< न्यायियों 1 >

1 यहोशू के मरने के बाद इस्राएलियों ने यहोवा से पूछा, “कनानियों के विरुद्ध लड़ने को हमारी ओर से पहले कौन चढ़ाई करेगा?”
ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.
2 यहोवा ने उत्तर दिया, “यहूदा चढ़ाई करेगा; सुनो, मैंने इस देश को उसके हाथ में दे दिया है।”
ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಹೋಗಲಿ; ನಾನು ಆ ದೇಶವನ್ನು ಇವರ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ,” ಎಂದರು.
3 तब यहूदा ने अपने भाई शिमोन से कहा, “मेरे संग मेरे भाग में आ, कि हम कनानियों से लड़ें; और मैं भी तेरे भाग में जाऊँगा।” अतः शिमोन उसके संग चला।
ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು.
4 और यहूदा ने चढ़ाई की, और यहोवा ने कनानियों और परिज्जियों को उसके हाथ में कर दिया; तब उन्होंने बेजेक में उनमें से दस हजार पुरुष मार डाले।
ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
5 और बेजेक में अदोनीबेजेक को पाकर वे उससे लड़े, और कनानियों और परिज्जियों को मार डाला।
ಅವರು ಬೆಜೆಕಿನಲ್ಲಿ ಅರಸನಾದ ಅದೋನೀಬೆಜೆಕನನ್ನು ಸಂಧಿಸಿ, ಅವನ ವಿರೋಧವಾಗಿ ಯುದ್ಧಮಾಡಿ, ಕಾನಾನ್ಯರನ್ನೂ ಪೆರಿಜೀಯರನ್ನೂ ಕೊಂದುಹಾಕಿದರು.
6 परन्तु अदोनीबेजेक भागा; तब उन्होंने उसका पीछा करके उसे पकड़ लिया, और उसके हाथ पाँव के अँगूठे काट डाले।
ಆದರೆ ಅದೋನೀಬೆಜೆಕನು ಓಡಿ ಹೋದದ್ದರಿಂದ, ಅವನನ್ನು ಹಿಂದಟ್ಟಿ ಹಿಡಿದು, ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
7 तब अदोनीबेजेक ने कहा, “हाथ पाँव के अँगूठे काटे हुए सत्तर राजा मेरी मेज के नीचे टुकड़े बीनते थे; जैसा मैंने किया था, वैसा ही बदला परमेश्वर ने मुझे दिया है।” तब वे उसे यरूशलेम को ले गए और वहाँ वह मर गया।
ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.
8 यहूदियों ने यरूशलेम से लड़कर उसे ले लिया, और तलवार से उसके निवासियों को मार डाला, और नगर को फूँक दिया।
ಯೆಹೂದ ಗೋತ್ರದವರು ಯೆರೂಸಲೇಮಿನವರ ಮೇಲೆ ಯುದ್ಧಮಾಡಿ, ಅಲ್ಲಿದ್ದವರನ್ನು ಖಡ್ಗದಿಂದ ಸಂಹರಿಸಿ, ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
9 और तब यहूदी पहाड़ी देश और दक्षिण देश, और नीचे के देश में रहनेवाले कनानियों से लड़ने को गए।
ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.
10 १० और यहूदा ने उन कनानियों पर चढ़ाई की जो हेब्रोन में रहते थे (हेब्रोन का नाम तो पूर्वकाल में किर्यतअर्बा था); और उन्होंने शेशै, अहीमन, और तल्मै को मार डाला।
ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.
11 ११ वहाँ से उसने जाकर दबीर के निवासियों पर चढ़ाई की। दबीर का नाम तो पूर्वकाल में किर्यत्सेपेर था।
ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು.
12 १२ तब कालेब ने कहा, “जो किर्यत्सेपेर को मारकर ले ले उससे मैं अपनी बेटी अकसा का विवाह कर दूँगा।”
ಕಾಲೇಬನು, “ಕಿರ್ಯತ್ ಸೇಫೆರ ಮೇಲೆ ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.
