< यहोशू 22 >

1 उस समय यहोशू ने रूबेनियों, गादियों, और मनश्शे के आधे गोत्रियों को बुलवाकर कहा,
ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ,
2 “जो-जो आज्ञा यहोवा के दास मूसा ने तुम्हें दी थीं वे सब तुम ने मानी हैं, और जो-जो आज्ञा मैंने तुम्हें दी हैं उन सभी को भी तुम ने माना है;
“ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.
3 तुम ने अपने भाइयों को इतने दिनों में आज के दिन तक नहीं छोड़ा, परन्तु अपने परमेश्वर यहोवा की आज्ञा तुम ने चौकसी से मानी है।
ಈ ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ.
4 और अब तुम्हारे परमेश्वर यहोवा ने तुम्हारे भाइयों को अपने वचन के अनुसार विश्राम दिया है; इसलिए अब तुम लौटकर अपने-अपने डेरों को, और अपनी-अपनी निज भूमि में, जिसे यहोवा के दास मूसा ने यरदन पार तुम्हें दिया है चले जाओ।
ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
5 केवल इस बात की पूरी चौकसी करना कि जो-जो आज्ञा और व्यवस्था यहोवा के दास मूसा ने तुम को दी है उसको मानकर अपने परमेश्वर यहोवा से प्रेम रखो, उसके सारे मार्गों पर चलो, उसकी आज्ञाएँ मानो, उसकी भक्ति में लौलीन रहो, और अपने सारे मन और सारे प्राण से उसकी सेवा करो।”
ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ
6 तब यहोशू ने उन्हें आशीर्वाद देकर विदा किया; और वे अपने-अपने डेरे को चले गए।
ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.
7 मनश्शे के आधे गोत्रियों को मूसा ने बाशान में भाग दिया था; परन्तु दूसरे आधे गोत्र को यहोशू ने उनके भाइयों के बीच यरदन के पश्चिम की ओर भाग दिया। उनको जब यहोशू ने विदा किया कि अपने-अपने डेरे को जाएँ,
ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ
8 तब उनको भी आशीर्वाद देकर कहा, “बहुत से पशु, और चाँदी, सोना, पीतल, लोहा, और बहुत से वस्त्र और बहुत धन-सम्पत्ति लिए हुए अपने-अपने डेरे को लौट आओ; और अपने शत्रुओं की लूट की सम्पत्ति को अपने भाइयों के संग बाँट लेना।”
ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು
9 तब रूबेनी, गादी, और मनश्शे के आधे गोत्री इस्राएलियों के पास से, अर्थात् कनान देश के शीलो नगर से, अपनी गिलाद नामक निज भूमि में, जो मूसा के द्वारा दी गई, यहोवा की आज्ञा के अनुसार उनकी निज भूमि हो गई थी, जाने की मनसा से लौट गए।
ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.
10 १० और जब रूबेनी, गादी, और मनश्शे के आधे गोत्री यरदन की उस तराई में पहुँचे जो कनान देश में है, तब उन्होंने वहाँ देखने के योग्य एक बड़ी वेदी बनाई।
೧೦ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.
11 ११ और इसका समाचार इस्राएलियों के सुनने में आया, कि रूबेनियों, गादियों, और मनश्शे के आधे गोत्रियों ने कनान देश के सामने यरदन की तराई में, अर्थात् उसके उस पार जो इस्राएलियों का है, एक वेदी बनाई है।
೧೧ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,
12 १२ जब इस्राएलियों ने यह सुना, तबइस्राएलियों की सारी मण्डली उनसे लड़ने के लिये चढ़ाई करने को शीलो में इकट्ठी हुई।
೧೨ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.
13 १३ तब इस्राएलियों ने रूबेनियों, गादियों, और मनश्शे के आधे गोत्रियों के पास गिलाद देश में एलीआजर याजक के पुत्र पीनहास को,
೧೩ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು
14 १४ और उसके संग दस प्रधानों को, अर्थात् इस्राएल के एक-एक गोत्र में से पूर्वजों के घरानों के एक-एक प्रधान को भेजा, और वे इस्राएल के हजारों में अपने-अपने पूर्वजों के घरानों के मुख्य पुरुष थे।
೧೪ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.
15 १५ वे गिलाद देश में रूबेनियों, गादियों, और मनश्शे के आधे गोत्रियों के पास जाकर कहने लगे,
೧೫ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,
16 १६ “यहोवा की सारी मण्डली यह कहती है, कि ‘तुम ने इस्राएल के परमेश्वर यहोवा का यह कैसा विश्वासघात किया; आज जो तुम ने एक वेदी बना ली है, इसमें तुम ने उसके पीछे चलना छोड़कर उसके विरुद्ध आज बलवा किया है?
೧೬“ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.
17 १७ सुनो, पोर के विषय का अधर्म हमारे लिये कुछ कम था, यद्यपि यहोवा की मण्डली को भारी दण्ड मिला तो भी आज के दिन तक हम उस अधर्म से शुद्ध नहीं हुए; क्या वह तुम्हारी दृष्टि में एक छोटी बात है,
೧೭ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.
18 १८ कि आज तुम यहोवा को त्याग कर उसके पीछे चलना छोड़ देते हो? क्या तुम यहोवा से फिर जाते हो, और कल वह इस्राएल की सारी मण्डली से क्रोधित होगा।
೧೮ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.
