< भजन संहिता 106 >

1 यहोवा की स्तुति करो! यहोवा का धन्यवाद करो, क्योंकि वह भला है; और उसकी करुणा सदा की है!
ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.
2 यहोवा के पराक्रम के कामों का वर्णन कौन कर सकता है, या उसका पूरा गुणानुवाद कौन सुना सकता है?
ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?
3 क्या ही धन्य हैं वे जो न्याय पर चलते, और हर समय धर्म के काम करते हैं!
ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.
4 हे यहोवा, अपनी प्रजा पर की, प्रसन्नता के अनुसार मुझे स्मरण कर, मेरे उद्धार के लिये मेरी सुधि ले,
ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.
5 कि मैं तेरे चुने हुओं का कल्याण देखूँ, और तेरी प्रजा के आनन्द में आनन्दित हो जाऊँ; और तेरे निज भाग के संग बड़ाई करने पाऊँ।
ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.
6 हमने तो अपने पुरखाओं के समान पाप किया है; हमने कुटिलता की, हमने दुष्टता की है!
ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.
7 मिस्र में हमारे पुरखाओं ने तेरे आश्चर्यकर्मों पर मन नहीं लगाया, न तेरी अपार करुणा को स्मरण रखा; उन्होंने समुद्र के किनारे, अर्थात् लाल समुद्र के किनारे पर बलवा किया।
ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.
8 तो भी उसने अपने नाम के निमित्त उनका उद्धार किया, जिससे वह अपने पराक्रम को प्रगट करे।
ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು.
9 तब उसने लाल समुद्र को घुड़का और वह सूख गया; और वह उन्हें गहरे जल के बीच से मानो जंगल में से निकाल ले गया।
ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.
10 १० उसने उन्हें बैरी के हाथ से उबारा, और शत्रु के हाथ से छुड़ा लिया।
ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು.
11 ११ और उनके शत्रु जल में डूब गए; उनमें से एक भी न बचा।
ಪ್ರವಾಹಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು, ವೈರಿಗಳಲ್ಲಿ ಒಬ್ಬನೂ ಉಳಿಯಲಿಲ್ಲ.
12 १२ तब उन्होंने उसके वचनों का विश्वास किया; और उसकी स्तुति गाने लगे।
ಆಗ ಅವರು ದೇವರ ಮಾತುಗಳನ್ನು ನಂಬಿ, ದೇವರಿಗೆ ಸ್ತೋತ್ರವನ್ನು ಹಾಡಿದರು.
13 १३ परन्तु वे झट उसके कामों को भूल गए; और उसकी युक्ति के लिये न ठहरे।
ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.
14 १४ उन्होंने जंगल में अति लालसा की और निर्जल स्थान में परमेश्वर की परीक्षा की।
ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು.
15 १५ तब उसने उन्हें मुँह माँगा वर तो दिया, परन्तु उनके प्राण को सूखा दिया।
ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು.
16 १६ उन्होंने छावनी में मूसा के, और यहोवा के पवित्र जन हारून के विषय में डाह की,
ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.
17 १७ भूमि फटकर दातान को निगल गई, और अबीराम के झुण्ड को निगल लिया।
ಆಗ ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ, ಅಬೀರಾಮನ ಗುಂಪನ್ನು ಮುಚ್ಚಿಬಿಟ್ಟಿತು.
18 १८ और उनके झुण्ड में आग भड़क उठी; और दुष्ट लोग लौ से भस्म हो गए।
ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
19 १९ उन्होंने होरेब में बछड़ा बनाया, और ढली हुई मूर्ति को दण्डवत् किया।
ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು.
20 २० उन्होंने परमेश्वर की महिमा, को घास खानेवाले बैल की प्रतिमा से बदल डाला।
ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
21 २१ वे अपने उद्धारकर्ता परमेश्वर को भूल गए, जिसने मिस्र में बड़े-बड़े काम किए थे।
ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,
22 २२ उसने तो हाम के देश में आश्चर्यकर्मों और लाल समुद्र के तट पर भयंकर काम किए थे।
ಹಾಮ ದೇಶದಲ್ಲಿ ಅದ್ಭುತಗಳನ್ನೂ, ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು.
23 २३ इसलिए उसने कहा कि मैं इन्हें सत्यानाश कर डालता यदि मेरा चुना हुआ मूसा जोखिम के स्थान में उनके लिये खड़ा न होता ताकि मेरी जलजलाहट को ठंडा करे कहीं ऐसा न हो कि मैं उन्हें नाश कर डालूँ।
ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.
