< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 16 >

1 ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
त्यांनी देवाचा कोश दावीदाने उभारलेल्या तंबूमध्ये आत आणून ठेवला. मग त्यांनी देवापुढे होमार्पणे आणि शांत्यर्पणे अर्पिली.
2 ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.
मग होमार्पणे आणि शांत्यर्पणे अर्पिण्याचे समाप्त केल्यावर दावीदाने परमेश्वराच्या नावाने लोकांस आशीर्वाद दिला.
3 ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.
मग त्याने इस्राएलातील प्रत्येक स्त्री-पुरुषाला एकएक भाकर, एक मांसाचा तुकडा आणि खिसमिसांची एकएक ढेप वाटून दिली.
4 ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.
मग दावीदाने काही लेवींची परमेश्वराच्या कोशापुढे सेवा करण्यास आणि इस्राएलाचा देव परमेश्वर याचे गुणगान गाणे, त्याचे आभार मानणे, स्तुती करणे हे त्यांचे काम नेमून दिले.
5 ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
आसाफ हा पहिल्या गटाचा मुख्य होता. त्याचा गट झांज वाजवीत असे. जखऱ्या दुसऱ्या गटाचा प्रमुख होता. इतर लेवी उज्जियेल, शमीरामोथ, यहीएल, मत्तिथ्या, अलीयाब, बनाया, ओबेद-अदोम, आणि ईयेल. हे सतारी आणि वीणा वाजवत असत.
6 ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.
बनाया आणि याहजिएल हे याजक नेहमी देवाच्या कराराच्या कोशापुढे कर्णे वाजवत असत.
7 ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
तेव्हा त्यादिवशी पहिल्याने दावीदाने आसाफाला आणि त्याच्या भावांना परमेश्वराची उपकारस्तुती करायला हे गीत गाण्यास दिले.
8 “ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
परमेश्वराचे स्तवन करा. त्याच्या नावाने हाक मारा. राष्ट्रांस त्याची कृत्ये कळवा.
9 ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
त्याचे गायन करा, त्याचे स्तुतीगान करा. त्याच्या सर्व आश्र्चर्यकारक कृत्यांविषयी बोला.
10 ೧೦ ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.
१०त्याच्या पवित्र नावाचा अभिमान धरा. जे परमेश्वरास शोधतात त्यांचे अंतःकरण आनंदीत होवो.
11 ೧೧ ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
११परमेश्वरास व त्याच्या सामर्थ्याला शोधा. निरंतर त्याच्या समक्षतेचा शोध करा.
12 ೧೨ ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
१२त्याने केलेल्या आश्र्चर्यकारक कृत्यांची आठवण करा. त्याच्या तोंडचे न्याय आणि चमत्काराची कृत्ये यांचे स्मरण करा.
13 ೧೩ ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.
१३त्याचा सेवक इस्राएल याचे वंशजहो, त्याने निवडलेल्या, याकोबाच्या लोकांनो,
14 ೧೪ ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
१४तो परमेश्वर, आमचा देव आहे. त्याचे न्याय सर्व पृथ्वीवर आहेत.
15 ೧೫ ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
१५त्याच्या कराराचे सर्वकाळ स्मरण करा. त्याने हजारो पिढ्यांस आज्ञापिलेले त्याचे वचन आठवा.
16 ೧೬ ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
१६त्याने अब्राहामाशी केलेल्या कराराची आठवण ठेवा. आणि त्याने इसहाकाशी आपली शपथ वाहिली.
17 ೧೭ ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.
१७याकोबासाठी त्याने तोच नियम केला. आणि इस्राएलाशी सर्वकाळचा करार केला.
18 ೧೮ ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ
१८तो म्हणाला, “मी तुला कनान देश तुमच्या वतनाचा वाटा असा देईन.”
19 ೧೯ ಆತನು, ‘ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು’ ಎಂದು ವಾಗ್ದಾನ ಮಾಡಿದನು.
१९मी हे म्हणालो त्यावेळी तुम्ही संख्येने अगदी थोडे होता, फार थोडके होता, परक्या प्रदेशात उपरे असे होता.
20 ೨೦ ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ
२०तुम्ही एका राष्ट्रातून दुसऱ्या राष्ट्रात भटकत होता. एका राज्यातून दुसऱ्यात जात होता.
21 ೨೧ ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,
२१पण त्याने कोणाकडूनही त्यांना दु: ख होऊ दिले नाही. त्याने त्यांच्यासाठी राजांना शिक्षा दिली.
22 ೨೨ ‘ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು’ ಎಂದು ಹೇಳಿದನು.
२२तो राजांना म्हणाला, “माझ्या अभिषिक्तांना स्पर्श करू नका. माझ्या संदेष्ट्यांना इजा करू नका.”
23 ೨೩ ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.
२३पृथ्वीवरील समस्त लोकहो, परमेश्वराचे स्तवन करा. त्याचे तारण दिवसेंदिवस सर्वांना सांगा.
24 ೨೪ ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ.
