< ओबद्याह 1 >

1 ओबद्याह का दर्शन। एदोम के विषय यहोवा यह कहता है: हम लोगों ने यहोवा की ओर से समाचार सुना है, और एक दूत अन्यजातियों में यह कहने को भेजा गया है:
ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”
2 “उठो! हम उससे लड़ने को उठें!” मैं तुझे जातियों में छोटा कर दूँगा, तू बहुत तुच्छ गिना जाएगा।
ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಸಾರಕ್ಕೆ ಗುರಿಯಾಗಿರುವಿ.
3 हे पहाड़ों की दरारों में बसनेवाले, हे ऊँचे स्थान में रहनेवाले, तेरे अभिमान ने तुझे धोखा दिया है; तू मन में कहता है, “कौन मुझे भूमि पर उतार देगा?”
ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.
4 परन्तु चाहे तू उकाब के समान ऊँचा उड़ता हो, वरन् तारागण के बीच अपना घोंसला बनाए हो, तो भी मैं तुझे वहाँ से नीचे गिराऊँगा, यहोवा की यही वाणी है।
ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.
5 यदि चोर-डाकू रात को तेरे पास आते, (हाय, तू कैसे मिटा दिया गया है!) तो क्या वे चुराए हुए धन से तृप्त होकर चले न जाते? और यदि दाख के तोड़नेवाले तेरे पास आते, तो क्या वे कहीं-कहीं दाख न छोड़ जाते?
ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿ ವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ, ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುವರಲ್ಲವೇ? ಆಹಾ! ನೀನು ಎಷ್ಟು ಭಂಗಪಟ್ಟಿದ್ದೀ! ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ, ಹಕ್ಕಲನ್ನು ಉಳಿಸುವುದಿಲ್ಲವೋ?
6 परन्तु एसाव का धन कैसे खोजकर लूटा गया है, उसका गुप्त धन कैसे पता लगा लगाकर निकाला गया है!
ಏಸಾವನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಧಿನಿಕ್ಷೇಪಗಳು ಸಂಪೂರ್ಣವಾಗಿ ಸೂರೆಯಾಗಿದ್ದು ಹೇಗೆ?
7 जितनों ने तुझ से वाचा बाँधी थी, उन सभी ने तुझे सीमा तक ढकेल दिया है; जो लोग तुझ से मेल रखते थे, वे तुझको धोका देकर तुझ पर प्रबल हुए हैं; वे तेरी रोटी खाते हैं, वे तेरे लिये फंदा लगाते हैं उसमें कुछ समझ नहीं है।
ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.
8 यहोवा की यह वाणी है, क्या मैं उस समय एदोम में से बुद्धिमानों को, और एसाव के पहाड़ में से चतुराई को नाश न करूँगा?
ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?
9 और हे तेमान, तेरे शूरवीरों का मन कच्चा हो जाएगा, और एसाव के पहाड़ पर का हर एक पुरुष घात होकर नाश हो जाएगा।
ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.
10 १० हे एसाव, एक उपद्रव के कारण जो तूने अपने भाई याकूब पर किया, तू लज्जा से ढँपेगा; और सदा के लिये नाश हो जाएगा।
೧೦ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.
11 ११ जिस दिन परदेशी लोग उसकी धन-सम्पत्ति छीनकर ले गए, और पराए लोगों ने उसके फाटकों से घुसकर यरूशलेम पर चिट्ठी डाली, उस दिन तू भी उनमें से एक था।
೧೧ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.
12 १२ परन्तु तुझे उचित नहीं था कि तू अपने भाई के दिन में, अर्थात् उसकी विपत्ति के दिन में उसकी ओर देखता रहता, और यहूदियों के विनाश के दिन उनके ऊपर आनन्द करता, और उनके संकट के दिन बड़ा बोल बोलता।
೧೨ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
13 १३ तुझे उचित नहीं था कि मेरी प्रजा की विपत्ति के दिन तू उसके फाटक में घुसता, और उसकी विपत्ति के दिन उसकी दुर्दशा को देखता रहता, और उसकी विपत्ति के दिन उसकी धन-सम्पत्ति पर हाथ लगाता।
೧೩ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.
14 १४ तुझे उचित नहीं था कि चौराहों पर उसके भागनेवालों को मार डालने के लिये खड़ा होता, और संकट के दिन उसके बचे हुओं को पकड़ाता।
೧೪ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.
15 १५ क्योंकि सारी जातियों पर यहोवा के दिन का आना निकट है। जैसा तूने किया है, वैसा ही तुझ से भी किया जाएगा, तेरा व्यवहार लौटकर तेरे ही सिर पर पड़ेगा।
೧೫ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.
16 १६ जिस प्रकार तूने मेरे पवित्र पर्वत पर पिया, उसी प्रकार से सारी जातियाँ लगातार पीती रहेंगी, वे पीएँगे और वे निगल जाएँगे, और ऐसी हो जाएँगी जैसी कभी हुई ही नहीं।
೧೬ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
17 १७ परन्तु उस समय सिय्योन पर्वत पर बचे हुए लोग रहेंगे, ओर वह पवित्रस्थान ठहरेगा; और याकूब का घराना अपने निज भागों का अधिकारी होगा।
೧೭ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
18 १८ तब याकूब का घराना आग, और यूसुफ का घराना लौ, और एसाव का घराना खूँटी बनेगा; और वे उनमें आग लगाकर उनको भस्म करेंगे, और एसाव के घराने का कोई न बचेगा; क्योंकि यहोवा ही ने ऐसा कहा है।
೧೮ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.
19 १९ दक्षिण देश के लोग एसाव के पहाड़ के अधिकारी हो जाएँगे, और नीचे के देश के लोग पलिश्तियों के अधिकारी होंगे; और यहूदी, एप्रैम और सामरिया के देश को अपने भाग में कर लेंगे, और बिन्यामीन गिलाद का अधिकारी होगा।
೧೯ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.
20 २० इस्राएलियों के उस दल में से जो लोग बँधुआई में जाकर कनानियों के बीच सारफत तक रहते हैं, और यरूशलेमियों में से जो लोग बँधुआई में जाकर सपाराद में रहते हैं, वे सब दक्षिण देश के नगरों के अधिकारी हो जाएँगे।
೨೦ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
21 २१ उद्धार करनेवाले एसाव के पहाड़ का न्याय करने के लिये सिय्योन पर्वत पर चढ़ आएँगे, और राज्य यहोवा ही का हो जाएगा।
೨೧ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.

< ओबद्याह 1 >