< अय्यूब 34 >

1 फिर एलीहू यह कहता गया;
ಎಲೀಹು ಮುಂದುವರೆಸಿ ಹೇಳಿದ್ದೇನೆಂದರೆ:
2 “हे बुद्धिमानों! मेरी बातें सुनो, हे ज्ञानियों! मेरी बात पर कान लगाओ,
ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ಪಂಡಿತರೇ, ನನಗೆ ಕಿವಿಗೊಡಿರಿ.
3 क्योंकि जैसे जीभ से चखा जाता है, वैसे ही वचन कान से परखे जाते हैं।
ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
4 जो कुछ ठीक है, हम अपने लिये चुन लें; जो भला है, हम आपस में समझ-बूझ लें।
ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ; ಒಳ್ಳೆಯದು ಏನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
5 क्योंकि अय्यूब ने कहा है, ‘मैं निर्दोष हूँ, और परमेश्वर ने मेरा हक़ मार दिया है।
“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.
6 यद्यपि मैं सच्चाई पर हूँ, तो भी झूठा ठहरता हूँ, मैं निरपराध हूँ, परन्तु मेरा घाव असाध्य है।’
ನನ್ನಲ್ಲಿ ನ್ಯಾಯವಿದ್ದರೂ ನನ್ನನ್ನು ಸುಳ್ಳುಗಾರನೆಂದು ಪರಿಗಣಿಸಲಾಗಿದೆ; ನಾನು ನಿರ್ದೋಷಿಯಾಗಿದ್ದರೂ ದೇವರ ಬಾಣವು ಗುಣಪಡಿಸಲಾಗದ ಗಾಯವನ್ನು ನನಗೆ ಉಂಟುಮಾಡಿದೆ,’ ಎಂದು ಹೇಳುತ್ತಿದ್ದಾನೆ.”
7 अय्यूब के तुल्य कौन शूरवीर है, जो परमेश्वर की निन्दा पानी के समान पीता है,
ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿಯುವಂತೆ ಅಪಹಾಸ್ಯ ಮಾಡುತ್ತಿದ್ದಾನೆ.
8 जो अनर्थ करनेवालों का साथ देता, और दुष्ट मनुष्यों की संगति रखता है?
ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ ದುಷ್ಟಜನರ ಸಂಗಡ ನಡೆದಾಡುತ್ತಾನೆ.
9 उसने तो कहा है, ‘मनुष्य को इससे कुछ लाभ नहीं कि वह आनन्द से परमेश्वर की संगति रखे।’
“ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.”
10 १० “इसलिए हे समझवालों! मेरी सुनो, यह सम्भव नहीं कि परमेश्वर दुष्टता का काम करे, और सर्वशक्तिमान बुराई करे।
“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.
11 ११ वह मनुष्य की करनी का फल देता है, और प्रत्येक को अपनी-अपनी चाल का फल भुगताता है।
ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.
12 १२ निःसन्देह परमेश्वर दुष्टता नहीं करता और न सर्वशक्तिमान अन्याय करता है।
ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ.
13 १३ किसने पृथ्वी को उसके हाथ में सौंप दिया? या किसने सारे जगत का प्रबन्ध किया?
ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು?
14 १४ यदि वह मनुष्य से अपना मन हटाए और अपना आत्मा और श्वास अपने ही में समेट ले,
ಒಂದು ವೇಳೆ, ದೇವರು ತಮ್ಮ ಆತ್ಮವನ್ನೂ, ಶ್ವಾಸವನ್ನೂ, ನಮ್ಮಿಂದ ಹಿಂದಕ್ಕೆ ತೆಗೆದುಕೊಳ್ಳಲು ಮನಸ್ಸುಮಾಡುವುದಾದರೆ,
15 १५ तो सब देहधारी एक संग नाश हो जाएँगे, और मनुष्य फिर मिट्टी में मिल जाएगा।
ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು; ಇಡೀ ಮಾನವಕುಲವು ಧೂಳಿಗೆ ಹಿಂದಿರುಗುವುದು.”
16 १६ “इसलिए इसको सुनकर समझ रख, और मेरी इन बातों पर कान लगा।
“ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; ನನ್ನ ಮಾತಿಗೆ ಕಿವಿಗೊಡು.
17 १७ जो न्याय का बैरी हो, क्या वह शासन करे? जो पूर्ण धर्मी है, क्या तू उसे दुष्ट ठहराएगा?
ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ?
18 १८ वह राजा से कहता है, ‘तू नीच है’; और प्रधानों से, ‘तुम दुष्ट हो।’
ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ?
19 १९ परमेश्वर तो हाकिमों का पक्ष नहीं करता और धनी और कंगाल दोनों को अपने बनाए हुए जानकर उनमें कुछ भेद नहीं करता।
ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.
20 २० आधी रात को पल भर में वे मर जाते हैं, और प्रजा के लोग हिलाए जाते और जाते रहते हैं। और प्रतापी लोग बिना हाथ लगाए उठा लिए जाते हैं।
ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”
21 २१ “क्योंकि परमेश्वर की आँखें मनुष्य की चाल चलन पर लगी रहती हैं, और वह उसकी सारी चाल को देखता रहता है।
“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.
