< エゼキエル書 15 >

1 主の言葉がわたしに臨んだ、
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 「人の子よ、ぶどうの木、森の木のうちにあるぶどうの枝は、ほかの木になんのまさる所があるか。
“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
3 その木は何かを造るために用いられるか。また人はこれを用いて、器物を掛ける木釘を造るだろうか。
ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
4 見よ、これは火に投げ入れられて燃える。火がその両端を焼いたとき、またその中ほどがこげたとき、それはなんの役に立つだろうか。
ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.
5 見よ、これは完全な時でも、なんの用をもなさない。まして火がこれを焼き、これをこがした時には、なんの役に立つだろうか。
ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”
6 それゆえ主なる神はこう言われる、わたしが森の木の中のぶどうの木を、火に投げ入れて焼くように、エルサレムの住民をそのようにする。
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
7 わたしはわたしの顔を彼らに向けて攻める。彼らがその火からのがれても、火は彼らを焼き尽す。わたしが顔を彼らに向けて攻める時、あなたがたはわたしが主であることを知る。
ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
8 彼らが、もとりそむいたゆえに、わたしはこの地を荒れ地とすると、主なる神は言われる」。
ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.

< エゼキエル書 15 >