशेषकर अपने बहुत ही उपजाऊ तराई पर क्यों फूलती है? तू क्यों यह कहकर अपने रखे हुए धन पर भरोसा रखती है, ‘मेरे विरुद्ध कौन चढ़ाई कर सकेगा?’
ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?
5 ५ प्रभु सेनाओं के यहोवा की यह वाणी है: देख, मैं तेरे चारों ओर के सब रहनेवालों की ओर से तेरे मन में भय उपजाने पर हूँ, और तेरे लोग अपने-अपने सामने की ओर ढकेल दिए जाएँगे; और जब वे मारे-मारे फिरेंगे, तब कोई उन्हें इकट्ठा न करेगा।
ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.
6 ६ परन्तु उसके बाद मैं अम्मोनियों को बँधुआई से लौटा लाऊँगा; यहोवा की यही वाणी है।”
“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
7 ७ एदोम के विषय, सेनाओं का यहोवा यह कहता है: “क्या तेमान में अब कुछ बुद्धि नहीं रही? क्या वहाँ के ज्ञानियों की युक्ति निष्फल हो गई? क्या उनकी बुद्धि जाती रही है?
ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?
8 ८ हे ददान के रहनेवालों भागो, लौट जाओ, वहाँ छिपकर बसो! क्योंकि जब मैं एसाव को दण्ड देने लगूँगा, तब उस पर भारी विपत्ति पड़ेगी।
ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.
9 ९ यदि दाख के तोड़नेवाले तेरे पास आते, तो क्या वे कहीं-कहीं दाख न छोड़ जाते? और यदि चोर रात को आते तो क्या वे जितना चाहते उतना धन लूटकर न ले जाते?
ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?
10 १० क्योंकि मैंने एसाव को उघाड़ा है, मैंने उसके छिपने के स्थानों को प्रगट किया है; यहाँ तक कि वह छिप न सका। उसके वंश और भाई और पड़ोसी सब नाश हो गए हैं और उसका अन्त हो गया।
ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.
11 ११ अपने अनाथ बालकों को छोड़ जाओ, मैं उनको जिलाऊँगा; और तुम्हारी विधवाएँ मुझ पर भरोसा रखें।
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”
12 १२ क्योंकि यहोवा यह कहता है, देखो, जो इसके योग्य न थे कि कटोरे में से पीएँ, उनको तो निश्चय पीना पड़ेगा, फिर क्या तू किसी प्रकार से निर्दोष ठहरकर बच जाएगा? तू निर्दोष ठहरकर न बचेगा, तुझे अवश्य ही पीना पड़ेगा।
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.
13 १३ क्योंकि यहोवा की यह वाणी है, मैंने अपनी सौगन्ध खाई है, कि बोस्रा ऐसा उजड़ जाएगा कि लोग चकित होंगे, और उसकी उपमा देकर निन्दा किया करेंगे और श्राप दिया करेंगे; और उसके सारे गाँव सदा के लिये उजाड़ हो जाएँगे।”
ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
14 १४ मैंने यहोवा की ओर से समाचार सुना है, वरन् जाति-जाति में यह कहने को एक दूत भी भेजा गया है, इकट्ठे होकर एदोम पर चढ़ाई करो; और उससे लड़ने के लिये उठो।
ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”
15 १५ क्योंकि मैंने तुझे जातियों में छोटा, और मनुष्यों में तुच्छ कर दिया है।
“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.
16 १६ हे चट्टान की दरारों में बसे हुए, हे पहाड़ी की चोटी पर किला बनानेवाले! तेरे भयानक रूप और मन के अभिमान ने तुझे धोखा दिया है। चाहे तू उकाब के समान अपना बसेरा ऊँचे स्थान पर बनाए, तो भी मैं वहाँ से तुझे उतार लाऊँगा, यहोवा की यही वाणी है।
ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
17 १७ “एदोम यहाँ तक उजड़ जाएगा कि जो कोई उसके पास से चले वह चकित होगा, और उसके सारे दुःखों पर ताली बजाएगा।
“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
18 १८ यहोवा का यह वचन है, कि जैसी सदोम और गमोरा और उनके आस-पास के नगरों के उलट जाने से उनकी दशा हुई थी, वैसी ही उसकी दशा होगी, वहाँ न कोई मनुष्य रहेगा, और न कोई आदमी उसमें टिकेगा।
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
19 १९ देखो, वह सिंह के समान यरदन के आस-पास के घने जंगलों से सदा की चराई पर चढ़ेगा, और मैं उनको उसके सामने से झट भगा दूँगा; तब जिसको मैं चुन लूँ, उसको उन पर अधिकारी ठहराऊँगा। मेरे तुल्य कौन है? और कौन मुझ पर मुकद्दमा चलाएगा? वह चरवाहा कहाँ है जो मेरा सामना कर सकेगा?
