< जकर्याह 14 >

1 सुनो, यहोवा का एक ऐसा दिन आनेवाला है जिसमें तेरा धन लूटकर तेरे बीच में बाँट लिया जाएगा।
ಯೆಹೋವ ದೇವರ ದಿನವು ಬರುತ್ತದೆ. ಓ ಯೆರೂಸಲೇಮೇ, ಆ ದಿನದಲ್ಲಿ ನಿನ್ನ ಐಶ್ವರ್ಯವು ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ನಿನ್ನ ಗೋಡೆಗಳ ಮಧ್ಯದಲ್ಲಿ ಹಂಚಿಹೋಗುವುದು.
2 क्योंकि मैं सब जातियों को यरूशलेम से लड़ने के लिये इकट्ठा करूँगा, और वह नगर ले लिया जाएगा। और घर लूटे जाएँगे और स्त्रियाँ भ्रष्ट की जाएँगी; नगर के आधे लोग बँधुवाई में जाएँगे, परन्तु प्रजा के शेष लोग नगर ही में रहने पाएँगे।
ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.
3 तब यहोवा निकलकर उन जातियों से ऐसा लड़ेगा जैसा वह संग्राम के दिन में लड़ा था।
ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.
4 और उस दिन वह जैतून के पर्वत पर पाँव रखेगा, जो पूर्व की ओर यरूशलेम के सामने है; तब जैतून का पर्वत पूरब से लेकर पश्चिम तक बीचों बीच से फटकर बहुत बड़ा खड्ड हो जाएगा; तब आधा पर्वत उत्तर की ओर और आधा दक्षिण की ओर हट जाएगा।
ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು.
5 तब तुम मेरे बनाए हुए उस तराई से होकर भाग जाओगे, क्योंकि वह खड्ड आसेल तक पहुँचेगा, वरन् तुम ऐसे भागोगे जैसे उस भूकम्प के डर से भागे थे जो यहूदा के राजा उज्जियाह के दिनों में हुआ था। तब मेरा परमेश्वर यहोवा आएगा, और सब पवित्र लोग उसके साथ होंगे।
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.
6 उस दिन कुछ उजियाला न रहेगा, क्योंकि ज्योतिगण सिमट जाएँगे।
ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
7 और लगातार एक ही दिन होगा जिसे यहोवा ही जानता है, न तो दिन होगा, और न रात होगी, परन्तु साँझ के समय उजियाला होगा।
ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.
8 उस दिन यरूशलेम से जीवन का जल फूट निकलेगा उसकी एक शाखा पूरब के ताल और दूसरी पश्चिम के समुद्र की ओर बहेगी, और धूप के दिनों में और सर्दी के दिनों में भी बराबर बहती रहेंगी।
ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.
9 तब यहोवा सारी पृथ्वी का राजा होगा; और उस दिन एक ही यहोवा और उसका नाम भी एक ही माना जाएगा।
ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.
10 १० गेबा से लेकर यरूशलेम के दक्षिण की ओर के रिम्मोन तक सब भूमि अराबा के समान हो जाएगी। परन्तु वह ऊँची होकर बिन्यामीन के फाटक से लेकर पहले फाटक के स्थान तक, और कोनेवाले फाटक तक, और हननेल के गुम्मट से लेकर राजा के दाखरस कुण्डों तक अपने स्थान में बसेगी।
ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.
11 ११ लोग उसमें बसेंगे क्योंकि फिर सत्यानाश का श्राप न होगा; और यरूशलेम बेखटके बसी रहेगी।
ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.
12 १२ और जितनी जातियों ने यरूशलेम से युद्ध किया है उन सभी को यहोवा ऐसी मार से मारेगा, कि खड़े-खड़े उनका माँस सड़ जाएगा, और उनकी आँखें अपने गोलकों में सड़ जाएँगी, और उनकी जीभ उनके मुँह में सड़ जाएगी।
ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.
13 १३ और उस दिन यहोवा की ओर से उनमें बड़ी घबराहट पैठेगी, और वे एक दूसरे के हाथ को पकड़ेंगे, और एक दूसरे पर अपने-अपने हाथ उठाएँगे।
ಆ ದಿವಸದಲ್ಲಿ, ಯೆಹೋವ ದೇವರಿಂದಾದ ದೊಡ್ಡ ಕೋಲಾಹಲದಿಂದ ಜನರು ಭಯಭೀತಿಗೆ ಒಳಗಾಗುವರು. ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಒಬ್ಬರ ಮೇಲೊಬ್ಬರು ಕೈಯೆತ್ತುವರು.
14 १४ यहूदा भी यरूशलेम में लड़ेगा, और सोना, चाँदी, वस्त्र आदि चारों ओर की सब जातियों की धन-सम्पत्ति उसमें बटोरी जाएगी।
ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.
15 १५ और घोड़े, खच्चर, ऊँट और गदहे वरन् जितने पशु उनकी छावनियों में होंगे वे भी ऐसी ही महामारी से मारे जाएँगे।
ಆ ಗುಡಾರಗಳಲ್ಲಿರುವ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳಿಗೆ ಈ ವ್ಯಾಧಿಯೇ ತಗಲುವದು.
16 १६ तब जितने लोग यरूशलेम पर चढ़नेवाली सब जातियों में से बचे रहेंगे, वे प्रतिवर्ष राजा को अर्थात् सेनाओं के यहोवा को दण्डवत् करने, और झोपड़ियों का पर्व मानने के लिये यरूशलेम को जाया करेंगे।
ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.
17 १७ और पृथ्वी के कुलों में से जो लोग यरूशलेम में राजा, अर्थात् सेनाओं के यहोवा को दण्डवत् करने के लिये न जाएँगे, उनके यहाँ वर्षा न होगी।
ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.
18 १८ और यदि मिस्र का कुल वहाँ न आए, तो क्या उन पर वह मरी न पड़ेगी जिससे यहोवा उन जातियों को मारेगा जो झोपड़ियों का पर्व मानने के लिये न जाएँगे?
ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.
19 १९ यह मिस्र का और उन सब जातियों का पाप ठहरेगा, जो झोपड़ियों का पर्व मानने के लिये न जाएँगे।
ಇದೇ ಈಜಿಪ್ಟಿನ ದಂಡನೆಯೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವುದು.
20 २० उस समय घोड़ों की घंटियों पर भी यह लिखा रहेगा, “यहोवा के लिये पवित्र।” और यहोवा के भवन कि हाँड़ियाँ उन कटोरों के तुल्य पवित्र ठहरेंगी, जो वेदी के सामने रहते हैं।
ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.
21 २१ वरन् यरूशलेम में और यहूदा देश में सब हाँड़ियाँ सेनाओं के यहोवा के लिये पवित्र ठहरेंगी, और सब मेलबलि करनेवाले आ आकर उन हाँड़ियों में माँस पकाया करेंगे। तब सेनाओं के यहोवा के भवन में फिर कोई व्यापारी न पाया जाएगा।
ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.

< जकर्याह 14 >