< यिर्मयाह 52 >
1 १ जब सिदकिय्याह राज्य करने लगा, तब वह इक्कीस वर्ष का था; और यरूशलेम में ग्यारह वर्ष तक राज्य करता रहा। उसकी माता का नाम हमूतल था जो लिब्नावासी यिर्मयाह की बेटी थी।
೧ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
2 २ उसने यहोयाकीम के सब कामों के अनुसार वही किया जो यहोवा की दृष्टि में बुरा है।
೨ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
3 ३ निश्चय यहोवा के कोप के कारण यरूशलेम और यहूदा की ऐसी दशा हुई कि अन्त में उसने उनको अपने सामने से दूर कर दिया। और सिदकिय्याह ने बाबेल के राजा से बलवा किया।
೩ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
4 ४ और उसके राज्य के नौवें वर्ष के दसवें महीने के दसवें दिन को बाबेल के राजा नबूकदनेस्सर ने अपनी सारी सेना लेकर यरूशलेम पर चढ़ाई की, और उसने उसके पास छावनी करके उसके चारों ओर किला बनाया।
೪ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
5 ५ अतः नगर घेरा गया, और सिदकिय्याह राजा के ग्यारहवें वर्ष तक घिरा रहा।
೫ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
6 ६ चौथे महीने के नौवें दिन से नगर में अकाल यहाँ तक बढ़ गई, कि लोगों के लिये कुछ रोटी न रही।
೬ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
7 ७ तब नगर की शहरपनाह में दरार की गई, और दोनों दीवारों के बीच जो फाटक राजा की बारी के निकट था, उससे सब योद्धा भागकर रात ही रात नगर से निकल गए, और अराबा का मार्ग लिया। (उस समय कसदी लोग नगर को घेरे हुए थे)।
೭ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
8 ८ परन्तु उनकी सेना ने राजा का पीछा किया, और उसको यरीहो के पास के अराबा में जा पकड़ा; तब उसकी सारी सेना उसके पास से तितर-बितर हो गई।
೮ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
9 ९ तब वे राजा को पकड़कर हमात देश के रिबला में बाबेल के राजा के पास ले गए, और वहाँ उसने उसके दण्ड की आज्ञा दी।
೯ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
10 १० बाबेल के राजा ने सिदकिय्याह के पुत्रों को उसके सामने घात किया, और यहूदा के सारे हाकिमों को भी रिबला में घात किया।
೧೦ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
11 ११ फिर बाबेल के राजा ने सिदकिय्याह की आँखों को फुड़वा डाला, और उसको बेड़ियों से जकड़कर बाबेल तक ले गया, और उसको बन्दीगृह में डाल दिया। वह मृत्यु के दिन तक वहीं रहा।
೧೧ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
12 १२ फिर उसी वर्ष अर्थात् बाबेल के राजा नबूकदनेस्सर के राज्य के उन्नीसवें वर्ष के पाँचवें महीने के दसवें दिन को अंगरक्षकों का प्रधान नबूजरदान जो बाबेल के राजा के सम्मुख खड़ा रहता था यरूशलेम में आया।
೧೨ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
13 १३ उसने यहोवा के भवन और राजभवन और यरूशलेम के सब बड़े-बड़े घरों को आग लगवाकर फुँकवा दिया।
೧೩ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
14 १४ और कसदियों की सारी सेना ने जो अंगरक्षकों के प्रधान के संग थी, यरूशलेम के चारों ओर की सब शहरपनाह को ढा दिया।
೧೪ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
15 १५ अंगरक्षकों का प्रधान नबूजरदान कंगाल लोगों में से कितनों को, और जो लोग नगर में रह गए थे, और जो लोग बाबेल के राजा के पास भाग गए थे, और जो कारीगर रह गए थे, उन सब को बन्दी बनाकर ले गया।
೧೫ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
16 १६ परन्तु, दिहात के कंगाल लोगों में से कितनों को अंगरक्षकों के प्रधान नबूजरदान ने दाख की बारियों की सेवा और किसानी करने को छोड़ दिया।
೧೬ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
17 १७ यहोवा के भवन में जो पीतल के खम्भे थे, और कुर्सियों और पीतल के हौज जो यहोवा के भवन में थे, उन सभी को कसदी लोग तोड़कर उनका पीतल बाबेल को ले गए।
೧೭ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
