< मत्ती 20 >
1 १ “स्वर्ग का राज्य किसी गृहस्थ के समान है, जो सवेरे निकला, कि अपनी दाख की बारी में मजदूरों को लगाए।
೧“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
2 २ और उसने मजदूरों से एक दीनार रोज पर ठहराकर, उन्हें अपने दाख की बारी में भेजा।
೨ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
3 ३ फिर पहरएक दिन चढ़े, निकलकर, अन्य लोगों को बाजार में बेकार खड़े देखा,
೩ಅವನು ಪುನಃ ಸುಮಾರುಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
4 ४ और उनसे कहा, ‘तुम भी दाख की बारी में जाओ, और जो कुछ ठीक है, तुम्हें दूँगा।’ तब वे भी गए।
೪ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.
5 ५ फिर उसने दूसरे और तीसरे पहर के निकट निकलकर वैसा ही किया।
೫ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತುಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
6 ६ और एक घंटा दिन रहे फिर निकलकर दूसरों को खड़े पाया, और उनसे कहा ‘तुम क्यों यहाँ दिन भर बेकार खड़े रहे?’ उन्होंने उससे कहा, ‘इसलिए, कि किसी ने हमें मजदूरी पर नहीं लगाया।’
೬ಮತ್ತೊಂದು ಸಾರಿಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
7 ७ उसने उनसे कहा, ‘तुम भी दाख की बारी में जाओ।’
೭ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.
8 ८ “साँझ को दाख की बारी के स्वामी ने अपने भण्डारी से कहा, ‘मजदूरों को बुलाकर पिछले से लेकर पहले तक उन्हें मजदूरी दे दे।’
೮ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
9 ९ जब वे आए, जो घंटा भर दिन रहे लगाए गए थे, तो उन्हें एक-एक दीनार मिला।
೯ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
10 १० जो पहले आए, उन्होंने यह समझा, कि हमें अधिक मिलेगा; परन्तु उन्हें भी एक ही एक दीनार मिला।
೧೦ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
11 ११ जब मिला, तो वह गृह स्वामी पर कुड़कुड़ा के कहने लगे,
೧೧ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,
12 १२ ‘इन पिछलों ने एक ही घंटा काम किया, और तूने उन्हें हमारे बराबर कर दिया, जिन्होंने दिन भर का भार उठाया और धूप सही?’
೧೨‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
13 १३ उसने उनमें से एक को उत्तर दिया, ‘हे मित्र, मैं तुझ से कुछ अन्याय नहीं करता; क्या तूने मुझसे एक दीनार न ठहराया?
೧೩ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
14 १४ जो तेरा है, उठा ले, और चला जा; मेरी इच्छा यह है कि जितना तुझे, उतना ही इस पिछले को भी दूँ।
೧೪ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
15 १५ क्या यह उचित नहीं कि मैं अपने माल से जो चाहूँ वैसा करूँ? क्या तू मेरे भले होने के कारण बुरी दृष्टि से देखता है?’
೧೫ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
16 १६ इस प्रकारजो अन्तिम हैं, वे प्रथम हो जाएँगेऔर जो प्रथम हैं वे अन्तिम हो जाएँगे।”
೧೬ಹೀಗೆಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.
17 १७ यीशु यरूशलेम को जाते हुए बारह चेलों को एकान्त में ले गया, और मार्ग में उनसे कहने लगा।
೧೭ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
18 १८ “देखो, हम यरूशलेम को जाते हैं; और मनुष्य का पुत्र प्रधान याजकों और शास्त्रियों के हाथ पकड़वाया जाएगा और वे उसको घात के योग्य ठहराएँगे।
೧೮“ನೋಡಿರಿನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
19 १९ और उसको अन्यजातियों के हाथ सौंपेंगे, कि वे उसे उपहास में उड़ाएँ, और कोड़े मारें, और क्रूस पर चढ़ाएँ, और वह तीसरे दिन जिलाया जाएगा।”
೧೯ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನುಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
20 २० तब जब्दी के पुत्रों की माता ने अपने पुत्रों के साथ उसके पास आकर प्रणाम किया, और उससे कुछ माँगने लगी।
೨೦ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
21 २१ उसने उससे कहा, “तू क्या चाहती है?” वह उससे बोली, “यह कह, कि मेरे ये दो पुत्र तेरे राज्य में एक तेरे दाहिने और एक तेरे बाएँ बैठे।”
೨೧ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
22 २२ यीशु ने उत्तर दिया, “तुम नहीं जानते कि क्या माँगते हो। जो कटोरा मैं पीने पर हूँ, क्या तुम पी सकते हो?” उन्होंने उससे कहा, “पी सकते हैं।”
೨೨ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
23 २३ उसने उनसे कहा, “तुम मेरा कटोरा तो पीओगे पर अपने दाहिने बाएँ किसी को बैठाना मेरा काम नहीं, पर जिनके लिये मेरे पिता की ओर से तैयार किया गया, उन्हीं के लिये है।”
೨೩ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
24 २४ यह सुनकर, दसों चेले उन दोनों भाइयों पर क्रुद्ध हुए।
೨೪ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
25 २५ यीशु ने उन्हें पास बुलाकर कहा, “तुम जानते हो, कि अन्यजातियों के अधिपति उन पर प्रभुता करते हैं; और जो बड़े हैं, वे उन पर अधिकार जताते हैं।
೨೫ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
26 २६ परन्तु तुम में ऐसा न होगा; परन्तु जो कोई तुम में बड़ा होना चाहे, वह तुम्हारा सेवक बने;
೨೬ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
27 २७ और जो तुम में प्रधान होना चाहे वह तुम्हारा दास बने;
೨೭ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.
28 २८ जैसे कि मनुष्य का पुत्र, वह इसलिए नहीं आया कि अपनी सेवा करवाए, परन्तु इसलिए आया कि सेवा करे और बहुतों के छुटकारे के लिये अपने प्राण दे।”
೨೮ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
29 २९ जब वे यरीहो से निकल रहे थे, तो एक बड़ी भीड़ उसके पीछे हो ली।
೨೯ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
30 ३० और दो अंधे, जो सड़क के किनारे बैठे थे, यह सुनकर कि यीशु जा रहा है, पुकारकर कहने लगे, “हे प्रभु, दाऊद की सन्तान, हम पर दया कर।”
೩೦ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
31 ३१ लोगों ने उन्हें डाँटा, कि चुप रहें, पर वे और भी चिल्लाकर बोले, “हे प्रभु, दाऊद की सन्तान, हम पर दया कर।”
೩೧ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
32 ३२ तब यीशु ने खड़े होकर, उन्हें बुलाया, और कहा, “तुम क्या चाहते हो कि मैं तुम्हारे लिये करूँ?”
೩೨ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.
33 ३३ उन्होंने उससे कहा, “हे प्रभु, यह कि हमारी आँखें खुल जाएँ।”
೩೩ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು.
34 ३४ यीशु ने तरस खाकर उनकी आँखें छूई, और वे तुरन्त देखने लगे; और उसके पीछे हो लिए।
೩೪ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.