13 १३ इस पर कालेब के छोटे भाई कनजी ओत्नीएल ने उसे ले लिया; और उसने उससे अपनी बेटी अकसा का विवाह कर दिया।
ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.
14 १४ और जब वह ओत्नीएल के पास आई, तब उसने उसको अपने पिता से कुछ भूमि माँगने को उभारा; फिर वह अपने गदहे पर से उतरी, तब कालेब ने उससे पूछा, “तू क्या चाहती है?”
ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.
15 १५ वह उससे बोली, “मुझे आशीर्वाद दे; तूने मुझे दक्षिण देश तो दिया है, तो जल के सोते भी दे।” इस प्रकार कालेब ने उसको ऊपर और नीचे के दोनों सोते दे दिए।
ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ನೀನು ನನಗೆ ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
16 १६ मूसा के साले, एक केनी मनुष्य की सन्तान, यहूदी के संग खजूरवाले नगर से यहूदा के जंगल में गए जो अराद के दक्षिण की ओर है, और जाकर इस्राएली लोगों के साथ रहने लगे।
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.
17 १७ फिर यहूदा ने अपने भाई शिमोन के संग जाकर सपत में रहनेवाले कनानियों को मार लिया, और उस नगर का सत्यानाश कर डाला। इसलिए उस नगर का नाम होर्मा पड़ा।
ಯೆಹೂದ ಗೋತ್ರದವರು ತನ್ನ ಸಹೋದರರಾದ ಸಿಮೆಯೋನ್ಯರ ಸಂಗಡ ಹೊರಟು, ಚೆಫೆತ್‌ನಲ್ಲಿ ವಾಸವಾಗಿರುವ ಕಾನಾನ್ಯರ ಮೇಲೆ ದಾಳಿಮಾಡಿ, ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೊರ್ಮಾ ಎಂದು ಕರೆಯಲಾಗಿತ್ತು.
18 १८ और यहूदा ने चारों ओर की भूमि समेत गाज़ा, अश्कलोन, और एक्रोन को ले लिया।
ಇದಲ್ಲದೆ ಯೆಹೂದ ಗೋತ್ರದವರು ಗಾಜಾವನ್ನೂ ಅದರ ಮೇರೆಯನ್ನೂ; ಅಷ್ಕೆಲೋನನ್ನೂ, ಅದರ ಮೇರೆಯನ್ನೂ; ಎಕ್ರೋನನ್ನೂ, ಅದರ ಮೇರೆಯನ್ನೂ ತೆಗೆದುಕೊಂಡರು.
19 १९ यहोवा यहूदा के साथ रहा, इसलिए उसने पहाड़ी देश के निवासियों को निकाल दिया; परन्तु तराई के निवासियों के पास लोहे के रथ थे, इसलिए वह उन्हें न निकाल सका।
ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.
20 २० और उन्होंने मूसा के कहने के अनुसार हेब्रोन कालेब को दे दिया: और उसने वहाँ से अनाक के तीनों पुत्रों को निकाल दिया।
ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.
21 २१ और यरूशलेम में रहनेवाले यबूसियों को बिन्यामीनियों ने न निकाला; इसलिए यबूसी आज के दिन तक यरूशलेम में बिन्यामीनियों के संग रहते हैं।
ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.
22 २२ फिर यूसुफ के घराने ने बेतेल पर चढ़ाई की; और यहोवा उनके संग था।
ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.
23 २३ और यूसुफ के घराने ने बेतेल का भेद लेने को लोग भेजे। और उस नगर का नाम पूर्वकाल में लूज था।
ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಸಂಚರಿಸಿ ನೋಡಲು, ಯೋಸೇಫನ ಮನೆಯವರನ್ನು ಕಳುಹಿಸಲಾಯಿತು.
