< न्यायियों 3 >

1 इस्राएलियों में से जितने कनान में की लड़ाइयों में भागी न हुए थे, उन्हें परखने के लिये यहोवा ने इन जातियों को देश में इसलिए रहने दिया;
ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
2 कि पीढ़ी-पीढ़ी के इस्राएलियों में से जो लड़ाई को पहले न जानते थे वे सीखें, और जान लें,
ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
3 अर्थात् पाँचों सरदारों समेत पलिश्तियों, और सब कनानियों, और सीदोनियों, और बालहेर्मोन नामक पहाड़ से लेकर हमात की तराई तक लबानोन पर्वत में रहनेवाले हिब्बियों को।
ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
4 ये इसलिए रहने पाए कि इनके द्वारा इस्राएलियों की बात में परीक्षा हो, कि जो आज्ञाएँ यहोवा ने मूसा के द्वारा उनके पूर्वजों को दी थीं, उन्हें वे मानेंगे या नहीं।
ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
5 इसलिए इस्राएली कनानियों, हित्तियों, एमोरियों, परिज्जियों, हिब्बियों, और यबूसियों के बीच में बस गए;
ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
6 तब वे उनकी बेटियाँ विवाह में लेने लगे, और अपनी बेटियाँ उनके बेटों को विवाह में देने लगे; और उनके देवताओं की भी उपासना करने लगे।
ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.
7 इस प्रकार इस्राएलियों ने यहोवा की दृष्टि में बुरा किया, और अपने परमेश्वर यहोवा को भूलकर बाल नामक देवताओं और अशेरा नामक देवियों की उपासना करने लग गए।
ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
8 तब यहोवा का क्रोध इस्राएलियों पर भड़का, और उसने उनको अरम्नहरैम के राजा कूशन रिश्आतइम के अधीन कर दिया; सो इस्राएली आठ वर्ष तक कूशन रिश्आतइम के अधीन में रहे।
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
9 तब इस्राएलियों ने यहोवा की दुहाई दी, और उसने इस्राएलियों के छुटकारे के लिये कालेब के छोटे भाई ओत्नीएल नामक कनजी के पुत्र को ठहराया, और उसने उनको छुड़ाया।
ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
10 १० उसमें यहोवा का आत्मा समाया, और वह इस्राएलियों का न्यायी बन गया, और लड़ने को निकला, और यहोवा ने अराम के राजा कूशन रिश्आतइम को उसके हाथ में कर दिया; और वह कूशन रिश्आतइम पर जयवन्त हुआ।
೧೦ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
11 ११ तब चालीस वर्ष तक देश में शान्ति बनी रही। तब कनजी का पुत्र ओत्नीएल मर गया।
೧೧ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
12 १२ तब इस्राएलियों ने फिर यहोवा की दृष्टि में बुरा किया; और यहोवा ने मोआब के राजा एग्लोन को इस्राएल पर प्रबल किया, क्योंकि उन्होंने यहोवा की दृष्टि में बुरा किया था।
೧೨ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.
13 १३ इसलिए उसने अम्मोनियों और अमालेकियों को अपने पास इकट्ठा किया, और जाकर इस्राएल को मार लिया; और खजूरवाले नगर को अपने वश में कर लिया।
೧೩ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
14 १४ तब इस्राएली अठारह वर्ष तक मोआब के राजा एग्लोन के अधीन रहे।
೧೪ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.