“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
20 २० देखो, यहोवा ने एदोम के विरुद्ध क्या युक्ति की है; और तेमान के रहनेवालों के विरुद्ध कैसी कल्पना की है? निश्चय वह भेड़-बकरियों के बच्चों को घसीट ले जाएगा; वह चराई को भेड़-बकरियों से निश्चय खाली कर देगा।
ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21 २१ उनके गिरने के शब्द से पृथ्वी काँप उठेगी; और ऐसी चिल्लाहट मचेगी जो लाल समुद्र तक सुनाई पड़ेगी।
ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.
22 २२ देखो, वह उकाब के समान निकलकर उड़ आएगा, और बोस्रा पर अपने पंख फैलाएगा, और उस दिन एदोमी शूरवीरों का मन जच्चा स्त्री का सा हो जाएगा।”
ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.
23 २३ दमिश्क के विषय, “हमात और अर्पाद की आशा टूटी है, क्योंकि उन्होंने बुरा समाचार सुना है, वे गल गए हैं; समुद्र पर चिन्ता है, वह शान्त नहीं हो सकता।
ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.
24 २४ दमिश्क बलहीन होकर भागने को फिरती है, परन्तु कँपकँपी ने उसे पकड़ा है, जच्चा की सी पीड़ा उसे उठी हैं।
ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.
25 २५ हाय, वह नगर, वह प्रशंसा योग्य नगर, जो मेरे हर्ष का कारण है, वह छोड़ा गया है!
ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?
26 २६ सेनाओं के यहोवा की यह वाणी है, कि उसके जवान चौकों में गिराए जाएँगे, और सब योद्धाओं का बोलना बन्द हो जाएगा।
ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
27 २७ मैं दमिश्क की शहरपनाह में आग लगाऊँगा जिससे बेन्हदद के राजभवन भस्म हो जाएँगे।”
“ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.”
28 २८ “केदार और हासोर के राज्यों के विषय जिन्हें बाबेल के राजा नबूकदनेस्सर ने मार लिया। यहोवा यह कहता है: उठकर केदार पर चढ़ाई करो! पूरब के लोगों का नाश करो!
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.
29 २९ वे उनके डेरे और भेड़-बकरियाँ ले जाएँगे, उनके तम्बू और सब बर्तन उठाकर ऊँटों को भी हाँक ले जाएँगे, और उन लोगों से पुकारकर कहेंगे, ‘चारों ओर भय ही भय है।’
ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.
30 ३० यहोवा की यह वाणी है, हे हासोर के रहनेवालों भागो! दूर-दूर मारे-मारे फिरो, कहीं जाकर छिपके बसो। क्योंकि बाबेल के राजा नबूकदनेस्सर ने तुम्हारे विरुद्ध युक्ति और कल्पना की है।
“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.
31 ३१ “यहोवा की यह वाणी है, उठकर उस चैन से रहनेवाली जाति के लोगों पर चढ़ाई करो, जो निडर रहते हैं, और बिना किवाड़ और बेंड़े के ऐसे ही बसे हुए हैं।
“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.
32 ३२ उनके ऊँट और अनगिनत गाय-बैल और भेड़-बकरियाँ लूट में जाएँगी, क्योंकि मैं उनके गाल के बाल मुँड़ानेवालों को उड़ाकर सब दिशाओं में तितर-बितर करूँगा; और चारों ओर से उन पर विपत्ति लाकर डालूँगा, यहोवा की यह वाणी है।
ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
33 ३३ हासोर गीदड़ों का वासस्थान होगा और सदा के लिये उजाड़ हो जाएगा, वहाँ न कोई मनुष्य रहेगा, और न कोई आदमी उसमें टिकेगा।”
ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.
34 ३४ यहूदा के राजा सिदकिय्याह के राज्य के आरम्भ में यहोवा का यह वचन यिर्मयाह भविष्यद्वक्ता के पास एलाम के विषय पहुँचा।
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:
35 ३५ सेनाओं का यहोवा यह कहता है: “मैं एलाम के धनुष को जो उनके पराक्रम का मुख्य कारण है, तोड़ूँगा;
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ
36 ३६ और मैं आकाश के चारों ओर से वायु बहाकर उन्हें चारों दिशाओं की ओर यहाँ तक तितर-बितर करूँगा, कि ऐसी कोई जाति न रहेगी जिसमें एलाम भागते हुए न आएँ।
ಆಕಾಶದ ನಾಲ್ಕು ದಿಕ್ಕುಗಳಿಂದ ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿನಿಂದ ಓಡಿಸಲಾದವರು ಸೇರದ ಜನಾಂಗವು ಇರುವುದಿಲ್ಲ.
37 ३७ मैं एलाम को उनके शत्रुओं और उनके प्राण के खोजियों के सामने विस्मित करूँगा, और उन पर अपना कोप भड़काकर विपत्ति डालूँगा। और यहोवा की यह वाणी है, कि तलवार को उन पर चलवाते-चलवाते मैं उनका अन्त कर डालूँगा;
ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.
38 ३८ और मैं एलाम में अपना सिंहासन रखकर उनके राजा और हाकिमों को नाश करूँगा, यहोवा की यही वाणी है।
ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
39 ३९ “परन्तु यहोवा की यह भी वाणी है, कि अन्त के दिनों में मैं एलाम को बँधुआई से लौटा ले आऊँगा।”
“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.