< न्यायियों 6 >

1 तब इस्राएलियों ने यहोवा की दृष्टि में बुरा किया, इसलिए यहोवा ने उन्हें मिद्यानियों के वश में सात वर्ष कर रखा।
ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.
2 और मिद्यानी इस्राएलियों पर प्रबल हो गए। मिद्यानियों के डर के मारे इस्राएलियों ने पहाड़ों के गहरे खड्डों, और गुफाओं, और किलों को अपने निवास बना लिए।
ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
3 और जब जब इस्राएली बीज बोते तब-तब मिद्यानी और अमालेकी और पूर्वी लोग उनके विरुद्ध चढ़ाई करके
ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,
4 गाज़ा तक छावनी डाल डालकर भूमि की उपज नाश कर डालते थे, और इस्राएलियों के लिये न तो कुछ भोजनवस्तु, और न भेड़-बकरी, और न गाय-बैल, और न गदहा छोड़ते थे।
ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ.
5 क्योंकि वे अपने पशुओं और डेरों को लिए हुए चढ़ाई करते, और टिड्डियों के दल के समान बहुत आते थे; और उनके ऊँट भी अनगिनत होते थे; और वे देश को उजाड़ने के लिये उसमें आया करते थे।
ಅವರು ತಮ್ಮ ಪಶುಗಳ ಡೇರೆಗಳ ಸಹಿತವಾಗಿ ಮಿಡತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ, ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಅವರು ನಾಡನ್ನು ನಾಶಮಾಡುವುದಕ್ಕೆ ಬಂದರು.
6 और मिद्यानियों के कारण इस्राएली बड़ी दुर्दशा में पड़ गए; तब इस्राएलियों ने यहोवा की दुहाई दी।
ಆದಕಾರಣ ಇಸ್ರಾಯೇಲರು ಮಿದ್ಯಾನ್ಯರಿಂದ ಬಹಳ ಬಡವರಾದರು. ಆಗ ಇಸ್ರಾಯೇಲರು ಯೆಹೋವ ದೇವರಿಗೆ ಬೇಡಿಕೊಂಡರು.
7 जब इस्राएलियों ने मिद्यानियों के कारण यहोवा की दुहाई दी,
ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ಯೆಹೋವ ದೇವರನ್ನು ಬೇಡಿಕೊಂಡಾಗ,
8 तब यहोवा ने इस्राएलियों के पास एक नबी को भेजा, जिसने उनसे कहा, “इस्राएल का परमेश्वर यहोवा यह कहता है: मैं तुम को मिस्र में से ले आया, और दासत्व के घर से निकाल ले आया;
ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.
9 और मैंने तुम को मिस्रियों के हाथ से, वरन् जितने तुम पर अंधेर करते थे उन सभी के हाथ से छुड़ाया, और उनको तुम्हारे सामने से बरबस निकालकर उनका देश तुम्हें दे दिया;
ನಿಮ್ಮನ್ನು ಈಜಿಪ್ಟಿನವರ ಕೈಯಿಂದ ತಪ್ಪಿಸಿ, ಅವರನ್ನು ನಿಮ್ಮ ಮುಂದೆ ಹೊರಗೆ ಹಾಕಿ, ಅವರ ದೇಶವನ್ನು ನಿಮಗೆ ಕೊಟ್ಟೆನು.
10 १० और मैंने तुम से कहा, ‘मैं तुम्हारा परमेश्वर यहोवा हूँ; एमोरी लोग जिनके देश में तुम रहते हो उनके देवताओं का भय न मानना।’ परन्तु तुम ने मेरा कहना नहीं माना।”
‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.
11 ११ फिर यहोवा का दूत आकर उस बांज वृक्ष के तले बैठ गया, जो ओप्रा में अबीएजेरी योआश का था, और उसका पुत्र गिदोन एक दाखरस के कुण्ड में गेहूँ इसलिए झाड़ रहा था कि उसे मिद्यानियों से छिपा रखे।
ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
12 १२ उसको यहोवा के दूत ने दर्शन देकर कहा, “हे शूरवीर सूरमा, यहोवा तेरे संग है।”
ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.