18 १८ और हाँड़ियों, फावड़ियों, कैंचियों, कटोरों, धूपदानों, और पीतल के और सब पात्रों को, जिनसे लोग सेवा टहल करते थे, वे ले गए।
೧೮ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
19 १९ और तसलों, करछों, कटोरियों, हाँड़ियों, दीवटों, धूपदानों, और कटोरों में से जो कुछ सोने का था, उनके सोने को, और जो कुछ चाँदी का था उनकी चाँदी को भी अंगरक्षकों का प्रधान ले गया।
೧೯ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
20 २० दोनों खम्भे, एक हौज और पीतल के बारहों बैल जो पायों के नीचे थे, इन सब को तो सुलैमान राजा ने यहोवा के भवन के लिये बनवाया था, और इन सब का पीतल तौल से बाहर था।
೨೦ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
21 २१ जो खम्भे थे, उनमें से एक-एक की ऊँचाई अठारह हाथ, और घेरा बारह हाथ, और मोटाई चार अंगुल की थी, और वे खोखले थे।
೨೧ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
22 २२ एक-एक की कँगनी पीतल की थी, और एक-एक कँगनी की ऊँचाई पाँच हाथ की थी; और उस पर चारों ओर जो जाली और अनार बने थे वे सब पीतल के थे।
೨೨ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
23 २३ कँगनियों के चारों ओर छियानवे अनार बने थे, और जाली के ऊपर चारों ओर एक सौ अनार थे।
೨೩ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
24 २४ अंगरक्षकों के प्रधान ने सरायाह महायाजक और उसके नीचे के सपन्याह याजक, और तीनों डेवढ़ीदारों को पकड़ लिया;
೨೪ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
25 २५ और नगर में से उसने एक खोजा पकड़ लिया, जो योद्धाओं के ऊपर ठहरा था; और जो पुरुष राजा के सम्मुख रहा करते थे, उनमें से सात जन जो नगर में मिले; और सेनापति का मुंशी जो साधारण लोगों को सेना में भरती करता था; और साधारण लोगों में से साठ पुरुष जो नगर में मिले,
೨೫ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
26 २६ इन सब को अंगरक्षकों का प्रधान नबूजरदान रिबला में बाबेल के राजा के पास ले गया।
೨೬ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
27 २७ तब बाबेल के राजा ने उन्हें हमात देश के रिबला में ऐसा मारा कि वे मर गए। इस प्रकार यहूदी अपने देश से बँधुए होकर चले गए।
೨೭ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
28 २८ जिन लोगों को नबूकदनेस्सर बँधुआ करके ले गया, वे ये हैं, अर्थात् उसके राज्य के सातवें वर्ष में तीन हजार तेईस यहूदी;
೨೮ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
29 २९ फिर अपने राज्य के अठारहवें वर्ष में नबूकदनेस्सर यरूशलेम से आठ सौ बत्तीस प्राणियों को बँधुआ करके ले गया;
೨೯ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.
30 ३० फिर नबूकदनेस्सर के राज्य के तेईसवें वर्ष में अंगरक्षकों का प्रधान नबूजरदान सात सौ पैंतालीस यहूदी जनों को बँधुए करके ले गया; सब प्राणी मिलकर चार हजार छः सौ हुए।
೩೦ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
31 ३१ फिर यहूदा के राजा यहोयाकीन की बँधुआई के सैंतीसवें वर्ष में अर्थात् जिस वर्ष बाबेल का राजा एवील्मरोदक राजगद्दी पर विराजमान हुआ, उसी के बारहवें महीने के पच्चीसवें दिन को उसने यहूदा के राजा यहोयाकीन को बन्दीगृह से निकालकर बड़ा पद दिया;
೩೧ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
32 ३२ और उससे मधुर-मधुर वचन कहकर, जो राजा उसके साथ बाबेल में बँधुए थे, उनके सिंहासनों से उसके सिंहासन को अधिक ऊँचा किया।
೩೨ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
33 ३३ उसके बन्दीगृह के वस्त्र बदल दिए; और वह जीवन भर नित्य राजा के सम्मुख भोजन करता रहा;
೩೩ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
34 ३४ और प्रतिदिन के खर्च के लिये बाबेल के राजा के यहाँ से उसको नित्य कुछ मिलने का प्रबन्ध हुआ। यह प्रबन्ध उसकी मृत्यु के दिन तक उसके जीवन भर लगातार बना रहा।
೩೪ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.