24 २४ और भेदियों ने एक मनुष्य को उस नगर से निकलते हुए देखा, और उससे कहा, “नगर में जाने का मार्ग हमें दिखा, और हम तुझ पर दया करेंगे।”
ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು.
25 २५ जब उसने उन्हें नगर में जाने का मार्ग दिखाया, तब उन्होंने नगर को तो तलवार से मारा, परन्तु उस मनुष्य को सारे घराने समेत छोड़ दिया।
ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ, ಅವರು ಬಂದು ಪಟ್ಟಣವನ್ನು ಖಡ್ಗದಿಂದ ಹೊಡೆದು, ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.
26 २६ उस मनुष्य ने हित्तियों के देश में जाकर एक नगर बसाया, और उसका नाम लूज रखा; और आज के दिन तक उसका नाम वही है।
ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ, ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ, ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈವರೆಗೂ ಅದಕ್ಕೆ ಅದೇ ಹೆಸರಿದೆ.
27 २७ मनश्शे ने अपने-अपने गाँवों समेत बेतशान, तानाक, दोर, यिबलाम, और मगिद्दो के निवासियों को न निकाला; इस प्रकार कनानी उस देश में बसे ही रहे।
ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.
28 २८ परन्तु जब इस्राएली सामर्थी हुए, तब उन्होंने कनानियों से बेगारी ली, परन्तु उन्हें पूरी रीति से न निकाला।
ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.
29 २९ एप्रैम ने गेजेर में रहनेवाले कनानियों को न निकाला; इसलिए कनानी गेजेर में उनके बीच में बसे रहे।
ಇದಲ್ಲದೆ ಎಫ್ರಾಯೀಮ್ಯರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
30 ३० जबूलून ने कित्रोन और नहलोल के निवासियों को न निकाला; इसलिए कनानी उनके बीच में बसे रहे, और उनके वश में हो गए।
ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ದಾಸರಾಗಿ ವಾಸಮಾಡುವವರಾದರು.
31 ३१ आशेर ने अक्को, सीदोन, अहलाब, अकजीब, हेलबा, अपीक, और रहोब के निवासियों को न निकाला था;
ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
32 ३२ इसलिए आशेरी लोग देश के निवासी कनानियों के बीच में बस गए; क्योंकि उन्होंने उनको न निकाला था।
ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ, ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.
33 ३३ नप्ताली ने बेतशेमेश और बेतनात के निवासियों को न निकाला, परन्तु देश के निवासी कनानियों के बीच में बस गए; तो भी बेतशेमेश और बेतनात के लोग उनके वश में हो गए।
ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು.
34 ३४ एमोरियों ने दानियों को पहाड़ी देश में भगा दिया, और तराई में आने न दिया;
ಅಮೋರಿಯರು ದಾನ್ಯರನ್ನು ತಗ್ಗಿನಲ್ಲಿ ಇಳಿಯಗೊಡದೆ, ಬೆಟ್ಟಗಳಿಗೆ ಓಡಿಸಿಬಿಟ್ಟರು
35 ३५ इसलिए एमोरी हेरेस नामक पहाड़, अय्यालोन और शाल्बीम में बसे ही रहे, तो भी यूसुफ का घराना यहाँ तक प्रबल हो गया कि वे उनके वश में हो गए।
ಹೀಗೆ ಅಮೋರಿಯರು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಗೋತ್ರದವರ ಕೈ ಬಲ ಹೆಚ್ಚಾದದ್ದರಿಂದ ಅವರಿಗೆ ದಾಸರಾದರು.
36 ३६ और एमोरियों के देश की सीमा अक्रब्बीम नामक पर्वत की चढ़ाई से आरम्भ करके ऊपर की ओर थी।
ಹೀಗೆ ಅಮೋರಿಯರ ಮೇರೆಯು ಅಕ್ರಬ್ಬೀಮನ್ನು ಹಿಡಿದು ಸೆಲ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.

< न्यायियों 1 >