13 १३ गिदोन ने उससे कहा, “हे मेरे प्रभु, विनती सुन, यदि यहोवा हमारे संग होता, तो हम पर यह सब विपत्ति क्यों पड़ती? और जितने आश्चर्यकर्मों का वर्णन हमारे पुरखा यह कहकर करते थे, ‘क्या यहोवा हमको मिस्र से छुड़ा नहीं लाया,’ वे कहाँ रहे? अब तो यहोवा ने हमको त्याग दिया, और मिद्यानियों के हाथ कर दिया है।”
ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.
14 १४ तब यहोवा ने उस पर दृष्टि करके कहा, “अपनी इसी शक्ति पर जा और तू इस्राएलियों को मिद्यानियों के हाथ से छुड़ाएगा; क्या मैंने तुझे नहीं भेजा?”
ಯೆಹೋವ ದೇವರು ಅವನನ್ನು ದೃಷ್ಟಿಸಿ ನೋಡಿ, “ನಿನಗಿರುವ ಈ ಶಕ್ತಿಯಲ್ಲಿ ಹೋಗು, ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸುವೆ; ನಾನು ನಿನ್ನನ್ನು ಕಳುಹಿಸಲಿಲ್ಲವೋ?” ಎಂದರು.
15 १५ उसने कहा, “हे मेरे प्रभु, विनती सुन, मैं इस्राएल को कैसे छुड़ाऊँ? देख, मेरा कुल मनश्शे में सबसे कंगाल है, फिर मैं अपने पिता के घराने में सबसे छोटा हूँ।”
ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು.
16 १६ यहोवा ने उससे कहा, “निश्चय मैं तेरे संग रहूँगा; सो तू मिद्यानियों को ऐसा मार लेगा जैसा एक मनुष्य को।”
ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.
17 १७ गिदोन ने उससे कहा, “यदि तेरा अनुग्रह मुझ पर हो, तो मुझे इसका कोई चिन्ह दिखा कि तू ही मुझसे बातें कर रहा है।
ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
18 १८ जब तक मैं तेरे पास फिर आकर अपनी भेंट निकालकर तेरे सामने न रखूँ, तब तक तू यहाँ से न जा।” उसने कहा, “मैं तेरे लौटने तक ठहरा रहूँगा।”
ನಾನು ನಿಮ್ಮ ಬಳಿಗೆ ನನ್ನ ಕಾಣಿಕೆಯನ್ನು ತಂದು, ನಿಮ್ಮ ಮುಂದೆ ಇಡುವವರೆಗೆ ನೀವು ಈ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದು ಬೇಡಿಕೊಂಡನು. ಅದಕ್ಕೆ ಯೆಹೋವ ದೇವರು, “ನೀನು ತಿರುಗಿ ಬರುವ ತನಕ ನಾನು ಕಾದಿರುವೆನು,” ಎಂದರು.
19 १९ तब गिदोन ने जाकर बकरी का एक बच्चा और एक एपा मैदे की अख़मीरी रोटियाँ तैयार कीं; तब माँस को टोकरी में, और रसा को तसले में रखकर बांज वृक्ष के तले उसके पास ले जाकर दिया।
ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು.
20 २० परमेश्वर के दूत ने उससे कहा, “माँस और अख़मीरी रोटियों को लेकर इस चट्टान पर रख दे, और रसा को उण्डेल दे।” उसने ऐसा ही किया।
ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು.
21 २१ तब यहोवा के दूत ने अपने हाथ की लाठी को बढ़ाकर माँस और अख़मीरी रोटियों को छुआ; और चट्टान से आग निकली जिससे माँस और अख़मीरी रोटियाँ भस्म हो गईं; तब यहोवा का दूत उसकी दृष्टि से ओझल हो गया।
ಆಗ ಯೆಹೋವ ದೇವರ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆಯಿಂದ ಎದ್ದು, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ದಹಿಸಿಬಿಟ್ಟಿತು. ಆಗ ಯೆಹೋವ ದೇವರ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
22 २२ जब गिदोन ने जान लिया कि वह यहोवा का दूत था, तब गिदोन कहने लगा, “हाय, प्रभु यहोवा! मैंने तो यहोवा के दूत को साक्षात् देखा है।”
ಅವನು ಯೆಹೋವ ದೇವರ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋನನು, “ಸಾರ್ವಭೌಮ ಯೆಹೋವ ದೇವರೇ, ನಾನು ಯೆಹೋವ ದೇವರ ದೂತನನ್ನು ಮುಖಾಮುಖಿಯಾಗಿ ಕಂಡೆನು,” ಎಂದನು.