15 १५ फिर इस्राएलियों ने यहोवा की दुहाई दी, और उसने गेरा के पुत्र एहूद नामक एक बिन्यामीनी को उनका छुड़ानेवाला ठहराया; वह बयंहत्था था। इस्राएलियों ने उसी के हाथ से मोआब के राजा एग्लोन के पास कुछ भेंट भेजी।
೧೫ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
16 १६ एहूद ने हाथ भर लम्बी एक दोधारी तलवार बनवाई थी, और उसको अपने वस्त्र के नीचे दाहिनी जाँघ पर लटका लिया।
೧೬ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ
17 १७ तब वह उस भेंट को मोआब के राजा एग्लोन के पास जो बड़ा मोटा पुरुष था ले गया।
೧೭ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
18 १८ जब वह भेंट को दे चुका, तब भेंट के लानेवाले को विदा किया।
೧೮ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,
19 १९ परन्तु वह आप गिलगाल के निकट की खुदी हुई मूरतों के पास लौट गया, और एग्लोन के पास कहला भेजा, “हे राजा, मुझे तुझ से एक भेद की बात कहनी है।” तब राजा ने कहा, “थोड़ी देर के लिये बाहर जाओ।” तब जितने लोग उसके पास उपस्थित थे वे सब बाहर चले गए।
೧೯ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.
20 २० तब एहूद उसके पास गया; वह तो अपनी एक हवादार अटारी में अकेला बैठा था। एहूद ने कहा, “परमेश्वर की ओर से मुझे तुझ से एक बात कहनी है।” तब वह गद्दी पर से उठ खड़ा हुआ।
೨೦ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
21 २१ इतने में एहूद ने अपना बायाँ हाथ बढ़ाकर अपनी दाहिनी जाँघ पर से तलवार खींचकर उसकी तोंद में घुसेड़ दी;
೨೧ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.
22 २२ और फल के पीछे मूठ भी पैठ गई, और फल चर्बी में धंसा रहा, क्योंकि उसने तलवार को उसकी तोंद में से न निकाला; वरन् वह उसके आर-पार निकल गई।
೨೨ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
23 २३ तब एहूद छज्जे से निकलकर बाहर गया, और अटारी के किवाड़ खींचकर उसको बन्द करके ताला लगा दिया।
೨೩ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
24 २४ उसके निकलकर जाते ही राजा के दास आए, तो क्या देखते हैं, कि अटारी के किवाड़ों में ताला लगा है; इस कारण वे बोले, “निश्चय वह हवादार कोठरी में लघुशंका करता होगा।”
೨೪ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
25 २५ वे बाट जोहते-जोहते थक गए; तब यह देखकर कि वह अटारी के किवाड़ नहीं खोलता, उन्होंने कुँजी लेकर किवाड़ खोले तो क्या देखा, कि उनका स्वामी भूमि पर मरा पड़ा है।
೨೫ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
26 २६ जब तक वे सोच विचार कर ही रहे थे तब तक एहूद भाग निकला, और खुदी हुई मूरतों की परली ओर होकर सेइरे में जाकर शरण ली।
೨೬ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
27 २७ वहाँ पहुँचकर उसने एप्रैम के पहाड़ी देश में नरसिंगा फूँका; तब इस्राएली उसके संग होकर पहाड़ी देश से उसके पीछे-पीछे नीचे गए।
೨೭ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
28 २८ और उसने उनसे कहा, “मेरे पीछे-पीछे चले आओ; क्योंकि यहोवा ने तुम्हारे मोआबी शत्रुओं को तुम्हारे हाथ में कर दिया है।” तब उन्होंने उसके पीछे-पीछे जा के यरदन के घाटों को जो मोआब देश की ओर हैं ले लिया, और किसी को उतरने न दिया।
೨೮ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
29 २९ उस समय उन्होंने लगभग दस हजार मोआबियों को मार डाला; वे सब के सब हष्ट-पुष्ट और शूरवीर थे, परन्तु उनमें से एक भी न बचा।
೨೯ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.
30 ३० इस प्रकार उस समय मोआब इस्राएल के हाथ के तले दब गया। तब अस्सी वर्ष तक देश में शान्ति बनी रही।
೩೦ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.
31 ३१ उसके बाद अनात का पुत्र शमगर हुआ, उसने छः सौ पलिश्ती पुरुषों को बैल के पैने से मार डाला; इस कारण वह भी इस्राएल का छुड़ानेवाला हुआ।
೩೧ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.

< न्यायियों 3 >