19 १९ परन्तु यदि तुम्हारी निज भूमि अशुद्ध हो, तो पार आकर यहोवा की निज भूमि में, जहाँ यहोवा का निवास रहता है, हम लोगों के बीच में अपनी-अपनी निज भूमि कर लो; परन्तु हमारे परमेश्वर यहोवा की वेदी को छोड़ और कोई वेदी बनाकर न तो यहोवा से बलवा करो, और न हम से।
೧೯ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.
20 २० देखो, जब जेरह के पुत्र आकान ने अर्पण की हुई वस्तु के विषय में विश्वासघात किया, तब क्या यहोवा का कोप इस्राएल की पूरी मण्डली पर न भड़का? और उस पुरुष के अधर्म का प्राणदण्ड अकेले उसी को न मिला।’”
೨೦ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.
21 २१ तब रूबेनियों, गादियों, और मनश्शे के आधे गोत्रियों ने इस्राएल के हजारों के मुख्य पुरुषों को यह उत्तर दिया,
೨೧ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:
22 २२ “यहोवा जो ईश्वरों का परमेश्वर है, ईश्वरों का परमेश्वर यहोवा इसको जानता है, और इस्राएली भी इसे जान लेंगे, कि यदि यहोवा से फिरके या उसका विश्वासघात करके हमने यह काम किया हो, तो तू आज हमको जीवित न छोड़,
೨೨“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.
23 २३ यदि आज के दिन हमने वेदी को इसलिए बनाया हो कि यहोवा के पीछे चलना छोड़ दें, या इसलिए कि उस पर होमबलि, अन्नबलि, या मेलबलि चढ़ाएँ, तो यहोवा आप इसका हिसाब ले;
೨೩ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.
24 २४ परन्तु हमने इसी विचार और मनसा से यह किया है कि कहीं भविष्य में तुम्हारी सन्तान हमारी सन्तान से यह न कहने लगे, ‘तुम को इस्राएल के परमेश्वर यहोवा से क्या काम?
೨೪ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’
25 २५ क्योंकि, हे रूबेनियों, हे गादियो, यहोवा ने जो हमारे और तुम्हारे बीच में यरदन को सीमा ठहरा दिया है, इसलिए यहोवा में तुम्हारा कोई भाग नहीं है।’ ऐसा कहकर तुम्हारी सन्तान हमारी सन्तान में से यहोवा का भय छुड़ा देगी।
೨೫ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.
26 २६ इसलिए हमने कहा, ‘आओ, हम अपने लिये एक वेदी बना लें, वह होमबलि या मेलबलि के लिये नहीं,
೨೬ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’
27 २७ परन्तु इसलिए कि हमारे और तुम्हारे, और हमारे बाद हमारे और तुम्हारे वंश के बीच में साक्षी का काम दे; इसलिए कि हम होमबलि, मेलबलि, और बलिदान चढ़ाकर यहोवा के सम्मुख उसकी उपासना करें; और भविष्य में तुम्हारी सन्तान हमारी सन्तान से यह न कहने पाए, कि यहोवा में तुम्हारा कोई भाग नहीं।’
೨೭ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.
28 २८ इसलिए हमने कहा, ‘जब वे लोग भविष्य में हम से या हमारे वंश से यह कहने लगें, तब हम उनसे कहेंगे, कि यहोवा के वेदी के नमूने पर बनी हुई इस वेदी को देखो, जिसे हमारे पुरखाओं ने होमबलि या मेलबलि के लिये नहीं बनाया; परन्तु इसलिए बनाया था कि हमारे और तुम्हारे बीच में साक्षी का काम दे।’
೨೮ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.
29 २९ यह हम से दूर रहे कि यहोवा से फिरकर आज उसके पीछे चलना छोड़ दें, और अपने परमेश्वर यहोवा की उस वेदी को छोड़कर जो उसके निवास के सामने है होमबलि, और अन्नबलि, या मेलबलि के लिये दूसरी वेदी बनाएँ।”
೨೯ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.
30 ३० रूबेनियों, गादियों, और मनश्शे के आधे गोत्रियों की इन बातों को सुनकर पीनहास याजक और उसके संग मण्डली के प्रधान, जो इस्राएल के हजारों के मुख्य पुरुष थे, वे अति प्रसन्न हुए।
೩೦ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.
31 ३१ और एलीआजर याजक के पुत्र पीनहास ने रूबेनियों, गादियों, और मनश्शेइयों से कहा, “तुम ने जो यहोवा का ऐसा विश्वासघात नहीं किया, इससे आज हमने यह जान लिया कि यहोवा हमारे बीच में है: और तुम लोगों ने इस्राएलियों को यहोवा के हाथ से बचाया है।”
೩೧ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.
32 ३२ तब एलीआजर याजक का पुत्र पीनहास प्रधानों समेत रूबेनियों और गादियों के पास से गिलाद होते हुए कनान देश में इस्राएलियों के पास लौट गया: और यह वृत्तान्त उनको कह सुनाया।
೩೨ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು
33 ३३ तब इस्राएली प्रसन्न हुए; और परमेश्वर को धन्य कहा, और रूबेनियों और गादियों से लड़ने और उनके रहने का देश उजाड़ने के लिये चढ़ाई करने की चर्चा फिर न की।
೩೩ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.
34 ३४ और रूबेनियों और गादियों ने यह कहकर, “यह वेदी हमारे और उनके मध्य में इस बात की साक्षी ठहरी है, कि यहोवा ही परमेश्वर है;” उस वेदी का नाम एद रखा।
೩೪ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.

< यहोशू 22 >