23 २३ यहोवा ने उससे कहा, “तुझे शान्ति मिले; मत डर, तू न मरेगा।”
ಆದರೆ ಯೆಹೋವ ದೇವರು ಅವನಿಗೆ, “ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವುದಿಲ್ಲ,” ಎಂದರು.
24 २४ तब गिदोन ने वहाँ यहोवा की एक वेदी बनाकर उसका नाम, ‘यहोवा शालोम रखा।’ वह आज के दिन तक अबीएजेरियों के ओप्रा में बनी है।
ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.
25 २५ फिर उसी रात को यहोवा ने गिदोन से कहा, “अपने पिता का जवान बैल, अर्थात् दूसरा सात वर्ष का बैल ले, और बाल की जो वेदी तेरे पिता की है उसे गिरा दे, और जो अशेरा देवी उसके पास है उसे काट डाल;
ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ, “ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೆಯದಾದ ಏಳು ವರ್ಷದ ಎರಡನೆಯ ಹೋರಿಯನ್ನು ತೆಗೆದುಕೊಂಡುಹೋಗಿ, ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ, ಅದರ ಸಮೀಪದಲ್ಲಿರುವ ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಿ,
26 २६ और उस दृढ़ स्थान की चोटी पर ठहराई हुई रीति से अपने परमेश्वर यहोवा की एक वेदी बना; तब उस दूसरे बैल को ले, और उस अशेरा की लकड़ी जो तू काट डालेगा जलाकर होमबलि चढ़ा।”
ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.
27 २७ तब गिदोन ने अपने संग दस दासों को लेकर यहोवा के वचन के अनुसार किया; परन्तु अपने पिता के घराने और नगर के लोगों के डर के मारे वह काम दिन को न कर सका, इसलिए रात में किया।
ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಅವನು ತನ್ನ ತಂದೆಯ ಮನೆಯವರೆಗೂ, ಆ ಊರಿನ ಮನುಷ್ಯರಿಗೂ ಭಯಪಟ್ಟದ್ದರಿಂದ ಹಗಲಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
28 २८ नगर के लोग सवेरे उठकर क्या देखते हैं, कि बाल की वेदी गिरी पड़ी है, और उसके पास की अशेरा कटी पड़ी है, और दूसरा बैल बनाई हुई वेदी पर चढ़ाया हुआ है।
ಆ ಊರಿನ ಮನುಷ್ಯರು ಬೆಳಿಗ್ಗೆ ಎದ್ದಾಗ, ಬಾಳನ ಬಲಿಪೀಠವು ಕೆಡವಲಾಗಿದ್ದನ್ನು ಮತ್ತು ಅದರ ಪಕ್ಕದಲ್ಲಿದ್ದ ಅಶೇರ ಸ್ತಂಭವನ್ನು ಕಡಿಯಲಾಗಿರುವುದನ್ನು ಕಂಡರು. ಹೊಸದಾಗಿ ಕಟ್ಟಿದ ಬಲಿಪೀಠದ ಮೇಲೆ ಆ ಎರಡನೆಯ ಹೋರಿಯ ಬಲಿ ಅರ್ಪಿಸಲಾಗಿತ್ತು.
29 २९ तब वे आपस में कहने लगे, “यह काम किसने किया?” और पूछपाछ और ढूँढ़-ढाँढ़ करके वे कहने लगे, “यह योआश के पुत्र गिदोन का काम है।”
ಆಗ ಅವರು ಒಬ್ಬರಿಗೊಬ್ಬರು, “ಈ ಕಾರ್ಯವನ್ನು ಮಾಡಿದವನ್ಯಾರು?” ಎಂದರು. ವಿಚಾರಿಸಿ ಕೇಳಿದಾಗ, ಅವರು, “ಯೋವಾಷನ ಮಗ ಗಿದ್ಯೋನನು ಈ ಕಾರ್ಯ ಮಾಡಿದನು,” ಎಂದರು.
30 ३० तब नगर के मनुष्यों ने योआश से कहा, “अपने पुत्र को बाहर ले आ, कि मार डाला जाए, क्योंकि उसने बाल की वेदी को गिरा दिया है, और उसके पास की अशेरा को भी काट डाला है।”
ಆ ಊರಿನವರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ, ಅವನು ಸಾಯಬೇಕು. ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ, ಅದರ ಬಳಿಯಲ್ಲಿದ್ದ ಅಶೇರ ಸ್ತಂಭವನ್ನು ಕಡಿದುಹಾಕಿದನು,” ಎಂದರು.