२४त्याच्या गौरवाची कृत्ये सर्व राष्ट्रांना कळवा सर्व राष्ट्राला त्याच्या आश्चर्यकारक कृत्ये जाहीर सांगा.
25 ೨೫ ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.
२५परमेश्वर थोर व परमस्तुत्य आहे. आणि सर्व दैवतांपेक्षा त्याचेच भय धरणे योग्य आहे.
26 ೨೬ ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
२६कारण सर्व राष्ट्रांतले सगळी दैवते म्हणजे नुसत्या मूर्ती आहेत. पण परमेश्वराने आकाश निर्माण केले.
27 ೨೭ ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.
२७महिमा आणि प्रताप त्याच्यापुढे आहेत. सामर्थ्य आणि आनंद त्याच्या स्थानी आहेत.
28 ೨೮ ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
२८अहो लोकांच्या कुळांनो परमेश्वराच्या महिम्याची आणि सामर्थ्याची स्तुती करा.
29 ೨೯ ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.
२९परमेश्वरास त्याच्या नावाचे योग्य ते गौरव द्या. त्याच्यापुढे आपली अर्पणे आणा. पावित्र्यानेयुक्त होऊन परमेश्वराची आराधना करा.
30 ೩೦ ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,
३०त्याच्यासमोर सर्व पृथ्वीचा भीतीने थरकाप होतो पण त्याने पृथ्वीला स्थिर स्थापले आहे. ते हलवता येणार नाही.
31 ೩೧ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
३१पृथ्वी उल्हासित होवो आणि आकाश आनंदित होवो; राष्ट्रामधल्या लोकांस सांगा की, “परमेश्वर राज्य करतो.”
32 ೩೨ ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.
३२समुद्र आणि त्यातले सर्वकाही आनंदाने गर्जना करो शेत व त्यातील सर्वकाही उत्सव करोत.
33 ೩೩ ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
३३अरण्यातील वृक्ष परमेश्वरासमोर हर्षभरित होऊन गातील कारण साक्षात तोच पृथ्वीचा न्याय करायला आला आहे.
34 ೩೪ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
३४परमेश्वराचे उपकारस्मरण करा, कारण तो चांगला आहे. कारण त्याची दया सर्वकाळ टिकणारी आहे.
35 ೩೫ ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ.
३५आणि म्हणा, “हे आमच्या तारणाऱ्या देवा, आम्हास तार. आम्हास एकत्र करून इतर राष्ट्रापासून सोडीव. आणि तुझ्या पवित्र नावाची उपकारस्तुती करावी आणि तुझ्या स्तुतीने विजयी व्हावे.”
36 ೩೬ ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.
३६इस्राएलाचा देव परमेश्वर अनादी काळापासून अनंतकाळापर्यंत धन्यवादित असो. सर्व लोकांनी “आमेन” म्हणून परमेश्वराचे स्तवन केले.
37 ೩೭ ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,
३७मग आसाफ आणि त्याचे भाऊ यांनी कोशापुढे दररोजच्या कामाप्रमाणे नित्य सेवा करावी म्हणून दावीदाने त्यांना परमेश्वराच्या कराराच्या कोशासमोर ठेवले.
38 ೩೮ ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.
३८त्या कामात त्यांना मदत करण्यासाठी दावीदाने ओबेद-अदोम यांच्याबरोबर अडुसष्ट नातेवाईकांना त्यामध्ये समाविष्ट केले. यदूथूनाचा पुत्र ओबेद-अदोम, ह्याना होसासोबत, द्वारपाल केले होते.
39 ೩೯ ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.
३९सादोक याजक आणि त्याच्याबरोबरचे इतर याजक यांनी गिबोन येथील उच्चस्थानी असलेल्या परमेश्वराच्या निवासमंडपासमोर सेवा करण्यास नेमले.
40 ೪೦ ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
४०ते दररोज सकाळी आणि संध्याकाळी होमार्पणासाठी असलेल्या वेदीवर परमेश्वरास होमार्पणे करत असत. परमेश्वराच्या नियमशास्त्रात जे लिहिले आहे, त्याने इस्राएलांस आज्ञा केल्याप्रमाणे ते सर्व करावे म्हणून त्यांना नेमले होते.
41 ೪೧ ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.
४१आणि त्यांच्याबरोबर हेमान, यदूथून व बाकीचे नावे घेऊन निवडलेल्यांनी परमेश्वराची उपकारस्तुती करावी, कारण त्याची दया सर्वकाळ टिकणारी आहे.
42 ೪೨ ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
४२हेमान आणि यदूथून यांना झांजा वाजवणे, कर्णे फुंकणे व देवासाठी इतर वाद्यांवर संगीत वाजवणे यांचे ते प्रमुख होते. यदूथूनाचे पुत्र द्वाररक्षक होते.
43 ೪೩ ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.
४३नंतर सर्व लोक आपल्या घरी परत गेले आणि दावीदही आपल्या घरास आशीर्वाद देण्यासाठी परत गेला.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 16 >