24 २४ उन्होंने मनभावने देश को निकम्मा जाना, और उसके वचन पर विश्वास न किया।
ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು.
25 २५ वे अपने तम्बुओं में कुड़कुड़ाए, और यहोवा का कहा न माना।
ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ ಯೆಹೋವ ದೇವರ ಮಾತನ್ನು ಹೇಳದೆ ಹೋದರು.
26 २६ तब उसने उनके विषय में शपथ खाई कि मैं इनको जंगल में नाश करूँगा,
ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ
27 २७ और इनके वंश को अन्यजातियों के सम्मुख गिरा दूँगा, और देश-देश में तितर-बितर करूँगा।
ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.
28 २८ वे बालपोर देवता को पूजने लगे और मुर्दों को चढ़ाए हुए पशुओं का माँस खाने लगे।
ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.
29 २९ यों उन्होंने अपने कामों से उसको क्रोध दिलाया, और मरी उनमें फूट पड़ी।
ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.
30 ३० तब पीनहास ने उठकर न्यायदण्ड दिया, जिससे मरी थम गई।
ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ ವ್ಯಾಧಿ ನಿಂತುಹೋಯಿತು.
31 ३१ और यह उसके लेखे पीढ़ी से पीढ़ी तक सर्वदा के लिये धर्म गिना गया।
ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು.
32 ३२ उन्होंने मरीबा के सोते के पास भी यहोवा का क्रोध भड़काया, और उनके कारण मूसा की हानि हुई;
ಮೆರೀಬಾದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು.
33 ३३ क्योंकि उन्होंने उसकी आत्मा से बलवा किया, तब मूसा बिन सोचे बोल उठा।
ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
34 ३४ जिन लोगों के विषय यहोवा ने उन्हें आज्ञा दी थी, उनको उन्होंने सत्यानाश न किया,
ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು ಅವರು ದಂಡಿಸದೆ ಹೋದರು.
35 ३५ वरन् उन्हीं जातियों से हिलमिल गए और उनके व्यवहारों को सीख लिया;
ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು.
36 ३६ और उनकी मूर्तियों की पूजा करने लगे, और वे उनके लिये फंदा बन गई।
ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.
37 ३७ वरन् उन्होंने अपने बेटे-बेटियों को पिशाचों के लिये बलिदान किया;
ತಮ್ಮ ಗಂಡು ಮಕ್ಕಳನ್ನೂ, ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು.
38 ३८ और अपने निर्दोष बेटे-बेटियों का लहू बहाया जिन्हें उन्होंने कनान की मूर्तियों पर बलि किया, इसलिए देश खून से अपवित्र हो गया।
ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.
39 ३९ और वे आप अपने कामों के द्वारा अशुद्ध हो गए, और अपने कार्यों के द्वारा व्यभिचारी भी बन गए।
ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.
40 ४० तब यहोवा का क्रोध अपनी प्रजा पर भड़का, और उसको अपने निज भाग से घृणा आई;
ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,
41 ४१ तब उसने उनको अन्यजातियों के वश में कर दिया, और उनके बैरियों ने उन पर प्रभुता की।
ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. ಹೀಗೆ ಅವರ ವೈರಿಗಳು ಅವರನ್ನು ಆಳಿದರು.
42 ४२ उनके शत्रुओं ने उन पर अत्याचार किया, और वे उनके हाथों तले दब गए।
ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.
43 ४३ बारम्बार उसने उन्हें छुड़ाया, परन्तु वे उसके विरुद्ध बलवा करते गए, और अपने अधर्म के कारण दबते गए।
ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;
44 ४४ फिर भी जब जब उनका चिल्लाना उसके कान में पड़ा, तब-तब उसने उनके संकट पर दृष्टि की!
ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,
45 ४५ और उनके हित अपनी वाचा को स्मरण करके अपनी अपार करुणा के अनुसार तरस खाया,
ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,
46 ४६ और जो उन्हें बन्दी करके ले गए थे उन सबसे उन पर दया कराई।
ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.
47 ४७ हे हमारे परमेश्वर यहोवा, हमारा उद्धार कर, और हमें अन्यजातियों में से इकट्ठा कर ले, कि हम तेरे पवित्र नाम का धन्यवाद करें, और तेरी स्तुति करते हुए तेरे विषय में बड़ाई करें।
ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.
48 ४८ इस्राएल का परमेश्वर यहोवा अनादिकाल से अनन्तकाल तक धन्य है! और सारी प्रजा कहे “आमीन!” यहोवा की स्तुति करो।
ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.

< भजन संहिता 106 >