31 ३१ योआश ने उन सभी से जो उसके सामने खड़े हुए थे कहा, “क्या तुम बाल के लिये वाद विवाद करोगे? क्या तुम उसे बचाओगे? जो कोई उसके लिये वाद विवाद करे वह मार डाला जाएगा। सवेरे तक ठहरे रहो; तब तक यदि वह परमेश्वर हो, तो जिसने उसकी वेदी गिराई है उससे वह आप ही अपना वाद विवाद करे।”
ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.
32 ३२ इसलिए उस दिन गिदोन का नाम यह कहकर यरूब्बाल रखा गया, कि इसने जो बाल की वेदी गिराई है तो इस पर बाल आप वाद विवाद कर ले।
ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.
33 ३३ इसके बाद सब मिद्यानी और अमालेकी और पूर्वी इकट्ठे हुए, और पार आकर यिज्रेल की तराई में डेरे डाले।
ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
34 ३४ तब यहोवा का आत्मा गिदोन में समाया; और उसने नरसिंगा फूँका, तब अबीएजेरी उसकी सुनने के लिये इकट्ठे हुए।
ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.
35 ३५ फिर उसने समस्त मनश्शे के पास अपने दूत भेजे; और वे भी उसके समीप इकट्ठे हुए। और उसने आशेर, जबूलून, और नप्ताली के पास भी दूत भेजे; तब वे भी उससे मिलने को चले आए।
ಮನಸ್ಸೆಯವರ ಬಳಿ ದೂತರನ್ನು ಕಳುಹಿಸಿದಾಗ, ಅವರು ಅವನ ಹಿಂದೆ ಕೂಡಿಬಂದರು. ಆಶೇರ್, ಜೆಬುಲೂನಿನಲ್ಲಿಯೂ, ನಫ್ತಾಲಿನಲ್ಲಿಯೂ ದೂತರನ್ನು ಕಳುಹಿಸಲು, ಅವರು ಇವರಿಗೆ ಭೇಟಿಯಾಗಲು ಬಂದರು.
36 ३६ तब गिदोन ने परमेश्वर से कहा, “यदि तू अपने वचन के अनुसार इस्राएल को मेरे द्वारा छुड़ाएगा,
ಗಿದ್ಯೋನನು ದೇವರಿಗೆ, “ನೀವು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸುವಿರಿಯಾದರೆ,
37 ३७ तो सुन, मैं एक भेड़ी की ऊन खलिहान में रखूँगा, और यदि ओस केवल उस ऊन पर पड़े, और उसे छोड़ सारी भूमि सूखी रह जाए, तो मैं जान लूँगा कि तू अपने वचन के अनुसार इस्राएल को मेरे द्वारा छुड़ाएगा।”
ಇಗೋ, ಉಣ್ಣೆಯ ತುಪ್ಪಟವನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ, ಆಗ ನೀವು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ನೀವು ರಕ್ಷಿಸುವಿರಿ ಎಂಬುದನ್ನು ನಾನು ತಿಳಿಯುವೆನು,” ಎಂದನು.
38 ३८ और ऐसा ही हुआ। इसलिए जब उसने सवेरे उठकर उस ऊन को दबाकर उसमें से ओस निचोड़ी, तब एक कटोरा भर गया।
ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು.
39 ३९ फिर गिदोन ने परमेश्वर से कहा, “यदि मैं एक बार फिर कहूँ, तो तेरा क्रोध मुझ पर न भड़के; मैं इस ऊन से एक बार और भी तेरी परीक्षा करूँ, अर्थात् केवल ऊन ही सूखी रहे, और सारी भूमि पर ओस पड़े”
ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು.
40 ४० उस रात को परमेश्वर ने ऐसा ही किया; अर्थात् केवल ऊन ही सूखी रह गई, और सारी भूमि पर ओस पड़ी।
ಆ ರಾತ್ರಿ ದೇವರು ಹಾಗೆಯೇ ಮಾಡಿದರು. ತುಪ್ಪಟ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿಬಿದ್ದಿತ್ತು.

< न्यायियों 6 >