22 २२ ऐसा अंधियारा या घोर अंधकार कहीं नहीं है जिसमें अनर्थ करनेवाले छिप सके।
ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.
23 २३ क्योंकि उसने मनुष्य का कुछ समय नहीं ठहराया ताकि वह परमेश्वर के सम्मुख अदालत में जाए।
ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.
24 २४ वह बड़े-बड़े बलवानों को बिना पूछपाछ के चूर-चूर करता है, और उनके स्थान पर दूसरों को खड़ा कर देता है।
ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.
25 २५ इसलिए कि वह उनके कामों को भली भाँति जानता है, वह उन्हें रात में ऐसा उलट देता है कि वे चूर-चूर हो जाते हैं।
ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು.
26 २६ वह उन्हें दुष्ट जानकर सभी के देखते मारता है,
ಅವರ ದುಷ್ಟತನಕ್ಕಾಗಿ ದೇವರು ಎಲ್ಲರು ನೋಡುವಂತೆ ಅವರನ್ನು ಶಿಕ್ಷಿಸುವರು.
27 २७ क्योंकि उन्होंने उसके पीछे चलना छोड़ दिया है, और उसके किसी मार्ग पर चित्त न लगाया,
ಅವರು ದೇವರನ್ನು ಹಿಂಬಾಲಿಸದೆ, ದೇವರ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.
28 २८ यहाँ तक कि उनके कारण कंगालों की दुहाई उस तक पहुँची और उसने दीन लोगों की दुहाई सुनी।
ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.
29 २९ जब वह चुप रहता है तो उसे कौन दोषी ठहरा सकता है? और जब वह मुँह फेर ले, तब कौन उसका दर्शन पा सकता है? जाति भर के साथ और अकेले मनुष्य, दोनों के साथ उसका बराबर व्यवहार है
ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?
30 ३० ताकि भक्तिहीन राज्य करता न रहे, और प्रजा फंदे में फँसाई न जाए।
ಭಕ್ತಿಹೀನನು ಆಳಬಾರದು, ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.”
31 ३१ “क्या किसी ने कभी परमेश्वर से कहा, ‘मैंने दण्ड सहा, अब मैं भविष्य में बुराई न करूँगा,
“ಒಂದು ವೇಳೆ, ಯಾರಾದರೂ ದೇವರಿಗೆ, ‘ನಾನು ಪಾಪಮಾಡಿದ್ದೇನೆ, ಆದರೆ ಇನ್ನು ಮುಂದೆ ಪಾಪಮಾಡುವುದಿಲ್ಲ.
32 ३२ जो कुछ मुझे नहीं सूझ पड़ता, वह तू मुझे सिखा दे; और यदि मैंने टेढ़ा काम किया हो, तो भविष्य में वैसा न करूँगा?’
ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ.
33 ३३ क्या वह तेरे ही मन के अनुसार बदला पाए क्योंकि तू उससे अप्रसन्न है? क्योंकि तुझे निर्णय करना है, न कि मुझे; इस कारण जो कुछ तुझे समझ पड़ता है, वह कह दे।
ಆದರೆ ನೀನು ಪಶ್ಚಾತ್ತಾಪಪಡಲು ನಿರಾಕರಿಸಿದಾಗ, ದೇವರು ನಿನಗೆ ತಕ್ಕ ದಂಡನೆಯನ್ನು ಕೊಡಬಾರದೆ? ಇದನ್ನು ನೀನೇ ತೀರ್ಮಾನಿಸು, ನಾನು ತೀರ್ಮಾನಿಸುವುದಿಲ್ಲ; ಆದ್ದರಿಂದ ನಿನಗೆ ತಿಳಿದದ್ದನ್ನು ನನಗೆ ತಿಳಿಸು.”
34 ३४ सब ज्ञानी पुरुष वरन् जितने बुद्धिमान मेरी सुनते हैं वे मुझसे कहेंगे,
“ತಿಳುವಳಿಕೆಯುಳ್ಳವರೂ, ನನ್ನನ್ನು ಆಲಿಸಿದ ಜ್ಞಾನಿಗಳೂ ನಿನ್ನ ವಿಷಯವಾಗಿ:
35 ३५ ‘अय्यूब ज्ञान की बातें नहीं कहता, और न उसके वचन समझ के साथ होते हैं।’
‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ; ಅವನ ಮಾತುಗಳು ಬುದ್ಧಿಯಿಲ್ಲದ ಮಾತುಗಳು.
36 ३६ भला होता, कि अय्यूब अन्त तक परीक्षा में रहता, क्योंकि उसने अनर्थकारियों के समान उत्तर दिए हैं।
ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ. ಏಕೆಂದರೆ ಅವನು ದುಷ್ಟರ ಹಾಗೆ ಉತ್ತರ ಕೊಡುತ್ತಾನೆ.
37 ३७ और वह अपने पाप में विरोध बढ़ाता है; और हमारे बीच ताली बजाता है, और परमेश्वर के विरुद्ध बहुत सी बातें बनाता है।”
ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.”

< अय्यूब 34 >