< अय्यूब 11 >

1 तब नामाती सोपर ने कहा,
ಆಗ ನಾಮಾಥ್ಯನಾದ ಚೋಫರನು ಹೀಗೆಂದನು:
2 “बहुत सी बातें जो कही गई हैं, क्या उनका उत्तर देना न चाहिये? क्या यह बकवादी मनुष्य धर्मी ठहराया जाए?
“ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಬಾಯಿ ಬಡುಕನು ನೀತಿವಂತನೆಂದು ಎನಿಸಿಕೊಳ್ಳುವನೋ?
3 क्या तेरे बड़े बोल के कारण लोग चुप रहें? और जब तू ठट्ठा करता है, तो क्या कोई तुझे लज्जित न करे?
ನಿನ್ನ ವ್ಯರ್ಥ ಮಾತಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ಖಂಡಿಸುವುದಿಲ್ಲವೋ?
4 तू तो यह कहता है, ‘मेरा सिद्धान्त शुद्ध है और मैं परमेश्वर की दृष्टि में पवित्र हूँ।’
ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ.
5 परन्तु भला हो, कि परमेश्वर स्वयं बातें करें, और तेरे विरुद्ध मुँह खोले,
ಆಹಾ, ದೇವರು ಮಾತನಾಡಿ, ನಿನ್ನ ವಿರೋಧವಾಗಿ ತಮ್ಮ ತುಟಿಗಳನ್ನು ತೆರೆದು,
6 और तुझ पर बुद्धि की गुप्त बातें प्रगट करे, कि उनका मर्म तेरी बुद्धि से बढ़कर है। इसलिए जान ले, कि परमेश्वर तेरे अधर्म में से बहुत कुछ भूल जाता है।
ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ.
7 “क्या तू परमेश्वर का गूढ़ भेद पा सकता है? और क्या तू सर्वशक्तिमान का मर्म पूरी रीति से जाँच सकता है?
“ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ?
8 वह आकाश सा ऊँचा है; तू क्या कर सकता है? वह अधोलोक से गहरा है, तू कहाँ समझ सकता है? (Sheol h7585)
ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ? (Sheol h7585)
9 उसकी माप पृथ्वी से भी लम्बी है और समुद्र से चौड़ी है।
ಅದರ ಅಳತೆ ಭೂಮಿಗಿಂತ ಉದ್ದವೂ, ಸಮುದ್ರಕ್ಕಿಂತ ಅಗಲವೂ ಆಗಿದೆ.
10 १० जब परमेश्वर बीच से गुजरे, बन्दी बना ले और अदालत में बुलाए, तो कौन उसको रोक सकता है?
“ದೇವರು ಬಂದು ನಿನ್ನನ್ನು ಸೆರೆಮನೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ, ದೇವರನ್ನು ತಡೆಯುವವರು ಯಾರು?
11 ११ क्योंकि वह पाखण्डी मनुष्यों का भेद जानता है, और अनर्थ काम को बिना सोच विचार किए भी जान लेता है।
ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ?
12 १२ निर्बुद्धि मनुष्य बुद्धिमान हो सकता है; यद्यपि मनुष्य जंगली गदहे के बच्‍चे के समान जन्म ले;
ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ.
13 १३ “यदि तू अपना मन शुद्ध करे, और परमेश्वर की ओर अपने हाथ फैलाए,
“ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,
14 १४ और यदि कोई अनर्थ काम तुझ से हुए हो उसे दूर करे, और अपने डेरों में कोई कुटिलता न रहने दे,
ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ,
15 १५ तब तो तू निश्चय अपना मुँह निष्कलंक दिखा सकेगा; और तू स्थिर होकर कभी न डरेगा।
ನೀನು ದೋಷದಿಂದ ಬಿಡುಗಡೆಯಾಗಿ ನಿನ್ನ ಮುಖವನ್ನು ಎತ್ತುವಿ; ಹೌದು, ನೀನು ಸ್ಥಿರವಾಗಿದ್ದು, ಹೆದರದೆ ಇರುವಿ.
16 १६ तब तू अपना दुःख भूल जाएगा, तू उसे उस पानी के समान स्मरण करेगा जो बह गया हो।
ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
17 १७ और तेरा जीवन दोपहर से भी अधिक प्रकाशमान होगा; और चाहे अंधेरा भी हो तो भी वह भोर सा हो जाएगा।
ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು; ನಿನ್ನ ಕತ್ತಲೆಯು ಬೆಳಗಿನಂತೆ ಇರುವುದು.
18 १८ और तुझे आशा होगी, इस कारण तू निर्भय रहेगा; और अपने चारों ओर देख देखकर तू निर्भय विश्राम कर सकेगा।
ನೀನು ನಿರೀಕ್ಷೆ ಇದೆ ಎಂದು ಭರವಸೆಯಿಂದ ಇರುವಿ; ನೀನು ನಿನ್ನ ಬಗ್ಗೆ ಯೋಚಿಸಿ ಭರವಸೆಯಿಂದ ವಿಶ್ರಾಂತಿ ತೆಗೆದುಕೊಳ್ಳುವಿ.
19 १९ और जब तू लेटेगा, तब कोई तुझे डराएगा नहीं; और बहुत लोग तुझे प्रसन्न करने का यत्न करेंगे।
ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಅನೇಕರು ನಿನ್ನಿಂದ ಮೆಚ್ಚಿಕೆಯನ್ನು ಅಪೇಕ್ಷಿಸುವರು.
20 २० परन्तु दुष्ट लोगों की आँखें धुँधली हो जाएँगी, और उन्हें कोई शरणस्थान न मिलेगा और उनकी आशा यही होगी कि प्राण निकल जाए।”
ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”

< अय्यूब 11 >