< 箴言 知恵の泉 28 >

1 惡者は逐ふ者なけれども逃げ 義者は獅子のごとくに勇まし
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
2 國の罪によりて侯伯多くなり 智くして知識ある人によりて國は長く保つ
ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
3 弱者を虐ぐる貧人は糧をのこさざる暴しき雨のごとし
ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.
4 律法を棄るものは惡者をほめ 律法を守る者はこれに敵す
ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.
5 惡人は義きことを覺らず ヱホバを求むる者は凡の事をさとる
ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
6 義しくあゆむ貧者は曲れる路をあゆむ富者に愈る
ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.
7 律法を守る者は智子なり 放蕩なる者に交るものは父を辱かしむ
ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
8 利息と高利とをもてその財產を増すものは貧人をめぐむ者のために之をたくはふるなり
ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
9 耳をそむけて律法を聞ざる者はその祈すらも憎まる
ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
10 義者を惡き道に惑す者はみづから自己の阱に陷らん されど質直なる者は福祉をつぐべし
೧೦ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
11 富者はおのれの目に自らを智慧ある者となす されど聰明ある貧者は彼をはかり知る
೧೧ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
12 義者の喜ぶときは大なる榮あり 惡者の起るときは民身を匿す
೧೨ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.
13 その罪を隱すものは榮ゆることなし 然ど認らはして之を離るる者は憐憫をうけん
೧೩ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
14 恒に畏るる人は幸福なり その心を剛愎にする者は災禍に陷るべし
೧೪ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
15 貧しき民を治むるあしき侯伯は吼る獅子あるひは饑たる熊のごとし
೧೫ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
16 智からざる君はおほく暴虐をおこなふ 不義の利を惡む者は遐齢をうべし
೧೬ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
17 人を殺してその血を心に負ふ者は墓に奔るなり 人これを阻むること勿れ
೧೭ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
18 義く行む者は救をえ 曲れる路に行む者は直に跌れん
೧೮ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
19 おのれの田地を耕す者は糧にあき 放蕩なる者に從ふものは貧乏に飽く
೧೯ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
20 忠信なる人は多くの幸福をえ 速かに富を得んとする者は罪を免れず
೨೦ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
21 人を偏視るはよからず 人はただ一片のパンのために愆を犯すなり
೨೧ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
22 惡目をもつ者は財をえんとて急がはしく 却て貧窮のおのれに來るを知らず
೨೨ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.
23 人を譴むる者は舌をもて諂ふ者よりも大なる感謝をうく
೨೩ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.
24 父母の物を竊みて罪ならずといふ者は滅す者の友なり
೨೪ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.
25 心に貧る者は爭端を起し ヱホバに倚賴むものは豊饒になるべし
೨೫ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.
26 おのれの心を恃む者は愚なり 智慧をもて行む者は救をえん
೨೬ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
27 貧者に賙すものは乏しからず その目を掩ふ者は詛を受ること多し
೨೭ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.
28 惡者の起るときは人匿れ その滅るときは義者ます
೨೮ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.

< 箴言 知恵の泉 28 >